Homeಮುಖಪುಟಮುಸ್ಲಿಂ ಮಾರ್ಗದರ್ಶಿಗೆ ಶಿವಾಜಿ ಪ್ರತಿಮೆ ಮುಂದೆ ನಡುಬಗ್ಗಿಸಿ ನೆಲದ ಮೇಲೆ ಮೂಗು ಉಜ್ಜುವಂತೆ ಒತ್ತಾಯಿಸಿದ ಪ್ರವಾಸಿಗರ...

ಮುಸ್ಲಿಂ ಮಾರ್ಗದರ್ಶಿಗೆ ಶಿವಾಜಿ ಪ್ರತಿಮೆ ಮುಂದೆ ನಡುಬಗ್ಗಿಸಿ ನೆಲದ ಮೇಲೆ ಮೂಗು ಉಜ್ಜುವಂತೆ ಒತ್ತಾಯಿಸಿದ ಪ್ರವಾಸಿಗರ ಗುಂಪು

- Advertisement -
- Advertisement -

ಉತ್ತರಪ್ರದೇಶದ ಆಗ್ರಾ ಕೋಟೆಯಲ್ಲಿ ಮಹಾರಾಷ್ಟ್ರದ ಪ್ರವಾಸಿಗರ ಗುಂಪೊಂದು 17ನೇ ಶತಮಾನದಲ್ಲಿ ಆಳಿದ ಮರಾಠಾ ಸಾಮ್ರಾಜ್ಯದ ಸ್ಥಾಪಕ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯ ಮುಂದೆ ಸಗೀರ್ ಬೇಗ್ ಎಂಬ ಸ್ಥಳೀಯ ಮಾರ್ಗದರ್ಶಿಯನ್ನು ನಡುಬಗ್ಗಿಸಿ ನೆಲದ ಮೇಲೆ ಮೂಗು ಉಜ್ಜುವಂತೆ ಒತ್ತಾಯಿಸುವ ಮೂಲಕ ಅವಮಾನಿಸಿದ್ದಾರೆ.

ಬೇಗ್ ಐತಿಹಾಸಿಕ ಮಾಹಿತಿಯನ್ನು ಹಂಚಿಕೊಂಡಾಗ ಉಂಟಾದ ವಾಗ್ವಾದದ ನಂತರ ಈ ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ. ಇದು ಶಿವಾಜಿ ಕುರಿತು ದಾಖಲಿಸಲ್ಪಟ್ಟ ಐತಿಹಾಸಿಕ ಘಟನೆಯ ಕುರಿತು ಅವರು ಪ್ರವಾಸಿಗರೊಂದಿಗೆ ಹಂಚಿಕೊಳ್ಳುತ್ತಿದ್ದರು. ಬೇಗ್ ಅವರ ಈ ಮಾಹಿತಿಯು ಪ್ರವಾಸಿಗರಲ್ಲಿ ಕೋಪವನ್ನು ಉಂಟುಮಾಡಿತು. ಅವರು ಆಕ್ರಮಣಕಾರಿಯಾಗಿ ಪ್ರತೀಕಾರ ತೀರಿಸಿಕೊಂಡರು, ಮಾರ್ಗದರ್ಶಿಗೆ ಇತಿಹಾಸದಲ್ಲಾದ  “ತಪ್ಪನ್ನು” ಒಪ್ಪಿಕೊಳ್ಳುವಂತೆ ಒತ್ತಾಯಿಸಿದರು.

ಫೆಬ್ರವರಿ 26 ರ ಬುಧವಾರ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಕಾಣಿಸಿಕೊಂಡ ಹಲ್ಲೆಯ ವೀಡಿಯೊದಲ್ಲಿ, ಮಹಾರಾಷ್ಟ್ರದ ಪ್ರವಾಸಿಗರು ಬೇಗ್ ಮೇಲೆ ಕಿರುಚುವುದು, ಆಕ್ರಮಣಕಾರಿಯಾಗಿ ಕೆಳಗೆ ತಳ್ಳುವುದು ಮತ್ತು ಶಿವಾಜಿಯ ಪ್ರತಿಮೆಯ ಮುಂದೆ ಮೂಗು ಉಜ್ಜುವಂತೆ ಒತ್ತಾಯಿಸುವುದು ಕಂಡುಬರುತ್ತದೆ.

ಬೇಗ್ ಅವರನ್ನು ದುಃಖಿತ ಸ್ಥಿತಿಯಲ್ಲಿ ಮತ್ತು ಕ್ಷಮೆಯಾಚಿಸಿದ ನಂತರ ಪ್ರವಾಸಿಗರು ಅವರನ್ನು ಬಿಟ್ಟು ಕಳುಹಿಸಿದರು.

