Homeಕರ್ನಾಟಕ'ಮಾನವತಾವಾದಿ' ಸಂವಿಧಾನವನ್ನು 'ಮನುವಾದಿ' ಮಾಡಲು ಹೊರಟಿದ್ದಾರೆ: ಪ್ರೊ. ನರೇಂದ್ರ ನಾಯಕ್

‘ಮಾನವತಾವಾದಿ’ ಸಂವಿಧಾನವನ್ನು ‘ಮನುವಾದಿ’ ಮಾಡಲು ಹೊರಟಿದ್ದಾರೆ: ಪ್ರೊ. ನರೇಂದ್ರ ನಾಯಕ್

- Advertisement -
- Advertisement -

‘ನಮ್ಮ ಸಂವಿಧಾನವೇ ನಮಗೆ ಅಂತಿಮ; ಈಗ ಅವರು ಅದನ್ನು ಬದಲಾಯಿಸಲು ಪ್ರಯತ್ನಿಸುತ್ತಿದ್ದಾರೆ. ಮಾನವತಾವಾದಿ ಸಂವಿಧಾನವನ್ನು ಈಗ ಮನುವಾದಿ ಸಂವಿಧಾನ ಮಾಡಲು ಹೊರಟಿದ್ದಾರೆ’ ಎಂದು ಭಾರತೀಯ ವಿಚಾರವಾದಿಗಳ ಸಂಘಗಳ ಒಕ್ಕೂಟದ ಪ್ರೊಫೆಸರ್ ನರೇಂದ್ರ ನಾಯಕ್ ಹೇಳಿದರು.

ರಾಷ್ಟ್ರೀಯ ವಿಜ್ಞಾನ‌ ದಿನದ ಅಂಗವಾಗಿ ‘ಭಾರತೀಯ ವಿಚಾರವಾದಿ ಸಂಘಗಳ ಒಕ್ಕೂಟ, ಮಾನವ ಬಂಧುತ್ವ ವೇದಿಕೆ, ನೇಗಿಲಯೋಗಿ ಟ್ರಸ್ಟ್, ಅಖಿಲ ಭಾರತ ವಿಚಾರವಾದಿಗಳ ಟ್ರಸ್ಟ್‌’ ಇಂದು ಬೆಂಗಳೂರಿನ ಗಾಂಧಿ ಭವನದಲ್ಲಿ ಆಯೋಜಿಸಿದ್ದ ‘ವಿಚಾರಕ್ರಾಂತಿ-ಒಂದು ದಿನದ ರಾಜ್ಯ ಮಟ್ಟದ ಸಮಾವೇಶ’ದಲ್ಲಿ ಪ್ರೊಫೆಸರ್ ನರೇಂದ್ರ ನಾಯಕ್ ಪ್ರಾಸ್ತಾವಿಕ ಮಾತುಗಳನ್ನಾಡಿದರು.

‘ನಾವು ಯಾರಿಗೂ ಉಪದೇಶ ಮಾಡಬೇಕಾಗಿಲ್ಲ; ಎಲ್ಲರಿಗೂ ಎಲ್ಲ ಗೊತ್ತು. ನಮಗೆ ಯಾವುದೇ ಅಧಿಕಾರವಿಲ್ಲ, ಅತಿಮಾನುಷ ಶಕ್ತಿ ಇಲ್ಲ. ಏನು ಮಾಡಲು ಸಾಧ್ಯ? ನಾಸ್ತಿಕರಾಗಿರುವುದೆಂದರೆ ನಮಗೆ ಯಾವುದೇ ಅತಿಮಾನುಷ ಶಕ್ತಿಯಲ್ಲಿ ನಂಬಿಕೆಯಿಲ್ಲ ಎಂಬ ನಿಲುವಿಗೆ ಬಂದುಬಿಡುತ್ತೇವೆ. ಅಲ್ಲ, ನಾವು ನಾಸ್ತಿಕರು ಹೇಳುತ್ತೇವೆ; ಎಲ್ಲರೂ ಸಮಾನರು, ಯಾವುದೇ ತಾರತಮ್ಯವಿಲ್ಲ; ಮಾನವತಾವಾದ ಮಾತ್ರ’ ಎಂದು ಹೇಳಿದರು.

‘ಎಲ್ಲವನ್ನೂ ತರ್ಕಬದ್ಧವಾಗಿ ಆಲೋಚಿಸುವುದು, ಪ್ರತಿಯೊಂದನ್ನು ಪ್ರಶ್ನಿಸುವುದು. ಮಾನವತಾವಾದ ಇನ್ನೂ ಒಂದು ಹೆಜ್ಜೆ ಮುಂದೆ ಎಂದರೆ, ಎಲ್ಲ ಮಾನವರು ಸಮಾನ; ಭಾಷೆ, ಜನಾಂಗ, ರಾಷ್ಟ್ರೀಯತೆ, ಲೈಂಗಿಕತೆ, ಜೆಂಡರ್ ಈ ಎಲ್ಲ ವ್ಯತ್ಯಾಸಗಳನ್ನು ಹೊರತುಪಡಿಸಿ ನಾವು ಮಾನವರು; ಅದೇ ಮಾನವತಾವಾದ’ ಎಂದರು.

