Homeಮುಖಪುಟಅಮೆರಿಕಾದಲ್ಲಿ ಮೋದಿಗೆ ಪ್ರಶ್ನೆ ಕೇಳಿದ ಪತ್ರಕರ್ತೆಗೆ ಟ್ವಿಟರ್‌ನಲ್ಲಿ ಹಿಂದುತ್ವವಾದಿಗಳಿಂದ ನಿಂದನೆ

ಅಮೆರಿಕಾದಲ್ಲಿ ಮೋದಿಗೆ ಪ್ರಶ್ನೆ ಕೇಳಿದ ಪತ್ರಕರ್ತೆಗೆ ಟ್ವಿಟರ್‌ನಲ್ಲಿ ಹಿಂದುತ್ವವಾದಿಗಳಿಂದ ನಿಂದನೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರ ಅಮೆರಿಕ ಭೇಟಿಯ ಸಂದರ್ಭದಲ್ಲಿ ಭಾರತದಲ್ಲಿ ಅಲ್ಪಸಂಖ್ಯಾತರ ತಾರತಮ್ಯದ ಕುರಿತು ವಾಲ್ ಸ್ಟ್ರೀಟ್ ಜರ್ನಲ್‌ನ ಶ್ವೇತಭವನದ ವರದಿಗಾರ್ತಿ ಸಬ್ರಿನಾ ಸಿದ್ದಿಕಿ ಅವರು ಪ್ರಶ್ನೆಯನ್ನು ಕೇಳಿದ್ದರು. ಆ ಬಳಿಕ ಅವರ ಮೇಲೆ ಹಿಂದುತ್ವದವಾದಿಗಳು ಟ್ವಿಟರ್‌ನಲ್ಲಿ ದಾಳಿ ನಡೆಸಿದ್ದಾರೆ.

ಬಿಜೆಪಿ ಐಟಿ ಮುಖ್ಯಸ್ಥ ಅಮಿತ್ ಮಾಳವಿಯಾ ನೇತೃತ್ವದಲ್ಲಿ ಪತ್ರಕರ್ತೆ ಸಿದ್ದಿಕಿ ಅವರ ಮೇಲೆ ಆನ್‌ಲೈನ್ ದಾಳಿ ನಡೆಯುತ್ತಿದ್ದು, ”ಸಬ್ರಿನಾ ಸಿದ್ದಿಕಿ ಮುಸ್ಲಿಂ ಸಮುದಾಯದವಳಾಗಿದ್ದು, ಪಾಕಿಸ್ತಾನದೊಂದಿಗಿನ ಸಂಪರ್ಕವನ್ನು ಹೊಂದಿದ್ದಾಳೆ. ಅವರು ಟೂಲ್‌ಕಿಟ್ ಗ್ಯಾಂಗ್‌ನ ಭಾಗವಾಗಿದ್ದಾರೆ” ಎಂದು ಮಾಳವಿಯ ಟ್ವೀಟ್ ಮಾಡಿದ್ದಾರೆ.

ಸಬ್ರಿನಾ ಸಿದ್ದಿಕಿ ಮೋದಿಯವರನ್ನು ಕೇಳಿದ ಪ್ರಶ್ನೆ:

”ಭಾರತವು ಪ್ರಪಂಚದ ಅತಿದೊಡ್ಡ ಪ್ರಜಾಪ್ರಭುತ್ವ ಎಂದು ದೀರ್ಘಕಾಲ ಹೆಮ್ಮೆಪಡುತ್ತಿದೆ, ಆದರೆ ನಿಮ್ಮ ಸರ್ಕಾರವು ಧಾರ್ಮಿಕ ಅಲ್ಪಸಂಖ್ಯಾತರ ವಿರುದ್ಧ ತಾರತಮ್ಯ ಮಾಡಿದೆ ಮತ್ತು ಅದರ ಟೀಕಾಕಾರರನ್ನು ಮೌನಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಹೇಳುವ ಅನೇಕ ಮಾನವ ಹಕ್ಕುಗಳ ಗುಂಪುಗಳಿವೆ. ನಿಮ್ಮ ದೇಶದಲ್ಲಿ ಮುಸ್ಲಿಮರು ಮತ್ತು ಇತರ ಅಲ್ಪಸಂಖ್ಯಾತರ ಹಕ್ಕುಗಳನ್ನು ಸುಧಾರಿಸಲು ಮತ್ತು ಎತ್ತಿಹಿಡಿಯಲು ನೀವು ಮತ್ತು ನಿಮ್ಮ ಸರ್ಕಾರವು ಯಾವ ಕ್ರಮಗಳನ್ನು ತೆಗೆದುಕೊಳ್ಳಲು ಸಿದ್ಧರಿದ್ದೀರಿ?” ಎಂದು ಪ್ರಶ್ನೆ ಮಾಡಿದ್ದಾರೆ.

