Homeಮುಖಪುಟಮುಸ್ಲಿಮರ ಹೆಸರಿನಲ್ಲಿ ಭಯ ಹುಟ್ಟು ಹಾಕಿ ರೈತರಿಂದ 200 ಎಕರೆ ಭೂಮಿ ಖರೀದಿಸಿದ ಹಿಂದುತ್ವ ಸಂಘಟನೆ

ಮುಸ್ಲಿಮರ ಹೆಸರಿನಲ್ಲಿ ಭಯ ಹುಟ್ಟು ಹಾಕಿ ರೈತರಿಂದ 200 ಎಕರೆ ಭೂಮಿ ಖರೀದಿಸಿದ ಹಿಂದುತ್ವ ಸಂಘಟನೆ

ಉರ್ದು ಹೆಸರಿನ ಸಂಸ್ಥೆಯ ಮೂಲಕ, ಮುಸ್ಲಿಂ ವ್ಯಕ್ತಿಯೊಬ್ಬರನ್ನು ಬಳಸಿ ಖರೀದಿಸಿದ ಸಂಸ್ಥೆಗೆ ಬಜರಂಗದಳದ ಮಾಜಿ ಸಂಚಾಲಕ,ಬಿಜೆಪಿ ನಾಯಕನೇ ಮುಖ್ಯಸ್ಥ!

- Advertisement -
- Advertisement -

“ಇಲ್ಲಿ ಮುಸ್ಲಿಮರ ವಸತಿ ಯೋಜನೆ ಬರುತ್ತಿದೆ” ಎಂದು ಮುಸ್ಲಿಮರ ಹೆಸರಿನಲ್ಲಿ ಭಯ ಹುಟ್ಟು ಹಾಕಿ ಸಣ್ಣ ರೈತರು ಸೇರಿದಂತೆ ಇತರರಿಂದ ಸುಮಾರು 200 ಎಕರೆ ಭೂಮಿಯನ್ನು ಬಿಜೆಪಿ ಬೆಂಬಲಿತ ಹಿಂದುತ್ವ ಸಂಘಟನೆ ಖರೀಧಿಸಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ರೈತರಿಂದ ಭೂಮಿ ಖರೀದಿಸುವಾಗ “ತಂಝೀಮ್-ಎ-ಝಾರ್ಖೆಜ್” ಎಂಬ ಉರ್ದು ಹೆಸರಿನ ಸಂಸ್ಥೆಯ ಮೂಲಕ, ಮುಸ್ಲಿಂ ವ್ಯಕ್ತಿಯೊಬ್ಬರನ್ನು ಬಳಸಿ ಖರೀದಿಸಲಾಗಿದೆ ಎಂದು ಮೋಸ ಹೋಗಿರುವ ರೈತರು ಆರೋಪಿಸಿದ್ದಾರೆ. ಇದೀಗ ತಾವು ಮಾರಾಟ ಮಾಡಿರುವ ಪ್ರದೇಶದಲ್ಲಿ ವಸತಿ ಕಾಲೋನಿ ರೂಪುಗೊಳ್ಳುತ್ತಿರುವುದರಿಂದ ರೈತರು ವಿಚಾರಣೆ ನಡೆಸುವಂತೆ ಪೊಲೀಸರನ್ನು ಸಂಪರ್ಕಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

2000 ರಲ್ಲಿ ರಾಜ್ಯದ ಖಾರ್ಗೋನ್ ಪಟ್ಟಣದ ಹೊರವಲಯದಲ್ಲಿರುವ ಭೂಮಿಯನ್ನು ರೈತರು ಅದರಲ್ಲೂ ಸಣ್ಣ ರೈತರು ಮಾರಾಟ ಮಾಡಿದ್ದರು. ಈ ಪ್ರದೇಶದಲ್ಲಿ ಮುಸ್ಲಿಮರ ವಸತಿ ಯೋಜನೆ ಬರುತ್ತಿದೆ ಎಂದು ಹೇಳಿದ್ದರಿಂದ ‘ನಾವು ಭೂಮಿಯನ್ನು ಮಾರಾಟ ಮಾಡಿ ಮೋಸ ಹೋಗಿದ್ದೇವೆ’ ಎಂದು ರೈತರು ಆರೋಪಿಸಿದ್ದಾರೆ.

