Homeಕರ್ನಾಟಕ'ಮಾನವತಾವಾದಿ' ಸಂವಿಧಾನವನ್ನು 'ಮನುವಾದಿ' ಮಾಡಲು ಹೊರಟಿದ್ದಾರೆ: ಪ್ರೊ. ನರೇಂದ್ರ ನಾಯಕ್

‘ಮಾನವತಾವಾದಿ’ ಸಂವಿಧಾನವನ್ನು ‘ಮನುವಾದಿ’ ಮಾಡಲು ಹೊರಟಿದ್ದಾರೆ: ಪ್ರೊ. ನರೇಂದ್ರ ನಾಯಕ್

- Advertisement -
- Advertisement -

‘ನಮ್ಮ ಸಂವಿಧಾನವೇ ನಮಗೆ ಅಂತಿಮ; ಈಗ ಅವರು ಅದನ್ನು ಬದಲಾಯಿಸಲು ಪ್ರಯತ್ನಿಸುತ್ತಿದ್ದಾರೆ. ಮಾನವತಾವಾದಿ ಸಂವಿಧಾನವನ್ನು ಈಗ ಮನುವಾದಿ ಸಂವಿಧಾನ ಮಾಡಲು ಹೊರಟಿದ್ದಾರೆ’ ಎಂದು ಭಾರತೀಯ ವಿಚಾರವಾದಿಗಳ ಸಂಘಗಳ ಒಕ್ಕೂಟದ ಪ್ರೊಫೆಸರ್ ನರೇಂದ್ರ ನಾಯಕ್ ಹೇಳಿದರು.

ರಾಷ್ಟ್ರೀಯ ವಿಜ್ಞಾನ‌ ದಿನದ ಅಂಗವಾಗಿ ‘ಭಾರತೀಯ ವಿಚಾರವಾದಿ ಸಂಘಗಳ ಒಕ್ಕೂಟ, ಮಾನವ ಬಂಧುತ್ವ ವೇದಿಕೆ, ನೇಗಿಲಯೋಗಿ ಟ್ರಸ್ಟ್, ಅಖಿಲ ಭಾರತ ವಿಚಾರವಾದಿಗಳ ಟ್ರಸ್ಟ್‌’ ಇಂದು ಬೆಂಗಳೂರಿನ ಗಾಂಧಿ ಭವನದಲ್ಲಿ ಆಯೋಜಿಸಿದ್ದ ‘ವಿಚಾರಕ್ರಾಂತಿ-ಒಂದು ದಿನದ ರಾಜ್ಯ ಮಟ್ಟದ ಸಮಾವೇಶ’ದಲ್ಲಿ ಪ್ರೊಫೆಸರ್ ನರೇಂದ್ರ ನಾಯಕ್ ಪ್ರಾಸ್ತಾವಿಕ ಮಾತುಗಳನ್ನಾಡಿದರು.

‘ನಾವು ಯಾರಿಗೂ ಉಪದೇಶ ಮಾಡಬೇಕಾಗಿಲ್ಲ; ಎಲ್ಲರಿಗೂ ಎಲ್ಲ ಗೊತ್ತು. ನಮಗೆ ಯಾವುದೇ ಅಧಿಕಾರವಿಲ್ಲ, ಅತಿಮಾನುಷ ಶಕ್ತಿ ಇಲ್ಲ. ಏನು ಮಾಡಲು ಸಾಧ್ಯ? ನಾಸ್ತಿಕರಾಗಿರುವುದೆಂದರೆ ನಮಗೆ ಯಾವುದೇ ಅತಿಮಾನುಷ ಶಕ್ತಿಯಲ್ಲಿ ನಂಬಿಕೆಯಿಲ್ಲ ಎಂಬ ನಿಲುವಿಗೆ ಬಂದುಬಿಡುತ್ತೇವೆ. ಅಲ್ಲ, ನಾವು ನಾಸ್ತಿಕರು ಹೇಳುತ್ತೇವೆ; ಎಲ್ಲರೂ ಸಮಾನರು, ಯಾವುದೇ ತಾರತಮ್ಯವಿಲ್ಲ; ಮಾನವತಾವಾದ ಮಾತ್ರ’ ಎಂದು ಹೇಳಿದರು.

‘ಎಲ್ಲವನ್ನೂ ತರ್ಕಬದ್ಧವಾಗಿ ಆಲೋಚಿಸುವುದು, ಪ್ರತಿಯೊಂದನ್ನು ಪ್ರಶ್ನಿಸುವುದು. ಮಾನವತಾವಾದ ಇನ್ನೂ ಒಂದು ಹೆಜ್ಜೆ ಮುಂದೆ ಎಂದರೆ, ಎಲ್ಲ ಮಾನವರು ಸಮಾನ; ಭಾಷೆ, ಜನಾಂಗ, ರಾಷ್ಟ್ರೀಯತೆ, ಲೈಂಗಿಕತೆ, ಜೆಂಡರ್ ಈ ಎಲ್ಲ ವ್ಯತ್ಯಾಸಗಳನ್ನು ಹೊರತುಪಡಿಸಿ ನಾವು ಮಾನವರು; ಅದೇ ಮಾನವತಾವಾದ’ ಎಂದರು.

