Homeಮುಖಪುಟಮುಸ್ಲಿಮರ ಹೆಸರಿನಲ್ಲಿ ಭಯ ಹುಟ್ಟು ಹಾಕಿ ರೈತರಿಂದ 200 ಎಕರೆ ಭೂಮಿ ಖರೀದಿಸಿದ ಹಿಂದುತ್ವ ಸಂಘಟನೆ

ಮುಸ್ಲಿಮರ ಹೆಸರಿನಲ್ಲಿ ಭಯ ಹುಟ್ಟು ಹಾಕಿ ರೈತರಿಂದ 200 ಎಕರೆ ಭೂಮಿ ಖರೀದಿಸಿದ ಹಿಂದುತ್ವ ಸಂಘಟನೆ

ಉರ್ದು ಹೆಸರಿನ ಸಂಸ್ಥೆಯ ಮೂಲಕ, ಮುಸ್ಲಿಂ ವ್ಯಕ್ತಿಯೊಬ್ಬರನ್ನು ಬಳಸಿ ಖರೀದಿಸಿದ ಸಂಸ್ಥೆಗೆ ಬಜರಂಗದಳದ ಮಾಜಿ ಸಂಚಾಲಕ,ಬಿಜೆಪಿ ನಾಯಕನೇ ಮುಖ್ಯಸ್ಥ!

- Advertisement -
- Advertisement -

“ಇಲ್ಲಿ ಮುಸ್ಲಿಮರ ವಸತಿ ಯೋಜನೆ ಬರುತ್ತಿದೆ” ಎಂದು ಮುಸ್ಲಿಮರ ಹೆಸರಿನಲ್ಲಿ ಭಯ ಹುಟ್ಟು ಹಾಕಿ ಸಣ್ಣ ರೈತರು ಸೇರಿದಂತೆ ಇತರರಿಂದ ಸುಮಾರು 200 ಎಕರೆ ಭೂಮಿಯನ್ನು ಬಿಜೆಪಿ ಬೆಂಬಲಿತ ಹಿಂದುತ್ವ ಸಂಘಟನೆ ಖರೀಧಿಸಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ರೈತರಿಂದ ಭೂಮಿ ಖರೀದಿಸುವಾಗ “ತಂಝೀಮ್-ಎ-ಝಾರ್ಖೆಜ್” ಎಂಬ ಉರ್ದು ಹೆಸರಿನ ಸಂಸ್ಥೆಯ ಮೂಲಕ, ಮುಸ್ಲಿಂ ವ್ಯಕ್ತಿಯೊಬ್ಬರನ್ನು ಬಳಸಿ ಖರೀದಿಸಲಾಗಿದೆ ಎಂದು ಮೋಸ ಹೋಗಿರುವ ರೈತರು ಆರೋಪಿಸಿದ್ದಾರೆ. ಇದೀಗ ತಾವು ಮಾರಾಟ ಮಾಡಿರುವ ಪ್ರದೇಶದಲ್ಲಿ ವಸತಿ ಕಾಲೋನಿ ರೂಪುಗೊಳ್ಳುತ್ತಿರುವುದರಿಂದ ರೈತರು ವಿಚಾರಣೆ ನಡೆಸುವಂತೆ ಪೊಲೀಸರನ್ನು ಸಂಪರ್ಕಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

2000 ರಲ್ಲಿ ರಾಜ್ಯದ ಖಾರ್ಗೋನ್ ಪಟ್ಟಣದ ಹೊರವಲಯದಲ್ಲಿರುವ ಭೂಮಿಯನ್ನು ರೈತರು ಅದರಲ್ಲೂ ಸಣ್ಣ ರೈತರು ಮಾರಾಟ ಮಾಡಿದ್ದರು. ಈ ಪ್ರದೇಶದಲ್ಲಿ ಮುಸ್ಲಿಮರ ವಸತಿ ಯೋಜನೆ ಬರುತ್ತಿದೆ ಎಂದು ಹೇಳಿದ್ದರಿಂದ ‘ನಾವು ಭೂಮಿಯನ್ನು ಮಾರಾಟ ಮಾಡಿ ಮೋಸ ಹೋಗಿದ್ದೇವೆ’ ಎಂದು ರೈತರು ಆರೋಪಿಸಿದ್ದಾರೆ.

