Homeಮುಖಪುಟಮುಸ್ಲಿಮರ ಹೆಸರಿನಲ್ಲಿ ಭಯ ಹುಟ್ಟು ಹಾಕಿ ರೈತರಿಂದ 200 ಎಕರೆ ಭೂಮಿ ಖರೀದಿಸಿದ ಹಿಂದುತ್ವ ಸಂಘಟನೆ

ಮುಸ್ಲಿಮರ ಹೆಸರಿನಲ್ಲಿ ಭಯ ಹುಟ್ಟು ಹಾಕಿ ರೈತರಿಂದ 200 ಎಕರೆ ಭೂಮಿ ಖರೀದಿಸಿದ ಹಿಂದುತ್ವ ಸಂಘಟನೆ

ಉರ್ದು ಹೆಸರಿನ ಸಂಸ್ಥೆಯ ಮೂಲಕ, ಮುಸ್ಲಿಂ ವ್ಯಕ್ತಿಯೊಬ್ಬರನ್ನು ಬಳಸಿ ಖರೀದಿಸಿದ ಸಂಸ್ಥೆಗೆ ಬಜರಂಗದಳದ ಮಾಜಿ ಸಂಚಾಲಕ,ಬಿಜೆಪಿ ನಾಯಕನೇ ಮುಖ್ಯಸ್ಥ!

- Advertisement -
- Advertisement -

“ಇಲ್ಲಿ ಮುಸ್ಲಿಮರ ವಸತಿ ಯೋಜನೆ ಬರುತ್ತಿದೆ” ಎಂದು ಮುಸ್ಲಿಮರ ಹೆಸರಿನಲ್ಲಿ ಭಯ ಹುಟ್ಟು ಹಾಕಿ ಸಣ್ಣ ರೈತರು ಸೇರಿದಂತೆ ಇತರರಿಂದ ಸುಮಾರು 200 ಎಕರೆ ಭೂಮಿಯನ್ನು ಬಿಜೆಪಿ ಬೆಂಬಲಿತ ಹಿಂದುತ್ವ ಸಂಘಟನೆ ಖರೀಧಿಸಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ರೈತರಿಂದ ಭೂಮಿ ಖರೀದಿಸುವಾಗ “ತಂಝೀಮ್-ಎ-ಝಾರ್ಖೆಜ್” ಎಂಬ ಉರ್ದು ಹೆಸರಿನ ಸಂಸ್ಥೆಯ ಮೂಲಕ, ಮುಸ್ಲಿಂ ವ್ಯಕ್ತಿಯೊಬ್ಬರನ್ನು ಬಳಸಿ ಖರೀದಿಸಲಾಗಿದೆ ಎಂದು ಮೋಸ ಹೋಗಿರುವ ರೈತರು ಆರೋಪಿಸಿದ್ದಾರೆ. ಇದೀಗ ತಾವು ಮಾರಾಟ ಮಾಡಿರುವ ಪ್ರದೇಶದಲ್ಲಿ ವಸತಿ ಕಾಲೋನಿ ರೂಪುಗೊಳ್ಳುತ್ತಿರುವುದರಿಂದ ರೈತರು ವಿಚಾರಣೆ ನಡೆಸುವಂತೆ ಪೊಲೀಸರನ್ನು ಸಂಪರ್ಕಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

2000 ರಲ್ಲಿ ರಾಜ್ಯದ ಖಾರ್ಗೋನ್ ಪಟ್ಟಣದ ಹೊರವಲಯದಲ್ಲಿರುವ ಭೂಮಿಯನ್ನು ರೈತರು ಅದರಲ್ಲೂ ಸಣ್ಣ ರೈತರು ಮಾರಾಟ ಮಾಡಿದ್ದರು. ಈ ಪ್ರದೇಶದಲ್ಲಿ ಮುಸ್ಲಿಮರ ವಸತಿ ಯೋಜನೆ ಬರುತ್ತಿದೆ ಎಂದು ಹೇಳಿದ್ದರಿಂದ ‘ನಾವು ಭೂಮಿಯನ್ನು ಮಾರಾಟ ಮಾಡಿ ಮೋಸ ಹೋಗಿದ್ದೇವೆ’ ಎಂದು ರೈತರು ಆರೋಪಿಸಿದ್ದಾರೆ.