‘ನಮಗಿರುವುದು ಒಂದೇ ಪವಿತ್ರ ಗ್ರಂಥ, ಬೈಬಲ್ ಅಲ್ಲ, ಖುರಾನ್ ಅಲ್ಲ, ಯಾವುದೇ ಧರ್ಮಗ್ರಂಥಗಳಲ್ಲ. ಅಂತಾರಾಷ್ಟ್ರೀಯ ಮಾನವಹಕ್ಕುಗಳ ಘೋಷಣೆಯೇ ನಮಗೆ ಪವಿತ್ರಗ್ರಂಥ. ನಾವು ಭಾರತದ ಸಂವಿಧಾನದ ಪರವಾಗಿದ್ದೇವೆ, ಅಲ್ಲಿ ಒಂದುವಿಧಿ, ಆರ್ಟಿಕಲ್ 51 (ಎಎಚ್) ಇದೆ. ಇದು ಪ್ರತಿಯೊಬ್ಬರೂ ವೈಜ್ಞಾನಿಕ ಮನೋಬಾವ ಬೆಳೆಸಿಕೊಳ್ಳಬೇಕು ಎನ್ನುತ್ತದೆ. ಪ್ರಶ್ನಿಸುವ ಮನೋಭಾವ ಮತ್ತು ಮಾನವತೆಯನ್ನು ಬೆಳಸಿಕೊಳ್ಳಬೇಕು ಎನ್ನುತ್ತದೆ. ನಮ್ಮ ಸಂವಿಧಾನವೇ ನಮಗೆ ಅಂತಿಮ. ಈಗ ಅವರು ಅದನ್ನು ಬದಲಾಯಿಸಲು ಪ್ರಯತ್ನಿಸುತ್ತಿದ್ದಾರೆ. ಮಾನವತಾವಾದಿ ಸಂವಿಧಾನವನ್ನು ಈಗ ಮನುವಾದಿ ಸಂವಿಧಾನ ಮಾಡಲು ಹೊರಟಿದ್ದಾರೆ’ ಎಂದರು.

‘ವೈಜ್ಞಾನಿಕ ಮಾನವಕುಲಶಾಸ್ತ್ರ ಮತ್ತು ಅಂಬೇಡ್ಕರ್ ಅವರ ಚಿಂತನೆ’ ಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಚಿಂತಕರಾದ ಬಿ. ಶ್ರೀಪಾದ್ ಭಟ್, ‘ಮಾನವಶಾಸ್ತ್ರಜ್ಞ ಎಂದು ಅಂಬೇಡ್ಕರ್ ಅವರನ್ನ ಗುರುತಿಸುವಲ್ಲಿ ಅರ್ಥ ಮಾಡಿಕೊಳ್ಳುವಲ್ಲಿ ನಾವು ಸೋತಿದ್ದೇವೆ; ನಾನ್ಯಾರು ಎಂದು ಬುದ್ಧಿಸ್ಟ್ ಕೇಳುವುದಿಲ್ಲ; ನಮ್ಮನ್ನು ಯಾವ ರೀತಿ ಟ್ರೀಟ್ ಮಾಡಲಾಗುತ್ತದೆ ಎಂದು ಕೇಳುತ್ತಾರೆ. ಅಂಬೇಡ್ಕರ್ ಮಾನವ ಕುಲಶಾಸ್ತ್ರೀಯರಾಗಿಗಿ ಈ ಪ್ರಶ್ನೆ ಕೇಳಿದ್ದರು. ತನ್ನ ವೈಯಕ್ತಿಕ ನೋವನ್ನು ಯೂನಿವರ್ಸಲ್ ಆಗಿ ನೋಡಿದ್ದು ಅಂಬೇಡ್ಕರ್ ಮಾತ್ರ’ ಎಂದರು.

