Homeಮುಖಪುಟಗಾಝಿಯಾಬಾದ್: ಪುತ್ರಿಯರ ಮುಂದೆಯೇ ಗುಂಡೇಟಿಗೊಳಗಾಗಿದ್ದ ಪತ್ರಕರ್ತ ನಿಧನ

ಗಾಝಿಯಾಬಾದ್: ಪುತ್ರಿಯರ ಮುಂದೆಯೇ ಗುಂಡೇಟಿಗೊಳಗಾಗಿದ್ದ ಪತ್ರಕರ್ತ ನಿಧನ

ಜೋಶಿ ತನ್ನ ಸೋದರ ಸೊಸೆಗೆ ಕಿರುಕುಳ ನೀಡುತ್ತಿರುವವರ ಬಗ್ಗೆ ಪೊಲೀಸರಿಗೆ ದೂರು ನೀಡಿದ ನಂತರ ಈ ದಾಳಿ ನಡೆದಿದೆ.

- Advertisement -
- Advertisement -

ಜೂನ್ 20 ರಂದು ಗಾಝಿಯಾಬಾದ್‌ನ ತಮ್ಮ ನಿವಾಸದ ಬಳಿ ಗುಂಡೇಟಿನಿಂದ ತೀವ್ರವಾಗಿ ಗಾಯಗೊಂಡಿದ್ದ ಪತ್ರಕರ್ತ ವಿಕ್ರಮ್ ಜೋಶಿ ಬುಧವಾರ ಬೆಳಿಗ್ಗೆ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

ಸಿಸಿಟಿವಿ ಕ್ಯಾಮೆರಾದಲ್ಲಿ ಹಲ್ಲೆಯ ಸಾಕ್ಷ್ಯ ಸಂಗ್ರಹಿಸಿ ಈ ಪ್ರಕರಣದಲ್ಲಿ ಒಂಬತ್ತು ಜನರನ್ನು ಬಂಧಿಸಲಾಗಿದೆ ಹಾಗೂ ಇಬ್ಬರು ಪೊಲೀಸರನ್ನು ಅಮಾನತು ಮಾಡಲಾಗಿದೆ.

ಆಸ್ಪತ್ರೆಯಲ್ಲಿ ಜೋಶಿಯನ್ನು ಮೇಲ್ವಿಚಾರಣೆ ಮಾಡುವ ವೈದ್ಯರು, ಬುಲೆಟ್ ಗಾಯದಿಂದಾಗಿ ತಲೆಯಲ್ಲಿರುವ ರಕ್ತನಾಳಗಳು ತೀವ್ರವಾಗಿ ಹಾನಿಗೊಳಗಾಗಿದ್ದವು ಎಂದು ಹೇಳಿದ್ದಾರೆ. ಗಾಯಗೊಂಡ ನಂತರ ಗಾಜಿಯಾಬಾದ್‌ನ ಯಶೋದಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿತ್ತು.

ಸೋಮವಾರ ರಾತ್ರಿ 10.30 ರ ಸುಮಾರಿಗೆ ಜೋಶಿ ತನ್ನ ಇಬ್ಬರು ಹೆಣ್ಣುಮಕ್ಕಳೊಂದಿಗೆ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದಾಗ ದುಷ್ಕರ್ಮಿಗಳ ಗುಂಪೊಂದು ಅವರ ಮೇಲೆ ಹಲ್ಲೆ ನಡೆಸಿ ನಂತರ ಗುಂಡು ಹಾರಿಸಿತ್ತು.

ಉತ್ತರ ಪ್ರದೇಶದ ಗಾಝಿಯಾಬಾದ್‌ನ ವಿಜಯ್ ನಗರ ಪ್ರದೇಶದಲ್ಲಿ ಈ ದಾಳಿ ನಡೆದಿದ್ದು, ಸಿಸಿಟಿವಿ ದೃಶ್ಯಾವಳಿಗಳಲ್ಲಿ, ಜೋಶಿ ತನ್ನ ಹೆಣ್ಣುಮಕ್ಕಳೊಂದಿಗೆ ಬೈಕನ್ನು ಓಡಿಸುತ್ತಿರುವುದನ್ನು ಕಾಣಬಹುದು.

