Homeಮುಖಪುಟಅಮೆರಿಕಾದಲ್ಲಿ ಮೋದಿಗೆ ಪ್ರಶ್ನೆ ಕೇಳಿದ ಪತ್ರಕರ್ತೆಗೆ ಟ್ವಿಟರ್‌ನಲ್ಲಿ ಹಿಂದುತ್ವವಾದಿಗಳಿಂದ ನಿಂದನೆ

ಅಮೆರಿಕಾದಲ್ಲಿ ಮೋದಿಗೆ ಪ್ರಶ್ನೆ ಕೇಳಿದ ಪತ್ರಕರ್ತೆಗೆ ಟ್ವಿಟರ್‌ನಲ್ಲಿ ಹಿಂದುತ್ವವಾದಿಗಳಿಂದ ನಿಂದನೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರ ಅಮೆರಿಕ ಭೇಟಿಯ ಸಂದರ್ಭದಲ್ಲಿ ಭಾರತದಲ್ಲಿ ಅಲ್ಪಸಂಖ್ಯಾತರ ತಾರತಮ್ಯದ ಕುರಿತು ವಾಲ್ ಸ್ಟ್ರೀಟ್ ಜರ್ನಲ್‌ನ ಶ್ವೇತಭವನದ ವರದಿಗಾರ್ತಿ ಸಬ್ರಿನಾ ಸಿದ್ದಿಕಿ ಅವರು ಪ್ರಶ್ನೆಯನ್ನು ಕೇಳಿದ್ದರು. ಆ ಬಳಿಕ ಅವರ ಮೇಲೆ ಹಿಂದುತ್ವದವಾದಿಗಳು ಟ್ವಿಟರ್‌ನಲ್ಲಿ ದಾಳಿ ನಡೆಸಿದ್ದಾರೆ.

ಬಿಜೆಪಿ ಐಟಿ ಮುಖ್ಯಸ್ಥ ಅಮಿತ್ ಮಾಳವಿಯಾ ನೇತೃತ್ವದಲ್ಲಿ ಪತ್ರಕರ್ತೆ ಸಿದ್ದಿಕಿ ಅವರ ಮೇಲೆ ಆನ್‌ಲೈನ್ ದಾಳಿ ನಡೆಯುತ್ತಿದ್ದು, ”ಸಬ್ರಿನಾ ಸಿದ್ದಿಕಿ ಮುಸ್ಲಿಂ ಸಮುದಾಯದವಳಾಗಿದ್ದು, ಪಾಕಿಸ್ತಾನದೊಂದಿಗಿನ ಸಂಪರ್ಕವನ್ನು ಹೊಂದಿದ್ದಾಳೆ. ಅವರು ಟೂಲ್‌ಕಿಟ್ ಗ್ಯಾಂಗ್‌ನ ಭಾಗವಾಗಿದ್ದಾರೆ” ಎಂದು ಮಾಳವಿಯ ಟ್ವೀಟ್ ಮಾಡಿದ್ದಾರೆ.

ಸಬ್ರಿನಾ ಸಿದ್ದಿಕಿ ಮೋದಿಯವರನ್ನು ಕೇಳಿದ ಪ್ರಶ್ನೆ:

”ಭಾರತವು ಪ್ರಪಂಚದ ಅತಿದೊಡ್ಡ ಪ್ರಜಾಪ್ರಭುತ್ವ ಎಂದು ದೀರ್ಘಕಾಲ ಹೆಮ್ಮೆಪಡುತ್ತಿದೆ, ಆದರೆ ನಿಮ್ಮ ಸರ್ಕಾರವು ಧಾರ್ಮಿಕ ಅಲ್ಪಸಂಖ್ಯಾತರ ವಿರುದ್ಧ ತಾರತಮ್ಯ ಮಾಡಿದೆ ಮತ್ತು ಅದರ ಟೀಕಾಕಾರರನ್ನು ಮೌನಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಹೇಳುವ ಅನೇಕ ಮಾನವ ಹಕ್ಕುಗಳ ಗುಂಪುಗಳಿವೆ. ನಿಮ್ಮ ದೇಶದಲ್ಲಿ ಮುಸ್ಲಿಮರು ಮತ್ತು ಇತರ ಅಲ್ಪಸಂಖ್ಯಾತರ ಹಕ್ಕುಗಳನ್ನು ಸುಧಾರಿಸಲು ಮತ್ತು ಎತ್ತಿಹಿಡಿಯಲು ನೀವು ಮತ್ತು ನಿಮ್ಮ ಸರ್ಕಾರವು ಯಾವ ಕ್ರಮಗಳನ್ನು ತೆಗೆದುಕೊಳ್ಳಲು ಸಿದ್ಧರಿದ್ದೀರಿ?” ಎಂದು ಪ್ರಶ್ನೆ ಮಾಡಿದ್ದಾರೆ.