‘ನಮಗಿರುವುದು ಒಂದೇ ಪವಿತ್ರ ಗ್ರಂಥ, ಬೈಬಲ್ ಅಲ್ಲ, ಖುರಾನ್ ಅಲ್ಲ, ಯಾವುದೇ ಧರ್ಮಗ್ರಂಥಗಳಲ್ಲ. ಅಂತಾರಾಷ್ಟ್ರೀಯ ಮಾನವಹಕ್ಕುಗಳ ಘೋಷಣೆಯೇ ನಮಗೆ ಪವಿತ್ರಗ್ರಂಥ. ನಾವು ಭಾರತದ ಸಂವಿಧಾನದ ಪರವಾಗಿದ್ದೇವೆ, ಅಲ್ಲಿ ಒಂದುವಿಧಿ, ಆರ್ಟಿಕಲ್ 51 (ಎಎಚ್) ಇದೆ. ಇದು ಪ್ರತಿಯೊಬ್ಬರೂ ವೈಜ್ಞಾನಿಕ ಮನೋಬಾವ ಬೆಳೆಸಿಕೊಳ್ಳಬೇಕು ಎನ್ನುತ್ತದೆ. ಪ್ರಶ್ನಿಸುವ ಮನೋಭಾವ ಮತ್ತು ಮಾನವತೆಯನ್ನು ಬೆಳಸಿಕೊಳ್ಳಬೇಕು ಎನ್ನುತ್ತದೆ. ನಮ್ಮ ಸಂವಿಧಾನವೇ ನಮಗೆ ಅಂತಿಮ. ಈಗ ಅವರು ಅದನ್ನು ಬದಲಾಯಿಸಲು ಪ್ರಯತ್ನಿಸುತ್ತಿದ್ದಾರೆ. ಮಾನವತಾವಾದಿ ಸಂವಿಧಾನವನ್ನು ಈಗ ಮನುವಾದಿ ಸಂವಿಧಾನ ಮಾಡಲು ಹೊರಟಿದ್ದಾರೆ’ ಎಂದರು.

‘ವೈಜ್ಞಾನಿಕ ಮಾನವಕುಲಶಾಸ್ತ್ರ ಮತ್ತು ಅಂಬೇಡ್ಕರ್ ಅವರ ಚಿಂತನೆ’ ಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಚಿಂತಕರಾದ ಬಿ. ಶ್ರೀಪಾದ್ ಭಟ್, ‘ಮಾನವಶಾಸ್ತ್ರಜ್ಞ ಎಂದು ಅಂಬೇಡ್ಕರ್ ಅವರನ್ನ ಗುರುತಿಸುವಲ್ಲಿ ಅರ್ಥ ಮಾಡಿಕೊಳ್ಳುವಲ್ಲಿ ನಾವು ಸೋತಿದ್ದೇವೆ; ನಾನ್ಯಾರು ಎಂದು ಬುದ್ಧಿಸ್ಟ್ ಕೇಳುವುದಿಲ್ಲ; ನಮ್ಮನ್ನು ಯಾವ ರೀತಿ ಟ್ರೀಟ್ ಮಾಡಲಾಗುತ್ತದೆ ಎಂದು ಕೇಳುತ್ತಾರೆ. ಅಂಬೇಡ್ಕರ್ ಮಾನವ ಕುಲಶಾಸ್ತ್ರೀಯರಾಗಿಗಿ ಈ ಪ್ರಶ್ನೆ ಕೇಳಿದ್ದರು. ತನ್ನ ವೈಯಕ್ತಿಕ ನೋವನ್ನು ಯೂನಿವರ್ಸಲ್ ಆಗಿ ನೋಡಿದ್ದು ಅಂಬೇಡ್ಕರ್ ಮಾತ್ರ’ ಎಂದರು.