ಇದನ್ನೂ ಓದಿ: ಚಿಕ್ಕಮಗಳೂರು: BJP ಬೆಂಬಲಿತ ಸಂಘಟನೆಯಾದ ಬಜರಂಗದಳದ ದುಷ್ಕರ್ಮಿಗಳ ಬೆದರಿಕೆಯ ನಡುವೆ ದಲಿತ-ಮುಸ್ಲಿಂ ಜೋಡಿ ಮದುವೆ

2007 ರಲ್ಲಿ ಭೂಮಿಯ ಖರೀದಿಯ ಎಲ್ಲಾ ಒಪ್ಪಂದಗಳು ಮುಗಿದ ನಂತರ ಸಂಸ್ಥೆಯ “ತಂಝೀಮ್-ಎ-ಝಾರ್ಖೆಜ್” ಎಂಬ ಹೆಸರನ್ನು “ಪ್ರೊಫೆಸರ್ ಪಿ.ಸಿ. ಮಹಾಜನ್ ಫೌಂಡೇಶನ್” ಎಂದು ಬದಲಾಯಿಸಲಾಗಿದೆ. ಸಂಸ್ಥೆಯ ಪದಾಧಿಕಾರಿಗಳು ಇದರಲ್ಲಿ ಯಾವುದೇ ಮೋಸ ನಡೆದಿಲ್ಲ ಎಂದು ರೈತರ ಆರೋಪವನ್ನು ನಿರಾಕರಿಸಿದ್ದಾರೆ.

ಪ್ರಸ್ತುತ ಆಡಳಿತಾರೂಢ ಬಿಜೆಪಿಯ ನಾಯಕ ರಂಜೀತ್ ಸಿಂಗ್ ದಂಡಿರ್‌ ಅವರು ಈ ಸಂಸ್ಥೆಯ ಮುಖ್ಯಸ್ಥರಾಗಿದ್ದಾರೆ. ರಂಜೀತ್‌ ಸಿಂಗ್‌ ಅವರು ಈ ಹಿಂದೆ ಬಜರಂಗದಳದ ರಾಜ್ಯ ಸಹ ಸಂಚಾಲಕರಾಗಿದ್ದರು. ಅಲ್ಲದೆ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

“ನಾವು ಭೂಮಿಯನ್ನು ಸದುಪಯೋಗಪಡಿಸಿಕೊಳ್ಳುತ್ತಿದ್ದೇವೆ” ಎಂದು ಸಂಸ್ಥೆಯ ನಿರ್ದೇಶಕ ರವಿ ಮಹಾಜನ್ ಹೇಳಿದ್ದಾರೆ. ಸಂಸ್ಥೆಯ ಭೂಮಿಯಲ್ಲಿ ವಸತಿ ನಿವೇಶನಗಳ ಜೊತೆಗೆ ಬಿಡಾಡಿ ಹಸುಗಳಿಗೆ ಗೋಶಾಲೆ ಅಥವಾ ಆಶ್ರಯ ತಾಣವನ್ನೂ ನಿರ್ಮಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಆದರೆ ರೈತರು, ತಮ್ಮನ್ನು ಮೋಸ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ನಮ್ಮನ್ನು ಸಂಪರ್ಕಿಸುವ ಏಜೆಂಟ್‌ಗಳು ಮುಸ್ಲಿಮರು ಎಂದು ನಾವು ಭಾವಿಸಿದ್ದೆವು ಅವರು ಹೇಳುತ್ತಾರೆ.

ಇದನ್ನೂ ಓದಿ: ಸಕಲೇಶಪುರ: ದಲಿತರ ಮೇಲೂ ಪ್ರಕರಣ ದಾಖಲು; ಬಜರಂಗದಳ ವಿರುದ್ಧ ಪ್ರತಿಭಟನೆ 

“2004 ರಲ್ಲಿ ಜಾಕಿರ್ ಎಂಬ ವ್ಯಕ್ತಿ ನಮ್ಮ ಬಳಿಗೆ ಬಂದು, ‘ನಿಮ್ಮ ಸುತ್ತಮುತ್ತಲಿನ ಎಲ್ಲಾ ಭೂಮಿಯನ್ನು ಖರೀದಿಸಿದ್ದೇನೆ. ಇಲ್ಲಿ ಶೀಘ್ರದಲ್ಲೇ ಕಸಾಯಿಖಾನೆ ಇರುತ್ತದೆ. ನಿಮ್ಮ ಭೂಮಿಯನ್ನು ಮುಸ್ಲಿಮರಿಗೆ ಮಾರಾಟ ಮಾಡಿ. ಹೇಗಿದ್ದರೂ ಇಲ್ಲಿ ನಮ್ಮ ಸಮುದಾಯ ಬಂದು ನೆಲೆಸುತ್ತಿದೆ’ ಎಂದು ಹೇಳಿದ್ದರು. ಹೀಗೆ ಹೇಳಿದಾಗ ನಾನು ಕೂಡಾ ನನ್ನ ಭೂಮಿಯನ್ನು ಮಾರಾಟ ಮಾಡಿದ್ದೇನೆ” ಎಂದು ಭೂಮಿ ಕಳೆದುಕೊಂಡಿರುವ ರೈತ ನಂದಕಿಶೋರ್ ಕುಶ್ವಾಹ ಹೇಳಿದ್ದಾರೆ. ಅವರ ಐದು ಎಕರೆ ಭೂಮಿಗೆ 40 ಸಾವಿರ ರೂ. ಸಿಕ್ಕಿದೆ ಎಂದು ಅವರು ಹೇಳಿದ್ದಾರೆ.

