Homeಕರ್ನಾಟಕ'ಮಾನವತಾವಾದಿ' ಸಂವಿಧಾನವನ್ನು 'ಮನುವಾದಿ' ಮಾಡಲು ಹೊರಟಿದ್ದಾರೆ: ಪ್ರೊ. ನರೇಂದ್ರ ನಾಯಕ್

‘ಮಾನವತಾವಾದಿ’ ಸಂವಿಧಾನವನ್ನು ‘ಮನುವಾದಿ’ ಮಾಡಲು ಹೊರಟಿದ್ದಾರೆ: ಪ್ರೊ. ನರೇಂದ್ರ ನಾಯಕ್

- Advertisement -
- Advertisement -

‘ನಮ್ಮ ಸಂವಿಧಾನವೇ ನಮಗೆ ಅಂತಿಮ; ಈಗ ಅವರು ಅದನ್ನು ಬದಲಾಯಿಸಲು ಪ್ರಯತ್ನಿಸುತ್ತಿದ್ದಾರೆ. ಮಾನವತಾವಾದಿ ಸಂವಿಧಾನವನ್ನು ಈಗ ಮನುವಾದಿ ಸಂವಿಧಾನ ಮಾಡಲು ಹೊರಟಿದ್ದಾರೆ’ ಎಂದು ಭಾರತೀಯ ವಿಚಾರವಾದಿಗಳ ಸಂಘಗಳ ಒಕ್ಕೂಟದ ಪ್ರೊಫೆಸರ್ ನರೇಂದ್ರ ನಾಯಕ್ ಹೇಳಿದರು.

ರಾಷ್ಟ್ರೀಯ ವಿಜ್ಞಾನ‌ ದಿನದ ಅಂಗವಾಗಿ ‘ಭಾರತೀಯ ವಿಚಾರವಾದಿ ಸಂಘಗಳ ಒಕ್ಕೂಟ, ಮಾನವ ಬಂಧುತ್ವ ವೇದಿಕೆ, ನೇಗಿಲಯೋಗಿ ಟ್ರಸ್ಟ್, ಅಖಿಲ ಭಾರತ ವಿಚಾರವಾದಿಗಳ ಟ್ರಸ್ಟ್‌’ ಇಂದು ಬೆಂಗಳೂರಿನ ಗಾಂಧಿ ಭವನದಲ್ಲಿ ಆಯೋಜಿಸಿದ್ದ ‘ವಿಚಾರಕ್ರಾಂತಿ-ಒಂದು ದಿನದ ರಾಜ್ಯ ಮಟ್ಟದ ಸಮಾವೇಶ’ದಲ್ಲಿ ಪ್ರೊಫೆಸರ್ ನರೇಂದ್ರ ನಾಯಕ್ ಪ್ರಾಸ್ತಾವಿಕ ಮಾತುಗಳನ್ನಾಡಿದರು.

‘ನಾವು ಯಾರಿಗೂ ಉಪದೇಶ ಮಾಡಬೇಕಾಗಿಲ್ಲ; ಎಲ್ಲರಿಗೂ ಎಲ್ಲ ಗೊತ್ತು. ನಮಗೆ ಯಾವುದೇ ಅಧಿಕಾರವಿಲ್ಲ, ಅತಿಮಾನುಷ ಶಕ್ತಿ ಇಲ್ಲ. ಏನು ಮಾಡಲು ಸಾಧ್ಯ? ನಾಸ್ತಿಕರಾಗಿರುವುದೆಂದರೆ ನಮಗೆ ಯಾವುದೇ ಅತಿಮಾನುಷ ಶಕ್ತಿಯಲ್ಲಿ ನಂಬಿಕೆಯಿಲ್ಲ ಎಂಬ ನಿಲುವಿಗೆ ಬಂದುಬಿಡುತ್ತೇವೆ. ಅಲ್ಲ, ನಾವು ನಾಸ್ತಿಕರು ಹೇಳುತ್ತೇವೆ; ಎಲ್ಲರೂ ಸಮಾನರು, ಯಾವುದೇ ತಾರತಮ್ಯವಿಲ್ಲ; ಮಾನವತಾವಾದ ಮಾತ್ರ’ ಎಂದು ಹೇಳಿದರು.

‘ಎಲ್ಲವನ್ನೂ ತರ್ಕಬದ್ಧವಾಗಿ ಆಲೋಚಿಸುವುದು, ಪ್ರತಿಯೊಂದನ್ನು ಪ್ರಶ್ನಿಸುವುದು. ಮಾನವತಾವಾದ ಇನ್ನೂ ಒಂದು ಹೆಜ್ಜೆ ಮುಂದೆ ಎಂದರೆ, ಎಲ್ಲ ಮಾನವರು ಸಮಾನ; ಭಾಷೆ, ಜನಾಂಗ, ರಾಷ್ಟ್ರೀಯತೆ, ಲೈಂಗಿಕತೆ, ಜೆಂಡರ್ ಈ ಎಲ್ಲ ವ್ಯತ್ಯಾಸಗಳನ್ನು ಹೊರತುಪಡಿಸಿ ನಾವು ಮಾನವರು; ಅದೇ ಮಾನವತಾವಾದ’ ಎಂದರು.