ಇದನ್ನೂ ಓದಿ: ಚಿಕ್ಕಮಗಳೂರು: BJP ಬೆಂಬಲಿತ ಸಂಘಟನೆಯಾದ ಬಜರಂಗದಳದ ದುಷ್ಕರ್ಮಿಗಳ ಬೆದರಿಕೆಯ ನಡುವೆ ದಲಿತ-ಮುಸ್ಲಿಂ ಜೋಡಿ ಮದುವೆ

2007 ರಲ್ಲಿ ಭೂಮಿಯ ಖರೀದಿಯ ಎಲ್ಲಾ ಒಪ್ಪಂದಗಳು ಮುಗಿದ ನಂತರ ಸಂಸ್ಥೆಯ “ತಂಝೀಮ್-ಎ-ಝಾರ್ಖೆಜ್” ಎಂಬ ಹೆಸರನ್ನು “ಪ್ರೊಫೆಸರ್ ಪಿ.ಸಿ. ಮಹಾಜನ್ ಫೌಂಡೇಶನ್” ಎಂದು ಬದಲಾಯಿಸಲಾಗಿದೆ. ಸಂಸ್ಥೆಯ ಪದಾಧಿಕಾರಿಗಳು ಇದರಲ್ಲಿ ಯಾವುದೇ ಮೋಸ ನಡೆದಿಲ್ಲ ಎಂದು ರೈತರ ಆರೋಪವನ್ನು ನಿರಾಕರಿಸಿದ್ದಾರೆ.

ಪ್ರಸ್ತುತ ಆಡಳಿತಾರೂಢ ಬಿಜೆಪಿಯ ನಾಯಕ ರಂಜೀತ್ ಸಿಂಗ್ ದಂಡಿರ್‌ ಅವರು ಈ ಸಂಸ್ಥೆಯ ಮುಖ್ಯಸ್ಥರಾಗಿದ್ದಾರೆ. ರಂಜೀತ್‌ ಸಿಂಗ್‌ ಅವರು ಈ ಹಿಂದೆ ಬಜರಂಗದಳದ ರಾಜ್ಯ ಸಹ ಸಂಚಾಲಕರಾಗಿದ್ದರು. ಅಲ್ಲದೆ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

“ನಾವು ಭೂಮಿಯನ್ನು ಸದುಪಯೋಗಪಡಿಸಿಕೊಳ್ಳುತ್ತಿದ್ದೇವೆ” ಎಂದು ಸಂಸ್ಥೆಯ ನಿರ್ದೇಶಕ ರವಿ ಮಹಾಜನ್ ಹೇಳಿದ್ದಾರೆ. ಸಂಸ್ಥೆಯ ಭೂಮಿಯಲ್ಲಿ ವಸತಿ ನಿವೇಶನಗಳ ಜೊತೆಗೆ ಬಿಡಾಡಿ ಹಸುಗಳಿಗೆ ಗೋಶಾಲೆ ಅಥವಾ ಆಶ್ರಯ ತಾಣವನ್ನೂ ನಿರ್ಮಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಆದರೆ ರೈತರು, ತಮ್ಮನ್ನು ಮೋಸ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ನಮ್ಮನ್ನು ಸಂಪರ್ಕಿಸುವ ಏಜೆಂಟ್‌ಗಳು ಮುಸ್ಲಿಮರು ಎಂದು ನಾವು ಭಾವಿಸಿದ್ದೆವು ಅವರು ಹೇಳುತ್ತಾರೆ.

ಇದನ್ನೂ ಓದಿ: ಸಕಲೇಶಪುರ: ದಲಿತರ ಮೇಲೂ ಪ್ರಕರಣ ದಾಖಲು; ಬಜರಂಗದಳ ವಿರುದ್ಧ ಪ್ರತಿಭಟನೆ 

“2004 ರಲ್ಲಿ ಜಾಕಿರ್ ಎಂಬ ವ್ಯಕ್ತಿ ನಮ್ಮ ಬಳಿಗೆ ಬಂದು, ‘ನಿಮ್ಮ ಸುತ್ತಮುತ್ತಲಿನ ಎಲ್ಲಾ ಭೂಮಿಯನ್ನು ಖರೀದಿಸಿದ್ದೇನೆ. ಇಲ್ಲಿ ಶೀಘ್ರದಲ್ಲೇ ಕಸಾಯಿಖಾನೆ ಇರುತ್ತದೆ. ನಿಮ್ಮ ಭೂಮಿಯನ್ನು ಮುಸ್ಲಿಮರಿಗೆ ಮಾರಾಟ ಮಾಡಿ. ಹೇಗಿದ್ದರೂ ಇಲ್ಲಿ ನಮ್ಮ ಸಮುದಾಯ ಬಂದು ನೆಲೆಸುತ್ತಿದೆ’ ಎಂದು ಹೇಳಿದ್ದರು. ಹೀಗೆ ಹೇಳಿದಾಗ ನಾನು ಕೂಡಾ ನನ್ನ ಭೂಮಿಯನ್ನು ಮಾರಾಟ ಮಾಡಿದ್ದೇನೆ” ಎಂದು ಭೂಮಿ ಕಳೆದುಕೊಂಡಿರುವ ರೈತ ನಂದಕಿಶೋರ್ ಕುಶ್ವಾಹ ಹೇಳಿದ್ದಾರೆ. ಅವರ ಐದು ಎಕರೆ ಭೂಮಿಗೆ 40 ಸಾವಿರ ರೂ. ಸಿಕ್ಕಿದೆ ಎಂದು ಅವರು ಹೇಳಿದ್ದಾರೆ.

