Homeಮುಖಪುಟಮುತ್ಸದ್ದಿ ರಾಜಕಾರಣಿ, ಕರ್ನಾಟಕದ ಸಾಕ್ಷಿಪ್ರಜ್ಞೆ ಎ.ಕೆ. ಸುಬ್ಬಯ್ಯ ಹುಟ್ಟುಹಬ್ಬ | ಕಿರು ಪರಿಚಯ

ಮುತ್ಸದ್ದಿ ರಾಜಕಾರಣಿ, ಕರ್ನಾಟಕದ ಸಾಕ್ಷಿಪ್ರಜ್ಞೆ ಎ.ಕೆ. ಸುಬ್ಬಯ್ಯ ಹುಟ್ಟುಹಬ್ಬ | ಕಿರು ಪರಿಚಯ

- Advertisement -
- Advertisement -

ಕರ್ನಾಟಕ ಕಂಡ ಧೀಮಂತ ನಾಯಕರಲ್ಲಿ ಒಬ್ಬರಾದ ಪ್ರಗತಿಪರ ಚಿಂತಕರು ಆಗಿದ್ದ ಎ.ಕೆ. ಸುಬ್ಬಯ್ಯ ಅವರು ಈಗಿಲ್ಲದಿರಬಹುದು, ಆದರೆ ಅವರು ಹಾಕಿಕೊಟ್ಟ ಮಾರ್ಗವಿದೆ, ಅವರ ಚಿಂತನೆಗಳನ್ನು ಮೈಗೂಡಿಸಿಕೊಂಡ ಒಡನಾಡಿ ಮನಸ್ಸುಗಳು ರಾಜ್ಯದಾದ್ಯಂತ ಇವೆ. ಇಂದು ಅವರ ಹುಟ್ಟುಹಬ್ಬವಾಗಿದ್ದು ಅವರ ಕಿರು ಪರಿಚಯ ಇಲ್ಲಿದೆ.

ಅಜ್ಜಿಕುಟ್ಟಿರ ಕರಿಯಪ್ಪ ಸುಬ್ಬಯ್ಯನವರು 1934 ಆಗಸ್ಟ್‌ 9 ರಂದು ಕೊಡಗಿನ ವಿರಾಜಪೇಟೆಯಲ್ಲಿ ಜನಿಸಿದರು. ಅವರ ತಂದೆ ಕರಿಯಪ್ಪ, ತಾಯಿ ಚಿನ್ನವ್ವ. ಎಕೆ ಸುಬ್ಬಯ್ಯ ಅವರ ಕುಟುಂಬವೂ ಮೂಲತಃ ಕೃಷಿಕ ಕುಟುಂಬದವರಾಗಿತ್ತು. ಸುಬ್ಬಯ್ಯ ಅವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಹರಿಹರ ಹಳ್ಳಿಯಲ್ಲಿ ಆರಂಭಿಸಿ ಪ್ರೌಢಶಿಕ್ಷಣವನ್ನು ಶೆಟ್ಟಿಗೆರೆಯಲ್ಲಿ ಹಾಗೂ ವಿಜ್ಙಾನ ವಿಷಯದಲ್ಲಿ ಪದವಿಯನ್ನು ಮುಗಿಸಿ ನಂತರ 1963 ರಲ್ಲಿ ಮೈಸೂರಿನ ಶಾರದ ವಿಲಾಸ್ ಕಾಲೇಜಿನಲ್ಲಿ ಕಾನೂನು ಪದವಿ ಪಡೆದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

1963 ರಲ್ಲಿ ವಕೀಲ ವೃತ್ತಿಯನ್ನು ಆರಂಭಿಸಿದ ಅವರು 1996 ರಲ್ಲಿ ಬಿಜೆಪಿಯ ಮಾತೃಪಕ್ಷ ಜನಸಂಘದ ಮೂಲಕ ರಾಜಕಾರಣಕ್ಕೆ ಕಾಲಿಟ್ಟರು. ಜನಸಂಘದ ಮೂಲಕ ಅವರು 1968 ಮತ್ತು 1974 ರಲ್ಲಿ ಮೈಸೂರು ಕೊಡಗು ಮಂಗಳೂರು ಪಧವೀಧರ ಕ್ಷೇತ್ರದಿಂದ ಆಯ್ಕೆಯಾಗಿ ಎರಡು ಬಾರಿ ವಿಧಾನ ಪರಿಷತ್ತಿನ ಸದಸ್ಯರಾದರು.