‘ನಮಗಿರುವುದು ಒಂದೇ ಪವಿತ್ರ ಗ್ರಂಥ, ಬೈಬಲ್ ಅಲ್ಲ, ಖುರಾನ್ ಅಲ್ಲ, ಯಾವುದೇ ಧರ್ಮಗ್ರಂಥಗಳಲ್ಲ. ಅಂತಾರಾಷ್ಟ್ರೀಯ ಮಾನವಹಕ್ಕುಗಳ ಘೋಷಣೆಯೇ ನಮಗೆ ಪವಿತ್ರಗ್ರಂಥ. ನಾವು ಭಾರತದ ಸಂವಿಧಾನದ ಪರವಾಗಿದ್ದೇವೆ, ಅಲ್ಲಿ ಒಂದುವಿಧಿ, ಆರ್ಟಿಕಲ್ 51 (ಎಎಚ್) ಇದೆ. ಇದು ಪ್ರತಿಯೊಬ್ಬರೂ ವೈಜ್ಞಾನಿಕ ಮನೋಬಾವ ಬೆಳೆಸಿಕೊಳ್ಳಬೇಕು ಎನ್ನುತ್ತದೆ. ಪ್ರಶ್ನಿಸುವ ಮನೋಭಾವ ಮತ್ತು ಮಾನವತೆಯನ್ನು ಬೆಳಸಿಕೊಳ್ಳಬೇಕು ಎನ್ನುತ್ತದೆ. ನಮ್ಮ ಸಂವಿಧಾನವೇ ನಮಗೆ ಅಂತಿಮ. ಈಗ ಅವರು ಅದನ್ನು ಬದಲಾಯಿಸಲು ಪ್ರಯತ್ನಿಸುತ್ತಿದ್ದಾರೆ. ಮಾನವತಾವಾದಿ ಸಂವಿಧಾನವನ್ನು ಈಗ ಮನುವಾದಿ ಸಂವಿಧಾನ ಮಾಡಲು ಹೊರಟಿದ್ದಾರೆ’ ಎಂದರು.

‘ವೈಜ್ಞಾನಿಕ ಮಾನವಕುಲಶಾಸ್ತ್ರ ಮತ್ತು ಅಂಬೇಡ್ಕರ್ ಅವರ ಚಿಂತನೆ’ ಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಚಿಂತಕರಾದ ಬಿ. ಶ್ರೀಪಾದ್ ಭಟ್, ‘ಮಾನವಶಾಸ್ತ್ರಜ್ಞ ಎಂದು ಅಂಬೇಡ್ಕರ್ ಅವರನ್ನ ಗುರುತಿಸುವಲ್ಲಿ ಅರ್ಥ ಮಾಡಿಕೊಳ್ಳುವಲ್ಲಿ ನಾವು ಸೋತಿದ್ದೇವೆ; ನಾನ್ಯಾರು ಎಂದು ಬುದ್ಧಿಸ್ಟ್ ಕೇಳುವುದಿಲ್ಲ; ನಮ್ಮನ್ನು ಯಾವ ರೀತಿ ಟ್ರೀಟ್ ಮಾಡಲಾಗುತ್ತದೆ ಎಂದು ಕೇಳುತ್ತಾರೆ. ಅಂಬೇಡ್ಕರ್ ಮಾನವ ಕುಲಶಾಸ್ತ್ರೀಯರಾಗಿಗಿ ಈ ಪ್ರಶ್ನೆ ಕೇಳಿದ್ದರು. ತನ್ನ ವೈಯಕ್ತಿಕ ನೋವನ್ನು ಯೂನಿವರ್ಸಲ್ ಆಗಿ ನೋಡಿದ್ದು ಅಂಬೇಡ್ಕರ್ ಮಾತ್ರ’ ಎಂದರು.