ಖರೀದಿ ಮಾಡಲಾಗಿರುವ ಭೂಮಿಯಲ್ಲಿ ಹಜ್ ಭವನ ರಚಿಸಲಾಗುವುದು ಮತ್ತು ಸ್ಮಶಾನವನ್ನು ಸಹ ಸ್ಥಾಪಿಸಲಾಗುವುದು ಎಂದು ತಮಗೆ ತಿಳಿಸಲಾಗಿತ್ತು ಎಂದು ಇತರ ರೈತರು ಹೇಳಿದ್ದಾರೆ.

ಮುಸ್ಲಿಮರ ಹೆಸರಿನಲ್ಲಿ ಭಯ ಹುಟ್ಟು ಹಾಕಿ ರೈತರಿಂದ 200 ಎಕರೆ ಭೂಮಿ ಖರೀದಿಸಿದ ಹಿಂದುತ್ವ ಸಂಘಟನೆ | Naanu Gauri

ತಂಝೀಮ್-ಎ-ಝಾರ್ಖೆಜ್ ಎಂಬ ಸಂಸ್ಥೆಯನ್ನು 2002 ರಲ್ಲಿ ಹಿಂದೂಗಳ ಗುಂಪು ರಚಿಸಿತು. ಅವರು ನಂತರ ಜಾಕಿರ್ ಶೇಖ್ ಎಂಬ ಮುಸ್ಲಿಂ ವ್ಯಕ್ತಿಯನ್ನು ಅದಕ್ಕೆ ಮ್ಯಾನೇಜರ್ ಆಗಿ ನೇಮಿಸಿಕೊಂಡಿದ್ದರು.

ವಿವಾದದ ಬಗ್ಗೆ NDTV ಜೊತೆಗೆ ಮಾತನಾಡಿದ ಜಾಕಿರ್‌,“ಸಂಸ್ಥೆಯ ಉದ್ದೇಶವು ಸಾಮಾಜಿಕ ಉದ್ದೇಶಕ್ಕಾಗಿ ಕೆಲಸ ಮಾಡುವುದು ಎಂದು ನಾನು ಭಾವಿಸಿದೆ. ಆದರೆ ನಾನು ಯಾರನ್ನೂ ಅವರ ಭೂಮಿಯನ್ನು ಮಾರಾಟ ಮಾಡುವಂತೆ ಒತ್ತಾಯಿಸಲಿಲ್ಲ ಅಥವಾ ದಾರಿ ತಪ್ಪಿಸಲಿಲ್ಲ. ಪ್ರಕಾಶ್ ಸ್ಮೃತಿ ಸೇವಾ ಸಂಸ್ಥಾನ ಎಂಬ ಅದೇ ಗುಂಪಿನಿಂದ ರಚಿಸಲ್ಪಟ್ಟ ಮತ್ತೊಂದು ಸಂಸ್ಥೆಯು ಕೆಲವು ಭೂಮಿಯನ್ನು ಖರೀದಿಸಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಕಲೇಶಪುರ: ದನ ಸಾಗಿಸುತ್ತಿದ್ದಾನೆಂದು ದಲಿತ ಮುಖಂಡನ ಮೇಲೆ ಬಜರಂಗದಳದ ದುಷ್ಕರ್ಮಿಗಳಿಂದ ಹಲ್ಲೆ

200 ಎಕರೆಯಲ್ಲಿ, 150 ಎಕರೆಯನ್ನು 11 ವ್ಯಕ್ತಿಗಳು ಅಥವಾ ಸಂಸ್ಥೆಗಳಿಂದ ಖರೀದಿಸಲಾಗಿದೆ. ಉಳಿದ ಐವತ್ತು ಎಕರೆ ಭೂಮಿಯನ್ನು ಸಣ್ಣ ರೈತರಿಂದ ಖರೀದಿಸಲಾಗಿದೆ ಎಂದು ಎನ್‌ಡಿಟಿವಿ ವರದಿ ಹೇಳಿದೆ.