‘ವೈಜ್ಞಾನಿಕ ಮಾನವಕುಲಶಾಸ್ತ್ರ ಮತ್ತು ಅಂಬೇಡ್ಕರ್ ಅವರ ಚಿಂತನೆ’ ಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಚಿಂತಕರಾದ ಬಿ. ಶ್ರೀಪಾದ್ ಭಟ್

‘ಉದಾಹರಣೆಗೆ.. ಭಾರತದಲ್ಲಿ ಪಸಿದ್ಧರಾದ ಎಂ.ಎನ್‌. ಶ್ರೀನಿವಾಸ್, ಅವರನ್ನು ಸಮಾಜ ವಿಜ್ಞಾನಿ ಎಂದು ಕರೆಯುತ್ತಾರೆ. ಅವರು ಮೈಸೂರಿನ ರಾಂಪುರ ಕುರಿತು ಪುಸ್ತಕ ಬರೆದಿರುವದನ್ನೂ ನಮ್ಮಲ್ಲಿ ಹಲವರು ಓದಿದ್ದಾರೆ. ಅವರು ಹಲವು ವರ್ಷಗಳ ಕಾಲ ಅದೇ ಗ್ರಾಮದಲ್ಲಿ ಉಳಿದುಕೊಂಡಿದ್ದರು. ಹಳ್ಳಿಗಳು ಹೇಗೆ ಜಾತಿ ಆಧಾರವಾಗಿ ಕಟ್ಟಲ್ಪಟ್ಟಿವೆ ಎಂಬುದನ್ನು ಅಧ್ಯಯನ ಮಾಡುತ್ತಾರೆ. ಆದರೆ, ಅವರು ಹೋಗಿ ಉಳಿದುಕೊಳ್ಳುವುದು ಅಗ್ರಹಾರದ ಬ್ರಾಹ್ಮಣದ ಮನೆಯಲ್ಲಿ. ಅಗ್ರಹಾರದ ಮೂಲಕ ಹೋದಾಗ ಮಾಹಿತಿಗಳು ಖಚಿತವಾಗಿರುವುದಿಲ್ಲ. ಶ್ರೀನಿವಾಸ್ ದಲಿತ ಕೇರಿಗೆ ಹೋಗುತ್ತೇನೆ ಎಂದಾಗ, ‘ದಲಿತರ ಬಗ್ಗೆ ನಾವೇ ಹೇಳುತ್ತೇವೆ.. ಅವರಿಗೇನು ಗೊತ್ತು’ ಎಂದು ಬ್ರಾಹ್ಮಣರು ಹೇಳುತ್ತಾರೆ; ಇದು ಬ್ರಾಹ್ಣಣಿಸಮ್’ ಎಂದು ವಿವರಿಸಿದರು.

‘ಅಂಬೇಡ್ಕರ್ ಪ್ರಶ್ನಿಸಿದ್ದು ಇದನ್ನೇ, ‘ನಮ್ಮನ್ನೇಕೆ ಹೀಗೆ ನಡೆಸಿಕೊಳ್ಳುತ್ತಿದ್ದೀರಾ’ ಎನ್ನುತ್ತಾರೆ. ಆದ್ದರಿಂದ ಅಂಬೇಡ್ಕರ್ ಅವರ ಮಾನಶಾಸ್ತ್ರ ಅಧ್ಯಯನವನ್ನು ನಾವು ಓದಬೇಕಾಗಿದೆ. ಅವರು ಸಮಾನತೆ, ಸ್ವಾತಂತ್ರ ಮತ್ತು ಸಹೋದರತೆ ಎಂದು ಪ್ರತಿಪಾದಿಸುತ್ತಾರೆ.. ಅದು ಮೇಲ್ಮುಖ ಚಲನೆ. ಆದರೆ, ಮಾನವ ಶಾಸ್ತ್ರಜ್ಞರು ಎಂದು ಗುರುತಿಸಲ್ಪಟ್ಟ ಶ್ರೀನಿವಾಸ್, ಸಂಸ್ಕೃತೀಕರಣದ ಮೇಲ್ಮುಖ ಚಲನೆ ಎನ್ನುತ್ತಾರೆ. ಇವೆರಡರ ನಡುವಿನ ವ್ಯತ್ಯಾಸ ಎಂದರೆ ‘ನೀವು ಯಾಕೆ ಈ ರೀತಿ ವರ್ತಿಸುತ್ತಿದ್ದೀರಿ? ಮತ್ತು ನೀವು ಹೇಗೆ ನಡೆಸಿಕೊಳ್ಳುತ್ತಿದ್ದೀರಿ? ಎಂಬುದು. ಅದೇ ಅಂಬೇಡ್ಕರ್ ಅವರ ಮಾನವಶಾಸ್ತ್ರ ಅಧ್ಯಯನದ ಬಹಳ ದೊಡ್ಡ ವಿಚಾರ’ ಎಂದು ಹೇಳಿದರು.

