Homeಮುಖಪುಟಗಾಝಿಯಾಬಾದ್: ಪುತ್ರಿಯರ ಮುಂದೆಯೇ ಗುಂಡೇಟಿಗೊಳಗಾಗಿದ್ದ ಪತ್ರಕರ್ತ ನಿಧನ

ಗಾಝಿಯಾಬಾದ್: ಪುತ್ರಿಯರ ಮುಂದೆಯೇ ಗುಂಡೇಟಿಗೊಳಗಾಗಿದ್ದ ಪತ್ರಕರ್ತ ನಿಧನ

ಜೋಶಿ ತನ್ನ ಸೋದರ ಸೊಸೆಗೆ ಕಿರುಕುಳ ನೀಡುತ್ತಿರುವವರ ಬಗ್ಗೆ ಪೊಲೀಸರಿಗೆ ದೂರು ನೀಡಿದ ನಂತರ ಈ ದಾಳಿ ನಡೆದಿದೆ.

- Advertisement -
- Advertisement -

ಜೂನ್ 20 ರಂದು ಗಾಝಿಯಾಬಾದ್‌ನ ತಮ್ಮ ನಿವಾಸದ ಬಳಿ ಗುಂಡೇಟಿನಿಂದ ತೀವ್ರವಾಗಿ ಗಾಯಗೊಂಡಿದ್ದ ಪತ್ರಕರ್ತ ವಿಕ್ರಮ್ ಜೋಶಿ ಬುಧವಾರ ಬೆಳಿಗ್ಗೆ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

ಸಿಸಿಟಿವಿ ಕ್ಯಾಮೆರಾದಲ್ಲಿ ಹಲ್ಲೆಯ ಸಾಕ್ಷ್ಯ ಸಂಗ್ರಹಿಸಿ ಈ ಪ್ರಕರಣದಲ್ಲಿ ಒಂಬತ್ತು ಜನರನ್ನು ಬಂಧಿಸಲಾಗಿದೆ ಹಾಗೂ ಇಬ್ಬರು ಪೊಲೀಸರನ್ನು ಅಮಾನತು ಮಾಡಲಾಗಿದೆ.

ಆಸ್ಪತ್ರೆಯಲ್ಲಿ ಜೋಶಿಯನ್ನು ಮೇಲ್ವಿಚಾರಣೆ ಮಾಡುವ ವೈದ್ಯರು, ಬುಲೆಟ್ ಗಾಯದಿಂದಾಗಿ ತಲೆಯಲ್ಲಿರುವ ರಕ್ತನಾಳಗಳು ತೀವ್ರವಾಗಿ ಹಾನಿಗೊಳಗಾಗಿದ್ದವು ಎಂದು ಹೇಳಿದ್ದಾರೆ. ಗಾಯಗೊಂಡ ನಂತರ ಗಾಜಿಯಾಬಾದ್‌ನ ಯಶೋದಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿತ್ತು.

ಸೋಮವಾರ ರಾತ್ರಿ 10.30 ರ ಸುಮಾರಿಗೆ ಜೋಶಿ ತನ್ನ ಇಬ್ಬರು ಹೆಣ್ಣುಮಕ್ಕಳೊಂದಿಗೆ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದಾಗ ದುಷ್ಕರ್ಮಿಗಳ ಗುಂಪೊಂದು ಅವರ ಮೇಲೆ ಹಲ್ಲೆ ನಡೆಸಿ ನಂತರ ಗುಂಡು ಹಾರಿಸಿತ್ತು.

ಉತ್ತರ ಪ್ರದೇಶದ ಗಾಝಿಯಾಬಾದ್‌ನ ವಿಜಯ್ ನಗರ ಪ್ರದೇಶದಲ್ಲಿ ಈ ದಾಳಿ ನಡೆದಿದ್ದು, ಸಿಸಿಟಿವಿ ದೃಶ್ಯಾವಳಿಗಳಲ್ಲಿ, ಜೋಶಿ ತನ್ನ ಹೆಣ್ಣುಮಕ್ಕಳೊಂದಿಗೆ ಬೈಕನ್ನು ಓಡಿಸುತ್ತಿರುವುದನ್ನು ಕಾಣಬಹುದು.

