Homeಮುಖಪುಟಮುತ್ಸದ್ದಿ ರಾಜಕಾರಣಿ, ಕರ್ನಾಟಕದ ಸಾಕ್ಷಿಪ್ರಜ್ಞೆ ಎ.ಕೆ. ಸುಬ್ಬಯ್ಯ ಹುಟ್ಟುಹಬ್ಬ | ಕಿರು ಪರಿಚಯ

ಮುತ್ಸದ್ದಿ ರಾಜಕಾರಣಿ, ಕರ್ನಾಟಕದ ಸಾಕ್ಷಿಪ್ರಜ್ಞೆ ಎ.ಕೆ. ಸುಬ್ಬಯ್ಯ ಹುಟ್ಟುಹಬ್ಬ | ಕಿರು ಪರಿಚಯ

- Advertisement -
- Advertisement -

ಕರ್ನಾಟಕ ಕಂಡ ಧೀಮಂತ ನಾಯಕರಲ್ಲಿ ಒಬ್ಬರಾದ ಪ್ರಗತಿಪರ ಚಿಂತಕರು ಆಗಿದ್ದ ಎ.ಕೆ. ಸುಬ್ಬಯ್ಯ ಅವರು ಈಗಿಲ್ಲದಿರಬಹುದು, ಆದರೆ ಅವರು ಹಾಕಿಕೊಟ್ಟ ಮಾರ್ಗವಿದೆ, ಅವರ ಚಿಂತನೆಗಳನ್ನು ಮೈಗೂಡಿಸಿಕೊಂಡ ಒಡನಾಡಿ ಮನಸ್ಸುಗಳು ರಾಜ್ಯದಾದ್ಯಂತ ಇವೆ. ಇಂದು ಅವರ ಹುಟ್ಟುಹಬ್ಬವಾಗಿದ್ದು ಅವರ ಕಿರು ಪರಿಚಯ ಇಲ್ಲಿದೆ.

ಅಜ್ಜಿಕುಟ್ಟಿರ ಕರಿಯಪ್ಪ ಸುಬ್ಬಯ್ಯನವರು 1934 ಆಗಸ್ಟ್‌ 9 ರಂದು ಕೊಡಗಿನ ವಿರಾಜಪೇಟೆಯಲ್ಲಿ ಜನಿಸಿದರು. ಅವರ ತಂದೆ ಕರಿಯಪ್ಪ, ತಾಯಿ ಚಿನ್ನವ್ವ. ಎಕೆ ಸುಬ್ಬಯ್ಯ ಅವರ ಕುಟುಂಬವೂ ಮೂಲತಃ ಕೃಷಿಕ ಕುಟುಂಬದವರಾಗಿತ್ತು. ಸುಬ್ಬಯ್ಯ ಅವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಹರಿಹರ ಹಳ್ಳಿಯಲ್ಲಿ ಆರಂಭಿಸಿ ಪ್ರೌಢಶಿಕ್ಷಣವನ್ನು ಶೆಟ್ಟಿಗೆರೆಯಲ್ಲಿ ಹಾಗೂ ವಿಜ್ಙಾನ ವಿಷಯದಲ್ಲಿ ಪದವಿಯನ್ನು ಮುಗಿಸಿ ನಂತರ 1963 ರಲ್ಲಿ ಮೈಸೂರಿನ ಶಾರದ ವಿಲಾಸ್ ಕಾಲೇಜಿನಲ್ಲಿ ಕಾನೂನು ಪದವಿ ಪಡೆದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

1963 ರಲ್ಲಿ ವಕೀಲ ವೃತ್ತಿಯನ್ನು ಆರಂಭಿಸಿದ ಅವರು 1996 ರಲ್ಲಿ ಬಿಜೆಪಿಯ ಮಾತೃಪಕ್ಷ ಜನಸಂಘದ ಮೂಲಕ ರಾಜಕಾರಣಕ್ಕೆ ಕಾಲಿಟ್ಟರು. ಜನಸಂಘದ ಮೂಲಕ ಅವರು 1968 ಮತ್ತು 1974 ರಲ್ಲಿ ಮೈಸೂರು ಕೊಡಗು ಮಂಗಳೂರು ಪಧವೀಧರ ಕ್ಷೇತ್ರದಿಂದ ಆಯ್ಕೆಯಾಗಿ ಎರಡು ಬಾರಿ ವಿಧಾನ ಪರಿಷತ್ತಿನ ಸದಸ್ಯರಾದರು.

