Homeಕರ್ನಾಟಕ'ಹೆಣಗಳ ಮೇಲೆ ಹಣದ ರಾಜ್ಯ; ಇದೇ ಇವರ ಸಂವೇದನಾ ಹೀನತೆಯ ಗ್ಯಾರಂಟಿ..'; ಬಿಜೆಪಿ ವಿರುದ್ಧ ನಟ...

‘ಹೆಣಗಳ ಮೇಲೆ ಹಣದ ರಾಜ್ಯ; ಇದೇ ಇವರ ಸಂವೇದನಾ ಹೀನತೆಯ ಗ್ಯಾರಂಟಿ..’; ಬಿಜೆಪಿ ವಿರುದ್ಧ ನಟ ಕಿಶೋರ್ ಆಕ್ರೋಶ

- Advertisement -
- Advertisement -

ಬಿಜೆಪಿಯ ‘ಮೋದಿ ಗ್ಯಾರಂಟಿ’ ಘೋಷಣೆ ಕುರಿತು ಆಕ್ರೋಶ ಹೊರಹಾಕಿರುವ ಬಹುಭಾಷಾ ನಟ ಕಿಶೋರ್‌ ಕುಮಾರ್, ‘ನಮ್ಮ ಹೆಣಗಳ ಮೇಲೆ ಇವರ ಹಣದ ರಾಜ್ಯ ಇದೇ ಇವರ ಸಂವೇದನಾ ಹೀನತೆಯ ಗ್ಯಾರಂಟಿ’ ಎಂದು ಲೇವಡಿ ಮಾಡಿದ್ದಾರೆ.

ಈ ಕುರಿತು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಕೋವಿಡ್ ಸಂದರ್ಭದ ಮೋದಿ ಸರ್ಕಾರದ ರಾಢಳಿತವನ್ನು ಟೀಕೆ ಮಾಡಿದ್ದಾರೆ.

“ಯಾರು ಸತ್ತರೆ ನನಗೇನು, ಅವರೇನು ನನಗಾಗಿ ಸತ್ತರೇ? ಎಂದು ಹೇಳುತ್ತಾ ಕೊರೋನಾದಿಂದ ಲಕ್ಷಾಂತರ ಜನ ಪ್ರಾಣಬಿಡುತ್ತಿದ್ದ ಕಾಲದಲ್ಲೂ ಔಷದಿ ಕಂಪನಿಗಳಿಂದ ಎಲೆಕ್ಟೊರಲ್ ಬಾಂಡ್ ಲೂಟಿ ಮಾಡಿದ, ಲಂಚ ತಿಂದು ಕಳಪೆ ಔಷದಿಯನ್ನು ಮಾರುಕಟ್ಟೆಗೆ ತಂದು ನಮ್ಮ ಜೀವದೊಂದಿಗೆ ಆಟವಾಡಿದ, ಅಮಾನವೀಯತೆಯ ನೀಚತೆಯ ಉತ್ತುಂಗ ತಲುಪಿದ ಪರಮ ಭ್ರಷ್ಠರು ಇನ್ನೂ ರಾಜಾರೋಷವಾಗಿ ತಿರುಗುತ್ತಿರುವುದು ಹೇಗೆ” ಅವರು ಪ್ರಶ್ನಿಸಿದ್ದಾರೆ.

“ಅದರಲ್ಲೂ ಸಾಕ್ಷ್ಯಾಧಾರ ಸಮೇತ ಸಿಕ್ಕಿಹಾಕಿಕೊಂಡರೂ ನಾಚಿಕೆ, ನ್ಯಾಯ ಯಾವುದರ ಪರಿವೆಯೂ ಇಲ್ಲದೆ ಈ ಅಸಂವಿಧಾನಿಕ ದರೋಡೆಯ ಅಪರಾಧವನ್ನು ತಾನೇ ಮಾಡಿದ್ದೆಂದೂ; ಅದು ಸರಿಯೆಂದೂ, ಆ ದರೋಡೆ ಗುಂಪಿನ ಪ್ರಮುಖ ಮೋದಿಯೇ ಬಹಿರಂಗವಾಗಿ ಸಮರ್ಥಿಸಿಕೊಳ್ಳಲು ಧೈರ್ಯ ಕೊಟ್ಟವರು ಯಾರು” ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

“ಇವರು ರಾಜಕೀಯ ದಾಳವಾಗಿ ಬಳಸುವ ಧರ್ಮವೇ?? (ಹಾಗಿದ್ದರೆ ಆ ಧರ್ಮದ ರಕ್ಷಣೆಯಲ್ಲಿ ಇವರು ನಡೆಸಿದ ಈ ಹೇಯ ಕೃತ್ಯ ಆ ಧರ್ಮಕ್ಕೇ ಘೋರ ಅಪಮಾನವಲ್ಲವೇ) ಇವರ ಭ್ರಷ್ಟಾಚಾರದ ಸತ್ಯವನ್ನು ಜನರಿಗೆ ತಲುಪಿಸದೇ ಮುಚ್ಚಿಟ್ಟು, ಇವರು ಹೇಳುವ ಸುಳ್ಳನ್ನೇ ಹರಡುವ ಇವರ ಅಧಿಕಾರವನ್ನು ಕಾಪಾಡುವ ದೇಶದ್ರೊಹಿ ಮಾಧ್ಯಮವೇ? ಇಷ್ಟೆಲ್ಲಾ ಸಾಕ್ಷಿಯಿದ್ದೂ ಇವರನ್ನು ಬೆಂಬಲಿಸುವ ವಿವೇಚನೆ ಕಳೆದುಕೊಂಡ ಅಂಧಜನವೇ?
ಇವರ ಕೂಲಿ ಪಡೆಗೆ ಹೆದರಿ ಇವರನ್ನು ಪ್ರಶ್ನಿಸದ ನಾವೇ” ಎಂದು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ; ‘ಪ್ರತಿಪಕ್ಷಗಳಿಗೂ ದೇಣಿಗೆ ಸಿಕ್ಕಿದೆ, ಇದು ಸುಲಿಗೆಯೇ..?’; ಚುನಾವಣಾ ಬಾಂಡ್ ವ್ಯವಸ್ಥೆ ಸಮರ್ಥಿಸಿಕೊಂಡ ಅಮಿತ್ ಶಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...