ಜುಲೈ 16 ರಂದು ಜೋಶಿ ತನ್ನ ಸೋದರ ಸೊಸೆಗೆ ಕಿರುಕುಳ ನೀಡುತ್ತಿರುವವರ ಬಗ್ಗೆ ಪೊಲೀಸರಿಗೆ ದೂರು ನೀಡಿದ ನಂತರ ಈ ದಾಳಿ ನಡೆದಿದೆ ಎಂದು ಪೊಲೀಸರು ಶಂಕಿಸಿದ್ದಾರೆ.

ದೂರಿನಲ್ಲಿ ಜೋಶಿ ಅವರ ಕುಟುಂಬ ಛೋಟು, ರವಿ ಮತ್ತು ಆಕಾಶ್ ಬಿಹಾರಿ ಎಂಬ ಮೂರು ಜನರನ್ನು ಹೆಸರಿಸಿದೆ. ಮೂವರು ಆರೋಪಿಗಳು ಪತ್ರಕರ್ತನನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆಪಾದಿತ ಎಫ್‌ಐಆರ್ ತಿಳಿಸಿದೆ.

ಪತ್ರಕರ್ತನ ಮೇಲಿನ ಹಲ್ಲೆಗೆ ಸಂಬಂಧಿಸಿದ ಎಫ್‌ಐಆರ್‌ನಲ್ಲಿ ಈ ಮೂವರನ್ನು ಹೆಸರಿಸಲಾಗಿದೆ.

ಕಾಂಗ್ರೆಸ್ ಮುಖಂಡ ಅಭಿಷೇಕ್ ಮನು ಸಿಂಗ್ವಿ ಬುಧವಾರ ಬೆಳಿಗ್ಗೆ ಈ ಘಟನೆಯನ್ನು ಆಘಾತಕಾರಿ ಎಂದು ಟ್ವೀಟ್ ಮಾಡಿದ್ದಾರೆ. “ಗಾಜಿಯಾಬಾದ್ ಪ್ರದೇಶದಲ್ಲಿ ಆಘಾತಕಾರಿ ಜಂಗಲ್ ರಾಜ್. ಪತ್ರಕರ್ತ ಜೋಶಿ ದೂರು ನೀಡಿರುವ ವ್ಯಕ್ತಿಯ ಮೇಲೆ ಈಗಾಗಲೇ ಎಫ್‌ಐಆರ್ ದಾಖಲಾಗಿತ್ತು. ತನ್ನ ಹೆಣ್ಣುಮಕ್ಕಳೊಂದಿಗೆ ಸ್ಕೂಟರ್‌ನಲ್ಲಿ ಹೋಗುವಾಗ ಗುಂಡಿಗೆ ಬಲಿಯಾಗಿದ್ದಾರೆ. ಹೆಣ್ಣುಮಕ್ಕಳಿಗೆ ಗುಂಡು ಬೀಳದ್ದಿಲ್ಲ” ಎಂದು ಅವರು ತನ್ನ ಟ್ವೀಟ್‌‌ನಲ್ಲಿ ಹೇಳಿದ್ದಾರೆ.

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಮಂಗಳವಾರ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರದವನದನು ಟೀಕಿಸಿದ್ದಾರೆ. ಈ ಘಟನೆಯು “ಜಂಗಲ್ ರಾಜ್” ನಲ್ಲಿ ಸಾಮಾನ್ಯ ಜನರಿಗೆ ಸುರಕ್ಷಿತವಾಗಿರಲು ಸಾಧ್ಯವಿಲ್ಲ ಎಂದು ಸಾಬೀತುಪಡಿಸಿದೆ ಎಂದಿದ್ದಾರೆ.


ಇದನ್ನೂ ಓದಿ: ಆದಿತ್ಯನಾಥ್‌ರ ’ಜಂಗಲ್ ರಾಜ್‌’ ಸರ್ಕಾರವನ್ನು ವಜಾಗೊಳಿಸಿ: ಕಾಂಗ್ರೆಸ್ ಆಗ್ರಹ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...