HomeಮುಖಪುಟABVP ರಾಷ್ಟ್ರೀಯ ಅಧ್ಯಕ್ಷನಿಂದ ಮಹಿಳೆಗೆ ನಿತ್ಯ ಕಿರುಕುಳ ಆರೋಪ: ShameOnABVP ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್

ABVP ರಾಷ್ಟ್ರೀಯ ಅಧ್ಯಕ್ಷನಿಂದ ಮಹಿಳೆಗೆ ನಿತ್ಯ ಕಿರುಕುಳ ಆರೋಪ: ShameOnABVP ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್

- Advertisement -
- Advertisement -

ABVP ರಾಷ್ಟ್ರೀಯ ಅಧ್ಯಕ್ಷ ಡಾ.ಎಸ್.ಸುಬ್ಬಯ್ಯ ಉತ್ತರಖಂಡದಲ್ಲಿ ತಮ್ಮ ನೆರೆಯ ಮಹಿಳೆಗೆ ನಿತ್ಯ ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪದಲ್ಲಿ ತೀವ್ರ ಟೀಕೆಗೆ ಗುರಿಯಾಗಿದ್ದು ಟ್ವಿಟ್ಟರ್‌ನಲ್ಲಿ ShameOnABVP ಟ್ರೆಂಡಿಂಗ್ ಆಗಿದೆ.

ಘಟನೆಯ ಹಿನ್ನೆಲೆ

ABVP ರಾಷ್ಟ್ರೀಯ ಅಧ್ಯಕ್ಷ ಡಾ.ಎಸ್.ಸುಬ್ಬಯ್ಯ ಚನ್ನೈನ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ನೆರೆಮನೆಯ ಮಹಿಳೆಯೊಂದಿಗೆ ಕಾರು ಪಾರ್ಕಿಂಗ್ ವಿಚಾರಕ್ಕೆ ಜಗಳ ಮಾಡಿದ್ದಾರೆ. ಆ ಮಹಿಳೆಗೆ ಸೇರಿದ ಪಾರ್ಕಿಂಗ್‌ ಅನ್ನು ಸುಬ್ಬಯ್ಯ ಬಾಡಿಗೆಗೆ ಪಡೆದಿದ್ದರು. ಆದರೆ ಸ್ವಲ್ಪ ದಿನಗಳ ನಂತರ ಅದನ್ನು ತನಗೆ ಬಿಟ್ಟುಕೊಡಬೇಕೆಂದು ಆಗ್ರಹಿಸಿದ್ದಾರೆ. ಆದರೆ ಆ ಮಹಿಳೆ ಅದಕ್ಕೆ ಒಪ್ಪಿಲ್ಲ. ಅಲ್ಲಿಂದ ಆರಂಭವಾದ ಜಗಳ ಈಗ ಸುಬ್ಬಯ್ಯ ನಿತ್ಯ ಆ ಮಹಿಳೆಯ ಮನೆ ಮುಂದೆ ಮೂತ್ರ ವಿಸರ್ಜನೆ ಮಾಡುವ ಮಟ್ಟಿಗೆ ಬೆಳೆದುನಿಂತಿದೆ ಎಂದು ಮಹಿಳೆ ಆರೋಪಿಸಿದ್ದಾರೆ.

ಬೇಡದ ವಸ್ತುಗಳನ್ನು ಆಕೆಯ ಮನೆ ಮುಂದೆ ಎಸೆಯುವುದು, ನಿತ್ಯ ಅವರ ಮನೆ ಮುಂದೆ ಮೂತ್ರ ವಿಸರ್ಜನೆ ಮಾಡುವ ವಿಡಿಯೋ ಸಿಸಿಟಿವಿ ಕ್ಯಾಮರದಲ್ಲಿ ದಾಖಲಾಗಿವೆ. ಆದರೆ ಆರೋಪಿ ABVP ರಾಷ್ಟ್ರೀಯ ಅಧ್ಯಕ್ಷನಾದ ಕಾರಣ ಮತ್ತು ರಾಜಕೀಲ ಬಲ ಹೊಂದಿರುವುದರಿಂದ ಎದುರಿಸಲು ಸಾಧ್ಯವಾಗುತ್ತಿಲ್ಲ ಎಂದು ಆ ಮಹಿಳೆ ಜುಲೈ 13 ರಂದು ತನ್ನ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದರು.