“ಬಬ್ಲು ಖಾನ್ ಎಂಬ ವ್ಯಕ್ತಿ ತನ್ನ ತಂದೆಯ ಬಳಿಗೆ ಬಂದಿದ್ದರು. ನಾವು ನಮ್ಮಲ್ಲಿದ್ದ ಒಂಬತ್ತು ಎಕರೆಗಳನ್ನು ಮಾರಾಟ ಮಾಡಿದ್ದೇವೆ” ಎಂದು ದೀಪಕ್ ಕುಶ್ವಾಹ ಎಂಬ ರೈತರೊಬ್ಬರು ಹೇಳಿದ್ದಾರೆ.

“ಹಜ್ ಸಮಿತಿ ರಚನೆಯಾಗುತ್ತದೆ. ಮುಸ್ಲಿಮರು ಇಲ್ಲಿ ಬಂದು ನೆಲೆಸುತ್ತಾರೆ ಎಂದು ನನ್ನ ಸಂಬಂಧಿಕರು ಭಾವಿಸಿದ್ದರು. ಅದಕ್ಕಾಗಿ ಅವರು ಭಯಭೀತರಾಗಿ ಭೂಮಿಯನ್ನು ಮಾರಾಟ ಮಾಡಿದರು. ಕೊನೆಯಲ್ಲಿ ನಾನು ಕೂಡಾ ನನ್ನ ಭೂಮಿಯನ್ನೂ ಮಾರಿದೆ” ಎಂದು ಸಂಜಯ್ ಸಿಂಘ್ವಿ ಎಂಬ ಉದ್ಯಮಿ ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿರುವ ಸಂಸ್ಥೆಯ ಮುಖ್ಯಸ್ಥ, ಬಿಜೆಪಿ ನಾಯಕ ರಂಜೀತ್ ಸಿಂಗ್‌ ದಂಡಿರ್, “ನಾನು ಇಲ್ಲಿ ಚಿರಪರಿಚಿತನಾಗಿರುವುದರಿಂದ ಎಲ್ಲದಕ್ಕೂ ನನ್ನ ಹೆಸರನ್ನು ಎಳೆಯಲಾಗುತ್ತಿದೆ” ಎಂದು ಹೇಳಿದ್ದಾರೆ. ಅವರು ತಾನು ಎದುರಿಸುತ್ತಿರುವ ಕೆಲವು ಪ್ರಕರಣಗಳ ಬಗ್ಗೆ ಮಾತನಾಡಿ,“ನಾನು ಏಳು ಬಾರಿ ಜೈಲು ವಾಸ ಅನುಭವಿಸಿದ್ದೇನೆ; ನನ್ನ ಮೇಲೆ ಕೊಲೆ ಆರೋಪಗಳಿವೆ – ಏಕೆಂದರೆ ನನ್ನ ಜೀವನದುದ್ದಕ್ಕೂ ನಾನು ಹಿಂದೂ ಸಮಾಜಕ್ಕಾಗಿ ಕೆಲಸ ಮಾಡಿದ್ದೇನೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ಬೆಂಬಲಿತ ಸಂಘಟನೆಯಾದ ಬಜರಂಗದಳದ ದುಷ್ಕರ್ಮಿಗಳ ಬೆದರಿಕೆ: ಮಸೀದಿ ವೀಕ್ಷಣೆ ಪ್ರವಾಸ ರದ್ದು ಮಾಡಿದ ಶಿಶುವಿಹಾರ

ಸಂಸ್ಥೆಯ ಹೆಸರು ಮತ್ತು ಭೂಮಿಯ ಬಳಕೆಯ ಬಗ್ಗೆ ಮಾತನಾಡಿದ ಅವರು,“ನಮಗೆ ಖಾರ್ಗೋನ್ ಪ್ರದೇಶದಲ್ಲಿ ಗೋಶಾಲೆ ಬೇಕು. ಅದನ್ನು ಇಲ್ಲಿ ನಿರ್ಮಿಸಿ ಸಮಾಜಕ್ಕೆ ಮತ್ತು ಗೋವುಗಳಿಗೆ ಏನಾದರೂ ಒಳ್ಳೆಯದನ್ನು ಮಾಡಬಹುದು ಎಂದು ನಾನು ಭಾವಿಸಿದೆ. ಆದರೆ ಅದಕ್ಕೆ ನಾವು ತಂಝೀಮ್-ಎ-ಝಾರ್ಖೆಜ್ ಎಂದು ಹೆಸರಿಟ್ಟರೆ ಏನು ಸಮಸ್ಯೆ ಎಂದು ನನಗೆ ತಿಳಿದಿಲ್ಲ” ಎಂದು ಅವರು ಹೇಳಿದ್ದಾರೆ.

