Homeಕರ್ನಾಟಕ'ಮಾನವತಾವಾದಿ' ಸಂವಿಧಾನವನ್ನು 'ಮನುವಾದಿ' ಮಾಡಲು ಹೊರಟಿದ್ದಾರೆ: ಪ್ರೊ. ನರೇಂದ್ರ ನಾಯಕ್

‘ಮಾನವತಾವಾದಿ’ ಸಂವಿಧಾನವನ್ನು ‘ಮನುವಾದಿ’ ಮಾಡಲು ಹೊರಟಿದ್ದಾರೆ: ಪ್ರೊ. ನರೇಂದ್ರ ನಾಯಕ್

- Advertisement -
- Advertisement -

‘ನಮ್ಮ ಸಂವಿಧಾನವೇ ನಮಗೆ ಅಂತಿಮ; ಈಗ ಅವರು ಅದನ್ನು ಬದಲಾಯಿಸಲು ಪ್ರಯತ್ನಿಸುತ್ತಿದ್ದಾರೆ. ಮಾನವತಾವಾದಿ ಸಂವಿಧಾನವನ್ನು ಈಗ ಮನುವಾದಿ ಸಂವಿಧಾನ ಮಾಡಲು ಹೊರಟಿದ್ದಾರೆ’ ಎಂದು ಭಾರತೀಯ ವಿಚಾರವಾದಿಗಳ ಸಂಘಗಳ ಒಕ್ಕೂಟದ ಪ್ರೊಫೆಸರ್ ನರೇಂದ್ರ ನಾಯಕ್ ಹೇಳಿದರು.

ರಾಷ್ಟ್ರೀಯ ವಿಜ್ಞಾನ‌ ದಿನದ ಅಂಗವಾಗಿ ‘ಭಾರತೀಯ ವಿಚಾರವಾದಿ ಸಂಘಗಳ ಒಕ್ಕೂಟ, ಮಾನವ ಬಂಧುತ್ವ ವೇದಿಕೆ, ನೇಗಿಲಯೋಗಿ ಟ್ರಸ್ಟ್, ಅಖಿಲ ಭಾರತ ವಿಚಾರವಾದಿಗಳ ಟ್ರಸ್ಟ್‌’ ಇಂದು ಬೆಂಗಳೂರಿನ ಗಾಂಧಿ ಭವನದಲ್ಲಿ ಆಯೋಜಿಸಿದ್ದ ‘ವಿಚಾರಕ್ರಾಂತಿ-ಒಂದು ದಿನದ ರಾಜ್ಯ ಮಟ್ಟದ ಸಮಾವೇಶ’ದಲ್ಲಿ ಪ್ರೊಫೆಸರ್ ನರೇಂದ್ರ ನಾಯಕ್ ಪ್ರಾಸ್ತಾವಿಕ ಮಾತುಗಳನ್ನಾಡಿದರು.

‘ನಾವು ಯಾರಿಗೂ ಉಪದೇಶ ಮಾಡಬೇಕಾಗಿಲ್ಲ; ಎಲ್ಲರಿಗೂ ಎಲ್ಲ ಗೊತ್ತು. ನಮಗೆ ಯಾವುದೇ ಅಧಿಕಾರವಿಲ್ಲ, ಅತಿಮಾನುಷ ಶಕ್ತಿ ಇಲ್ಲ. ಏನು ಮಾಡಲು ಸಾಧ್ಯ? ನಾಸ್ತಿಕರಾಗಿರುವುದೆಂದರೆ ನಮಗೆ ಯಾವುದೇ ಅತಿಮಾನುಷ ಶಕ್ತಿಯಲ್ಲಿ ನಂಬಿಕೆಯಿಲ್ಲ ಎಂಬ ನಿಲುವಿಗೆ ಬಂದುಬಿಡುತ್ತೇವೆ. ಅಲ್ಲ, ನಾವು ನಾಸ್ತಿಕರು ಹೇಳುತ್ತೇವೆ; ಎಲ್ಲರೂ ಸಮಾನರು, ಯಾವುದೇ ತಾರತಮ್ಯವಿಲ್ಲ; ಮಾನವತಾವಾದ ಮಾತ್ರ’ ಎಂದು ಹೇಳಿದರು.

‘ಎಲ್ಲವನ್ನೂ ತರ್ಕಬದ್ಧವಾಗಿ ಆಲೋಚಿಸುವುದು, ಪ್ರತಿಯೊಂದನ್ನು ಪ್ರಶ್ನಿಸುವುದು. ಮಾನವತಾವಾದ ಇನ್ನೂ ಒಂದು ಹೆಜ್ಜೆ ಮುಂದೆ ಎಂದರೆ, ಎಲ್ಲ ಮಾನವರು ಸಮಾನ; ಭಾಷೆ, ಜನಾಂಗ, ರಾಷ್ಟ್ರೀಯತೆ, ಲೈಂಗಿಕತೆ, ಜೆಂಡರ್ ಈ ಎಲ್ಲ ವ್ಯತ್ಯಾಸಗಳನ್ನು ಹೊರತುಪಡಿಸಿ ನಾವು ಮಾನವರು; ಅದೇ ಮಾನವತಾವಾದ’ ಎಂದರು.

