Homeಕರ್ನಾಟಕ'ಮಾನವತಾವಾದಿ' ಸಂವಿಧಾನವನ್ನು 'ಮನುವಾದಿ' ಮಾಡಲು ಹೊರಟಿದ್ದಾರೆ: ಪ್ರೊ. ನರೇಂದ್ರ ನಾಯಕ್

‘ಮಾನವತಾವಾದಿ’ ಸಂವಿಧಾನವನ್ನು ‘ಮನುವಾದಿ’ ಮಾಡಲು ಹೊರಟಿದ್ದಾರೆ: ಪ್ರೊ. ನರೇಂದ್ರ ನಾಯಕ್

- Advertisement -
- Advertisement -

‘ನಮ್ಮ ಸಂವಿಧಾನವೇ ನಮಗೆ ಅಂತಿಮ; ಈಗ ಅವರು ಅದನ್ನು ಬದಲಾಯಿಸಲು ಪ್ರಯತ್ನಿಸುತ್ತಿದ್ದಾರೆ. ಮಾನವತಾವಾದಿ ಸಂವಿಧಾನವನ್ನು ಈಗ ಮನುವಾದಿ ಸಂವಿಧಾನ ಮಾಡಲು ಹೊರಟಿದ್ದಾರೆ’ ಎಂದು ಭಾರತೀಯ ವಿಚಾರವಾದಿಗಳ ಸಂಘಗಳ ಒಕ್ಕೂಟದ ಪ್ರೊಫೆಸರ್ ನರೇಂದ್ರ ನಾಯಕ್ ಹೇಳಿದರು.

ರಾಷ್ಟ್ರೀಯ ವಿಜ್ಞಾನ‌ ದಿನದ ಅಂಗವಾಗಿ ‘ಭಾರತೀಯ ವಿಚಾರವಾದಿ ಸಂಘಗಳ ಒಕ್ಕೂಟ, ಮಾನವ ಬಂಧುತ್ವ ವೇದಿಕೆ, ನೇಗಿಲಯೋಗಿ ಟ್ರಸ್ಟ್, ಅಖಿಲ ಭಾರತ ವಿಚಾರವಾದಿಗಳ ಟ್ರಸ್ಟ್‌’ ಇಂದು ಬೆಂಗಳೂರಿನ ಗಾಂಧಿ ಭವನದಲ್ಲಿ ಆಯೋಜಿಸಿದ್ದ ‘ವಿಚಾರಕ್ರಾಂತಿ-ಒಂದು ದಿನದ ರಾಜ್ಯ ಮಟ್ಟದ ಸಮಾವೇಶ’ದಲ್ಲಿ ಪ್ರೊಫೆಸರ್ ನರೇಂದ್ರ ನಾಯಕ್ ಪ್ರಾಸ್ತಾವಿಕ ಮಾತುಗಳನ್ನಾಡಿದರು.

‘ನಾವು ಯಾರಿಗೂ ಉಪದೇಶ ಮಾಡಬೇಕಾಗಿಲ್ಲ; ಎಲ್ಲರಿಗೂ ಎಲ್ಲ ಗೊತ್ತು. ನಮಗೆ ಯಾವುದೇ ಅಧಿಕಾರವಿಲ್ಲ, ಅತಿಮಾನುಷ ಶಕ್ತಿ ಇಲ್ಲ. ಏನು ಮಾಡಲು ಸಾಧ್ಯ? ನಾಸ್ತಿಕರಾಗಿರುವುದೆಂದರೆ ನಮಗೆ ಯಾವುದೇ ಅತಿಮಾನುಷ ಶಕ್ತಿಯಲ್ಲಿ ನಂಬಿಕೆಯಿಲ್ಲ ಎಂಬ ನಿಲುವಿಗೆ ಬಂದುಬಿಡುತ್ತೇವೆ. ಅಲ್ಲ, ನಾವು ನಾಸ್ತಿಕರು ಹೇಳುತ್ತೇವೆ; ಎಲ್ಲರೂ ಸಮಾನರು, ಯಾವುದೇ ತಾರತಮ್ಯವಿಲ್ಲ; ಮಾನವತಾವಾದ ಮಾತ್ರ’ ಎಂದು ಹೇಳಿದರು.

‘ಎಲ್ಲವನ್ನೂ ತರ್ಕಬದ್ಧವಾಗಿ ಆಲೋಚಿಸುವುದು, ಪ್ರತಿಯೊಂದನ್ನು ಪ್ರಶ್ನಿಸುವುದು. ಮಾನವತಾವಾದ ಇನ್ನೂ ಒಂದು ಹೆಜ್ಜೆ ಮುಂದೆ ಎಂದರೆ, ಎಲ್ಲ ಮಾನವರು ಸಮಾನ; ಭಾಷೆ, ಜನಾಂಗ, ರಾಷ್ಟ್ರೀಯತೆ, ಲೈಂಗಿಕತೆ, ಜೆಂಡರ್ ಈ ಎಲ್ಲ ವ್ಯತ್ಯಾಸಗಳನ್ನು ಹೊರತುಪಡಿಸಿ ನಾವು ಮಾನವರು; ಅದೇ ಮಾನವತಾವಾದ’ ಎಂದರು.