ಇದನ್ನೂ ಓದಿ: ಚಿಕ್ಕಮಗಳೂರು: BJP ಬೆಂಬಲಿತ ಸಂಘಟನೆಯಾದ ಬಜರಂಗದಳದ ದುಷ್ಕರ್ಮಿಗಳ ಬೆದರಿಕೆಯ ನಡುವೆ ದಲಿತ-ಮುಸ್ಲಿಂ ಜೋಡಿ ಮದುವೆ

2007 ರಲ್ಲಿ ಭೂಮಿಯ ಖರೀದಿಯ ಎಲ್ಲಾ ಒಪ್ಪಂದಗಳು ಮುಗಿದ ನಂತರ ಸಂಸ್ಥೆಯ “ತಂಝೀಮ್-ಎ-ಝಾರ್ಖೆಜ್” ಎಂಬ ಹೆಸರನ್ನು “ಪ್ರೊಫೆಸರ್ ಪಿ.ಸಿ. ಮಹಾಜನ್ ಫೌಂಡೇಶನ್” ಎಂದು ಬದಲಾಯಿಸಲಾಗಿದೆ. ಸಂಸ್ಥೆಯ ಪದಾಧಿಕಾರಿಗಳು ಇದರಲ್ಲಿ ಯಾವುದೇ ಮೋಸ ನಡೆದಿಲ್ಲ ಎಂದು ರೈತರ ಆರೋಪವನ್ನು ನಿರಾಕರಿಸಿದ್ದಾರೆ.

ಪ್ರಸ್ತುತ ಆಡಳಿತಾರೂಢ ಬಿಜೆಪಿಯ ನಾಯಕ ರಂಜೀತ್ ಸಿಂಗ್ ದಂಡಿರ್‌ ಅವರು ಈ ಸಂಸ್ಥೆಯ ಮುಖ್ಯಸ್ಥರಾಗಿದ್ದಾರೆ. ರಂಜೀತ್‌ ಸಿಂಗ್‌ ಅವರು ಈ ಹಿಂದೆ ಬಜರಂಗದಳದ ರಾಜ್ಯ ಸಹ ಸಂಚಾಲಕರಾಗಿದ್ದರು. ಅಲ್ಲದೆ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

“ನಾವು ಭೂಮಿಯನ್ನು ಸದುಪಯೋಗಪಡಿಸಿಕೊಳ್ಳುತ್ತಿದ್ದೇವೆ” ಎಂದು ಸಂಸ್ಥೆಯ ನಿರ್ದೇಶಕ ರವಿ ಮಹಾಜನ್ ಹೇಳಿದ್ದಾರೆ. ಸಂಸ್ಥೆಯ ಭೂಮಿಯಲ್ಲಿ ವಸತಿ ನಿವೇಶನಗಳ ಜೊತೆಗೆ ಬಿಡಾಡಿ ಹಸುಗಳಿಗೆ ಗೋಶಾಲೆ ಅಥವಾ ಆಶ್ರಯ ತಾಣವನ್ನೂ ನಿರ್ಮಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಆದರೆ ರೈತರು, ತಮ್ಮನ್ನು ಮೋಸ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ನಮ್ಮನ್ನು ಸಂಪರ್ಕಿಸುವ ಏಜೆಂಟ್‌ಗಳು ಮುಸ್ಲಿಮರು ಎಂದು ನಾವು ಭಾವಿಸಿದ್ದೆವು ಅವರು ಹೇಳುತ್ತಾರೆ.

ಇದನ್ನೂ ಓದಿ: ಸಕಲೇಶಪುರ: ದಲಿತರ ಮೇಲೂ ಪ್ರಕರಣ ದಾಖಲು; ಬಜರಂಗದಳ ವಿರುದ್ಧ ಪ್ರತಿಭಟನೆ 

“2004 ರಲ್ಲಿ ಜಾಕಿರ್ ಎಂಬ ವ್ಯಕ್ತಿ ನಮ್ಮ ಬಳಿಗೆ ಬಂದು, ‘ನಿಮ್ಮ ಸುತ್ತಮುತ್ತಲಿನ ಎಲ್ಲಾ ಭೂಮಿಯನ್ನು ಖರೀದಿಸಿದ್ದೇನೆ. ಇಲ್ಲಿ ಶೀಘ್ರದಲ್ಲೇ ಕಸಾಯಿಖಾನೆ ಇರುತ್ತದೆ. ನಿಮ್ಮ ಭೂಮಿಯನ್ನು ಮುಸ್ಲಿಮರಿಗೆ ಮಾರಾಟ ಮಾಡಿ. ಹೇಗಿದ್ದರೂ ಇಲ್ಲಿ ನಮ್ಮ ಸಮುದಾಯ ಬಂದು ನೆಲೆಸುತ್ತಿದೆ’ ಎಂದು ಹೇಳಿದ್ದರು. ಹೀಗೆ ಹೇಳಿದಾಗ ನಾನು ಕೂಡಾ ನನ್ನ ಭೂಮಿಯನ್ನು ಮಾರಾಟ ಮಾಡಿದ್ದೇನೆ” ಎಂದು ಭೂಮಿ ಕಳೆದುಕೊಂಡಿರುವ ರೈತ ನಂದಕಿಶೋರ್ ಕುಶ್ವಾಹ ಹೇಳಿದ್ದಾರೆ. ಅವರ ಐದು ಎಕರೆ ಭೂಮಿಗೆ 40 ಸಾವಿರ ರೂ. ಸಿಕ್ಕಿದೆ ಎಂದು ಅವರು ಹೇಳಿದ್ದಾರೆ.