ಭಾರತದಲ್ಲಿ ಮೋದಿಯವರು ಪ್ರಧಾನಿಯಾದ ಅವಧಿಯಲ್ಲಿ ಅಲ್ಪಸಂಖ್ಯಾತರ ಮೇಲೆ ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಪತ್ರಕರ್ತೆ ಸಬ್ರಿನಾ ಸಿದ್ದಿಕಿ ಆರೋಪ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮೋದಿ, ”ತಮ್ಮ ಆಡಳಿತದಲ್ಲಿ ಅಲ್ಪಸಂಖ್ಯಾತರಿಗೆ ತಾರತಮ್ಯ ಮಾಡಲಾಗುತ್ತಿದೆ ಎಂದು ಭಾವಿಸಿರುವುದು ”ಆಶ್ಚರ್ಯ” ತಂದಿದೆ. ಪ್ರಜಾಪ್ರಭುತ್ವ ನಮ್ಮ ಆತ್ಮ. ಪ್ರಜಾಪ್ರಭುತ್ವ ನಮ್ಮ ರಕ್ತನಾಳಗಳಲ್ಲಿ ಹರಿಯುತ್ತದೆ. ನಾವು ಪ್ರಜಾಪ್ರಭುತ್ವವನ್ನು ಬದುಕುತ್ತೇವೆ… ನಮ್ಮ ಸರ್ಕಾರವು ಪ್ರಜಾಪ್ರಭುತ್ವದ ಮೂಲ ತತ್ವಗಳನ್ನು ಅನುಸರಿಸುತ್ತಿದೆ… ನಮ್ಮಲ್ಲಿ ಜಾತಿ, ಧರ್ಮ, ಧರ್ಮ, ಲಿಂಗ ತಾರತಮ್ಯಕ್ಕೆ ಅವಕಾಶವಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಭಾರತ ಸರ್ಕಾರ ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಿಸದಿದ್ದರೆ ದೇಶ ವಿಭಜನೆಯಾಗಬಹುದು: ಬರಾಕ್ ಒಬಾಮಾ ಎಚ್ಚರಿಕೆ

ಪತ್ರಕತೆ ಮೋದಿ ಅವರಿಗೆ ಪ್ರಶ್ನೆ ಕೇಳಿದ ಬೆನ್ನಲ್ಲೇ ಬಿಜೆಪಿ ಪರ ಮತ್ತು ಹಿಂದುತ್ವವಾದಿಗಳು ಟ್ವಿಟರ್‌ನಲ್ಲಿ ಸಿದ್ದಿಕಿ ಅವರನ್ನು ‘ಪಾಕಿಸ್ತಾನಿ ಇಸ್ಲಾಮಿಸ್ಟ್’ ಎಂದು ಲೇಬಲ್ ಮಾಡಿದವು. ಈ ಪ್ರಶ್ನೆಯನ್ನು ಮೋದಿಯ ಮುಂದೆ ಕೇಳಲು ಆಕೆಗೆ ಉದ್ಯೋಗದಾತ ಅವಕಾಶ ನೀಡುವ ಪಿತೂರಿ ಎಂದಿದ್ದಾರೆ. ”ಅವಳು ಭಾರತದ ಮೇಲೆ ಮಾತ್ರ ದಾಳಿ ಮಾಡುತ್ತಾಳೆ. ದ್ವೇಷವು ಪಾಕಿಸ್ತಾನಿಗಳ ಡಿಎನ್‌ಎಯಲ್ಲಿದೆ” ಎಂದು ಟ್ವೀಟ್ ಮಾಡಿದ್ದಾರೆ.

OpIndiaದಂತಹ ಬಿಜೆಪಿ ಪರ ವೆಬ್‌ಸೈಟ್‌ಗಳು ಆಕೆ ”ಪಾಕಿಸ್ತಾನಿ ಪೋಷಕರ” ಮಗಳು ಮತ್ತು ”ಇಸ್ಲಾಮಿಸ್ಟ್‌ಗಳ ಹಕ್ಕುಗಳನ್ನು ಪ್ರತಿಧ್ವನಿಸುತ್ತಿದ್ದಾರೆ” ಎಂಬ ವರದಿಯನ್ನು ಪ್ರಕಟಿಸುವ ಮೂಲಕ ಒಂದು ಹೆಜ್ಜೆ ಮುಂದಿಟ್ಟಿವೆ.

”ಭಾರತದಲ್ಲಿ ಮುಸ್ಲಿಮರ ಮೇಲಿನ ಕಿರುಕುಳವನ್ನು ಆರೋಪಿಸಿದ ಪತ್ರಕರ್ತೆ ಸಬ್ರಿನಾ ಸಿದ್ದಿಕ್ ಬೇರೆ ಯಾರೂ ಅಲ್ಲ … ಪಾಕಿಸ್ತಾನಿ ಪೋಷಕರ ಮಗಳು” ಎಂದು ಟ್ವೀಟ್ ಮಾಡಿದ್ದಾರೆ.

ತನ್ನನ್ನು ‘ಭಾರತ ವಿರೋಧಿ’ ಎಂದು ಕರೆಯುವ ಆನ್‌ಲೈನ್ ದಾಳಿಗೆ ಸಿದ್ದಿಕಿ ಪ್ರತ್ಯತ್ತರವಾಗಿ ಟ್ವೀಟ್ ಮಾಡಿದ್ದಾರೆ. ಭಾರತ ಮೂಲದ ತನ್ನ ತಂದೆಯೊಂದಿಗೆ ಭಾರತೀಯ ಕ್ರಿಕೆಟ್ ತಂಡವನ್ನು ಹುರಿದುಂಬಿಸುವ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ. ”ಕೆಲವರು ನನ್ನ ವೈಯಕ್ತಿಕ ಹಿನ್ನೆಲೆಯನ್ನು ಗುರಿಯಾಗಿಸಿ ದಾಳಿ ನಡೆಸುತ್ತಿದ್ದಾರೆ. ಹಾಗಾಗಿ ಸಂಪೂರ್ಣ ಚಿತ್ರವನ್ನು ಒದಗಿಸುವುದು ಸರಿ ಎನಿಸುತ್ತದೆ” ಎಂದು ಅವರು ಬರೆದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...