‘ವೈಜ್ಞಾನಿಕ ಮಾನವಕುಲಶಾಸ್ತ್ರ ಮತ್ತು ಅಂಬೇಡ್ಕರ್ ಅವರ ಚಿಂತನೆ’ ಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಚಿಂತಕರಾದ ಬಿ. ಶ್ರೀಪಾದ್ ಭಟ್

‘ಉದಾಹರಣೆಗೆ.. ಭಾರತದಲ್ಲಿ ಪಸಿದ್ಧರಾದ ಎಂ.ಎನ್‌. ಶ್ರೀನಿವಾಸ್, ಅವರನ್ನು ಸಮಾಜ ವಿಜ್ಞಾನಿ ಎಂದು ಕರೆಯುತ್ತಾರೆ. ಅವರು ಮೈಸೂರಿನ ರಾಂಪುರ ಕುರಿತು ಪುಸ್ತಕ ಬರೆದಿರುವದನ್ನೂ ನಮ್ಮಲ್ಲಿ ಹಲವರು ಓದಿದ್ದಾರೆ. ಅವರು ಹಲವು ವರ್ಷಗಳ ಕಾಲ ಅದೇ ಗ್ರಾಮದಲ್ಲಿ ಉಳಿದುಕೊಂಡಿದ್ದರು. ಹಳ್ಳಿಗಳು ಹೇಗೆ ಜಾತಿ ಆಧಾರವಾಗಿ ಕಟ್ಟಲ್ಪಟ್ಟಿವೆ ಎಂಬುದನ್ನು ಅಧ್ಯಯನ ಮಾಡುತ್ತಾರೆ. ಆದರೆ, ಅವರು ಹೋಗಿ ಉಳಿದುಕೊಳ್ಳುವುದು ಅಗ್ರಹಾರದ ಬ್ರಾಹ್ಮಣದ ಮನೆಯಲ್ಲಿ. ಅಗ್ರಹಾರದ ಮೂಲಕ ಹೋದಾಗ ಮಾಹಿತಿಗಳು ಖಚಿತವಾಗಿರುವುದಿಲ್ಲ. ಶ್ರೀನಿವಾಸ್ ದಲಿತ ಕೇರಿಗೆ ಹೋಗುತ್ತೇನೆ ಎಂದಾಗ, ‘ದಲಿತರ ಬಗ್ಗೆ ನಾವೇ ಹೇಳುತ್ತೇವೆ.. ಅವರಿಗೇನು ಗೊತ್ತು’ ಎಂದು ಬ್ರಾಹ್ಮಣರು ಹೇಳುತ್ತಾರೆ; ಇದು ಬ್ರಾಹ್ಣಣಿಸಮ್’ ಎಂದು ವಿವರಿಸಿದರು.

‘ಅಂಬೇಡ್ಕರ್ ಪ್ರಶ್ನಿಸಿದ್ದು ಇದನ್ನೇ, ‘ನಮ್ಮನ್ನೇಕೆ ಹೀಗೆ ನಡೆಸಿಕೊಳ್ಳುತ್ತಿದ್ದೀರಾ’ ಎನ್ನುತ್ತಾರೆ. ಆದ್ದರಿಂದ ಅಂಬೇಡ್ಕರ್ ಅವರ ಮಾನಶಾಸ್ತ್ರ ಅಧ್ಯಯನವನ್ನು ನಾವು ಓದಬೇಕಾಗಿದೆ. ಅವರು ಸಮಾನತೆ, ಸ್ವಾತಂತ್ರ ಮತ್ತು ಸಹೋದರತೆ ಎಂದು ಪ್ರತಿಪಾದಿಸುತ್ತಾರೆ.. ಅದು ಮೇಲ್ಮುಖ ಚಲನೆ. ಆದರೆ, ಮಾನವ ಶಾಸ್ತ್ರಜ್ಞರು ಎಂದು ಗುರುತಿಸಲ್ಪಟ್ಟ ಶ್ರೀನಿವಾಸ್, ಸಂಸ್ಕೃತೀಕರಣದ ಮೇಲ್ಮುಖ ಚಲನೆ ಎನ್ನುತ್ತಾರೆ. ಇವೆರಡರ ನಡುವಿನ ವ್ಯತ್ಯಾಸ ಎಂದರೆ ‘ನೀವು ಯಾಕೆ ಈ ರೀತಿ ವರ್ತಿಸುತ್ತಿದ್ದೀರಿ? ಮತ್ತು ನೀವು ಹೇಗೆ ನಡೆಸಿಕೊಳ್ಳುತ್ತಿದ್ದೀರಿ? ಎಂಬುದು. ಅದೇ ಅಂಬೇಡ್ಕರ್ ಅವರ ಮಾನವಶಾಸ್ತ್ರ ಅಧ್ಯಯನದ ಬಹಳ ದೊಡ್ಡ ವಿಚಾರ’ ಎಂದು ಹೇಳಿದರು.

