Homeಕರ್ನಾಟಕ'ಮಾನವತಾವಾದಿ' ಸಂವಿಧಾನವನ್ನು 'ಮನುವಾದಿ' ಮಾಡಲು ಹೊರಟಿದ್ದಾರೆ: ಪ್ರೊ. ನರೇಂದ್ರ ನಾಯಕ್

‘ಮಾನವತಾವಾದಿ’ ಸಂವಿಧಾನವನ್ನು ‘ಮನುವಾದಿ’ ಮಾಡಲು ಹೊರಟಿದ್ದಾರೆ: ಪ್ರೊ. ನರೇಂದ್ರ ನಾಯಕ್

- Advertisement -
- Advertisement -

‘ನಮ್ಮ ಸಂವಿಧಾನವೇ ನಮಗೆ ಅಂತಿಮ; ಈಗ ಅವರು ಅದನ್ನು ಬದಲಾಯಿಸಲು ಪ್ರಯತ್ನಿಸುತ್ತಿದ್ದಾರೆ. ಮಾನವತಾವಾದಿ ಸಂವಿಧಾನವನ್ನು ಈಗ ಮನುವಾದಿ ಸಂವಿಧಾನ ಮಾಡಲು ಹೊರಟಿದ್ದಾರೆ’ ಎಂದು ಭಾರತೀಯ ವಿಚಾರವಾದಿಗಳ ಸಂಘಗಳ ಒಕ್ಕೂಟದ ಪ್ರೊಫೆಸರ್ ನರೇಂದ್ರ ನಾಯಕ್ ಹೇಳಿದರು.

ರಾಷ್ಟ್ರೀಯ ವಿಜ್ಞಾನ‌ ದಿನದ ಅಂಗವಾಗಿ ‘ಭಾರತೀಯ ವಿಚಾರವಾದಿ ಸಂಘಗಳ ಒಕ್ಕೂಟ, ಮಾನವ ಬಂಧುತ್ವ ವೇದಿಕೆ, ನೇಗಿಲಯೋಗಿ ಟ್ರಸ್ಟ್, ಅಖಿಲ ಭಾರತ ವಿಚಾರವಾದಿಗಳ ಟ್ರಸ್ಟ್‌’ ಇಂದು ಬೆಂಗಳೂರಿನ ಗಾಂಧಿ ಭವನದಲ್ಲಿ ಆಯೋಜಿಸಿದ್ದ ‘ವಿಚಾರಕ್ರಾಂತಿ-ಒಂದು ದಿನದ ರಾಜ್ಯ ಮಟ್ಟದ ಸಮಾವೇಶ’ದಲ್ಲಿ ಪ್ರೊಫೆಸರ್ ನರೇಂದ್ರ ನಾಯಕ್ ಪ್ರಾಸ್ತಾವಿಕ ಮಾತುಗಳನ್ನಾಡಿದರು.

‘ನಾವು ಯಾರಿಗೂ ಉಪದೇಶ ಮಾಡಬೇಕಾಗಿಲ್ಲ; ಎಲ್ಲರಿಗೂ ಎಲ್ಲ ಗೊತ್ತು. ನಮಗೆ ಯಾವುದೇ ಅಧಿಕಾರವಿಲ್ಲ, ಅತಿಮಾನುಷ ಶಕ್ತಿ ಇಲ್ಲ. ಏನು ಮಾಡಲು ಸಾಧ್ಯ? ನಾಸ್ತಿಕರಾಗಿರುವುದೆಂದರೆ ನಮಗೆ ಯಾವುದೇ ಅತಿಮಾನುಷ ಶಕ್ತಿಯಲ್ಲಿ ನಂಬಿಕೆಯಿಲ್ಲ ಎಂಬ ನಿಲುವಿಗೆ ಬಂದುಬಿಡುತ್ತೇವೆ. ಅಲ್ಲ, ನಾವು ನಾಸ್ತಿಕರು ಹೇಳುತ್ತೇವೆ; ಎಲ್ಲರೂ ಸಮಾನರು, ಯಾವುದೇ ತಾರತಮ್ಯವಿಲ್ಲ; ಮಾನವತಾವಾದ ಮಾತ್ರ’ ಎಂದು ಹೇಳಿದರು.

‘ಎಲ್ಲವನ್ನೂ ತರ್ಕಬದ್ಧವಾಗಿ ಆಲೋಚಿಸುವುದು, ಪ್ರತಿಯೊಂದನ್ನು ಪ್ರಶ್ನಿಸುವುದು. ಮಾನವತಾವಾದ ಇನ್ನೂ ಒಂದು ಹೆಜ್ಜೆ ಮುಂದೆ ಎಂದರೆ, ಎಲ್ಲ ಮಾನವರು ಸಮಾನ; ಭಾಷೆ, ಜನಾಂಗ, ರಾಷ್ಟ್ರೀಯತೆ, ಲೈಂಗಿಕತೆ, ಜೆಂಡರ್ ಈ ಎಲ್ಲ ವ್ಯತ್ಯಾಸಗಳನ್ನು ಹೊರತುಪಡಿಸಿ ನಾವು ಮಾನವರು; ಅದೇ ಮಾನವತಾವಾದ’ ಎಂದರು.

