HomeಮುಖಪುಟABVP ರಾಷ್ಟ್ರೀಯ ಅಧ್ಯಕ್ಷನಿಂದ ಮಹಿಳೆಗೆ ನಿತ್ಯ ಕಿರುಕುಳ ಆರೋಪ: ShameOnABVP ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್

ABVP ರಾಷ್ಟ್ರೀಯ ಅಧ್ಯಕ್ಷನಿಂದ ಮಹಿಳೆಗೆ ನಿತ್ಯ ಕಿರುಕುಳ ಆರೋಪ: ShameOnABVP ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್

- Advertisement -
- Advertisement -

ABVP ರಾಷ್ಟ್ರೀಯ ಅಧ್ಯಕ್ಷ ಡಾ.ಎಸ್.ಸುಬ್ಬಯ್ಯ ಉತ್ತರಖಂಡದಲ್ಲಿ ತಮ್ಮ ನೆರೆಯ ಮಹಿಳೆಗೆ ನಿತ್ಯ ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪದಲ್ಲಿ ತೀವ್ರ ಟೀಕೆಗೆ ಗುರಿಯಾಗಿದ್ದು ಟ್ವಿಟ್ಟರ್‌ನಲ್ಲಿ ShameOnABVP ಟ್ರೆಂಡಿಂಗ್ ಆಗಿದೆ.

ಘಟನೆಯ ಹಿನ್ನೆಲೆ

ABVP ರಾಷ್ಟ್ರೀಯ ಅಧ್ಯಕ್ಷ ಡಾ.ಎಸ್.ಸುಬ್ಬಯ್ಯ ಚನ್ನೈನ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ನೆರೆಮನೆಯ ಮಹಿಳೆಯೊಂದಿಗೆ ಕಾರು ಪಾರ್ಕಿಂಗ್ ವಿಚಾರಕ್ಕೆ ಜಗಳ ಮಾಡಿದ್ದಾರೆ. ಆ ಮಹಿಳೆಗೆ ಸೇರಿದ ಪಾರ್ಕಿಂಗ್‌ ಅನ್ನು ಸುಬ್ಬಯ್ಯ ಬಾಡಿಗೆಗೆ ಪಡೆದಿದ್ದರು. ಆದರೆ ಸ್ವಲ್ಪ ದಿನಗಳ ನಂತರ ಅದನ್ನು ತನಗೆ ಬಿಟ್ಟುಕೊಡಬೇಕೆಂದು ಆಗ್ರಹಿಸಿದ್ದಾರೆ. ಆದರೆ ಆ ಮಹಿಳೆ ಅದಕ್ಕೆ ಒಪ್ಪಿಲ್ಲ. ಅಲ್ಲಿಂದ ಆರಂಭವಾದ ಜಗಳ ಈಗ ಸುಬ್ಬಯ್ಯ ನಿತ್ಯ ಆ ಮಹಿಳೆಯ ಮನೆ ಮುಂದೆ ಮೂತ್ರ ವಿಸರ್ಜನೆ ಮಾಡುವ ಮಟ್ಟಿಗೆ ಬೆಳೆದುನಿಂತಿದೆ ಎಂದು ಮಹಿಳೆ ಆರೋಪಿಸಿದ್ದಾರೆ.

ಬೇಡದ ವಸ್ತುಗಳನ್ನು ಆಕೆಯ ಮನೆ ಮುಂದೆ ಎಸೆಯುವುದು, ನಿತ್ಯ ಅವರ ಮನೆ ಮುಂದೆ ಮೂತ್ರ ವಿಸರ್ಜನೆ ಮಾಡುವ ವಿಡಿಯೋ ಸಿಸಿಟಿವಿ ಕ್ಯಾಮರದಲ್ಲಿ ದಾಖಲಾಗಿವೆ. ಆದರೆ ಆರೋಪಿ ABVP ರಾಷ್ಟ್ರೀಯ ಅಧ್ಯಕ್ಷನಾದ ಕಾರಣ ಮತ್ತು ರಾಜಕೀಲ ಬಲ ಹೊಂದಿರುವುದರಿಂದ ಎದುರಿಸಲು ಸಾಧ್ಯವಾಗುತ್ತಿಲ್ಲ ಎಂದು ಆ ಮಹಿಳೆ ಜುಲೈ 13 ರಂದು ತನ್ನ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದರು.