ಖರೀದಿ ಮಾಡಲಾಗಿರುವ ಭೂಮಿಯಲ್ಲಿ ಹಜ್ ಭವನ ರಚಿಸಲಾಗುವುದು ಮತ್ತು ಸ್ಮಶಾನವನ್ನು ಸಹ ಸ್ಥಾಪಿಸಲಾಗುವುದು ಎಂದು ತಮಗೆ ತಿಳಿಸಲಾಗಿತ್ತು ಎಂದು ಇತರ ರೈತರು ಹೇಳಿದ್ದಾರೆ.

ಮುಸ್ಲಿಮರ ಹೆಸರಿನಲ್ಲಿ ಭಯ ಹುಟ್ಟು ಹಾಕಿ ರೈತರಿಂದ 200 ಎಕರೆ ಭೂಮಿ ಖರೀದಿಸಿದ ಹಿಂದುತ್ವ ಸಂಘಟನೆ | Naanu Gauri

ತಂಝೀಮ್-ಎ-ಝಾರ್ಖೆಜ್ ಎಂಬ ಸಂಸ್ಥೆಯನ್ನು 2002 ರಲ್ಲಿ ಹಿಂದೂಗಳ ಗುಂಪು ರಚಿಸಿತು. ಅವರು ನಂತರ ಜಾಕಿರ್ ಶೇಖ್ ಎಂಬ ಮುಸ್ಲಿಂ ವ್ಯಕ್ತಿಯನ್ನು ಅದಕ್ಕೆ ಮ್ಯಾನೇಜರ್ ಆಗಿ ನೇಮಿಸಿಕೊಂಡಿದ್ದರು.

ವಿವಾದದ ಬಗ್ಗೆ NDTV ಜೊತೆಗೆ ಮಾತನಾಡಿದ ಜಾಕಿರ್‌,“ಸಂಸ್ಥೆಯ ಉದ್ದೇಶವು ಸಾಮಾಜಿಕ ಉದ್ದೇಶಕ್ಕಾಗಿ ಕೆಲಸ ಮಾಡುವುದು ಎಂದು ನಾನು ಭಾವಿಸಿದೆ. ಆದರೆ ನಾನು ಯಾರನ್ನೂ ಅವರ ಭೂಮಿಯನ್ನು ಮಾರಾಟ ಮಾಡುವಂತೆ ಒತ್ತಾಯಿಸಲಿಲ್ಲ ಅಥವಾ ದಾರಿ ತಪ್ಪಿಸಲಿಲ್ಲ. ಪ್ರಕಾಶ್ ಸ್ಮೃತಿ ಸೇವಾ ಸಂಸ್ಥಾನ ಎಂಬ ಅದೇ ಗುಂಪಿನಿಂದ ರಚಿಸಲ್ಪಟ್ಟ ಮತ್ತೊಂದು ಸಂಸ್ಥೆಯು ಕೆಲವು ಭೂಮಿಯನ್ನು ಖರೀದಿಸಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಕಲೇಶಪುರ: ದನ ಸಾಗಿಸುತ್ತಿದ್ದಾನೆಂದು ದಲಿತ ಮುಖಂಡನ ಮೇಲೆ ಬಜರಂಗದಳದ ದುಷ್ಕರ್ಮಿಗಳಿಂದ ಹಲ್ಲೆ

200 ಎಕರೆಯಲ್ಲಿ, 150 ಎಕರೆಯನ್ನು 11 ವ್ಯಕ್ತಿಗಳು ಅಥವಾ ಸಂಸ್ಥೆಗಳಿಂದ ಖರೀದಿಸಲಾಗಿದೆ. ಉಳಿದ ಐವತ್ತು ಎಕರೆ ಭೂಮಿಯನ್ನು ಸಣ್ಣ ರೈತರಿಂದ ಖರೀದಿಸಲಾಗಿದೆ ಎಂದು ಎನ್‌ಡಿಟಿವಿ ವರದಿ ಹೇಳಿದೆ.