‘ನಮಗಿರುವುದು ಒಂದೇ ಪವಿತ್ರ ಗ್ರಂಥ, ಬೈಬಲ್ ಅಲ್ಲ, ಖುರಾನ್ ಅಲ್ಲ, ಯಾವುದೇ ಧರ್ಮಗ್ರಂಥಗಳಲ್ಲ. ಅಂತಾರಾಷ್ಟ್ರೀಯ ಮಾನವಹಕ್ಕುಗಳ ಘೋಷಣೆಯೇ ನಮಗೆ ಪವಿತ್ರಗ್ರಂಥ. ನಾವು ಭಾರತದ ಸಂವಿಧಾನದ ಪರವಾಗಿದ್ದೇವೆ, ಅಲ್ಲಿ ಒಂದುವಿಧಿ, ಆರ್ಟಿಕಲ್ 51 (ಎಎಚ್) ಇದೆ. ಇದು ಪ್ರತಿಯೊಬ್ಬರೂ ವೈಜ್ಞಾನಿಕ ಮನೋಬಾವ ಬೆಳೆಸಿಕೊಳ್ಳಬೇಕು ಎನ್ನುತ್ತದೆ. ಪ್ರಶ್ನಿಸುವ ಮನೋಭಾವ ಮತ್ತು ಮಾನವತೆಯನ್ನು ಬೆಳಸಿಕೊಳ್ಳಬೇಕು ಎನ್ನುತ್ತದೆ. ನಮ್ಮ ಸಂವಿಧಾನವೇ ನಮಗೆ ಅಂತಿಮ. ಈಗ ಅವರು ಅದನ್ನು ಬದಲಾಯಿಸಲು ಪ್ರಯತ್ನಿಸುತ್ತಿದ್ದಾರೆ. ಮಾನವತಾವಾದಿ ಸಂವಿಧಾನವನ್ನು ಈಗ ಮನುವಾದಿ ಸಂವಿಧಾನ ಮಾಡಲು ಹೊರಟಿದ್ದಾರೆ’ ಎಂದರು.

‘ವೈಜ್ಞಾನಿಕ ಮಾನವಕುಲಶಾಸ್ತ್ರ ಮತ್ತು ಅಂಬೇಡ್ಕರ್ ಅವರ ಚಿಂತನೆ’ ಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಚಿಂತಕರಾದ ಬಿ. ಶ್ರೀಪಾದ್ ಭಟ್, ‘ಮಾನವಶಾಸ್ತ್ರಜ್ಞ ಎಂದು ಅಂಬೇಡ್ಕರ್ ಅವರನ್ನ ಗುರುತಿಸುವಲ್ಲಿ ಅರ್ಥ ಮಾಡಿಕೊಳ್ಳುವಲ್ಲಿ ನಾವು ಸೋತಿದ್ದೇವೆ; ನಾನ್ಯಾರು ಎಂದು ಬುದ್ಧಿಸ್ಟ್ ಕೇಳುವುದಿಲ್ಲ; ನಮ್ಮನ್ನು ಯಾವ ರೀತಿ ಟ್ರೀಟ್ ಮಾಡಲಾಗುತ್ತದೆ ಎಂದು ಕೇಳುತ್ತಾರೆ. ಅಂಬೇಡ್ಕರ್ ಮಾನವ ಕುಲಶಾಸ್ತ್ರೀಯರಾಗಿಗಿ ಈ ಪ್ರಶ್ನೆ ಕೇಳಿದ್ದರು. ತನ್ನ ವೈಯಕ್ತಿಕ ನೋವನ್ನು ಯೂನಿವರ್ಸಲ್ ಆಗಿ ನೋಡಿದ್ದು ಅಂಬೇಡ್ಕರ್ ಮಾತ್ರ’ ಎಂದರು.

