HomeಮುಖಪುಟABVP ರಾಷ್ಟ್ರೀಯ ಅಧ್ಯಕ್ಷನಿಂದ ಮಹಿಳೆಗೆ ನಿತ್ಯ ಕಿರುಕುಳ ಆರೋಪ: ShameOnABVP ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್

ABVP ರಾಷ್ಟ್ರೀಯ ಅಧ್ಯಕ್ಷನಿಂದ ಮಹಿಳೆಗೆ ನಿತ್ಯ ಕಿರುಕುಳ ಆರೋಪ: ShameOnABVP ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್

- Advertisement -
- Advertisement -

ABVP ರಾಷ್ಟ್ರೀಯ ಅಧ್ಯಕ್ಷ ಡಾ.ಎಸ್.ಸುಬ್ಬಯ್ಯ ಉತ್ತರಖಂಡದಲ್ಲಿ ತಮ್ಮ ನೆರೆಯ ಮಹಿಳೆಗೆ ನಿತ್ಯ ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪದಲ್ಲಿ ತೀವ್ರ ಟೀಕೆಗೆ ಗುರಿಯಾಗಿದ್ದು ಟ್ವಿಟ್ಟರ್‌ನಲ್ಲಿ ShameOnABVP ಟ್ರೆಂಡಿಂಗ್ ಆಗಿದೆ.

ಘಟನೆಯ ಹಿನ್ನೆಲೆ

ABVP ರಾಷ್ಟ್ರೀಯ ಅಧ್ಯಕ್ಷ ಡಾ.ಎಸ್.ಸುಬ್ಬಯ್ಯ ಚನ್ನೈನ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ನೆರೆಮನೆಯ ಮಹಿಳೆಯೊಂದಿಗೆ ಕಾರು ಪಾರ್ಕಿಂಗ್ ವಿಚಾರಕ್ಕೆ ಜಗಳ ಮಾಡಿದ್ದಾರೆ. ಆ ಮಹಿಳೆಗೆ ಸೇರಿದ ಪಾರ್ಕಿಂಗ್‌ ಅನ್ನು ಸುಬ್ಬಯ್ಯ ಬಾಡಿಗೆಗೆ ಪಡೆದಿದ್ದರು. ಆದರೆ ಸ್ವಲ್ಪ ದಿನಗಳ ನಂತರ ಅದನ್ನು ತನಗೆ ಬಿಟ್ಟುಕೊಡಬೇಕೆಂದು ಆಗ್ರಹಿಸಿದ್ದಾರೆ. ಆದರೆ ಆ ಮಹಿಳೆ ಅದಕ್ಕೆ ಒಪ್ಪಿಲ್ಲ. ಅಲ್ಲಿಂದ ಆರಂಭವಾದ ಜಗಳ ಈಗ ಸುಬ್ಬಯ್ಯ ನಿತ್ಯ ಆ ಮಹಿಳೆಯ ಮನೆ ಮುಂದೆ ಮೂತ್ರ ವಿಸರ್ಜನೆ ಮಾಡುವ ಮಟ್ಟಿಗೆ ಬೆಳೆದುನಿಂತಿದೆ ಎಂದು ಮಹಿಳೆ ಆರೋಪಿಸಿದ್ದಾರೆ.

ಬೇಡದ ವಸ್ತುಗಳನ್ನು ಆಕೆಯ ಮನೆ ಮುಂದೆ ಎಸೆಯುವುದು, ನಿತ್ಯ ಅವರ ಮನೆ ಮುಂದೆ ಮೂತ್ರ ವಿಸರ್ಜನೆ ಮಾಡುವ ವಿಡಿಯೋ ಸಿಸಿಟಿವಿ ಕ್ಯಾಮರದಲ್ಲಿ ದಾಖಲಾಗಿವೆ. ಆದರೆ ಆರೋಪಿ ABVP ರಾಷ್ಟ್ರೀಯ ಅಧ್ಯಕ್ಷನಾದ ಕಾರಣ ಮತ್ತು ರಾಜಕೀಲ ಬಲ ಹೊಂದಿರುವುದರಿಂದ ಎದುರಿಸಲು ಸಾಧ್ಯವಾಗುತ್ತಿಲ್ಲ ಎಂದು ಆ ಮಹಿಳೆ ಜುಲೈ 13 ರಂದು ತನ್ನ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದರು.