1975 ರಲ್ಲಿ ಇಂದಿರಾ ಗಾಂಧಿಯವರು ದೇಶದ ಮೇಲೆ ಹೇರಿದ ತುರ್ತು ಪರಿಸ್ಥಿತಿಯನ್ನು ಪ್ರತಿಭಟಿಸಿ ಬಂಧನಕ್ಕೊಳಗಾದರು. ರಾಜಕೀಯ ಕೈದಿಯಾಗಿ 18 ತಿಂಗಳುಗಳಕಾಲ ಸೆರೆವಾಸ ಅನುಭವಿಸಿದ ಅವರು 1980 ರಲ್ಲಿ ರಾಜ್ಯ ಬಿಜೆಪಿಯ ಮೊದಲ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದರು. ಅಲ್ಲದೆ ಬಿಜೆಪಿಯಿಂದ ಮೂರನೇ ಬಾರಿಗೆ  ವಿಧಾನ ಪರಿಷತ್ ಸದಸ್ಯರಾದರು.

ಇದನ್ನೂ ಓದಿ: ಐದು ದಶಕಗಳ ರಾಜ್ಯ ರಾಜಕಾರಣದ ಅಪರೂಪದ ಸಾಕ್ಷಿಪ್ರಜ್ಞೆ: ಎ.ಕೆ.ಸುಬ್ಬಯ್ಯ

ಇದರ ನಂತರ ಅವರು ಬಿಜೆಪಿಯ ಪ್ರಮುಖ ನಾಯಕರಾಗಿ ಹೊರಹೊಮ್ಮಿದ ಅವರು ರಾಜ್ಯವನ್ನು ಸುತ್ತಿ ಪಕ್ಷವನ್ನು ಬಲಪಡಿಸಿದರು. ಅವರ ನಾಯಕತ್ವದಲ್ಲಿ 1983 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ 110 ಅಭ್ಯರ್ಥಿಗಳನ್ನು ಕಣಕ್ಕಿಳಿಸಿ 18 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿಗೆ ಭದ್ರ ತಂದುಕೊಟ್ಟಿದ್ದರು. ಆದರೆ ಆರೆಸ್ಸೆಸ್‌‌‌ ಮತ್ತು ಬಿಜೆಪಿ ಜೊತೆಗೆ ಸೈದ್ಧಾಂತಿಕ ವಿರೋಧದಿಂದಾಗಿ ಪಕ್ಷದಿಂದ ಹೊರ ಬಂದು ತಮ್ಮದೇ ಸ್ವಂತ “ಕನ್ನಡನಾಡು” ಪಕ್ಷವನ್ನು ಕಟ್ಟಿದರು. ಆದರೆ ಅದು ಉದ್ದೇಶಿತ ಗುರಿಯನ್ನು ಮುಟ್ಟದೆ ಇದ್ದಾಗ ಕಾಂಗ್ರೆಸ್ ಪಕ್ಷ ಸೇರಿ ನಾಲ್ಕನೇ ಬಾರಿಗೆ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದರು.

ಬಿಜೆಪಿಯಿಂದ ಹೊರ ಬಂದ ನಂತರ ಅವರು ಬಿಜೆಪಿಯ ಮಾತೃ ಸಂಘಟನೆಯಾದ ಆರೆಸ್ಸೆಸ್ಸ್‌‌ ಬಗ್ಗೆಗಿನ ಒಳಸುಳಿಗಳ ಬಗ್ಗೆ ಅವರು ನಿರಂತರವಾಗಿ ಬರೆಯುತ್ತಿದ್ದರು. ಅವರು ಬರೆದ “ಆರೆಸ್ಸೆಸ್‌ ಅಂತರಂಗ’’ ಎಂಬ ಪುಸ್ತಕ ಅವರ ಖ್ಯಾತ ಕೃತಿಯಾಗಿದೆ. ಇಷ್ಟೆ ಅಲ್ಲದೆ, ಬಿಜೆಪಿಯಿಂದ ಹೊರ ಬಂದ ನಂತರ ಅವರು ಕರ್ನಾಟಕದ ರಾಜಕೀಯ ಬೆಳವಣಿಗೆಗಳ ಕುರಿತು ವಾಜಪೇಯಿಗೆ ಧೀರ್ಘ ಪತ್ರ ಬರೆದಿದ್ದರು. ಆ ಪತ್ರವನ್ನೇ ಇನ್ನಷ್ಟು ವಿಸ್ತರಿಸಿ “ಆರೆಸ್ಸೆಸ್ ದಿ ವಿ಼ಪ್ ಹ್ಯಾಂಡ್ ಆಫ್ ಬಿಜೆಪಿ” ಎಂಬ ಪುಸ್ತಕವಾಗಿ ಪ್ರಕಟಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...