‘ನಮಗಿರುವುದು ಒಂದೇ ಪವಿತ್ರ ಗ್ರಂಥ, ಬೈಬಲ್ ಅಲ್ಲ, ಖುರಾನ್ ಅಲ್ಲ, ಯಾವುದೇ ಧರ್ಮಗ್ರಂಥಗಳಲ್ಲ. ಅಂತಾರಾಷ್ಟ್ರೀಯ ಮಾನವಹಕ್ಕುಗಳ ಘೋಷಣೆಯೇ ನಮಗೆ ಪವಿತ್ರಗ್ರಂಥ. ನಾವು ಭಾರತದ ಸಂವಿಧಾನದ ಪರವಾಗಿದ್ದೇವೆ, ಅಲ್ಲಿ ಒಂದುವಿಧಿ, ಆರ್ಟಿಕಲ್ 51 (ಎಎಚ್) ಇದೆ. ಇದು ಪ್ರತಿಯೊಬ್ಬರೂ ವೈಜ್ಞಾನಿಕ ಮನೋಬಾವ ಬೆಳೆಸಿಕೊಳ್ಳಬೇಕು ಎನ್ನುತ್ತದೆ. ಪ್ರಶ್ನಿಸುವ ಮನೋಭಾವ ಮತ್ತು ಮಾನವತೆಯನ್ನು ಬೆಳಸಿಕೊಳ್ಳಬೇಕು ಎನ್ನುತ್ತದೆ. ನಮ್ಮ ಸಂವಿಧಾನವೇ ನಮಗೆ ಅಂತಿಮ. ಈಗ ಅವರು ಅದನ್ನು ಬದಲಾಯಿಸಲು ಪ್ರಯತ್ನಿಸುತ್ತಿದ್ದಾರೆ. ಮಾನವತಾವಾದಿ ಸಂವಿಧಾನವನ್ನು ಈಗ ಮನುವಾದಿ ಸಂವಿಧಾನ ಮಾಡಲು ಹೊರಟಿದ್ದಾರೆ’ ಎಂದರು.

‘ವೈಜ್ಞಾನಿಕ ಮಾನವಕುಲಶಾಸ್ತ್ರ ಮತ್ತು ಅಂಬೇಡ್ಕರ್ ಅವರ ಚಿಂತನೆ’ ಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಚಿಂತಕರಾದ ಬಿ. ಶ್ರೀಪಾದ್ ಭಟ್, ‘ಮಾನವಶಾಸ್ತ್ರಜ್ಞ ಎಂದು ಅಂಬೇಡ್ಕರ್ ಅವರನ್ನ ಗುರುತಿಸುವಲ್ಲಿ ಅರ್ಥ ಮಾಡಿಕೊಳ್ಳುವಲ್ಲಿ ನಾವು ಸೋತಿದ್ದೇವೆ; ನಾನ್ಯಾರು ಎಂದು ಬುದ್ಧಿಸ್ಟ್ ಕೇಳುವುದಿಲ್ಲ; ನಮ್ಮನ್ನು ಯಾವ ರೀತಿ ಟ್ರೀಟ್ ಮಾಡಲಾಗುತ್ತದೆ ಎಂದು ಕೇಳುತ್ತಾರೆ. ಅಂಬೇಡ್ಕರ್ ಮಾನವ ಕುಲಶಾಸ್ತ್ರೀಯರಾಗಿಗಿ ಈ ಪ್ರಶ್ನೆ ಕೇಳಿದ್ದರು. ತನ್ನ ವೈಯಕ್ತಿಕ ನೋವನ್ನು ಯೂನಿವರ್ಸಲ್ ಆಗಿ ನೋಡಿದ್ದು ಅಂಬೇಡ್ಕರ್ ಮಾತ್ರ’ ಎಂದರು.