‘ವೈಜ್ಞಾನಿಕ ಮಾನವಕುಲಶಾಸ್ತ್ರ ಮತ್ತು ಅಂಬೇಡ್ಕರ್ ಅವರ ಚಿಂತನೆ’ ಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಚಿಂತಕರಾದ ಬಿ. ಶ್ರೀಪಾದ್ ಭಟ್

‘ಉದಾಹರಣೆಗೆ.. ಭಾರತದಲ್ಲಿ ಪಸಿದ್ಧರಾದ ಎಂ.ಎನ್‌. ಶ್ರೀನಿವಾಸ್, ಅವರನ್ನು ಸಮಾಜ ವಿಜ್ಞಾನಿ ಎಂದು ಕರೆಯುತ್ತಾರೆ. ಅವರು ಮೈಸೂರಿನ ರಾಂಪುರ ಕುರಿತು ಪುಸ್ತಕ ಬರೆದಿರುವದನ್ನೂ ನಮ್ಮಲ್ಲಿ ಹಲವರು ಓದಿದ್ದಾರೆ. ಅವರು ಹಲವು ವರ್ಷಗಳ ಕಾಲ ಅದೇ ಗ್ರಾಮದಲ್ಲಿ ಉಳಿದುಕೊಂಡಿದ್ದರು. ಹಳ್ಳಿಗಳು ಹೇಗೆ ಜಾತಿ ಆಧಾರವಾಗಿ ಕಟ್ಟಲ್ಪಟ್ಟಿವೆ ಎಂಬುದನ್ನು ಅಧ್ಯಯನ ಮಾಡುತ್ತಾರೆ. ಆದರೆ, ಅವರು ಹೋಗಿ ಉಳಿದುಕೊಳ್ಳುವುದು ಅಗ್ರಹಾರದ ಬ್ರಾಹ್ಮಣದ ಮನೆಯಲ್ಲಿ. ಅಗ್ರಹಾರದ ಮೂಲಕ ಹೋದಾಗ ಮಾಹಿತಿಗಳು ಖಚಿತವಾಗಿರುವುದಿಲ್ಲ. ಶ್ರೀನಿವಾಸ್ ದಲಿತ ಕೇರಿಗೆ ಹೋಗುತ್ತೇನೆ ಎಂದಾಗ, ‘ದಲಿತರ ಬಗ್ಗೆ ನಾವೇ ಹೇಳುತ್ತೇವೆ.. ಅವರಿಗೇನು ಗೊತ್ತು’ ಎಂದು ಬ್ರಾಹ್ಮಣರು ಹೇಳುತ್ತಾರೆ; ಇದು ಬ್ರಾಹ್ಣಣಿಸಮ್’ ಎಂದು ವಿವರಿಸಿದರು.

‘ಅಂಬೇಡ್ಕರ್ ಪ್ರಶ್ನಿಸಿದ್ದು ಇದನ್ನೇ, ‘ನಮ್ಮನ್ನೇಕೆ ಹೀಗೆ ನಡೆಸಿಕೊಳ್ಳುತ್ತಿದ್ದೀರಾ’ ಎನ್ನುತ್ತಾರೆ. ಆದ್ದರಿಂದ ಅಂಬೇಡ್ಕರ್ ಅವರ ಮಾನಶಾಸ್ತ್ರ ಅಧ್ಯಯನವನ್ನು ನಾವು ಓದಬೇಕಾಗಿದೆ. ಅವರು ಸಮಾನತೆ, ಸ್ವಾತಂತ್ರ ಮತ್ತು ಸಹೋದರತೆ ಎಂದು ಪ್ರತಿಪಾದಿಸುತ್ತಾರೆ.. ಅದು ಮೇಲ್ಮುಖ ಚಲನೆ. ಆದರೆ, ಮಾನವ ಶಾಸ್ತ್ರಜ್ಞರು ಎಂದು ಗುರುತಿಸಲ್ಪಟ್ಟ ಶ್ರೀನಿವಾಸ್, ಸಂಸ್ಕೃತೀಕರಣದ ಮೇಲ್ಮುಖ ಚಲನೆ ಎನ್ನುತ್ತಾರೆ. ಇವೆರಡರ ನಡುವಿನ ವ್ಯತ್ಯಾಸ ಎಂದರೆ ‘ನೀವು ಯಾಕೆ ಈ ರೀತಿ ವರ್ತಿಸುತ್ತಿದ್ದೀರಿ? ಮತ್ತು ನೀವು ಹೇಗೆ ನಡೆಸಿಕೊಳ್ಳುತ್ತಿದ್ದೀರಿ? ಎಂಬುದು. ಅದೇ ಅಂಬೇಡ್ಕರ್ ಅವರ ಮಾನವಶಾಸ್ತ್ರ ಅಧ್ಯಯನದ ಬಹಳ ದೊಡ್ಡ ವಿಚಾರ’ ಎಂದು ಹೇಳಿದರು.