ಖರೀದಿ ಮಾಡಲಾಗಿರುವ ಭೂಮಿಯಲ್ಲಿ ಹಜ್ ಭವನ ರಚಿಸಲಾಗುವುದು ಮತ್ತು ಸ್ಮಶಾನವನ್ನು ಸಹ ಸ್ಥಾಪಿಸಲಾಗುವುದು ಎಂದು ತಮಗೆ ತಿಳಿಸಲಾಗಿತ್ತು ಎಂದು ಇತರ ರೈತರು ಹೇಳಿದ್ದಾರೆ.

ಮುಸ್ಲಿಮರ ಹೆಸರಿನಲ್ಲಿ ಭಯ ಹುಟ್ಟು ಹಾಕಿ ರೈತರಿಂದ 200 ಎಕರೆ ಭೂಮಿ ಖರೀದಿಸಿದ ಹಿಂದುತ್ವ ಸಂಘಟನೆ | Naanu Gauri

ತಂಝೀಮ್-ಎ-ಝಾರ್ಖೆಜ್ ಎಂಬ ಸಂಸ್ಥೆಯನ್ನು 2002 ರಲ್ಲಿ ಹಿಂದೂಗಳ ಗುಂಪು ರಚಿಸಿತು. ಅವರು ನಂತರ ಜಾಕಿರ್ ಶೇಖ್ ಎಂಬ ಮುಸ್ಲಿಂ ವ್ಯಕ್ತಿಯನ್ನು ಅದಕ್ಕೆ ಮ್ಯಾನೇಜರ್ ಆಗಿ ನೇಮಿಸಿಕೊಂಡಿದ್ದರು.

ವಿವಾದದ ಬಗ್ಗೆ NDTV ಜೊತೆಗೆ ಮಾತನಾಡಿದ ಜಾಕಿರ್‌,“ಸಂಸ್ಥೆಯ ಉದ್ದೇಶವು ಸಾಮಾಜಿಕ ಉದ್ದೇಶಕ್ಕಾಗಿ ಕೆಲಸ ಮಾಡುವುದು ಎಂದು ನಾನು ಭಾವಿಸಿದೆ. ಆದರೆ ನಾನು ಯಾರನ್ನೂ ಅವರ ಭೂಮಿಯನ್ನು ಮಾರಾಟ ಮಾಡುವಂತೆ ಒತ್ತಾಯಿಸಲಿಲ್ಲ ಅಥವಾ ದಾರಿ ತಪ್ಪಿಸಲಿಲ್ಲ. ಪ್ರಕಾಶ್ ಸ್ಮೃತಿ ಸೇವಾ ಸಂಸ್ಥಾನ ಎಂಬ ಅದೇ ಗುಂಪಿನಿಂದ ರಚಿಸಲ್ಪಟ್ಟ ಮತ್ತೊಂದು ಸಂಸ್ಥೆಯು ಕೆಲವು ಭೂಮಿಯನ್ನು ಖರೀದಿಸಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಕಲೇಶಪುರ: ದನ ಸಾಗಿಸುತ್ತಿದ್ದಾನೆಂದು ದಲಿತ ಮುಖಂಡನ ಮೇಲೆ ಬಜರಂಗದಳದ ದುಷ್ಕರ್ಮಿಗಳಿಂದ ಹಲ್ಲೆ

200 ಎಕರೆಯಲ್ಲಿ, 150 ಎಕರೆಯನ್ನು 11 ವ್ಯಕ್ತಿಗಳು ಅಥವಾ ಸಂಸ್ಥೆಗಳಿಂದ ಖರೀದಿಸಲಾಗಿದೆ. ಉಳಿದ ಐವತ್ತು ಎಕರೆ ಭೂಮಿಯನ್ನು ಸಣ್ಣ ರೈತರಿಂದ ಖರೀದಿಸಲಾಗಿದೆ ಎಂದು ಎನ್‌ಡಿಟಿವಿ ವರದಿ ಹೇಳಿದೆ.