‘ವೈಜ್ಞಾನಿಕ ಮಾನವಕುಲಶಾಸ್ತ್ರ ಮತ್ತು ಅಂಬೇಡ್ಕರ್ ಅವರ ಚಿಂತನೆ’ ಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಚಿಂತಕರಾದ ಬಿ. ಶ್ರೀಪಾದ್ ಭಟ್

‘ಉದಾಹರಣೆಗೆ.. ಭಾರತದಲ್ಲಿ ಪಸಿದ್ಧರಾದ ಎಂ.ಎನ್‌. ಶ್ರೀನಿವಾಸ್, ಅವರನ್ನು ಸಮಾಜ ವಿಜ್ಞಾನಿ ಎಂದು ಕರೆಯುತ್ತಾರೆ. ಅವರು ಮೈಸೂರಿನ ರಾಂಪುರ ಕುರಿತು ಪುಸ್ತಕ ಬರೆದಿರುವದನ್ನೂ ನಮ್ಮಲ್ಲಿ ಹಲವರು ಓದಿದ್ದಾರೆ. ಅವರು ಹಲವು ವರ್ಷಗಳ ಕಾಲ ಅದೇ ಗ್ರಾಮದಲ್ಲಿ ಉಳಿದುಕೊಂಡಿದ್ದರು. ಹಳ್ಳಿಗಳು ಹೇಗೆ ಜಾತಿ ಆಧಾರವಾಗಿ ಕಟ್ಟಲ್ಪಟ್ಟಿವೆ ಎಂಬುದನ್ನು ಅಧ್ಯಯನ ಮಾಡುತ್ತಾರೆ. ಆದರೆ, ಅವರು ಹೋಗಿ ಉಳಿದುಕೊಳ್ಳುವುದು ಅಗ್ರಹಾರದ ಬ್ರಾಹ್ಮಣದ ಮನೆಯಲ್ಲಿ. ಅಗ್ರಹಾರದ ಮೂಲಕ ಹೋದಾಗ ಮಾಹಿತಿಗಳು ಖಚಿತವಾಗಿರುವುದಿಲ್ಲ. ಶ್ರೀನಿವಾಸ್ ದಲಿತ ಕೇರಿಗೆ ಹೋಗುತ್ತೇನೆ ಎಂದಾಗ, ‘ದಲಿತರ ಬಗ್ಗೆ ನಾವೇ ಹೇಳುತ್ತೇವೆ.. ಅವರಿಗೇನು ಗೊತ್ತು’ ಎಂದು ಬ್ರಾಹ್ಮಣರು ಹೇಳುತ್ತಾರೆ; ಇದು ಬ್ರಾಹ್ಣಣಿಸಮ್’ ಎಂದು ವಿವರಿಸಿದರು.

‘ಅಂಬೇಡ್ಕರ್ ಪ್ರಶ್ನಿಸಿದ್ದು ಇದನ್ನೇ, ‘ನಮ್ಮನ್ನೇಕೆ ಹೀಗೆ ನಡೆಸಿಕೊಳ್ಳುತ್ತಿದ್ದೀರಾ’ ಎನ್ನುತ್ತಾರೆ. ಆದ್ದರಿಂದ ಅಂಬೇಡ್ಕರ್ ಅವರ ಮಾನಶಾಸ್ತ್ರ ಅಧ್ಯಯನವನ್ನು ನಾವು ಓದಬೇಕಾಗಿದೆ. ಅವರು ಸಮಾನತೆ, ಸ್ವಾತಂತ್ರ ಮತ್ತು ಸಹೋದರತೆ ಎಂದು ಪ್ರತಿಪಾದಿಸುತ್ತಾರೆ.. ಅದು ಮೇಲ್ಮುಖ ಚಲನೆ. ಆದರೆ, ಮಾನವ ಶಾಸ್ತ್ರಜ್ಞರು ಎಂದು ಗುರುತಿಸಲ್ಪಟ್ಟ ಶ್ರೀನಿವಾಸ್, ಸಂಸ್ಕೃತೀಕರಣದ ಮೇಲ್ಮುಖ ಚಲನೆ ಎನ್ನುತ್ತಾರೆ. ಇವೆರಡರ ನಡುವಿನ ವ್ಯತ್ಯಾಸ ಎಂದರೆ ‘ನೀವು ಯಾಕೆ ಈ ರೀತಿ ವರ್ತಿಸುತ್ತಿದ್ದೀರಿ? ಮತ್ತು ನೀವು ಹೇಗೆ ನಡೆಸಿಕೊಳ್ಳುತ್ತಿದ್ದೀರಿ? ಎಂಬುದು. ಅದೇ ಅಂಬೇಡ್ಕರ್ ಅವರ ಮಾನವಶಾಸ್ತ್ರ ಅಧ್ಯಯನದ ಬಹಳ ದೊಡ್ಡ ವಿಚಾರ’ ಎಂದು ಹೇಳಿದರು.