1975 ರಲ್ಲಿ ಇಂದಿರಾ ಗಾಂಧಿಯವರು ದೇಶದ ಮೇಲೆ ಹೇರಿದ ತುರ್ತು ಪರಿಸ್ಥಿತಿಯನ್ನು ಪ್ರತಿಭಟಿಸಿ ಬಂಧನಕ್ಕೊಳಗಾದರು. ರಾಜಕೀಯ ಕೈದಿಯಾಗಿ 18 ತಿಂಗಳುಗಳಕಾಲ ಸೆರೆವಾಸ ಅನುಭವಿಸಿದ ಅವರು 1980 ರಲ್ಲಿ ರಾಜ್ಯ ಬಿಜೆಪಿಯ ಮೊದಲ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದರು. ಅಲ್ಲದೆ ಬಿಜೆಪಿಯಿಂದ ಮೂರನೇ ಬಾರಿಗೆ  ವಿಧಾನ ಪರಿಷತ್ ಸದಸ್ಯರಾದರು.

ಇದನ್ನೂ ಓದಿ: ಐದು ದಶಕಗಳ ರಾಜ್ಯ ರಾಜಕಾರಣದ ಅಪರೂಪದ ಸಾಕ್ಷಿಪ್ರಜ್ಞೆ: ಎ.ಕೆ.ಸುಬ್ಬಯ್ಯ

ಇದರ ನಂತರ ಅವರು ಬಿಜೆಪಿಯ ಪ್ರಮುಖ ನಾಯಕರಾಗಿ ಹೊರಹೊಮ್ಮಿದ ಅವರು ರಾಜ್ಯವನ್ನು ಸುತ್ತಿ ಪಕ್ಷವನ್ನು ಬಲಪಡಿಸಿದರು. ಅವರ ನಾಯಕತ್ವದಲ್ಲಿ 1983 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ 110 ಅಭ್ಯರ್ಥಿಗಳನ್ನು ಕಣಕ್ಕಿಳಿಸಿ 18 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿಗೆ ಭದ್ರ ತಂದುಕೊಟ್ಟಿದ್ದರು. ಆದರೆ ಆರೆಸ್ಸೆಸ್‌‌‌ ಮತ್ತು ಬಿಜೆಪಿ ಜೊತೆಗೆ ಸೈದ್ಧಾಂತಿಕ ವಿರೋಧದಿಂದಾಗಿ ಪಕ್ಷದಿಂದ ಹೊರ ಬಂದು ತಮ್ಮದೇ ಸ್ವಂತ “ಕನ್ನಡನಾಡು” ಪಕ್ಷವನ್ನು ಕಟ್ಟಿದರು. ಆದರೆ ಅದು ಉದ್ದೇಶಿತ ಗುರಿಯನ್ನು ಮುಟ್ಟದೆ ಇದ್ದಾಗ ಕಾಂಗ್ರೆಸ್ ಪಕ್ಷ ಸೇರಿ ನಾಲ್ಕನೇ ಬಾರಿಗೆ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದರು.

ಬಿಜೆಪಿಯಿಂದ ಹೊರ ಬಂದ ನಂತರ ಅವರು ಬಿಜೆಪಿಯ ಮಾತೃ ಸಂಘಟನೆಯಾದ ಆರೆಸ್ಸೆಸ್ಸ್‌‌ ಬಗ್ಗೆಗಿನ ಒಳಸುಳಿಗಳ ಬಗ್ಗೆ ಅವರು ನಿರಂತರವಾಗಿ ಬರೆಯುತ್ತಿದ್ದರು. ಅವರು ಬರೆದ “ಆರೆಸ್ಸೆಸ್‌ ಅಂತರಂಗ’’ ಎಂಬ ಪುಸ್ತಕ ಅವರ ಖ್ಯಾತ ಕೃತಿಯಾಗಿದೆ. ಇಷ್ಟೆ ಅಲ್ಲದೆ, ಬಿಜೆಪಿಯಿಂದ ಹೊರ ಬಂದ ನಂತರ ಅವರು ಕರ್ನಾಟಕದ ರಾಜಕೀಯ ಬೆಳವಣಿಗೆಗಳ ಕುರಿತು ವಾಜಪೇಯಿಗೆ ಧೀರ್ಘ ಪತ್ರ ಬರೆದಿದ್ದರು. ಆ ಪತ್ರವನ್ನೇ ಇನ್ನಷ್ಟು ವಿಸ್ತರಿಸಿ “ಆರೆಸ್ಸೆಸ್ ದಿ ವಿ಼ಪ್ ಹ್ಯಾಂಡ್ ಆಫ್ ಬಿಜೆಪಿ” ಎಂಬ ಪುಸ್ತಕವಾಗಿ ಪ್ರಕಟಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...