‘ರಂಜಿತ್ ಗುಹಾ, ಪಾರ್ಥ ಚಟರ್ಜಿ ತರಹದವರು ಭಾರತದಲ್ಲಿ ದೊಡ್ಡ ಮಟ್ಟದಲ್ಲಿ ‘ಸಬಾಲ್ಟರ್ನ್’ ಅಧ್ಯಯನ ನಡೆಸಿದ್ದಾರೆ. ಅವರು ಎಲ್ಲಿಯೂ ಅಂಬೇಡ್ಕರ್ ಅವರ ಹೆಸರನ್ನು ಪ್ರಸ್ತಾಪಿಸುವುದಿಲ್ಲ. ವಿದೇಶೀಯ ಅಧ್ಯಯನಕಾರರಾದ ಲೂಯಿಸ್ ಟಬೇಟೋ, ರಿಸ್ತೆ, ಡಿ.ಡಿ. ಕೋಸಂಬಿ, ನಿರ್ಮಲ್ ಕುಮಾರ್, ರಜನಿ ಕೊಠಾರಿ ಸೇರಿದಂತೆ ಅನೇಕರನ್ನು ಸಮಾಜ ಶಾಸ್ತ್ರಜ್ಞರು, ಮಾನವ ಕುಲ ಶಾಸ್ತ್ರಜ್ಞರು ಎಂದು ಗುರುತಿಸುತ್ತಾರೆ. ಆದರೆ, ಎಲ್ಲಿಯೂ ಅಂಬೇಡ್ಕರ್ ಅವರನ್ನು ಮಾನವ ಕುಲ ಶಾಸ್ತ್ರಜ್ಞ ಎಂದು ಗುರುತಿಸಿಲ್ಲ. ಏಕೆಂದರೆ, ಇವರಿಗೆ ಅಂಬೇಡ್ಕರ್ ಅವರನ್ನು ಯಾವ ರೀತಿ ಓದಬೇಕು ಎಂಬ ಗ್ರಹಿಕೆಯೇ ಇರಲಿಲ್ಲ. ಗ್ರಹಿಕೆ ಇಲ್ಲದ ಓದಿನಿಂದ ಮೊದಲ ದೃಷ್ಟಿಕೋನವೇ ಬದಲಾಗುತ್ತದೆ; ಆಗ ನಮ್ಮ ಸಂವೇದನೆ ಕೂಡ ಬದಲಾಗುತ್ತದೆ. ಸಂವೇದನೆ ಬದಲಾದಾಗ ನಮ್ಮ ವಿಚಾರ ಮಂಡನೆ ಕೂಡ ಬದಲಾಗುತ್ತದೆ’ ಎಂದರು.

‘ಅಂಬೇಡ್ಕರ್ ಅವರ ಮಾನವ ಶಾಸ್ತ್ರ ಅಧ್ಯಯನದ ಬಗ್ಗೆ ನಾವು ಮಾತನಾಡಬೇಕಾದರೆ, ಅವರು ಬರೆದ ಮೂರು ಮುಖ್ಯ ವಿಷಯಗಳ ಬಗ್ಗೆ ನಾವು ಓದಬೇಕು. 1916ರಲ್ಲಿ ಅವರು ಮಂಡಿಸಿ ಪ್ರಬಂಧ; ಅದರಲ್ಲಿ ಅವರು ಜಾತಿ ವ್ಯವಸ್ಥೆ ಬಗ್ಗೆ ಮಾತನಾಡುತ್ತಲೇ ‘ಎಕ್ಸೋಗಾಮಿ ಮತ್ತು ಎಂಡೋಗಾಮಿ’ ಬಗ್ಗೆ ಚರ್ಚೆ ಮಾಡುತ್ತಾರೆ. ಇವೆಲ್ಲವೂ ನಮಗೆ ಅರ್ಥ ಮಾಡಿಕೊಳ್ಳಬೇಕಾದರೆ ನಾವು ಅವರ ಮಾನವ ಶಾಸ್ತ್ರ ಅಧ್ಯಯನವನ್ನು ಓದಬೇಕು’ ಎಂದು ಹೇಳಿದರು.

ಸಮಾವೇಶವನ್ನು ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಉದ್ಘಾಟಿಸಿದರು. ಹಿರಿಯ ಸಾಹಿತಿಗಳಾದ ಅಗ್ರಹಾರ ಕೃಷ್ಣಮೂರ್ತಿ, ಬರಗೂರು ರಾಮಚಂದ್ರಪ್ಪ, ವಕೀಲರಾದ ಅನಂತ್ ನಾಯ್ಕ್ ಮತ್ತು ಹಿರಿಯ ಪತ್ರಕರ್ತರಾದ ಪ್ರದೀಪ್ ಮಾಲ್ಗುಡಿ ಇದ್ದರು.

ಇದನ್ನೂ ಓದಿ; ಪಾಕಿಸ್ತಾನ ಪರ ಘೋಷಣೆ ಆರೋಪ ಸಾಬೀತಾದರೆ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...