“ಆದರೆ ಇದೀಗ ಸಂಸ್ಥೆಯ ನಿರ್ದೇಶಕರಾಗಿರುವ ರವಿ ಮಹಾಜನ್ ಅವರ ತಂದೆಯ ಹೆಸರನ್ನು ಇಡಲಾಗಿದೆ. ತಂಝೀಮ್-ಎ-ಝಾರ್ಖೆಜ್‌ನ ಅರ್ಥ ಪಾಳುಭೂಮಿಯನ್ನು ಫಲವತ್ತಾಗಿಸುವುದು. ಜನರು ಅದನ್ನು ಅರ್ಥಮಾಡಿಕೊಳ್ಳುವುದಿಲ್ಲ ಎಂದು ಭಾವಿಸಿ, ಇದೀಗ ಅದರ ಹೆಸರನ್ನು ಬದಲಾಯಿಸಿದ್ದೇವೆ” ಎಂದು ರಂಜೀತ್ ಸಿಂಗ್‌ ದಂಡಿರ್ ಹೇಳಿದ್ದಾರೆ.

“ಎಲ್ಲಾ ಆಪಾದನೆಗಳು ಕೇವಲ ದಾರಿತಪ್ಪಿಸುವಂತಿವೆ. ಅವೆಲ್ಲವೂ ಅಪ-ಪ್ರಚಾರದ ಭಾಗವಾಗಿದೆ. ಕಾನೂನು ಪ್ರಕಾರವೇ ಎಲ್ಲಾ ಕೆಲಸಗಳನ್ನು ಮಾಡಲಾಗಿದೆ. ಬಡವರಿಗೆ ಮನೆ ಸಿಕ್ಕಿದೆ. ಈ ಭೂಮಿ ಬರಡಾಗಿತ್ತು. ನೆಲದಡಿಯಲ್ಲಿ 700 ಅಡಿಗಳಷ್ಟು ನೀರು ಇರಲಿಲ್ಲ. ನಾನು ಅಣ್ಣಾ ಹಜಾರೆ ಮತ್ತು ಬಾಬಾ ಆಮ್ಟೆ ಅವರಿಂದ ಸ್ಫೂರ್ತಿ ಪಡೆದಿದ್ದೇನೆ. ಸಮಾಜಕ್ಕೆ ಸಂದೇಶ ನೀಡಲು ನಾವು ಇಲ್ಲಿನ ಭೂಮಿಯನ್ನು ಹಸಿರು ಮಾಡಲು ಬಯಸಿದ್ದೇವೆ” ಎಂದು ರಂಜೀತ್ ಸಿಂಗ್‌ ಹೇಳಿದ್ದಾರೆ.

ಇದನ್ನೂ ಓದಿ: ಭದ್ರಾವತಿ: ಬಜರಂಗದಳದ ದುಷ್ಕರ್ಮಿಗಳಿಂದ ದಾಂಧಲೆ; 6 ಮಂದಿ ವಿರುದ್ಧ ಎಫ್‌ಐಆರ್‌

ವಿವಾದದ ಕುರಿತು ರಾಜ್ಯ ಬಿಜೆಪಿ ಅಂತರ ಕಾಯ್ದುಕೊಂಡಿದೆ. “ನಮ್ಮ ಪಕ್ಷಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ಈ ಸಮಸ್ಯೆ ಮಾರಾಟಗಾರ ಮತ್ತು ಖರೀದಿದಾರರ ನಡುವಿನದ್ದು. ಅವರಿಗೆ ತಮ್ಮದೇ ಆದ ಆರ್ಥಿಕ ಹಿತಾಸಕ್ತಿ ಇದೆ” ಎಂದು ರಾಜ್ಯ ಬಿಜೆಪಿ ಕಾರ್ಯದರ್ಶಿ ರಜನೀಶ್ ಅಗರ್ವಾಲ್ ಹೇಳಿದ್ದಾರೆ.

ಈ ಬಗ್ಗೆ ಜಿಲ್ಲಾಧಿಕಾರಿ ಕುಮಾರ್ ಪುರುಷೋತ್ತಮ್, ಸೇರಿದಂತೆ ಪೊಲೀಸರು ಹಾಗೂ ಅಧಿಕಾರಿಗಳು ಪ್ರತಿಕ್ರಿಯಿಸಲಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...