“ಬಬ್ಲು ಖಾನ್ ಎಂಬ ವ್ಯಕ್ತಿ ತನ್ನ ತಂದೆಯ ಬಳಿಗೆ ಬಂದಿದ್ದರು. ನಾವು ನಮ್ಮಲ್ಲಿದ್ದ ಒಂಬತ್ತು ಎಕರೆಗಳನ್ನು ಮಾರಾಟ ಮಾಡಿದ್ದೇವೆ” ಎಂದು ದೀಪಕ್ ಕುಶ್ವಾಹ ಎಂಬ ರೈತರೊಬ್ಬರು ಹೇಳಿದ್ದಾರೆ.

“ಹಜ್ ಸಮಿತಿ ರಚನೆಯಾಗುತ್ತದೆ. ಮುಸ್ಲಿಮರು ಇಲ್ಲಿ ಬಂದು ನೆಲೆಸುತ್ತಾರೆ ಎಂದು ನನ್ನ ಸಂಬಂಧಿಕರು ಭಾವಿಸಿದ್ದರು. ಅದಕ್ಕಾಗಿ ಅವರು ಭಯಭೀತರಾಗಿ ಭೂಮಿಯನ್ನು ಮಾರಾಟ ಮಾಡಿದರು. ಕೊನೆಯಲ್ಲಿ ನಾನು ಕೂಡಾ ನನ್ನ ಭೂಮಿಯನ್ನೂ ಮಾರಿದೆ” ಎಂದು ಸಂಜಯ್ ಸಿಂಘ್ವಿ ಎಂಬ ಉದ್ಯಮಿ ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿರುವ ಸಂಸ್ಥೆಯ ಮುಖ್ಯಸ್ಥ, ಬಿಜೆಪಿ ನಾಯಕ ರಂಜೀತ್ ಸಿಂಗ್‌ ದಂಡಿರ್, “ನಾನು ಇಲ್ಲಿ ಚಿರಪರಿಚಿತನಾಗಿರುವುದರಿಂದ ಎಲ್ಲದಕ್ಕೂ ನನ್ನ ಹೆಸರನ್ನು ಎಳೆಯಲಾಗುತ್ತಿದೆ” ಎಂದು ಹೇಳಿದ್ದಾರೆ. ಅವರು ತಾನು ಎದುರಿಸುತ್ತಿರುವ ಕೆಲವು ಪ್ರಕರಣಗಳ ಬಗ್ಗೆ ಮಾತನಾಡಿ,“ನಾನು ಏಳು ಬಾರಿ ಜೈಲು ವಾಸ ಅನುಭವಿಸಿದ್ದೇನೆ; ನನ್ನ ಮೇಲೆ ಕೊಲೆ ಆರೋಪಗಳಿವೆ – ಏಕೆಂದರೆ ನನ್ನ ಜೀವನದುದ್ದಕ್ಕೂ ನಾನು ಹಿಂದೂ ಸಮಾಜಕ್ಕಾಗಿ ಕೆಲಸ ಮಾಡಿದ್ದೇನೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ಬೆಂಬಲಿತ ಸಂಘಟನೆಯಾದ ಬಜರಂಗದಳದ ದುಷ್ಕರ್ಮಿಗಳ ಬೆದರಿಕೆ: ಮಸೀದಿ ವೀಕ್ಷಣೆ ಪ್ರವಾಸ ರದ್ದು ಮಾಡಿದ ಶಿಶುವಿಹಾರ

ಸಂಸ್ಥೆಯ ಹೆಸರು ಮತ್ತು ಭೂಮಿಯ ಬಳಕೆಯ ಬಗ್ಗೆ ಮಾತನಾಡಿದ ಅವರು,“ನಮಗೆ ಖಾರ್ಗೋನ್ ಪ್ರದೇಶದಲ್ಲಿ ಗೋಶಾಲೆ ಬೇಕು. ಅದನ್ನು ಇಲ್ಲಿ ನಿರ್ಮಿಸಿ ಸಮಾಜಕ್ಕೆ ಮತ್ತು ಗೋವುಗಳಿಗೆ ಏನಾದರೂ ಒಳ್ಳೆಯದನ್ನು ಮಾಡಬಹುದು ಎಂದು ನಾನು ಭಾವಿಸಿದೆ. ಆದರೆ ಅದಕ್ಕೆ ನಾವು ತಂಝೀಮ್-ಎ-ಝಾರ್ಖೆಜ್ ಎಂದು ಹೆಸರಿಟ್ಟರೆ ಏನು ಸಮಸ್ಯೆ ಎಂದು ನನಗೆ ತಿಳಿದಿಲ್ಲ” ಎಂದು ಅವರು ಹೇಳಿದ್ದಾರೆ.