‘ನಮಗಿರುವುದು ಒಂದೇ ಪವಿತ್ರ ಗ್ರಂಥ, ಬೈಬಲ್ ಅಲ್ಲ, ಖುರಾನ್ ಅಲ್ಲ, ಯಾವುದೇ ಧರ್ಮಗ್ರಂಥಗಳಲ್ಲ. ಅಂತಾರಾಷ್ಟ್ರೀಯ ಮಾನವಹಕ್ಕುಗಳ ಘೋಷಣೆಯೇ ನಮಗೆ ಪವಿತ್ರಗ್ರಂಥ. ನಾವು ಭಾರತದ ಸಂವಿಧಾನದ ಪರವಾಗಿದ್ದೇವೆ, ಅಲ್ಲಿ ಒಂದುವಿಧಿ, ಆರ್ಟಿಕಲ್ 51 (ಎಎಚ್) ಇದೆ. ಇದು ಪ್ರತಿಯೊಬ್ಬರೂ ವೈಜ್ಞಾನಿಕ ಮನೋಬಾವ ಬೆಳೆಸಿಕೊಳ್ಳಬೇಕು ಎನ್ನುತ್ತದೆ. ಪ್ರಶ್ನಿಸುವ ಮನೋಭಾವ ಮತ್ತು ಮಾನವತೆಯನ್ನು ಬೆಳಸಿಕೊಳ್ಳಬೇಕು ಎನ್ನುತ್ತದೆ. ನಮ್ಮ ಸಂವಿಧಾನವೇ ನಮಗೆ ಅಂತಿಮ. ಈಗ ಅವರು ಅದನ್ನು ಬದಲಾಯಿಸಲು ಪ್ರಯತ್ನಿಸುತ್ತಿದ್ದಾರೆ. ಮಾನವತಾವಾದಿ ಸಂವಿಧಾನವನ್ನು ಈಗ ಮನುವಾದಿ ಸಂವಿಧಾನ ಮಾಡಲು ಹೊರಟಿದ್ದಾರೆ’ ಎಂದರು.

‘ವೈಜ್ಞಾನಿಕ ಮಾನವಕುಲಶಾಸ್ತ್ರ ಮತ್ತು ಅಂಬೇಡ್ಕರ್ ಅವರ ಚಿಂತನೆ’ ಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಚಿಂತಕರಾದ ಬಿ. ಶ್ರೀಪಾದ್ ಭಟ್, ‘ಮಾನವಶಾಸ್ತ್ರಜ್ಞ ಎಂದು ಅಂಬೇಡ್ಕರ್ ಅವರನ್ನ ಗುರುತಿಸುವಲ್ಲಿ ಅರ್ಥ ಮಾಡಿಕೊಳ್ಳುವಲ್ಲಿ ನಾವು ಸೋತಿದ್ದೇವೆ; ನಾನ್ಯಾರು ಎಂದು ಬುದ್ಧಿಸ್ಟ್ ಕೇಳುವುದಿಲ್ಲ; ನಮ್ಮನ್ನು ಯಾವ ರೀತಿ ಟ್ರೀಟ್ ಮಾಡಲಾಗುತ್ತದೆ ಎಂದು ಕೇಳುತ್ತಾರೆ. ಅಂಬೇಡ್ಕರ್ ಮಾನವ ಕುಲಶಾಸ್ತ್ರೀಯರಾಗಿಗಿ ಈ ಪ್ರಶ್ನೆ ಕೇಳಿದ್ದರು. ತನ್ನ ವೈಯಕ್ತಿಕ ನೋವನ್ನು ಯೂನಿವರ್ಸಲ್ ಆಗಿ ನೋಡಿದ್ದು ಅಂಬೇಡ್ಕರ್ ಮಾತ್ರ’ ಎಂದರು.

