Homeಮುಖಪುಟಮುಸ್ಲಿಂ ಮಾರ್ಗದರ್ಶಿಗೆ ಶಿವಾಜಿ ಪ್ರತಿಮೆ ಮುಂದೆ ನಡುಬಗ್ಗಿಸಿ ನೆಲದ ಮೇಲೆ ಮೂಗು ಉಜ್ಜುವಂತೆ ಒತ್ತಾಯಿಸಿದ ಪ್ರವಾಸಿಗರ...

ಮುಸ್ಲಿಂ ಮಾರ್ಗದರ್ಶಿಗೆ ಶಿವಾಜಿ ಪ್ರತಿಮೆ ಮುಂದೆ ನಡುಬಗ್ಗಿಸಿ ನೆಲದ ಮೇಲೆ ಮೂಗು ಉಜ್ಜುವಂತೆ ಒತ್ತಾಯಿಸಿದ ಪ್ರವಾಸಿಗರ ಗುಂಪು

- Advertisement -
- Advertisement -

ಉತ್ತರಪ್ರದೇಶದ ಆಗ್ರಾ ಕೋಟೆಯಲ್ಲಿ ಮಹಾರಾಷ್ಟ್ರದ ಪ್ರವಾಸಿಗರ ಗುಂಪೊಂದು 17ನೇ ಶತಮಾನದಲ್ಲಿ ಆಳಿದ ಮರಾಠಾ ಸಾಮ್ರಾಜ್ಯದ ಸ್ಥಾಪಕ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯ ಮುಂದೆ ಸಗೀರ್ ಬೇಗ್ ಎಂಬ ಸ್ಥಳೀಯ ಮಾರ್ಗದರ್ಶಿಯನ್ನು ನಡುಬಗ್ಗಿಸಿ ನೆಲದ ಮೇಲೆ ಮೂಗು ಉಜ್ಜುವಂತೆ ಒತ್ತಾಯಿಸುವ ಮೂಲಕ ಅವಮಾನಿಸಿದ್ದಾರೆ.

ಬೇಗ್ ಐತಿಹಾಸಿಕ ಮಾಹಿತಿಯನ್ನು ಹಂಚಿಕೊಂಡಾಗ ಉಂಟಾದ ವಾಗ್ವಾದದ ನಂತರ ಈ ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ. ಇದು ಶಿವಾಜಿ ಕುರಿತು ದಾಖಲಿಸಲ್ಪಟ್ಟ ಐತಿಹಾಸಿಕ ಘಟನೆಯ ಕುರಿತು ಅವರು ಪ್ರವಾಸಿಗರೊಂದಿಗೆ ಹಂಚಿಕೊಳ್ಳುತ್ತಿದ್ದರು. ಬೇಗ್ ಅವರ ಈ ಮಾಹಿತಿಯು ಪ್ರವಾಸಿಗರಲ್ಲಿ ಕೋಪವನ್ನು ಉಂಟುಮಾಡಿತು. ಅವರು ಆಕ್ರಮಣಕಾರಿಯಾಗಿ ಪ್ರತೀಕಾರ ತೀರಿಸಿಕೊಂಡರು, ಮಾರ್ಗದರ್ಶಿಗೆ ಇತಿಹಾಸದಲ್ಲಾದ  “ತಪ್ಪನ್ನು” ಒಪ್ಪಿಕೊಳ್ಳುವಂತೆ ಒತ್ತಾಯಿಸಿದರು.

ಫೆಬ್ರವರಿ 26 ರ ಬುಧವಾರ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಕಾಣಿಸಿಕೊಂಡ ಹಲ್ಲೆಯ ವೀಡಿಯೊದಲ್ಲಿ, ಮಹಾರಾಷ್ಟ್ರದ ಪ್ರವಾಸಿಗರು ಬೇಗ್ ಮೇಲೆ ಕಿರುಚುವುದು, ಆಕ್ರಮಣಕಾರಿಯಾಗಿ ಕೆಳಗೆ ತಳ್ಳುವುದು ಮತ್ತು ಶಿವಾಜಿಯ ಪ್ರತಿಮೆಯ ಮುಂದೆ ಮೂಗು ಉಜ್ಜುವಂತೆ ಒತ್ತಾಯಿಸುವುದು ಕಂಡುಬರುತ್ತದೆ.

ಬೇಗ್ ಅವರನ್ನು ದುಃಖಿತ ಸ್ಥಿತಿಯಲ್ಲಿ ಮತ್ತು ಕ್ಷಮೆಯಾಚಿಸಿದ ನಂತರ ಪ್ರವಾಸಿಗರು ಅವರನ್ನು ಬಿಟ್ಟು ಕಳುಹಿಸಿದರು.