‘ವೈಜ್ಞಾನಿಕ ಮಾನವಕುಲಶಾಸ್ತ್ರ ಮತ್ತು ಅಂಬೇಡ್ಕರ್ ಅವರ ಚಿಂತನೆ’ ಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಚಿಂತಕರಾದ ಬಿ. ಶ್ರೀಪಾದ್ ಭಟ್

‘ಉದಾಹರಣೆಗೆ.. ಭಾರತದಲ್ಲಿ ಪಸಿದ್ಧರಾದ ಎಂ.ಎನ್‌. ಶ್ರೀನಿವಾಸ್, ಅವರನ್ನು ಸಮಾಜ ವಿಜ್ಞಾನಿ ಎಂದು ಕರೆಯುತ್ತಾರೆ. ಅವರು ಮೈಸೂರಿನ ರಾಂಪುರ ಕುರಿತು ಪುಸ್ತಕ ಬರೆದಿರುವದನ್ನೂ ನಮ್ಮಲ್ಲಿ ಹಲವರು ಓದಿದ್ದಾರೆ. ಅವರು ಹಲವು ವರ್ಷಗಳ ಕಾಲ ಅದೇ ಗ್ರಾಮದಲ್ಲಿ ಉಳಿದುಕೊಂಡಿದ್ದರು. ಹಳ್ಳಿಗಳು ಹೇಗೆ ಜಾತಿ ಆಧಾರವಾಗಿ ಕಟ್ಟಲ್ಪಟ್ಟಿವೆ ಎಂಬುದನ್ನು ಅಧ್ಯಯನ ಮಾಡುತ್ತಾರೆ. ಆದರೆ, ಅವರು ಹೋಗಿ ಉಳಿದುಕೊಳ್ಳುವುದು ಅಗ್ರಹಾರದ ಬ್ರಾಹ್ಮಣದ ಮನೆಯಲ್ಲಿ. ಅಗ್ರಹಾರದ ಮೂಲಕ ಹೋದಾಗ ಮಾಹಿತಿಗಳು ಖಚಿತವಾಗಿರುವುದಿಲ್ಲ. ಶ್ರೀನಿವಾಸ್ ದಲಿತ ಕೇರಿಗೆ ಹೋಗುತ್ತೇನೆ ಎಂದಾಗ, ‘ದಲಿತರ ಬಗ್ಗೆ ನಾವೇ ಹೇಳುತ್ತೇವೆ.. ಅವರಿಗೇನು ಗೊತ್ತು’ ಎಂದು ಬ್ರಾಹ್ಮಣರು ಹೇಳುತ್ತಾರೆ; ಇದು ಬ್ರಾಹ್ಣಣಿಸಮ್’ ಎಂದು ವಿವರಿಸಿದರು.

‘ಅಂಬೇಡ್ಕರ್ ಪ್ರಶ್ನಿಸಿದ್ದು ಇದನ್ನೇ, ‘ನಮ್ಮನ್ನೇಕೆ ಹೀಗೆ ನಡೆಸಿಕೊಳ್ಳುತ್ತಿದ್ದೀರಾ’ ಎನ್ನುತ್ತಾರೆ. ಆದ್ದರಿಂದ ಅಂಬೇಡ್ಕರ್ ಅವರ ಮಾನಶಾಸ್ತ್ರ ಅಧ್ಯಯನವನ್ನು ನಾವು ಓದಬೇಕಾಗಿದೆ. ಅವರು ಸಮಾನತೆ, ಸ್ವಾತಂತ್ರ ಮತ್ತು ಸಹೋದರತೆ ಎಂದು ಪ್ರತಿಪಾದಿಸುತ್ತಾರೆ.. ಅದು ಮೇಲ್ಮುಖ ಚಲನೆ. ಆದರೆ, ಮಾನವ ಶಾಸ್ತ್ರಜ್ಞರು ಎಂದು ಗುರುತಿಸಲ್ಪಟ್ಟ ಶ್ರೀನಿವಾಸ್, ಸಂಸ್ಕೃತೀಕರಣದ ಮೇಲ್ಮುಖ ಚಲನೆ ಎನ್ನುತ್ತಾರೆ. ಇವೆರಡರ ನಡುವಿನ ವ್ಯತ್ಯಾಸ ಎಂದರೆ ‘ನೀವು ಯಾಕೆ ಈ ರೀತಿ ವರ್ತಿಸುತ್ತಿದ್ದೀರಿ? ಮತ್ತು ನೀವು ಹೇಗೆ ನಡೆಸಿಕೊಳ್ಳುತ್ತಿದ್ದೀರಿ? ಎಂಬುದು. ಅದೇ ಅಂಬೇಡ್ಕರ್ ಅವರ ಮಾನವಶಾಸ್ತ್ರ ಅಧ್ಯಯನದ ಬಹಳ ದೊಡ್ಡ ವಿಚಾರ’ ಎಂದು ಹೇಳಿದರು.