ಜುಲೈ 16 ರಂದು ಜೋಶಿ ತನ್ನ ಸೋದರ ಸೊಸೆಗೆ ಕಿರುಕುಳ ನೀಡುತ್ತಿರುವವರ ಬಗ್ಗೆ ಪೊಲೀಸರಿಗೆ ದೂರು ನೀಡಿದ ನಂತರ ಈ ದಾಳಿ ನಡೆದಿದೆ ಎಂದು ಪೊಲೀಸರು ಶಂಕಿಸಿದ್ದಾರೆ.

ದೂರಿನಲ್ಲಿ ಜೋಶಿ ಅವರ ಕುಟುಂಬ ಛೋಟು, ರವಿ ಮತ್ತು ಆಕಾಶ್ ಬಿಹಾರಿ ಎಂಬ ಮೂರು ಜನರನ್ನು ಹೆಸರಿಸಿದೆ. ಮೂವರು ಆರೋಪಿಗಳು ಪತ್ರಕರ್ತನನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆಪಾದಿತ ಎಫ್‌ಐಆರ್ ತಿಳಿಸಿದೆ.

ಪತ್ರಕರ್ತನ ಮೇಲಿನ ಹಲ್ಲೆಗೆ ಸಂಬಂಧಿಸಿದ ಎಫ್‌ಐಆರ್‌ನಲ್ಲಿ ಈ ಮೂವರನ್ನು ಹೆಸರಿಸಲಾಗಿದೆ.

ಕಾಂಗ್ರೆಸ್ ಮುಖಂಡ ಅಭಿಷೇಕ್ ಮನು ಸಿಂಗ್ವಿ ಬುಧವಾರ ಬೆಳಿಗ್ಗೆ ಈ ಘಟನೆಯನ್ನು ಆಘಾತಕಾರಿ ಎಂದು ಟ್ವೀಟ್ ಮಾಡಿದ್ದಾರೆ. “ಗಾಜಿಯಾಬಾದ್ ಪ್ರದೇಶದಲ್ಲಿ ಆಘಾತಕಾರಿ ಜಂಗಲ್ ರಾಜ್. ಪತ್ರಕರ್ತ ಜೋಶಿ ದೂರು ನೀಡಿರುವ ವ್ಯಕ್ತಿಯ ಮೇಲೆ ಈಗಾಗಲೇ ಎಫ್‌ಐಆರ್ ದಾಖಲಾಗಿತ್ತು. ತನ್ನ ಹೆಣ್ಣುಮಕ್ಕಳೊಂದಿಗೆ ಸ್ಕೂಟರ್‌ನಲ್ಲಿ ಹೋಗುವಾಗ ಗುಂಡಿಗೆ ಬಲಿಯಾಗಿದ್ದಾರೆ. ಹೆಣ್ಣುಮಕ್ಕಳಿಗೆ ಗುಂಡು ಬೀಳದ್ದಿಲ್ಲ” ಎಂದು ಅವರು ತನ್ನ ಟ್ವೀಟ್‌‌ನಲ್ಲಿ ಹೇಳಿದ್ದಾರೆ.

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಮಂಗಳವಾರ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರದವನದನು ಟೀಕಿಸಿದ್ದಾರೆ. ಈ ಘಟನೆಯು “ಜಂಗಲ್ ರಾಜ್” ನಲ್ಲಿ ಸಾಮಾನ್ಯ ಜನರಿಗೆ ಸುರಕ್ಷಿತವಾಗಿರಲು ಸಾಧ್ಯವಿಲ್ಲ ಎಂದು ಸಾಬೀತುಪಡಿಸಿದೆ ಎಂದಿದ್ದಾರೆ.


ಇದನ್ನೂ ಓದಿ: ಆದಿತ್ಯನಾಥ್‌ರ ’ಜಂಗಲ್ ರಾಜ್‌’ ಸರ್ಕಾರವನ್ನು ವಜಾಗೊಳಿಸಿ: ಕಾಂಗ್ರೆಸ್ ಆಗ್ರಹ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...