HomeಮುಖಪುಟABVP ರಾಷ್ಟ್ರೀಯ ಅಧ್ಯಕ್ಷನಿಂದ ಮಹಿಳೆಗೆ ನಿತ್ಯ ಕಿರುಕುಳ ಆರೋಪ: ShameOnABVP ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್

ABVP ರಾಷ್ಟ್ರೀಯ ಅಧ್ಯಕ್ಷನಿಂದ ಮಹಿಳೆಗೆ ನಿತ್ಯ ಕಿರುಕುಳ ಆರೋಪ: ShameOnABVP ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್

- Advertisement -
- Advertisement -

ABVP ರಾಷ್ಟ್ರೀಯ ಅಧ್ಯಕ್ಷ ಡಾ.ಎಸ್.ಸುಬ್ಬಯ್ಯ ಉತ್ತರಖಂಡದಲ್ಲಿ ತಮ್ಮ ನೆರೆಯ ಮಹಿಳೆಗೆ ನಿತ್ಯ ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪದಲ್ಲಿ ತೀವ್ರ ಟೀಕೆಗೆ ಗುರಿಯಾಗಿದ್ದು ಟ್ವಿಟ್ಟರ್‌ನಲ್ಲಿ ShameOnABVP ಟ್ರೆಂಡಿಂಗ್ ಆಗಿದೆ.

ಘಟನೆಯ ಹಿನ್ನೆಲೆ

ABVP ರಾಷ್ಟ್ರೀಯ ಅಧ್ಯಕ್ಷ ಡಾ.ಎಸ್.ಸುಬ್ಬಯ್ಯ ಚನ್ನೈನ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ನೆರೆಮನೆಯ ಮಹಿಳೆಯೊಂದಿಗೆ ಕಾರು ಪಾರ್ಕಿಂಗ್ ವಿಚಾರಕ್ಕೆ ಜಗಳ ಮಾಡಿದ್ದಾರೆ. ಆ ಮಹಿಳೆಗೆ ಸೇರಿದ ಪಾರ್ಕಿಂಗ್‌ ಅನ್ನು ಸುಬ್ಬಯ್ಯ ಬಾಡಿಗೆಗೆ ಪಡೆದಿದ್ದರು. ಆದರೆ ಸ್ವಲ್ಪ ದಿನಗಳ ನಂತರ ಅದನ್ನು ತನಗೆ ಬಿಟ್ಟುಕೊಡಬೇಕೆಂದು ಆಗ್ರಹಿಸಿದ್ದಾರೆ. ಆದರೆ ಆ ಮಹಿಳೆ ಅದಕ್ಕೆ ಒಪ್ಪಿಲ್ಲ. ಅಲ್ಲಿಂದ ಆರಂಭವಾದ ಜಗಳ ಈಗ ಸುಬ್ಬಯ್ಯ ನಿತ್ಯ ಆ ಮಹಿಳೆಯ ಮನೆ ಮುಂದೆ ಮೂತ್ರ ವಿಸರ್ಜನೆ ಮಾಡುವ ಮಟ್ಟಿಗೆ ಬೆಳೆದುನಿಂತಿದೆ ಎಂದು ಮಹಿಳೆ ಆರೋಪಿಸಿದ್ದಾರೆ.

ಬೇಡದ ವಸ್ತುಗಳನ್ನು ಆಕೆಯ ಮನೆ ಮುಂದೆ ಎಸೆಯುವುದು, ನಿತ್ಯ ಅವರ ಮನೆ ಮುಂದೆ ಮೂತ್ರ ವಿಸರ್ಜನೆ ಮಾಡುವ ವಿಡಿಯೋ ಸಿಸಿಟಿವಿ ಕ್ಯಾಮರದಲ್ಲಿ ದಾಖಲಾಗಿವೆ. ಆದರೆ ಆರೋಪಿ ABVP ರಾಷ್ಟ್ರೀಯ ಅಧ್ಯಕ್ಷನಾದ ಕಾರಣ ಮತ್ತು ರಾಜಕೀಲ ಬಲ ಹೊಂದಿರುವುದರಿಂದ ಎದುರಿಸಲು ಸಾಧ್ಯವಾಗುತ್ತಿಲ್ಲ ಎಂದು ಆ ಮಹಿಳೆ ಜುಲೈ 13 ರಂದು ತನ್ನ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದರು.