“ಬಬ್ಲು ಖಾನ್ ಎಂಬ ವ್ಯಕ್ತಿ ತನ್ನ ತಂದೆಯ ಬಳಿಗೆ ಬಂದಿದ್ದರು. ನಾವು ನಮ್ಮಲ್ಲಿದ್ದ ಒಂಬತ್ತು ಎಕರೆಗಳನ್ನು ಮಾರಾಟ ಮಾಡಿದ್ದೇವೆ” ಎಂದು ದೀಪಕ್ ಕುಶ್ವಾಹ ಎಂಬ ರೈತರೊಬ್ಬರು ಹೇಳಿದ್ದಾರೆ.

“ಹಜ್ ಸಮಿತಿ ರಚನೆಯಾಗುತ್ತದೆ. ಮುಸ್ಲಿಮರು ಇಲ್ಲಿ ಬಂದು ನೆಲೆಸುತ್ತಾರೆ ಎಂದು ನನ್ನ ಸಂಬಂಧಿಕರು ಭಾವಿಸಿದ್ದರು. ಅದಕ್ಕಾಗಿ ಅವರು ಭಯಭೀತರಾಗಿ ಭೂಮಿಯನ್ನು ಮಾರಾಟ ಮಾಡಿದರು. ಕೊನೆಯಲ್ಲಿ ನಾನು ಕೂಡಾ ನನ್ನ ಭೂಮಿಯನ್ನೂ ಮಾರಿದೆ” ಎಂದು ಸಂಜಯ್ ಸಿಂಘ್ವಿ ಎಂಬ ಉದ್ಯಮಿ ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿರುವ ಸಂಸ್ಥೆಯ ಮುಖ್ಯಸ್ಥ, ಬಿಜೆಪಿ ನಾಯಕ ರಂಜೀತ್ ಸಿಂಗ್‌ ದಂಡಿರ್, “ನಾನು ಇಲ್ಲಿ ಚಿರಪರಿಚಿತನಾಗಿರುವುದರಿಂದ ಎಲ್ಲದಕ್ಕೂ ನನ್ನ ಹೆಸರನ್ನು ಎಳೆಯಲಾಗುತ್ತಿದೆ” ಎಂದು ಹೇಳಿದ್ದಾರೆ. ಅವರು ತಾನು ಎದುರಿಸುತ್ತಿರುವ ಕೆಲವು ಪ್ರಕರಣಗಳ ಬಗ್ಗೆ ಮಾತನಾಡಿ,“ನಾನು ಏಳು ಬಾರಿ ಜೈಲು ವಾಸ ಅನುಭವಿಸಿದ್ದೇನೆ; ನನ್ನ ಮೇಲೆ ಕೊಲೆ ಆರೋಪಗಳಿವೆ – ಏಕೆಂದರೆ ನನ್ನ ಜೀವನದುದ್ದಕ್ಕೂ ನಾನು ಹಿಂದೂ ಸಮಾಜಕ್ಕಾಗಿ ಕೆಲಸ ಮಾಡಿದ್ದೇನೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ಬೆಂಬಲಿತ ಸಂಘಟನೆಯಾದ ಬಜರಂಗದಳದ ದುಷ್ಕರ್ಮಿಗಳ ಬೆದರಿಕೆ: ಮಸೀದಿ ವೀಕ್ಷಣೆ ಪ್ರವಾಸ ರದ್ದು ಮಾಡಿದ ಶಿಶುವಿಹಾರ

ಸಂಸ್ಥೆಯ ಹೆಸರು ಮತ್ತು ಭೂಮಿಯ ಬಳಕೆಯ ಬಗ್ಗೆ ಮಾತನಾಡಿದ ಅವರು,“ನಮಗೆ ಖಾರ್ಗೋನ್ ಪ್ರದೇಶದಲ್ಲಿ ಗೋಶಾಲೆ ಬೇಕು. ಅದನ್ನು ಇಲ್ಲಿ ನಿರ್ಮಿಸಿ ಸಮಾಜಕ್ಕೆ ಮತ್ತು ಗೋವುಗಳಿಗೆ ಏನಾದರೂ ಒಳ್ಳೆಯದನ್ನು ಮಾಡಬಹುದು ಎಂದು ನಾನು ಭಾವಿಸಿದೆ. ಆದರೆ ಅದಕ್ಕೆ ನಾವು ತಂಝೀಮ್-ಎ-ಝಾರ್ಖೆಜ್ ಎಂದು ಹೆಸರಿಟ್ಟರೆ ಏನು ಸಮಸ್ಯೆ ಎಂದು ನನಗೆ ತಿಳಿದಿಲ್ಲ” ಎಂದು ಅವರು ಹೇಳಿದ್ದಾರೆ.