ವಿಶೇಷವಾಗಿ 1681ರಿಂದ 1689ರವರೆಗೆ ಮರಾಠಾ ಸಾಮ್ರಾಜ್ಯದ ಎರಡನೇ ರಾಜನಾಗಿ ಆಳಿದ ಶಿವಾಜಿಯ ಹಿರಿಯ ಮಗ ಛತ್ರಪತಿ ಸಂಭಾಜಿಯ ಜೀವನವನ್ನು ಚಿತ್ರಿಸುವ ಐತಿಹಾಸಿಕ ಸಾಹಸ ಚಲನಚಿತ್ರವಾದ ಛಾವಾ ಬಿಡುಗಡೆಯಾದ ನಂತರ ಮರಾಠಾ ಸಾಮ್ರಾಜ್ಯ ಮತ್ತು ಛತ್ರಪತಿ ಶಿವಾಜಿ ಕುರಿತು ನಿರೂಪಣೆಯ ಬಗ್ಗೆ ಈಗ ಸಾರ್ವಜನಿಕ ಚರ್ಚೆಗಳು ಉತ್ತುಂಗಕ್ಕೇರಿವೆ.

ಶಿವಾಜಿಯನ್ನು ಆಗ್ರಾ ಕೋಟೆಯಲ್ಲಿ ಏಕೆ ಸೆರೆಹಿಡಿಯಲಾಯಿತು?

ಮರಾಠಾ ದೊರೆ ಛತ್ರಪತಿ ಶಿವಾಜಿ ಮಹಾರಾಜ್ ಮತ್ತು ಅವರ ಮಗ ಸಂಭಾಜಿಯನ್ನು 1666ರಲ್ಲಿ ಆಗ್ರಾ ಕೋಟೆಯ ದಿವಾನ್-ಎ-ಆಮ್‌ನಲ್ಲಿ ಮೊಘಲ್ ಚಕ್ರವರ್ತಿ ಔರಂಗಜೇಬ್ ಸೆರೆಹಿಡಿದನು.

ಮರಾಠಾ ಸೈನ್ಯ ಮತ್ತು ಮೊಘಲ್ ಸಾಮ್ರಾಜ್ಯದ ನಡುವಿನ ಯುದ್ಧವನ್ನು ಕೊನೆಗೊಳಿಸಲು “ಪುರಂದರ ಒಪ್ಪಂದ” (1665)ದ ಮೂಲಕ ಶಾಂತಿ ಮತ್ತು ಸಹಯೋಗದ ಮಾತುಕತೆಯ ನೆಪದಲ್ಲಿ ಶಿವಾಜಿ ಮತ್ತು ಸಂಭಾಜಿಯನ್ನು ಮೊಘಲ್ ಆಸ್ಥಾನಕ್ಕೆ ಆಹ್ವಾನಿಸಲಾಯಿತು. ಈ ಒಪ್ಪಂದದಡಿಯಲ್ಲಿ ಶಿವಾಜಿ ಪುರಂದರ ಕೋಟೆ ಸೇರಿದಂತೆ 23 ಕೋಟೆಗಳನ್ನು ಮೊಘಲರಿಗೆ ನೀಡಿದನು.

ಆದಾಗ್ಯೂ ಮೊಘಲ್ ಆಸ್ಥಾನವನ್ನು ತಲುಪಿದ ನಂತರ ಅವರನ್ನು ಅವಮಾನಿಸಲಾಯಿತು. ನಂತರ ಅವರನ್ನು ಬಂಧಿಸಲ್ಪಟ್ಟು ಗೃಹಬಂಧನದಲ್ಲಿರಿಸಲಾಯಿತು.

ಶಿವಾಜಿ ಮಹಾರಾಜ ಮತ್ತು ಸಂಭಾಜಿ ಹಣ್ಣಿನ ಬುಟ್ಟಿಯಲ್ಲಿ ಅಡಗಿಕೊಂಡು ಕೋಟೆಯಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದರು. ಔರಂಗಜೇಬನು ಗಾಬರಿಗೊಂಡು ಹುಡುಕಾಟಕ್ಕೆ ಆದೇಶಿಸಿದನು. ಅವರು ಸನ್ಯಾಸಿಯಂತೆ ವೇಷ ಧರಿಸಿ ಮಹಾರಾಷ್ಟ್ರವನ್ನು ತಲುಪಿದರು.

ಹಿಂದೂ ರಕ್ಷಾ ದಳದಿಂದ ಆಜಾನ್ ವಿರುದ್ಧ ರ್‍ಯಾಲಿ : ಪ್ರಚೋದನಕಾರಿ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...