‘ರಂಜಿತ್ ಗುಹಾ, ಪಾರ್ಥ ಚಟರ್ಜಿ ತರಹದವರು ಭಾರತದಲ್ಲಿ ದೊಡ್ಡ ಮಟ್ಟದಲ್ಲಿ ‘ಸಬಾಲ್ಟರ್ನ್’ ಅಧ್ಯಯನ ನಡೆಸಿದ್ದಾರೆ. ಅವರು ಎಲ್ಲಿಯೂ ಅಂಬೇಡ್ಕರ್ ಅವರ ಹೆಸರನ್ನು ಪ್ರಸ್ತಾಪಿಸುವುದಿಲ್ಲ. ವಿದೇಶೀಯ ಅಧ್ಯಯನಕಾರರಾದ ಲೂಯಿಸ್ ಟಬೇಟೋ, ರಿಸ್ತೆ, ಡಿ.ಡಿ. ಕೋಸಂಬಿ, ನಿರ್ಮಲ್ ಕುಮಾರ್, ರಜನಿ ಕೊಠಾರಿ ಸೇರಿದಂತೆ ಅನೇಕರನ್ನು ಸಮಾಜ ಶಾಸ್ತ್ರಜ್ಞರು, ಮಾನವ ಕುಲ ಶಾಸ್ತ್ರಜ್ಞರು ಎಂದು ಗುರುತಿಸುತ್ತಾರೆ. ಆದರೆ, ಎಲ್ಲಿಯೂ ಅಂಬೇಡ್ಕರ್ ಅವರನ್ನು ಮಾನವ ಕುಲ ಶಾಸ್ತ್ರಜ್ಞ ಎಂದು ಗುರುತಿಸಿಲ್ಲ. ಏಕೆಂದರೆ, ಇವರಿಗೆ ಅಂಬೇಡ್ಕರ್ ಅವರನ್ನು ಯಾವ ರೀತಿ ಓದಬೇಕು ಎಂಬ ಗ್ರಹಿಕೆಯೇ ಇರಲಿಲ್ಲ. ಗ್ರಹಿಕೆ ಇಲ್ಲದ ಓದಿನಿಂದ ಮೊದಲ ದೃಷ್ಟಿಕೋನವೇ ಬದಲಾಗುತ್ತದೆ; ಆಗ ನಮ್ಮ ಸಂವೇದನೆ ಕೂಡ ಬದಲಾಗುತ್ತದೆ. ಸಂವೇದನೆ ಬದಲಾದಾಗ ನಮ್ಮ ವಿಚಾರ ಮಂಡನೆ ಕೂಡ ಬದಲಾಗುತ್ತದೆ’ ಎಂದರು.

‘ಅಂಬೇಡ್ಕರ್ ಅವರ ಮಾನವ ಶಾಸ್ತ್ರ ಅಧ್ಯಯನದ ಬಗ್ಗೆ ನಾವು ಮಾತನಾಡಬೇಕಾದರೆ, ಅವರು ಬರೆದ ಮೂರು ಮುಖ್ಯ ವಿಷಯಗಳ ಬಗ್ಗೆ ನಾವು ಓದಬೇಕು. 1916ರಲ್ಲಿ ಅವರು ಮಂಡಿಸಿ ಪ್ರಬಂಧ; ಅದರಲ್ಲಿ ಅವರು ಜಾತಿ ವ್ಯವಸ್ಥೆ ಬಗ್ಗೆ ಮಾತನಾಡುತ್ತಲೇ ‘ಎಕ್ಸೋಗಾಮಿ ಮತ್ತು ಎಂಡೋಗಾಮಿ’ ಬಗ್ಗೆ ಚರ್ಚೆ ಮಾಡುತ್ತಾರೆ. ಇವೆಲ್ಲವೂ ನಮಗೆ ಅರ್ಥ ಮಾಡಿಕೊಳ್ಳಬೇಕಾದರೆ ನಾವು ಅವರ ಮಾನವ ಶಾಸ್ತ್ರ ಅಧ್ಯಯನವನ್ನು ಓದಬೇಕು’ ಎಂದು ಹೇಳಿದರು.

ಸಮಾವೇಶವನ್ನು ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಉದ್ಘಾಟಿಸಿದರು. ಹಿರಿಯ ಸಾಹಿತಿಗಳಾದ ಅಗ್ರಹಾರ ಕೃಷ್ಣಮೂರ್ತಿ, ಬರಗೂರು ರಾಮಚಂದ್ರಪ್ಪ, ವಕೀಲರಾದ ಅನಂತ್ ನಾಯ್ಕ್ ಮತ್ತು ಹಿರಿಯ ಪತ್ರಕರ್ತರಾದ ಪ್ರದೀಪ್ ಮಾಲ್ಗುಡಿ ಇದ್ದರು.

ಇದನ್ನೂ ಓದಿ; ಪಾಕಿಸ್ತಾನ ಪರ ಘೋಷಣೆ ಆರೋಪ ಸಾಬೀತಾದರೆ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...