Homeಹಿಂದೂ ಯುವತಿ ಮುಸ್ಲಿಂ ಉಗ್ರನನ್ನು ಕೊಂದಳೇ? ಇಲ್ಲ, ವೆಬ್‍ ಸೀರಿಸ್ ಪಾತ್ರವನ್ನು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ

ಹಿಂದೂ ಯುವತಿ ಮುಸ್ಲಿಂ ಉಗ್ರನನ್ನು ಕೊಂದಳೇ? ಇಲ್ಲ, ವೆಬ್‍ ಸೀರಿಸ್ ಪಾತ್ರವನ್ನು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ

- Advertisement -
- Advertisement -

ಒಂದು ಸಂಗತಿ ಈಗ ಕನ್ನಡದಲ್ಲೂ ವೈರಲ್‍ ಆಗಿದೆ. ಅದರ ಪ್ರಕಾರ, ಹಿಂದೂ ಯುವತಿಯರು ಎಚ್ಚೆತ್ತುಕೊಂಡಿದ್ದಾರಂತೆ. ಏಕೆ ಅಂದರೆ, ತಾನು ಹಿಂದೂ ಎಂದು ನಂಬಿಸಿದ ಮುಸ್ಲಿಂ ಯುವಕನೊಬ್ಬ ಹಿಂದೂ ಯುವತಿ ಒಬ್ಬಳನ್ನು ಉಗ್ರರಿಗೆ ಮಾರಲು ಹೊರಟಿದ್ದ, ಸತ್ಯ ತಿಳಿದ ಯುವತಿ ಆತನನ್ನು ಕೊಂದೇ ಬಿಟ್ಟಳು. ಹಿಂದೂ ಯುವತಿಯರು ಎಚ್ಚೆತ್ತುಕೊಳ್ಳುತ್ತಿದ್ದಾರೆ ಎಂಬುದು ಈ ಸಂದೇಶದ ಸಾರಾಂಶ..

ಇದನ್ನು ಕೆಲವರು ಸುಳ್ಳು ಅಂತ ಗೊತ್ತಿದ್ದರೂ ವೈರಲ್‍ ಮಾಡುತ್ತಿದ್ದರೆ, ಅವರನ್ನು ಫಾಲೋ ಮಾಡುವವರು ಕಣ್ಣುಮುಚ್ಚಿ ಷೇರ್ ಮಾಡುತ್ತಿದ್ದಾರೆ.

ವಾಸ್ತವ ಏನು?

ಈ ಸಂದೇಶದಲ್ಲಿ ಹಾಕಿರುವ ಫೋಟೋ ಒಂದು ವೆಬ್‍ ಸೀರೀಸ್‍ ಪಾತ್ರದ್ದು! ಫ್ಯಾಮಿಲಿ ಮ್ಯಾನ್‍ ಸಿರೀಸ್‍-2ನಲ್ಲಿ ಈ ಪಾತ್ರವಿದೆ. ಈ ಪಾತ್ರಕ್ಕೆ ಎರಡು ಹೆಸರುಗಳಿವೆ. ಕಲ್ಯಾಣ್‍ ಮತ್ತು ಸಲ್ಮಾನ್‍. ಇದು ಬ್ರೇನ್‍ವಾಶ್‍ಗೆ ಒಳಗಾದ ಮುಸ್ಲಿಂ ಯುವಕನ ಪಾತ್ರ. ಈ ಪಾತ್ರದ ಫೋಟೊವನ್ನೇ ಪೋಸ್ಟರ್ ಮಾಡಿ ಈ ಸಂದೇಶ ಹರಡಲಾಗಿದೆ. ಅಂದರೆ ರೀಲ್‍ ಲೈಫ್‍ ಪಾತ್ರವನ್ನು ರಿಯಲ್‍ ಲೈಫ್‍ಗೆ ತರಲು ತಿಣುಕಾಡಿದ್ದಾರೆ.

ಅಮೆಜಾನ್‍ ಪ್ರೈಂನಲ್ಲಿ ಪ್ರಸಾರವಾಗುವ ಈ ಸಿರೀಸ್‍ ತಕ್ಕಮಟ್ಟಿಗೆ ಜನಪ್ರಿಯವೂ ಆಗಿದೆ. ಇದು ಥ್ರಿಲ್ಲರ್ ಸ್ಟೋರಿಯಾಗಿದ್ದು, ಬಾಲಿವುಡ್‍ನ ಪ್ರತಿಭಾವಂತ ನಟ ಮನೋಜ್‍ ಬಾಜಪೈ ಇದರ ಹೀರೊ. ಶ್ರೀಕಾಂತ್‍ ತಿವಾರಿ (ಮನೋಜ್‍ ಬಾಜಪೈ) ಎನ್‍ಐಎನಲ್ಲಿ ಸ್ಪೇಷಲ್‍ ತನಿಖಾ ಆಫೀಸರ್. ಈ ಸಿರಿಯಲ್‍ನಲ್ಲಿ ಮೇಲೆ ತಿಳಿಸಿದ ಪೋಸ್ಟರ್‌ನಲ್ಲಿರುವ ಕಲ್ಯಾಣ್ ಅಲಿಯಾಸ್‍ ಸಲ್ಮಾನ್‍ (ಬ್ರೇನ್‍ವಾಶ್‍ಗೆ ಒಳಗಾದ ಮುಸ್ಲಿಂ ಯುವಕನ ಪಾತ್ರ) ಹೀರೊ ಶ್ರೀಕಾಂತ್‍ನ ಪುತ್ರಿಯನ್ನು ಅಪಹರಿಸುತ್ತಾನೆ. ಇದಿಷ್ಟು ಕತೆ.

ಅಭಯ ವರ್ಮಾ ಎನ್ನುವ ನಟ  ಕಲ್ಯಾಣ್‍/ಸಲ್ಮಾನ್‍ ಪಾತ್ರ ಮಾಡಿದ್ದಾರೆ. ಅವರ ಫೋಟೊ ಹಾಕಿ, ರೀಲ್‍ ಘಟನೆ ರಿಯಲ್‍ ಎಂಬಂತೆ ಬಿಂಬಿಸಿ ಪೋಸ್ಟರ್ ಮಾಡಲಾಗಿದೆ.

ನೂರಾರು ಭಕ್ತರು ಇದು ನೈಜ ಘಟನೆ ಎಂದು ಭಾವಿಸಿ ಈ ಫೇಕ್‍ ಸಂದೇಶವನ್ನು ವೈರಲ್‍ ಮಾಡುತ್ತಿದ್ದಾರೆ!


ಇದನ್ನೂ ಓದಿ: ಲಸಿಕೆ ಪಡೆದ ಎಲ್ಲರೂ 2 ವರ್ಷಗಳಲ್ಲಿ ಸಾಯುತ್ತಾರೆ: ಈ ವ್ಯಾಟ್ಸಾಪ್ ವದಂತಿ ನಂಬಬೇಡಿ – ಲಸಿಕೆ ಹಾಕಿಸಿಕೊಳ್ಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...