ಆನಂತರ ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ಘಟಕ ಎನ್‌ಎಸ್‌ಯುಐ ಕಾರ್ಯಕರ್ತರು ಈ ಕುರಿತು ಪೊಲೀಸರಿಗೆ ದೂರು ಸಲ್ಲಿಸಿದ್ದ ಆರೋಪಿಯ ಮೇಲೆ ಕ್ರಮಕ್ಕೆ ಆಗ್ರಹಿಸಿದ್ದಾರೆ. ಅಲ್ಲದೇ ಟ್ವಿಟ್ಟರ್‌ನಲ್ಲಿ ಸಿಸಿಟಿವಿ ವಿಡಿಯೋಗಳನ್ನು ಪೋಸ್ಟ್ ಮಾಡುವ ಮೂಲಕ ShameOnABVP ಹ್ಯಾಸ್‌ಟ್ಯಾಗ್ ಟ್ರೆಂಡ್ ಮಾಡಿದ್ದಾರೆ.

abvp ಅಧ್ಯಕ್ಷ ಮಹಿಳೆಗೆ ಕಿರುಕುಳ ನೀಡಿದ್ದಾನೆ. ಈ ಕೊಳಕು ಕೆಲಸವನ್ನು ಮುಚ್ಚಿಹಾಕಲು ಇಡೀ ಬಿಜೆಪಿ ಯಂತ್ರಾಂಗ ಕೆಲಸ ಮಾಡುತ್ತಿದೆ. ಈ ಹಿಂದೆಯು ಅತ್ಯಾಚಾರ ಆರೋಪಿಗಳನ್ನು ಬಿಜೆಪಿ ಸಮರ್ಥಿಸಿಕೊಂಡಿದೆ. ಈ ಕೂಡಲೇ ಅವನನ್ನು ಅಧ್ಯಕ್ಷ ಹುದ್ದೆಯಿಂದ ಕಿತ್ತೊಗೆಯಬೇಕೆಂದು ಎನ್‌ಎಸ್‌ಯುಐ ಆಗ್ರಹಿಸಿದೆ.

ಮಹಿಳೆಯರ ಸುರಕ್ಷತೆಯ ಬಗ್ಗೆ ಕಾಳಜಿಯಿಲ್ಲದ ಬಿಜೆಪಿ ಸರ್ಕಾರ ಮಹಿಳೆಯರಿಗೆ ಕಿರುಕುಳ ಕೊಟ್ಟವರಿಗೆ ರಕ್ಷಣೆ ನೀಡುತ್ತದೆ. ಪಕ್ಷದಲ್ಲಿ ಮೇಲಿನಿಂದ ಕೆಳಗಿನವರೆಗೆ ಇರುವವರೆಲ್ಲಾ ಮಹಿಳಾ ವಿರೋಧಿಗಳೇ ಆಗಿದ್ದಾರೆ. ಬಿಜೆಪಿ ಆಳ್ವಿಕೆಯು ಮಹಿಳಾ ಸುರಕ್ಷತೆ ಎಂಬುದನ್ನು ಅಣಕ ಮಾಡುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಟ್ವಿಟ್ಟರ್‌ನಲ್ಲಿ ಈ ಕುರಿತು ಇದುವರೆಗೂ 80 ಸಾವಿರ ಟ್ವೀಟ್‌ಗಳು ದಾಖಲಾಗಿದ್ದು, ಮಾಧ್ಯಮಗಳು ಇದನ್ನು ವರದಿ ಮಾಡುವುದಿಲ್ಲ ಎಂದು ಕಿಡಿಕಾರಲಾಗಿದೆ.


ಇದನ್ನೂ ಓದಿ: ಒಳಗೆ ಜನರಿದ್ದರೂ ಮನೆ ಬಾಗಿಲುಗಳನ್ನೇ ಸೀಲ್‌ಡೌನ್ ಮಾಡಿದ ಬಿಬಿಎಂಪಿ: ಜನಾಕ್ರೋಶಕ್ಕೆ ಮಣಿದು ಕ್ಷಮೆ ಕೇಳಿದ ಆಯುಕ್ತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...