ಆನಂತರ ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ಘಟಕ ಎನ್‌ಎಸ್‌ಯುಐ ಕಾರ್ಯಕರ್ತರು ಈ ಕುರಿತು ಪೊಲೀಸರಿಗೆ ದೂರು ಸಲ್ಲಿಸಿದ್ದ ಆರೋಪಿಯ ಮೇಲೆ ಕ್ರಮಕ್ಕೆ ಆಗ್ರಹಿಸಿದ್ದಾರೆ. ಅಲ್ಲದೇ ಟ್ವಿಟ್ಟರ್‌ನಲ್ಲಿ ಸಿಸಿಟಿವಿ ವಿಡಿಯೋಗಳನ್ನು ಪೋಸ್ಟ್ ಮಾಡುವ ಮೂಲಕ ShameOnABVP ಹ್ಯಾಸ್‌ಟ್ಯಾಗ್ ಟ್ರೆಂಡ್ ಮಾಡಿದ್ದಾರೆ.

abvp ಅಧ್ಯಕ್ಷ ಮಹಿಳೆಗೆ ಕಿರುಕುಳ ನೀಡಿದ್ದಾನೆ. ಈ ಕೊಳಕು ಕೆಲಸವನ್ನು ಮುಚ್ಚಿಹಾಕಲು ಇಡೀ ಬಿಜೆಪಿ ಯಂತ್ರಾಂಗ ಕೆಲಸ ಮಾಡುತ್ತಿದೆ. ಈ ಹಿಂದೆಯು ಅತ್ಯಾಚಾರ ಆರೋಪಿಗಳನ್ನು ಬಿಜೆಪಿ ಸಮರ್ಥಿಸಿಕೊಂಡಿದೆ. ಈ ಕೂಡಲೇ ಅವನನ್ನು ಅಧ್ಯಕ್ಷ ಹುದ್ದೆಯಿಂದ ಕಿತ್ತೊಗೆಯಬೇಕೆಂದು ಎನ್‌ಎಸ್‌ಯುಐ ಆಗ್ರಹಿಸಿದೆ.

ಮಹಿಳೆಯರ ಸುರಕ್ಷತೆಯ ಬಗ್ಗೆ ಕಾಳಜಿಯಿಲ್ಲದ ಬಿಜೆಪಿ ಸರ್ಕಾರ ಮಹಿಳೆಯರಿಗೆ ಕಿರುಕುಳ ಕೊಟ್ಟವರಿಗೆ ರಕ್ಷಣೆ ನೀಡುತ್ತದೆ. ಪಕ್ಷದಲ್ಲಿ ಮೇಲಿನಿಂದ ಕೆಳಗಿನವರೆಗೆ ಇರುವವರೆಲ್ಲಾ ಮಹಿಳಾ ವಿರೋಧಿಗಳೇ ಆಗಿದ್ದಾರೆ. ಬಿಜೆಪಿ ಆಳ್ವಿಕೆಯು ಮಹಿಳಾ ಸುರಕ್ಷತೆ ಎಂಬುದನ್ನು ಅಣಕ ಮಾಡುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಟ್ವಿಟ್ಟರ್‌ನಲ್ಲಿ ಈ ಕುರಿತು ಇದುವರೆಗೂ 80 ಸಾವಿರ ಟ್ವೀಟ್‌ಗಳು ದಾಖಲಾಗಿದ್ದು, ಮಾಧ್ಯಮಗಳು ಇದನ್ನು ವರದಿ ಮಾಡುವುದಿಲ್ಲ ಎಂದು ಕಿಡಿಕಾರಲಾಗಿದೆ.


ಇದನ್ನೂ ಓದಿ: ಒಳಗೆ ಜನರಿದ್ದರೂ ಮನೆ ಬಾಗಿಲುಗಳನ್ನೇ ಸೀಲ್‌ಡೌನ್ ಮಾಡಿದ ಬಿಬಿಎಂಪಿ: ಜನಾಕ್ರೋಶಕ್ಕೆ ಮಣಿದು ಕ್ಷಮೆ ಕೇಳಿದ ಆಯುಕ್ತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...