ಭಾರತದಲ್ಲಿ ಮೋದಿಯವರು ಪ್ರಧಾನಿಯಾದ ಅವಧಿಯಲ್ಲಿ ಅಲ್ಪಸಂಖ್ಯಾತರ ಮೇಲೆ ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಪತ್ರಕರ್ತೆ ಸಬ್ರಿನಾ ಸಿದ್ದಿಕಿ ಆರೋಪ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮೋದಿ, ”ತಮ್ಮ ಆಡಳಿತದಲ್ಲಿ ಅಲ್ಪಸಂಖ್ಯಾತರಿಗೆ ತಾರತಮ್ಯ ಮಾಡಲಾಗುತ್ತಿದೆ ಎಂದು ಭಾವಿಸಿರುವುದು ”ಆಶ್ಚರ್ಯ” ತಂದಿದೆ. ಪ್ರಜಾಪ್ರಭುತ್ವ ನಮ್ಮ ಆತ್ಮ. ಪ್ರಜಾಪ್ರಭುತ್ವ ನಮ್ಮ ರಕ್ತನಾಳಗಳಲ್ಲಿ ಹರಿಯುತ್ತದೆ. ನಾವು ಪ್ರಜಾಪ್ರಭುತ್ವವನ್ನು ಬದುಕುತ್ತೇವೆ… ನಮ್ಮ ಸರ್ಕಾರವು ಪ್ರಜಾಪ್ರಭುತ್ವದ ಮೂಲ ತತ್ವಗಳನ್ನು ಅನುಸರಿಸುತ್ತಿದೆ… ನಮ್ಮಲ್ಲಿ ಜಾತಿ, ಧರ್ಮ, ಧರ್ಮ, ಲಿಂಗ ತಾರತಮ್ಯಕ್ಕೆ ಅವಕಾಶವಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಭಾರತ ಸರ್ಕಾರ ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಿಸದಿದ್ದರೆ ದೇಶ ವಿಭಜನೆಯಾಗಬಹುದು: ಬರಾಕ್ ಒಬಾಮಾ ಎಚ್ಚರಿಕೆ

ಪತ್ರಕತೆ ಮೋದಿ ಅವರಿಗೆ ಪ್ರಶ್ನೆ ಕೇಳಿದ ಬೆನ್ನಲ್ಲೇ ಬಿಜೆಪಿ ಪರ ಮತ್ತು ಹಿಂದುತ್ವವಾದಿಗಳು ಟ್ವಿಟರ್‌ನಲ್ಲಿ ಸಿದ್ದಿಕಿ ಅವರನ್ನು ‘ಪಾಕಿಸ್ತಾನಿ ಇಸ್ಲಾಮಿಸ್ಟ್’ ಎಂದು ಲೇಬಲ್ ಮಾಡಿದವು. ಈ ಪ್ರಶ್ನೆಯನ್ನು ಮೋದಿಯ ಮುಂದೆ ಕೇಳಲು ಆಕೆಗೆ ಉದ್ಯೋಗದಾತ ಅವಕಾಶ ನೀಡುವ ಪಿತೂರಿ ಎಂದಿದ್ದಾರೆ. ”ಅವಳು ಭಾರತದ ಮೇಲೆ ಮಾತ್ರ ದಾಳಿ ಮಾಡುತ್ತಾಳೆ. ದ್ವೇಷವು ಪಾಕಿಸ್ತಾನಿಗಳ ಡಿಎನ್‌ಎಯಲ್ಲಿದೆ” ಎಂದು ಟ್ವೀಟ್ ಮಾಡಿದ್ದಾರೆ.

OpIndiaದಂತಹ ಬಿಜೆಪಿ ಪರ ವೆಬ್‌ಸೈಟ್‌ಗಳು ಆಕೆ ”ಪಾಕಿಸ್ತಾನಿ ಪೋಷಕರ” ಮಗಳು ಮತ್ತು ”ಇಸ್ಲಾಮಿಸ್ಟ್‌ಗಳ ಹಕ್ಕುಗಳನ್ನು ಪ್ರತಿಧ್ವನಿಸುತ್ತಿದ್ದಾರೆ” ಎಂಬ ವರದಿಯನ್ನು ಪ್ರಕಟಿಸುವ ಮೂಲಕ ಒಂದು ಹೆಜ್ಜೆ ಮುಂದಿಟ್ಟಿವೆ.

”ಭಾರತದಲ್ಲಿ ಮುಸ್ಲಿಮರ ಮೇಲಿನ ಕಿರುಕುಳವನ್ನು ಆರೋಪಿಸಿದ ಪತ್ರಕರ್ತೆ ಸಬ್ರಿನಾ ಸಿದ್ದಿಕ್ ಬೇರೆ ಯಾರೂ ಅಲ್ಲ … ಪಾಕಿಸ್ತಾನಿ ಪೋಷಕರ ಮಗಳು” ಎಂದು ಟ್ವೀಟ್ ಮಾಡಿದ್ದಾರೆ.

ತನ್ನನ್ನು ‘ಭಾರತ ವಿರೋಧಿ’ ಎಂದು ಕರೆಯುವ ಆನ್‌ಲೈನ್ ದಾಳಿಗೆ ಸಿದ್ದಿಕಿ ಪ್ರತ್ಯತ್ತರವಾಗಿ ಟ್ವೀಟ್ ಮಾಡಿದ್ದಾರೆ. ಭಾರತ ಮೂಲದ ತನ್ನ ತಂದೆಯೊಂದಿಗೆ ಭಾರತೀಯ ಕ್ರಿಕೆಟ್ ತಂಡವನ್ನು ಹುರಿದುಂಬಿಸುವ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ. ”ಕೆಲವರು ನನ್ನ ವೈಯಕ್ತಿಕ ಹಿನ್ನೆಲೆಯನ್ನು ಗುರಿಯಾಗಿಸಿ ದಾಳಿ ನಡೆಸುತ್ತಿದ್ದಾರೆ. ಹಾಗಾಗಿ ಸಂಪೂರ್ಣ ಚಿತ್ರವನ್ನು ಒದಗಿಸುವುದು ಸರಿ ಎನಿಸುತ್ತದೆ” ಎಂದು ಅವರು ಬರೆದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...