ಆನಂತರ ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ಘಟಕ ಎನ್‌ಎಸ್‌ಯುಐ ಕಾರ್ಯಕರ್ತರು ಈ ಕುರಿತು ಪೊಲೀಸರಿಗೆ ದೂರು ಸಲ್ಲಿಸಿದ್ದ ಆರೋಪಿಯ ಮೇಲೆ ಕ್ರಮಕ್ಕೆ ಆಗ್ರಹಿಸಿದ್ದಾರೆ. ಅಲ್ಲದೇ ಟ್ವಿಟ್ಟರ್‌ನಲ್ಲಿ ಸಿಸಿಟಿವಿ ವಿಡಿಯೋಗಳನ್ನು ಪೋಸ್ಟ್ ಮಾಡುವ ಮೂಲಕ ShameOnABVP ಹ್ಯಾಸ್‌ಟ್ಯಾಗ್ ಟ್ರೆಂಡ್ ಮಾಡಿದ್ದಾರೆ.

abvp ಅಧ್ಯಕ್ಷ ಮಹಿಳೆಗೆ ಕಿರುಕುಳ ನೀಡಿದ್ದಾನೆ. ಈ ಕೊಳಕು ಕೆಲಸವನ್ನು ಮುಚ್ಚಿಹಾಕಲು ಇಡೀ ಬಿಜೆಪಿ ಯಂತ್ರಾಂಗ ಕೆಲಸ ಮಾಡುತ್ತಿದೆ. ಈ ಹಿಂದೆಯು ಅತ್ಯಾಚಾರ ಆರೋಪಿಗಳನ್ನು ಬಿಜೆಪಿ ಸಮರ್ಥಿಸಿಕೊಂಡಿದೆ. ಈ ಕೂಡಲೇ ಅವನನ್ನು ಅಧ್ಯಕ್ಷ ಹುದ್ದೆಯಿಂದ ಕಿತ್ತೊಗೆಯಬೇಕೆಂದು ಎನ್‌ಎಸ್‌ಯುಐ ಆಗ್ರಹಿಸಿದೆ.

ಮಹಿಳೆಯರ ಸುರಕ್ಷತೆಯ ಬಗ್ಗೆ ಕಾಳಜಿಯಿಲ್ಲದ ಬಿಜೆಪಿ ಸರ್ಕಾರ ಮಹಿಳೆಯರಿಗೆ ಕಿರುಕುಳ ಕೊಟ್ಟವರಿಗೆ ರಕ್ಷಣೆ ನೀಡುತ್ತದೆ. ಪಕ್ಷದಲ್ಲಿ ಮೇಲಿನಿಂದ ಕೆಳಗಿನವರೆಗೆ ಇರುವವರೆಲ್ಲಾ ಮಹಿಳಾ ವಿರೋಧಿಗಳೇ ಆಗಿದ್ದಾರೆ. ಬಿಜೆಪಿ ಆಳ್ವಿಕೆಯು ಮಹಿಳಾ ಸುರಕ್ಷತೆ ಎಂಬುದನ್ನು ಅಣಕ ಮಾಡುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಟ್ವಿಟ್ಟರ್‌ನಲ್ಲಿ ಈ ಕುರಿತು ಇದುವರೆಗೂ 80 ಸಾವಿರ ಟ್ವೀಟ್‌ಗಳು ದಾಖಲಾಗಿದ್ದು, ಮಾಧ್ಯಮಗಳು ಇದನ್ನು ವರದಿ ಮಾಡುವುದಿಲ್ಲ ಎಂದು ಕಿಡಿಕಾರಲಾಗಿದೆ.


ಇದನ್ನೂ ಓದಿ: ಒಳಗೆ ಜನರಿದ್ದರೂ ಮನೆ ಬಾಗಿಲುಗಳನ್ನೇ ಸೀಲ್‌ಡೌನ್ ಮಾಡಿದ ಬಿಬಿಎಂಪಿ: ಜನಾಕ್ರೋಶಕ್ಕೆ ಮಣಿದು ಕ್ಷಮೆ ಕೇಳಿದ ಆಯುಕ್ತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...

‘ದಿ ಕೇರಳ ಸ್ಟೋರಿ-2’ ಚಲನಚಿತ್ರ ಜಾತ್ಯತೀತತೆಗೆ ಬೆದರಿಕೆ: ಮುಖ್ಯಮಂತ್ರಿ ಪಿಣರಾಯಿ ವಿಜಯನ್

'ದಿ ಕೇರಳ ಸ್ಟೋರಿ' ಚಿತ್ರದ ಎರಡನೇ ಭಾಗ ಬಿಡುಗಡೆಯಾಗುತ್ತಿರುವ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದು, ಇದರ ಮೊದಲ ಭಾಗವು "ರಾಜ್ಯದ ವಿರುದ್ಧ ದ್ವೇಷವನ್ನು ಹರಡುವ ಮತ್ತು ನಮ್ಮ ಜಾತ್ಯತೀತ...

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...