‘ರಂಜಿತ್ ಗುಹಾ, ಪಾರ್ಥ ಚಟರ್ಜಿ ತರಹದವರು ಭಾರತದಲ್ಲಿ ದೊಡ್ಡ ಮಟ್ಟದಲ್ಲಿ ‘ಸಬಾಲ್ಟರ್ನ್’ ಅಧ್ಯಯನ ನಡೆಸಿದ್ದಾರೆ. ಅವರು ಎಲ್ಲಿಯೂ ಅಂಬೇಡ್ಕರ್ ಅವರ ಹೆಸರನ್ನು ಪ್ರಸ್ತಾಪಿಸುವುದಿಲ್ಲ. ವಿದೇಶೀಯ ಅಧ್ಯಯನಕಾರರಾದ ಲೂಯಿಸ್ ಟಬೇಟೋ, ರಿಸ್ತೆ, ಡಿ.ಡಿ. ಕೋಸಂಬಿ, ನಿರ್ಮಲ್ ಕುಮಾರ್, ರಜನಿ ಕೊಠಾರಿ ಸೇರಿದಂತೆ ಅನೇಕರನ್ನು ಸಮಾಜ ಶಾಸ್ತ್ರಜ್ಞರು, ಮಾನವ ಕುಲ ಶಾಸ್ತ್ರಜ್ಞರು ಎಂದು ಗುರುತಿಸುತ್ತಾರೆ. ಆದರೆ, ಎಲ್ಲಿಯೂ ಅಂಬೇಡ್ಕರ್ ಅವರನ್ನು ಮಾನವ ಕುಲ ಶಾಸ್ತ್ರಜ್ಞ ಎಂದು ಗುರುತಿಸಿಲ್ಲ. ಏಕೆಂದರೆ, ಇವರಿಗೆ ಅಂಬೇಡ್ಕರ್ ಅವರನ್ನು ಯಾವ ರೀತಿ ಓದಬೇಕು ಎಂಬ ಗ್ರಹಿಕೆಯೇ ಇರಲಿಲ್ಲ. ಗ್ರಹಿಕೆ ಇಲ್ಲದ ಓದಿನಿಂದ ಮೊದಲ ದೃಷ್ಟಿಕೋನವೇ ಬದಲಾಗುತ್ತದೆ; ಆಗ ನಮ್ಮ ಸಂವೇದನೆ ಕೂಡ ಬದಲಾಗುತ್ತದೆ. ಸಂವೇದನೆ ಬದಲಾದಾಗ ನಮ್ಮ ವಿಚಾರ ಮಂಡನೆ ಕೂಡ ಬದಲಾಗುತ್ತದೆ’ ಎಂದರು.

‘ಅಂಬೇಡ್ಕರ್ ಅವರ ಮಾನವ ಶಾಸ್ತ್ರ ಅಧ್ಯಯನದ ಬಗ್ಗೆ ನಾವು ಮಾತನಾಡಬೇಕಾದರೆ, ಅವರು ಬರೆದ ಮೂರು ಮುಖ್ಯ ವಿಷಯಗಳ ಬಗ್ಗೆ ನಾವು ಓದಬೇಕು. 1916ರಲ್ಲಿ ಅವರು ಮಂಡಿಸಿ ಪ್ರಬಂಧ; ಅದರಲ್ಲಿ ಅವರು ಜಾತಿ ವ್ಯವಸ್ಥೆ ಬಗ್ಗೆ ಮಾತನಾಡುತ್ತಲೇ ‘ಎಕ್ಸೋಗಾಮಿ ಮತ್ತು ಎಂಡೋಗಾಮಿ’ ಬಗ್ಗೆ ಚರ್ಚೆ ಮಾಡುತ್ತಾರೆ. ಇವೆಲ್ಲವೂ ನಮಗೆ ಅರ್ಥ ಮಾಡಿಕೊಳ್ಳಬೇಕಾದರೆ ನಾವು ಅವರ ಮಾನವ ಶಾಸ್ತ್ರ ಅಧ್ಯಯನವನ್ನು ಓದಬೇಕು’ ಎಂದು ಹೇಳಿದರು.

ಸಮಾವೇಶವನ್ನು ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಉದ್ಘಾಟಿಸಿದರು. ಹಿರಿಯ ಸಾಹಿತಿಗಳಾದ ಅಗ್ರಹಾರ ಕೃಷ್ಣಮೂರ್ತಿ, ಬರಗೂರು ರಾಮಚಂದ್ರಪ್ಪ, ವಕೀಲರಾದ ಅನಂತ್ ನಾಯ್ಕ್ ಮತ್ತು ಹಿರಿಯ ಪತ್ರಕರ್ತರಾದ ಪ್ರದೀಪ್ ಮಾಲ್ಗುಡಿ ಇದ್ದರು.

ಇದನ್ನೂ ಓದಿ; ಪಾಕಿಸ್ತಾನ ಪರ ಘೋಷಣೆ ಆರೋಪ ಸಾಬೀತಾದರೆ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...