‘ವೈಜ್ಞಾನಿಕ ಮಾನವಕುಲಶಾಸ್ತ್ರ ಮತ್ತು ಅಂಬೇಡ್ಕರ್ ಅವರ ಚಿಂತನೆ’ ಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಚಿಂತಕರಾದ ಬಿ. ಶ್ರೀಪಾದ್ ಭಟ್

‘ಉದಾಹರಣೆಗೆ.. ಭಾರತದಲ್ಲಿ ಪಸಿದ್ಧರಾದ ಎಂ.ಎನ್‌. ಶ್ರೀನಿವಾಸ್, ಅವರನ್ನು ಸಮಾಜ ವಿಜ್ಞಾನಿ ಎಂದು ಕರೆಯುತ್ತಾರೆ. ಅವರು ಮೈಸೂರಿನ ರಾಂಪುರ ಕುರಿತು ಪುಸ್ತಕ ಬರೆದಿರುವದನ್ನೂ ನಮ್ಮಲ್ಲಿ ಹಲವರು ಓದಿದ್ದಾರೆ. ಅವರು ಹಲವು ವರ್ಷಗಳ ಕಾಲ ಅದೇ ಗ್ರಾಮದಲ್ಲಿ ಉಳಿದುಕೊಂಡಿದ್ದರು. ಹಳ್ಳಿಗಳು ಹೇಗೆ ಜಾತಿ ಆಧಾರವಾಗಿ ಕಟ್ಟಲ್ಪಟ್ಟಿವೆ ಎಂಬುದನ್ನು ಅಧ್ಯಯನ ಮಾಡುತ್ತಾರೆ. ಆದರೆ, ಅವರು ಹೋಗಿ ಉಳಿದುಕೊಳ್ಳುವುದು ಅಗ್ರಹಾರದ ಬ್ರಾಹ್ಮಣದ ಮನೆಯಲ್ಲಿ. ಅಗ್ರಹಾರದ ಮೂಲಕ ಹೋದಾಗ ಮಾಹಿತಿಗಳು ಖಚಿತವಾಗಿರುವುದಿಲ್ಲ. ಶ್ರೀನಿವಾಸ್ ದಲಿತ ಕೇರಿಗೆ ಹೋಗುತ್ತೇನೆ ಎಂದಾಗ, ‘ದಲಿತರ ಬಗ್ಗೆ ನಾವೇ ಹೇಳುತ್ತೇವೆ.. ಅವರಿಗೇನು ಗೊತ್ತು’ ಎಂದು ಬ್ರಾಹ್ಮಣರು ಹೇಳುತ್ತಾರೆ; ಇದು ಬ್ರಾಹ್ಣಣಿಸಮ್’ ಎಂದು ವಿವರಿಸಿದರು.

‘ಅಂಬೇಡ್ಕರ್ ಪ್ರಶ್ನಿಸಿದ್ದು ಇದನ್ನೇ, ‘ನಮ್ಮನ್ನೇಕೆ ಹೀಗೆ ನಡೆಸಿಕೊಳ್ಳುತ್ತಿದ್ದೀರಾ’ ಎನ್ನುತ್ತಾರೆ. ಆದ್ದರಿಂದ ಅಂಬೇಡ್ಕರ್ ಅವರ ಮಾನಶಾಸ್ತ್ರ ಅಧ್ಯಯನವನ್ನು ನಾವು ಓದಬೇಕಾಗಿದೆ. ಅವರು ಸಮಾನತೆ, ಸ್ವಾತಂತ್ರ ಮತ್ತು ಸಹೋದರತೆ ಎಂದು ಪ್ರತಿಪಾದಿಸುತ್ತಾರೆ.. ಅದು ಮೇಲ್ಮುಖ ಚಲನೆ. ಆದರೆ, ಮಾನವ ಶಾಸ್ತ್ರಜ್ಞರು ಎಂದು ಗುರುತಿಸಲ್ಪಟ್ಟ ಶ್ರೀನಿವಾಸ್, ಸಂಸ್ಕೃತೀಕರಣದ ಮೇಲ್ಮುಖ ಚಲನೆ ಎನ್ನುತ್ತಾರೆ. ಇವೆರಡರ ನಡುವಿನ ವ್ಯತ್ಯಾಸ ಎಂದರೆ ‘ನೀವು ಯಾಕೆ ಈ ರೀತಿ ವರ್ತಿಸುತ್ತಿದ್ದೀರಿ? ಮತ್ತು ನೀವು ಹೇಗೆ ನಡೆಸಿಕೊಳ್ಳುತ್ತಿದ್ದೀರಿ? ಎಂಬುದು. ಅದೇ ಅಂಬೇಡ್ಕರ್ ಅವರ ಮಾನವಶಾಸ್ತ್ರ ಅಧ್ಯಯನದ ಬಹಳ ದೊಡ್ಡ ವಿಚಾರ’ ಎಂದು ಹೇಳಿದರು.

