Homeಚಳವಳಿಕೊಪ್ಪಳದಲ್ಲಿ ಕ್ರೌರ್ಯ: ಕ್ಷೌರಕ್ಕೆ ಬಂದ ದಲಿತ ಯುವಕರ ಮೇಲೆ ಹಲ್ಲೆ - ಆತ್ಮಹತ್ಯೆಗೆ ಯತ್ನಿಸಿದ ಸಂತ್ರಸ್ತ ಯುವಕರು

ಕೊಪ್ಪಳದಲ್ಲಿ ಕ್ರೌರ್ಯ: ಕ್ಷೌರಕ್ಕೆ ಬಂದ ದಲಿತ ಯುವಕರ ಮೇಲೆ ಹಲ್ಲೆ – ಆತ್ಮಹತ್ಯೆಗೆ ಯತ್ನಿಸಿದ ಸಂತ್ರಸ್ತ ಯುವಕರು

- Advertisement -
- Advertisement -

ಇದು ಕೊಪ್ಪಳ ಜಿಲ್ಲೆಯ ಯಲಬುರ್ಗಿ ತಾಲೂಕಿನ ಹೊಸಹಳ್ಳಿಯಲ್ಲಿ ನಡೆದ ಅಮಾನವೀಯ ಘಟನೆ. ಈಗಲೂ ಕರ್ನಾಟಕದ ಹಳ್ಳಿಗಳಲ್ಲಿ ಅಸ್ಪೃಶ್ಯತೆ ಜೀವಂತವಾಗಿರುವುದಕ್ಕೆ ಒಂದು ಸಾಂಕೇತಿಕ ಘಟನೆಯಂತಿದೆ ಇದು.

ಹೈದರಾಬಾದ್‍ ಕರ್ನಾಟಕದಲ್ಲಿ ಕಟಿಂಗ್‍ ಮಾಡಿಸಿಕೊಳ್ಳಲೂ ದಲಿತ ಯುವಕರು ಪಟ್ಟಣಕ್ಕೆ ಹೋಗಬೇಕಾದ ಪರಿಸ್ಥಿತಿಯಿದೆ. ಲಾಕ್‍ಡೌನ್‍ ಕಾರಣಕ್ಕೆ ಪಟ್ಟಣಗಳಲ್ಲಿ ಸಲೂನ್‍ ಶಾಪ್‍ ಬಂದ್‍ ಇರುವ ಕಾರಣಕ್ಕೆ ತಮ್ಮೂರಲ್ಲೇ ಶೇವಿಂಗ್‍ ಮಾಡಿಸಿಕೊಳ್ಳಲು ಹೋದ ಇಬ್ಬರು ದಲಿತ ಸಹೋದರರ ಮೇಲೆ ಸವರ್ಣೀಯರು ಹಲ್ಲೆ ನಡೆಸಿ ಅವಮಾನ ಮಾಡಿದ್ದಾರೆ. ನೊಂದ ಸಹೋದರರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇದನ್ನು ಕ್ಷೌರದ ಕ್ರೌರ್ಯ ಎನ್ನುವುದೋ ಅಥವಾ ಮೇಲ್ಜಾತಿಗಳಲ್ಲಿ ಇನ್ನೂ ಅಂತರ್ಗತವಾಗಿರುವ ಜಾತಿಭೇದ ಎನ್ನುವುದೋ?

ಜೂನ್‍ 6ರ ಬೆಳಿಗ್ಗೆ ಈ ಘಟನೆ ನಡೆದಿದ್ದು, ಈಗ ತಡವಾಗಿ ದೂರು ದಾಖಲಾಗಿದೆ. ಯಲಬುರ್ಗಾ ತಾಲೂಕಿನ ಹೊಸಹಳ್ಳಿ ಗ್ರಾಮದ ಸಣ್ಣ ಹನುಮಂತು ಹಾಗೂ ಬಸವರಾಜ ಎಂಬ ದಲಿತ ಸಹೋದರರ ಮೇಲೆ ಹಲ್ಲೆ ನಡೆದಿರುವ ಆರೋಪ ಕೇಳಿ ಬಂದಿದೆ. ದಲಿತ ಸಮುದಾಯದ ಈ ಇಬ್ಬರಿಗೆ ಕ್ಷೌರ ಮಾಡಲು ನಿರಾಕರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮಾತಿನ ಚಕಮಕಿ ನಡೆದಿದೆ. ಇದು ವಿಪರೀತಕ್ಕೆ ಹೋಗಿ ಸವರ್ಣೀಯರು ಕ್ಷೌರಕ್ಕೆ ಬಂದ ದಲಿತ ಸಹೋದರರ ಮೇಲೆ ಹಲ್ಲೆ ನಡೆಸಿ, ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ ಎನ್ನಲಾಗಿದೆ.

ಊರಲ್ಲೇ ಅವಮಾನಿತರಾದ ಇಬ್ಬರೂ ಸಹೋದರರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ಸಂಗತಿಯೇ ಒಟ್ಟೂ ದೌರ್ಜ್ಯನಕ್ಕೆ ಸಾಕ್ಷಿಯಂತಿದೆ. ಯುವಕರು ಈಗ ತಾಲೂಕಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ.

ದಲಿತ ಸಮುದಾಯದ ದೇವಪ್ಪ ಎಂಬುವರ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ. ಸದ್ಯ ಘಟನೆ ಸಂಬಂಧ ಹೊಸಳ್ಳಿ ಗ್ರಾಮದ ಖಾಲಿ ಜಾಗವೊಂದರಲ್ಲಿ ಕ್ಷೌರ ಮಾಡುತ್ತಿದ್ದ ಕ್ಷೌರಿಕರಾದ ಮಲ್ಲಪ್ಪ, ಕಳಕಪ್ಪ ಸೇರಿದಂತೆ ಒಟ್ಟು 16 ಜನರ ಮೇಲೆ ಪ್ರಕರಣ ದಾಖಲಾಗಿದೆ.

ಲಾಕ್‍ಡೌನ್‍ ಕಾರಣಕ್ಕೆ ಪಟ್ಟಣಗಳಲ್ಲಿ ಸಲೂನ್‍ ಶಾಪ್‍ಗಳು ಬಂದ್‍ ಆಗಿವೆ. ಹೀಗಾಗಿ ಅನಿವಾರ್ಯವಾಗಿ ದಲಿತ ಯುವಕರು ತಮ್ಮೂರ ಕ್ಷೌರಿಕರ ಬಳಿ ಹೋಗಿದ್ದಾರೆ. ದಲಿತರಿಗೆ ಕ್ಷೌರ ಮಾಡದಂತೆ ಮೇಲ್ಜಾತಿಯವರು ಕ್ಷೌರಿಕರ ಹೊಟ್ಟೆಗೂ ಕಲ್ಲು ಹಾಕುತ್ತಿರುವ ವಿದ್ಯಮಾನಗಳನ್ನು ನಮ್ಮ ಗ್ರಾಮಗಳಲ್ಲಿ ಕಾಣಬಹುದಾಗಿದೆ.

  • ಮಲ್ಲನಗೌಡರ್ ಪಿ.ಕೆ

ಇದನ್ನೂ ಓದಿ: ರಾಜಸ್ಥಾನ: ಅಂಬೇಡ್ಕರ್‌ ಪೋಸ್ಟರ್‌ ತೆರವಿಗೆ ಆಕ್ಷೇಪಿಸಿದ ದಲಿತ ಯುವಕನ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...