“ಆದರೆ ಇದೀಗ ಸಂಸ್ಥೆಯ ನಿರ್ದೇಶಕರಾಗಿರುವ ರವಿ ಮಹಾಜನ್ ಅವರ ತಂದೆಯ ಹೆಸರನ್ನು ಇಡಲಾಗಿದೆ. ತಂಝೀಮ್-ಎ-ಝಾರ್ಖೆಜ್‌ನ ಅರ್ಥ ಪಾಳುಭೂಮಿಯನ್ನು ಫಲವತ್ತಾಗಿಸುವುದು. ಜನರು ಅದನ್ನು ಅರ್ಥಮಾಡಿಕೊಳ್ಳುವುದಿಲ್ಲ ಎಂದು ಭಾವಿಸಿ, ಇದೀಗ ಅದರ ಹೆಸರನ್ನು ಬದಲಾಯಿಸಿದ್ದೇವೆ” ಎಂದು ರಂಜೀತ್ ಸಿಂಗ್‌ ದಂಡಿರ್ ಹೇಳಿದ್ದಾರೆ.

“ಎಲ್ಲಾ ಆಪಾದನೆಗಳು ಕೇವಲ ದಾರಿತಪ್ಪಿಸುವಂತಿವೆ. ಅವೆಲ್ಲವೂ ಅಪ-ಪ್ರಚಾರದ ಭಾಗವಾಗಿದೆ. ಕಾನೂನು ಪ್ರಕಾರವೇ ಎಲ್ಲಾ ಕೆಲಸಗಳನ್ನು ಮಾಡಲಾಗಿದೆ. ಬಡವರಿಗೆ ಮನೆ ಸಿಕ್ಕಿದೆ. ಈ ಭೂಮಿ ಬರಡಾಗಿತ್ತು. ನೆಲದಡಿಯಲ್ಲಿ 700 ಅಡಿಗಳಷ್ಟು ನೀರು ಇರಲಿಲ್ಲ. ನಾನು ಅಣ್ಣಾ ಹಜಾರೆ ಮತ್ತು ಬಾಬಾ ಆಮ್ಟೆ ಅವರಿಂದ ಸ್ಫೂರ್ತಿ ಪಡೆದಿದ್ದೇನೆ. ಸಮಾಜಕ್ಕೆ ಸಂದೇಶ ನೀಡಲು ನಾವು ಇಲ್ಲಿನ ಭೂಮಿಯನ್ನು ಹಸಿರು ಮಾಡಲು ಬಯಸಿದ್ದೇವೆ” ಎಂದು ರಂಜೀತ್ ಸಿಂಗ್‌ ಹೇಳಿದ್ದಾರೆ.

ಇದನ್ನೂ ಓದಿ: ಭದ್ರಾವತಿ: ಬಜರಂಗದಳದ ದುಷ್ಕರ್ಮಿಗಳಿಂದ ದಾಂಧಲೆ; 6 ಮಂದಿ ವಿರುದ್ಧ ಎಫ್‌ಐಆರ್‌

ವಿವಾದದ ಕುರಿತು ರಾಜ್ಯ ಬಿಜೆಪಿ ಅಂತರ ಕಾಯ್ದುಕೊಂಡಿದೆ. “ನಮ್ಮ ಪಕ್ಷಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ಈ ಸಮಸ್ಯೆ ಮಾರಾಟಗಾರ ಮತ್ತು ಖರೀದಿದಾರರ ನಡುವಿನದ್ದು. ಅವರಿಗೆ ತಮ್ಮದೇ ಆದ ಆರ್ಥಿಕ ಹಿತಾಸಕ್ತಿ ಇದೆ” ಎಂದು ರಾಜ್ಯ ಬಿಜೆಪಿ ಕಾರ್ಯದರ್ಶಿ ರಜನೀಶ್ ಅಗರ್ವಾಲ್ ಹೇಳಿದ್ದಾರೆ.

ಈ ಬಗ್ಗೆ ಜಿಲ್ಲಾಧಿಕಾರಿ ಕುಮಾರ್ ಪುರುಷೋತ್ತಮ್, ಸೇರಿದಂತೆ ಪೊಲೀಸರು ಹಾಗೂ ಅಧಿಕಾರಿಗಳು ಪ್ರತಿಕ್ರಿಯಿಸಲಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...