‘ರಂಜಿತ್ ಗುಹಾ, ಪಾರ್ಥ ಚಟರ್ಜಿ ತರಹದವರು ಭಾರತದಲ್ಲಿ ದೊಡ್ಡ ಮಟ್ಟದಲ್ಲಿ ‘ಸಬಾಲ್ಟರ್ನ್’ ಅಧ್ಯಯನ ನಡೆಸಿದ್ದಾರೆ. ಅವರು ಎಲ್ಲಿಯೂ ಅಂಬೇಡ್ಕರ್ ಅವರ ಹೆಸರನ್ನು ಪ್ರಸ್ತಾಪಿಸುವುದಿಲ್ಲ. ವಿದೇಶೀಯ ಅಧ್ಯಯನಕಾರರಾದ ಲೂಯಿಸ್ ಟಬೇಟೋ, ರಿಸ್ತೆ, ಡಿ.ಡಿ. ಕೋಸಂಬಿ, ನಿರ್ಮಲ್ ಕುಮಾರ್, ರಜನಿ ಕೊಠಾರಿ ಸೇರಿದಂತೆ ಅನೇಕರನ್ನು ಸಮಾಜ ಶಾಸ್ತ್ರಜ್ಞರು, ಮಾನವ ಕುಲ ಶಾಸ್ತ್ರಜ್ಞರು ಎಂದು ಗುರುತಿಸುತ್ತಾರೆ. ಆದರೆ, ಎಲ್ಲಿಯೂ ಅಂಬೇಡ್ಕರ್ ಅವರನ್ನು ಮಾನವ ಕುಲ ಶಾಸ್ತ್ರಜ್ಞ ಎಂದು ಗುರುತಿಸಿಲ್ಲ. ಏಕೆಂದರೆ, ಇವರಿಗೆ ಅಂಬೇಡ್ಕರ್ ಅವರನ್ನು ಯಾವ ರೀತಿ ಓದಬೇಕು ಎಂಬ ಗ್ರಹಿಕೆಯೇ ಇರಲಿಲ್ಲ. ಗ್ರಹಿಕೆ ಇಲ್ಲದ ಓದಿನಿಂದ ಮೊದಲ ದೃಷ್ಟಿಕೋನವೇ ಬದಲಾಗುತ್ತದೆ; ಆಗ ನಮ್ಮ ಸಂವೇದನೆ ಕೂಡ ಬದಲಾಗುತ್ತದೆ. ಸಂವೇದನೆ ಬದಲಾದಾಗ ನಮ್ಮ ವಿಚಾರ ಮಂಡನೆ ಕೂಡ ಬದಲಾಗುತ್ತದೆ’ ಎಂದರು.

‘ಅಂಬೇಡ್ಕರ್ ಅವರ ಮಾನವ ಶಾಸ್ತ್ರ ಅಧ್ಯಯನದ ಬಗ್ಗೆ ನಾವು ಮಾತನಾಡಬೇಕಾದರೆ, ಅವರು ಬರೆದ ಮೂರು ಮುಖ್ಯ ವಿಷಯಗಳ ಬಗ್ಗೆ ನಾವು ಓದಬೇಕು. 1916ರಲ್ಲಿ ಅವರು ಮಂಡಿಸಿ ಪ್ರಬಂಧ; ಅದರಲ್ಲಿ ಅವರು ಜಾತಿ ವ್ಯವಸ್ಥೆ ಬಗ್ಗೆ ಮಾತನಾಡುತ್ತಲೇ ‘ಎಕ್ಸೋಗಾಮಿ ಮತ್ತು ಎಂಡೋಗಾಮಿ’ ಬಗ್ಗೆ ಚರ್ಚೆ ಮಾಡುತ್ತಾರೆ. ಇವೆಲ್ಲವೂ ನಮಗೆ ಅರ್ಥ ಮಾಡಿಕೊಳ್ಳಬೇಕಾದರೆ ನಾವು ಅವರ ಮಾನವ ಶಾಸ್ತ್ರ ಅಧ್ಯಯನವನ್ನು ಓದಬೇಕು’ ಎಂದು ಹೇಳಿದರು.

ಸಮಾವೇಶವನ್ನು ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಉದ್ಘಾಟಿಸಿದರು. ಹಿರಿಯ ಸಾಹಿತಿಗಳಾದ ಅಗ್ರಹಾರ ಕೃಷ್ಣಮೂರ್ತಿ, ಬರಗೂರು ರಾಮಚಂದ್ರಪ್ಪ, ವಕೀಲರಾದ ಅನಂತ್ ನಾಯ್ಕ್ ಮತ್ತು ಹಿರಿಯ ಪತ್ರಕರ್ತರಾದ ಪ್ರದೀಪ್ ಮಾಲ್ಗುಡಿ ಇದ್ದರು.

ಇದನ್ನೂ ಓದಿ; ಪಾಕಿಸ್ತಾನ ಪರ ಘೋಷಣೆ ಆರೋಪ ಸಾಬೀತಾದರೆ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...