‘ರಂಜಿತ್ ಗುಹಾ, ಪಾರ್ಥ ಚಟರ್ಜಿ ತರಹದವರು ಭಾರತದಲ್ಲಿ ದೊಡ್ಡ ಮಟ್ಟದಲ್ಲಿ ‘ಸಬಾಲ್ಟರ್ನ್’ ಅಧ್ಯಯನ ನಡೆಸಿದ್ದಾರೆ. ಅವರು ಎಲ್ಲಿಯೂ ಅಂಬೇಡ್ಕರ್ ಅವರ ಹೆಸರನ್ನು ಪ್ರಸ್ತಾಪಿಸುವುದಿಲ್ಲ. ವಿದೇಶೀಯ ಅಧ್ಯಯನಕಾರರಾದ ಲೂಯಿಸ್ ಟಬೇಟೋ, ರಿಸ್ತೆ, ಡಿ.ಡಿ. ಕೋಸಂಬಿ, ನಿರ್ಮಲ್ ಕುಮಾರ್, ರಜನಿ ಕೊಠಾರಿ ಸೇರಿದಂತೆ ಅನೇಕರನ್ನು ಸಮಾಜ ಶಾಸ್ತ್ರಜ್ಞರು, ಮಾನವ ಕುಲ ಶಾಸ್ತ್ರಜ್ಞರು ಎಂದು ಗುರುತಿಸುತ್ತಾರೆ. ಆದರೆ, ಎಲ್ಲಿಯೂ ಅಂಬೇಡ್ಕರ್ ಅವರನ್ನು ಮಾನವ ಕುಲ ಶಾಸ್ತ್ರಜ್ಞ ಎಂದು ಗುರುತಿಸಿಲ್ಲ. ಏಕೆಂದರೆ, ಇವರಿಗೆ ಅಂಬೇಡ್ಕರ್ ಅವರನ್ನು ಯಾವ ರೀತಿ ಓದಬೇಕು ಎಂಬ ಗ್ರಹಿಕೆಯೇ ಇರಲಿಲ್ಲ. ಗ್ರಹಿಕೆ ಇಲ್ಲದ ಓದಿನಿಂದ ಮೊದಲ ದೃಷ್ಟಿಕೋನವೇ ಬದಲಾಗುತ್ತದೆ; ಆಗ ನಮ್ಮ ಸಂವೇದನೆ ಕೂಡ ಬದಲಾಗುತ್ತದೆ. ಸಂವೇದನೆ ಬದಲಾದಾಗ ನಮ್ಮ ವಿಚಾರ ಮಂಡನೆ ಕೂಡ ಬದಲಾಗುತ್ತದೆ’ ಎಂದರು.

‘ಅಂಬೇಡ್ಕರ್ ಅವರ ಮಾನವ ಶಾಸ್ತ್ರ ಅಧ್ಯಯನದ ಬಗ್ಗೆ ನಾವು ಮಾತನಾಡಬೇಕಾದರೆ, ಅವರು ಬರೆದ ಮೂರು ಮುಖ್ಯ ವಿಷಯಗಳ ಬಗ್ಗೆ ನಾವು ಓದಬೇಕು. 1916ರಲ್ಲಿ ಅವರು ಮಂಡಿಸಿ ಪ್ರಬಂಧ; ಅದರಲ್ಲಿ ಅವರು ಜಾತಿ ವ್ಯವಸ್ಥೆ ಬಗ್ಗೆ ಮಾತನಾಡುತ್ತಲೇ ‘ಎಕ್ಸೋಗಾಮಿ ಮತ್ತು ಎಂಡೋಗಾಮಿ’ ಬಗ್ಗೆ ಚರ್ಚೆ ಮಾಡುತ್ತಾರೆ. ಇವೆಲ್ಲವೂ ನಮಗೆ ಅರ್ಥ ಮಾಡಿಕೊಳ್ಳಬೇಕಾದರೆ ನಾವು ಅವರ ಮಾನವ ಶಾಸ್ತ್ರ ಅಧ್ಯಯನವನ್ನು ಓದಬೇಕು’ ಎಂದು ಹೇಳಿದರು.

ಸಮಾವೇಶವನ್ನು ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಉದ್ಘಾಟಿಸಿದರು. ಹಿರಿಯ ಸಾಹಿತಿಗಳಾದ ಅಗ್ರಹಾರ ಕೃಷ್ಣಮೂರ್ತಿ, ಬರಗೂರು ರಾಮಚಂದ್ರಪ್ಪ, ವಕೀಲರಾದ ಅನಂತ್ ನಾಯ್ಕ್ ಮತ್ತು ಹಿರಿಯ ಪತ್ರಕರ್ತರಾದ ಪ್ರದೀಪ್ ಮಾಲ್ಗುಡಿ ಇದ್ದರು.

ಇದನ್ನೂ ಓದಿ; ಪಾಕಿಸ್ತಾನ ಪರ ಘೋಷಣೆ ಆರೋಪ ಸಾಬೀತಾದರೆ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...