ವಿಶೇಷವಾಗಿ 1681ರಿಂದ 1689ರವರೆಗೆ ಮರಾಠಾ ಸಾಮ್ರಾಜ್ಯದ ಎರಡನೇ ರಾಜನಾಗಿ ಆಳಿದ ಶಿವಾಜಿಯ ಹಿರಿಯ ಮಗ ಛತ್ರಪತಿ ಸಂಭಾಜಿಯ ಜೀವನವನ್ನು ಚಿತ್ರಿಸುವ ಐತಿಹಾಸಿಕ ಸಾಹಸ ಚಲನಚಿತ್ರವಾದ ಛಾವಾ ಬಿಡುಗಡೆಯಾದ ನಂತರ ಮರಾಠಾ ಸಾಮ್ರಾಜ್ಯ ಮತ್ತು ಛತ್ರಪತಿ ಶಿವಾಜಿ ಕುರಿತು ನಿರೂಪಣೆಯ ಬಗ್ಗೆ ಈಗ ಸಾರ್ವಜನಿಕ ಚರ್ಚೆಗಳು ಉತ್ತುಂಗಕ್ಕೇರಿವೆ.

ಶಿವಾಜಿಯನ್ನು ಆಗ್ರಾ ಕೋಟೆಯಲ್ಲಿ ಏಕೆ ಸೆರೆಹಿಡಿಯಲಾಯಿತು?

ಮರಾಠಾ ದೊರೆ ಛತ್ರಪತಿ ಶಿವಾಜಿ ಮಹಾರಾಜ್ ಮತ್ತು ಅವರ ಮಗ ಸಂಭಾಜಿಯನ್ನು 1666ರಲ್ಲಿ ಆಗ್ರಾ ಕೋಟೆಯ ದಿವಾನ್-ಎ-ಆಮ್‌ನಲ್ಲಿ ಮೊಘಲ್ ಚಕ್ರವರ್ತಿ ಔರಂಗಜೇಬ್ ಸೆರೆಹಿಡಿದನು.

ಮರಾಠಾ ಸೈನ್ಯ ಮತ್ತು ಮೊಘಲ್ ಸಾಮ್ರಾಜ್ಯದ ನಡುವಿನ ಯುದ್ಧವನ್ನು ಕೊನೆಗೊಳಿಸಲು “ಪುರಂದರ ಒಪ್ಪಂದ” (1665)ದ ಮೂಲಕ ಶಾಂತಿ ಮತ್ತು ಸಹಯೋಗದ ಮಾತುಕತೆಯ ನೆಪದಲ್ಲಿ ಶಿವಾಜಿ ಮತ್ತು ಸಂಭಾಜಿಯನ್ನು ಮೊಘಲ್ ಆಸ್ಥಾನಕ್ಕೆ ಆಹ್ವಾನಿಸಲಾಯಿತು. ಈ ಒಪ್ಪಂದದಡಿಯಲ್ಲಿ ಶಿವಾಜಿ ಪುರಂದರ ಕೋಟೆ ಸೇರಿದಂತೆ 23 ಕೋಟೆಗಳನ್ನು ಮೊಘಲರಿಗೆ ನೀಡಿದನು.

ಆದಾಗ್ಯೂ ಮೊಘಲ್ ಆಸ್ಥಾನವನ್ನು ತಲುಪಿದ ನಂತರ ಅವರನ್ನು ಅವಮಾನಿಸಲಾಯಿತು. ನಂತರ ಅವರನ್ನು ಬಂಧಿಸಲ್ಪಟ್ಟು ಗೃಹಬಂಧನದಲ್ಲಿರಿಸಲಾಯಿತು.

ಶಿವಾಜಿ ಮಹಾರಾಜ ಮತ್ತು ಸಂಭಾಜಿ ಹಣ್ಣಿನ ಬುಟ್ಟಿಯಲ್ಲಿ ಅಡಗಿಕೊಂಡು ಕೋಟೆಯಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದರು. ಔರಂಗಜೇಬನು ಗಾಬರಿಗೊಂಡು ಹುಡುಕಾಟಕ್ಕೆ ಆದೇಶಿಸಿದನು. ಅವರು ಸನ್ಯಾಸಿಯಂತೆ ವೇಷ ಧರಿಸಿ ಮಹಾರಾಷ್ಟ್ರವನ್ನು ತಲುಪಿದರು.

ಹಿಂದೂ ರಕ್ಷಾ ದಳದಿಂದ ಆಜಾನ್ ವಿರುದ್ಧ ರ್‍ಯಾಲಿ : ಪ್ರಚೋದನಕಾರಿ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...