‘ರಂಜಿತ್ ಗುಹಾ, ಪಾರ್ಥ ಚಟರ್ಜಿ ತರಹದವರು ಭಾರತದಲ್ಲಿ ದೊಡ್ಡ ಮಟ್ಟದಲ್ಲಿ ‘ಸಬಾಲ್ಟರ್ನ್’ ಅಧ್ಯಯನ ನಡೆಸಿದ್ದಾರೆ. ಅವರು ಎಲ್ಲಿಯೂ ಅಂಬೇಡ್ಕರ್ ಅವರ ಹೆಸರನ್ನು ಪ್ರಸ್ತಾಪಿಸುವುದಿಲ್ಲ. ವಿದೇಶೀಯ ಅಧ್ಯಯನಕಾರರಾದ ಲೂಯಿಸ್ ಟಬೇಟೋ, ರಿಸ್ತೆ, ಡಿ.ಡಿ. ಕೋಸಂಬಿ, ನಿರ್ಮಲ್ ಕುಮಾರ್, ರಜನಿ ಕೊಠಾರಿ ಸೇರಿದಂತೆ ಅನೇಕರನ್ನು ಸಮಾಜ ಶಾಸ್ತ್ರಜ್ಞರು, ಮಾನವ ಕುಲ ಶಾಸ್ತ್ರಜ್ಞರು ಎಂದು ಗುರುತಿಸುತ್ತಾರೆ. ಆದರೆ, ಎಲ್ಲಿಯೂ ಅಂಬೇಡ್ಕರ್ ಅವರನ್ನು ಮಾನವ ಕುಲ ಶಾಸ್ತ್ರಜ್ಞ ಎಂದು ಗುರುತಿಸಿಲ್ಲ. ಏಕೆಂದರೆ, ಇವರಿಗೆ ಅಂಬೇಡ್ಕರ್ ಅವರನ್ನು ಯಾವ ರೀತಿ ಓದಬೇಕು ಎಂಬ ಗ್ರಹಿಕೆಯೇ ಇರಲಿಲ್ಲ. ಗ್ರಹಿಕೆ ಇಲ್ಲದ ಓದಿನಿಂದ ಮೊದಲ ದೃಷ್ಟಿಕೋನವೇ ಬದಲಾಗುತ್ತದೆ; ಆಗ ನಮ್ಮ ಸಂವೇದನೆ ಕೂಡ ಬದಲಾಗುತ್ತದೆ. ಸಂವೇದನೆ ಬದಲಾದಾಗ ನಮ್ಮ ವಿಚಾರ ಮಂಡನೆ ಕೂಡ ಬದಲಾಗುತ್ತದೆ’ ಎಂದರು.

‘ಅಂಬೇಡ್ಕರ್ ಅವರ ಮಾನವ ಶಾಸ್ತ್ರ ಅಧ್ಯಯನದ ಬಗ್ಗೆ ನಾವು ಮಾತನಾಡಬೇಕಾದರೆ, ಅವರು ಬರೆದ ಮೂರು ಮುಖ್ಯ ವಿಷಯಗಳ ಬಗ್ಗೆ ನಾವು ಓದಬೇಕು. 1916ರಲ್ಲಿ ಅವರು ಮಂಡಿಸಿ ಪ್ರಬಂಧ; ಅದರಲ್ಲಿ ಅವರು ಜಾತಿ ವ್ಯವಸ್ಥೆ ಬಗ್ಗೆ ಮಾತನಾಡುತ್ತಲೇ ‘ಎಕ್ಸೋಗಾಮಿ ಮತ್ತು ಎಂಡೋಗಾಮಿ’ ಬಗ್ಗೆ ಚರ್ಚೆ ಮಾಡುತ್ತಾರೆ. ಇವೆಲ್ಲವೂ ನಮಗೆ ಅರ್ಥ ಮಾಡಿಕೊಳ್ಳಬೇಕಾದರೆ ನಾವು ಅವರ ಮಾನವ ಶಾಸ್ತ್ರ ಅಧ್ಯಯನವನ್ನು ಓದಬೇಕು’ ಎಂದು ಹೇಳಿದರು.

ಸಮಾವೇಶವನ್ನು ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಉದ್ಘಾಟಿಸಿದರು. ಹಿರಿಯ ಸಾಹಿತಿಗಳಾದ ಅಗ್ರಹಾರ ಕೃಷ್ಣಮೂರ್ತಿ, ಬರಗೂರು ರಾಮಚಂದ್ರಪ್ಪ, ವಕೀಲರಾದ ಅನಂತ್ ನಾಯ್ಕ್ ಮತ್ತು ಹಿರಿಯ ಪತ್ರಕರ್ತರಾದ ಪ್ರದೀಪ್ ಮಾಲ್ಗುಡಿ ಇದ್ದರು.

ಇದನ್ನೂ ಓದಿ; ಪಾಕಿಸ್ತಾನ ಪರ ಘೋಷಣೆ ಆರೋಪ ಸಾಬೀತಾದರೆ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...