“ಆದರೆ ಇದೀಗ ಸಂಸ್ಥೆಯ ನಿರ್ದೇಶಕರಾಗಿರುವ ರವಿ ಮಹಾಜನ್ ಅವರ ತಂದೆಯ ಹೆಸರನ್ನು ಇಡಲಾಗಿದೆ. ತಂಝೀಮ್-ಎ-ಝಾರ್ಖೆಜ್‌ನ ಅರ್ಥ ಪಾಳುಭೂಮಿಯನ್ನು ಫಲವತ್ತಾಗಿಸುವುದು. ಜನರು ಅದನ್ನು ಅರ್ಥಮಾಡಿಕೊಳ್ಳುವುದಿಲ್ಲ ಎಂದು ಭಾವಿಸಿ, ಇದೀಗ ಅದರ ಹೆಸರನ್ನು ಬದಲಾಯಿಸಿದ್ದೇವೆ” ಎಂದು ರಂಜೀತ್ ಸಿಂಗ್‌ ದಂಡಿರ್ ಹೇಳಿದ್ದಾರೆ.

“ಎಲ್ಲಾ ಆಪಾದನೆಗಳು ಕೇವಲ ದಾರಿತಪ್ಪಿಸುವಂತಿವೆ. ಅವೆಲ್ಲವೂ ಅಪ-ಪ್ರಚಾರದ ಭಾಗವಾಗಿದೆ. ಕಾನೂನು ಪ್ರಕಾರವೇ ಎಲ್ಲಾ ಕೆಲಸಗಳನ್ನು ಮಾಡಲಾಗಿದೆ. ಬಡವರಿಗೆ ಮನೆ ಸಿಕ್ಕಿದೆ. ಈ ಭೂಮಿ ಬರಡಾಗಿತ್ತು. ನೆಲದಡಿಯಲ್ಲಿ 700 ಅಡಿಗಳಷ್ಟು ನೀರು ಇರಲಿಲ್ಲ. ನಾನು ಅಣ್ಣಾ ಹಜಾರೆ ಮತ್ತು ಬಾಬಾ ಆಮ್ಟೆ ಅವರಿಂದ ಸ್ಫೂರ್ತಿ ಪಡೆದಿದ್ದೇನೆ. ಸಮಾಜಕ್ಕೆ ಸಂದೇಶ ನೀಡಲು ನಾವು ಇಲ್ಲಿನ ಭೂಮಿಯನ್ನು ಹಸಿರು ಮಾಡಲು ಬಯಸಿದ್ದೇವೆ” ಎಂದು ರಂಜೀತ್ ಸಿಂಗ್‌ ಹೇಳಿದ್ದಾರೆ.

ಇದನ್ನೂ ಓದಿ: ಭದ್ರಾವತಿ: ಬಜರಂಗದಳದ ದುಷ್ಕರ್ಮಿಗಳಿಂದ ದಾಂಧಲೆ; 6 ಮಂದಿ ವಿರುದ್ಧ ಎಫ್‌ಐಆರ್‌

ವಿವಾದದ ಕುರಿತು ರಾಜ್ಯ ಬಿಜೆಪಿ ಅಂತರ ಕಾಯ್ದುಕೊಂಡಿದೆ. “ನಮ್ಮ ಪಕ್ಷಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ಈ ಸಮಸ್ಯೆ ಮಾರಾಟಗಾರ ಮತ್ತು ಖರೀದಿದಾರರ ನಡುವಿನದ್ದು. ಅವರಿಗೆ ತಮ್ಮದೇ ಆದ ಆರ್ಥಿಕ ಹಿತಾಸಕ್ತಿ ಇದೆ” ಎಂದು ರಾಜ್ಯ ಬಿಜೆಪಿ ಕಾರ್ಯದರ್ಶಿ ರಜನೀಶ್ ಅಗರ್ವಾಲ್ ಹೇಳಿದ್ದಾರೆ.

ಈ ಬಗ್ಗೆ ಜಿಲ್ಲಾಧಿಕಾರಿ ಕುಮಾರ್ ಪುರುಷೋತ್ತಮ್, ಸೇರಿದಂತೆ ಪೊಲೀಸರು ಹಾಗೂ ಅಧಿಕಾರಿಗಳು ಪ್ರತಿಕ್ರಿಯಿಸಲಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....