Homeಮುಖಪುಟಪಂಜಾಬ್‌ನ ಖಾಸಗಿ ವಿಶ್ವವಿದ್ಯಾನಿಲಯದಲ್ಲಿ ಜೀವ ಕಳೆದುಕೊಂಡ ಕೇರಳ ಮೂಲದ ವಿದ್ಯಾರ್ಥಿ; ಭುಗಿಲೆದ್ದ ಪ್ರತಿಭಟನೆ

ಪಂಜಾಬ್‌ನ ಖಾಸಗಿ ವಿಶ್ವವಿದ್ಯಾನಿಲಯದಲ್ಲಿ ಜೀವ ಕಳೆದುಕೊಂಡ ಕೇರಳ ಮೂಲದ ವಿದ್ಯಾರ್ಥಿ; ಭುಗಿಲೆದ್ದ ಪ್ರತಿಭಟನೆ

- Advertisement -
- Advertisement -

ಪಂಜಾಬ್‌‌ನ ಜಲಂಧರ್ ಬಳಿಯ ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿಯಲ್ಲಿ ಕೇರಳದ ವಿದ್ಯಾರ್ಥಿಯೊಬ್ಬರು ಜೀವ ಕಳೆದುಕೊಂಡಿರುವ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ.  ಕೇರಳ ಮೂಲದ ಡಿಸೈನಿಂಗ್‌ನ ಪ್ರಥಮ ವರ್ಷದ ವಿದ್ಯಾರ್ಥಿ ಅಗ್ನಿ ಎಸ್. ದಿಲೀಪ್ (21) ಮಂಗಳವಾರ ತಡರಾತ್ರಿ ವಿಶ್ವವಿದ್ಯಾನಿಲಯದ ಕ್ಯಾಂಪಸ್‌ನಲ್ಲಿರುವ ತನ್ನ ಹಾಸ್ಟೆಲ್ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ವಿದ್ಯಾರ್ಥಿಯ ಕೊಠಡಿಯಿಂದ ವಶಪಡಿಸಿಕೊಂಡ ಡೆತ್‌ ನೋಟ್‌ನಲ್ಲಿ, ತಾನು ವೈಯಕ್ತಿಕ ಕಾರಣಗಳಿಂದ ಆತ್ಮಹತ್ಯೆ ಮಾಡಿದ್ದಾಗಿ ಬರೆದುಕೊಂಡಿದ್ದಾರೆ ಎಂದು ಹೇಳಲಾಗಿದೆ. ವಿದ್ಯಾರ್ಥಿಯ ಆತ್ಮಹತ್ಯೆಯ ನಂತರ ನಿನ್ನೆ ತಡರಾತ್ರಿ ವಿಶ್ವವಿದ್ಯಾಲಯದಲ್ಲಿ ಭಾರೀ ಪ್ರತಿಭಟನೆ ನಡೆದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಕಳೆದ ಹತ್ತು ದಿನಗಳಲ್ಲಿ ಕ್ಯಾಂಪಸ್‌ನಲ್ಲಿ ನಡೆಯುತ್ತಿರುವ ಎರಡನೇ ಆತ್ಮಹತ್ಯೆ ಇದಾಗಿದೆ. ಮುಚ್ಚಿದ ಬಾಗಿಲಿನ ಹಿಂದೆ ವಿವಾದವನ್ನು ಪರಿಹರಿಸಿದ್ದರಿಂದ ಇದು ವರದಿಯಾಗಿಲ್ಲ” ಎಂದು ಪ್ರತಿಭಟನಾನಿರತ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು ವಿಶ್ವವಿದ್ಯಾಲಯದ ಕ್ಯಾಂಪಸ್ ಒಳಗಡೆ ಅನಧೀಕೃತ ದೇವಸ್ಥಾನ ನಿರ್ಮಾಣ; ವಿದ್ಯಾರ್ಥಿಗಳಿಂದ ಪ್ರತಿಭಟನೆ

ಎರಡೂ ಆತ್ಮಹತ್ಯೆ ಪ್ರಕರಣಗಳ ಹಿಂದಿನ ಕಾರಣಗಳನ್ನು ತಿಳಿಯಲು ನಾವು ಪ್ರತಿಭಟನೆ ನಡೆಸುತ್ತಿದ್ದೇವೆ. ಆದರೆ ವಿಶ್ವವಿದ್ಯಾಲಯದ ಆಡಳಿತವು ಈ ವಿಷಯದ ಬಗ್ಗೆ ಮೌನವಾಗಿದೆ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ. ವಿದ್ಯಾರ್ಥಿಗಳ ಆರೋಪವನ್ನು ಮುನ್ಸಿಪಲ್ ಮತ್ತು ಪೊಲೀಸರು ನಿರಾಕರಿಸಿದ್ದಾರೆ.

ಆವರಣದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗುತ್ತಿದ್ದಂತೆ ನೂರಾರು ವಿದ್ಯಾರ್ಥಿಗಳು ನ್ಯಾಯಕ್ಕಾಗಿ ಆಗ್ರಹಿಸಿ ಘೋಷಣೆಗಳನ್ನು ಕೂಗಿದ್ದಾರೆ. ಪೊಲೀಸರು ಕೂಡ ಸ್ಥಳಕ್ಕೆ ಆಗಮಿಸಿ ವಿದ್ಯಾರ್ಥಿಗಳನ್ನು ಸಮಾಧಾನ ಪಡಿಸಲು ಯತ್ನಿಸಿದ್ದಾರೆ.

ಕಪುರ್ತಲದ ಹಿರಿಯ ಪೊಲೀಸ್ ಅಧೀಕ್ಷಕ ನವನೀತ್ ಸಿಂಗ್ ಬೈನ್ಸ್ ಅವರು ಡೆತ್‌ನೋಟ್‌ ಅನ್ನು ವಶಪಡಿಸಿಕೊಂಡಿದ್ದು, ಅದರಲ್ಲಿ ವೈಯಕ್ತಿಕ ಕಾರಣಗಳು ಆತ್ಮಹತ್ಯೆಗೆ ಕಾರಣವೆಂದು ಉಲ್ಲೇಖಿಸಲಾಗಿದೆ ಎಂದು TNIE ವರದಿ ಹೇಳಿದೆ. ವಿದ್ಯಾರ್ಥಿಯ ಪೋಷಕರಿಗೆ ಮಾಹಿತಿ ನೀಡಲಾಗಿದ್ದು, ಮೃತದೇಹವನ್ನು ಸಿವಿಲ್ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.

ಶಾಂತಿ ಕಾಪಾಡುವಂತೆ ವಿದ್ಯಾರ್ಥಿಗಳಿಗೆ ಮನವಿ ಮಾಡಿದ ಬೈನ್ಸ್ ಪೊಲೀಸರು ಪ್ರಕರಣವನ್ನು ಸರಿಯಾಗಿ ಮತ್ತು ನಿಷ್ಪಕ್ಷಪಾತವಾಗಿ ತನಿಖೆ ಮಾಡುತ್ತಾರೆ ಎಂದು ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ‘400% ಶುಲ್ಕ ಹೆಚ್ಚಳ’: ಅಲಹಾಬಾದ್ ವಿಶ್ವವಿದ್ಯಾಲಯ ವಿದ್ಯಾರ್ಥಿಗಳಿಂದ ಬೃಹತ್ ಪಂಜಿನ ಮೆರವಣಿಗೆ

ವಿದ್ಯಾರ್ಥಿಯ ಸಾವಿನಿಂದ ದುಃಖಿತವಾಗಿರುವ ವಿಶ್ವವಿದ್ಯಾನಿಲಯವು ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, “ದುರದೃಷ್ಟಕರ ಘಟನೆಯಿಂದ ಎಲ್‌ಪಿಯು ಸಹೋದರರು ದುಃಖಿತರಾಗಿದ್ದಾರೆ. ಪೊಲೀಸರ ಆರಂಭಿಕ ತನಿಖೆ ಮತ್ತು ಆತ್ಮಹತ್ಯೆ ಪತ್ರದ ವಿಷಯಗಳು ಮೃತರ ವೈಯಕ್ತಿಕ ಸಮಸ್ಯೆಗಳತ್ತ ಗಮನ ಹರಿಸುತ್ತವೆ. ವಿಶ್ವವಿದ್ಯಾನಿಲಯವು ಹೆಚ್ಚಿನ ತನಿಖೆಗಾಗಿ ಅಧಿಕಾರಿಗಳಿಗೆ ಸಂಪೂರ್ಣ ಬೆಂಬಲವನ್ನು ನೀಡುತ್ತಿದೆ ಮತ್ತು ವಿದ್ಯಾರ್ಥಿಯ ನಷ್ಟಕ್ಕೆ ಸಂತಾಪ ವ್ಯಕ್ತಪಡಿಸುತ್ತದೆ” ಎಂದು ದುಃಖಿತ ಕುಟುಂಬಕ್ಕೆ ತನ್ನ ಸಂತಾಪವನ್ನು ವ್ಯಕ್ತಪಡಿಸಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಂಗಳೂರು: ‘ಶೂದ್ರ ವರ್ಗದವ ನಮ್ಮನ್ನು ಆಳಲು ಹೊರಟರೆ, ಬಂಟರು ಸಹಿಸುವುದಕ್ಕೆ ಸಾಧ್ಯವಿದೆಯೇ?’: ಬಿಜೆಪಿಗೆ ಮತ...

0
ಲೋಕಸಭೆ ಚುನಾವಣೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾನಕ್ಕೆ 24 ಗಂಟೆಗಳು ಮಾತ್ರ ಬಾಕಿ ಉಳಿದಿದೆ. ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಬಂಟ ಸಮುದಾಯದ  ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತು ಕಾಂಗ್ರೆಸ್‌ ಅಭ್ಯರ್ಥಿಯಾಗಿ ಬಿಲ್ಲವ...