ಆನಂತರ ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ಘಟಕ ಎನ್‌ಎಸ್‌ಯುಐ ಕಾರ್ಯಕರ್ತರು ಈ ಕುರಿತು ಪೊಲೀಸರಿಗೆ ದೂರು ಸಲ್ಲಿಸಿದ್ದ ಆರೋಪಿಯ ಮೇಲೆ ಕ್ರಮಕ್ಕೆ ಆಗ್ರಹಿಸಿದ್ದಾರೆ. ಅಲ್ಲದೇ ಟ್ವಿಟ್ಟರ್‌ನಲ್ಲಿ ಸಿಸಿಟಿವಿ ವಿಡಿಯೋಗಳನ್ನು ಪೋಸ್ಟ್ ಮಾಡುವ ಮೂಲಕ ShameOnABVP ಹ್ಯಾಸ್‌ಟ್ಯಾಗ್ ಟ್ರೆಂಡ್ ಮಾಡಿದ್ದಾರೆ.

abvp ಅಧ್ಯಕ್ಷ ಮಹಿಳೆಗೆ ಕಿರುಕುಳ ನೀಡಿದ್ದಾನೆ. ಈ ಕೊಳಕು ಕೆಲಸವನ್ನು ಮುಚ್ಚಿಹಾಕಲು ಇಡೀ ಬಿಜೆಪಿ ಯಂತ್ರಾಂಗ ಕೆಲಸ ಮಾಡುತ್ತಿದೆ. ಈ ಹಿಂದೆಯು ಅತ್ಯಾಚಾರ ಆರೋಪಿಗಳನ್ನು ಬಿಜೆಪಿ ಸಮರ್ಥಿಸಿಕೊಂಡಿದೆ. ಈ ಕೂಡಲೇ ಅವನನ್ನು ಅಧ್ಯಕ್ಷ ಹುದ್ದೆಯಿಂದ ಕಿತ್ತೊಗೆಯಬೇಕೆಂದು ಎನ್‌ಎಸ್‌ಯುಐ ಆಗ್ರಹಿಸಿದೆ.

ಮಹಿಳೆಯರ ಸುರಕ್ಷತೆಯ ಬಗ್ಗೆ ಕಾಳಜಿಯಿಲ್ಲದ ಬಿಜೆಪಿ ಸರ್ಕಾರ ಮಹಿಳೆಯರಿಗೆ ಕಿರುಕುಳ ಕೊಟ್ಟವರಿಗೆ ರಕ್ಷಣೆ ನೀಡುತ್ತದೆ. ಪಕ್ಷದಲ್ಲಿ ಮೇಲಿನಿಂದ ಕೆಳಗಿನವರೆಗೆ ಇರುವವರೆಲ್ಲಾ ಮಹಿಳಾ ವಿರೋಧಿಗಳೇ ಆಗಿದ್ದಾರೆ. ಬಿಜೆಪಿ ಆಳ್ವಿಕೆಯು ಮಹಿಳಾ ಸುರಕ್ಷತೆ ಎಂಬುದನ್ನು ಅಣಕ ಮಾಡುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಟ್ವಿಟ್ಟರ್‌ನಲ್ಲಿ ಈ ಕುರಿತು ಇದುವರೆಗೂ 80 ಸಾವಿರ ಟ್ವೀಟ್‌ಗಳು ದಾಖಲಾಗಿದ್ದು, ಮಾಧ್ಯಮಗಳು ಇದನ್ನು ವರದಿ ಮಾಡುವುದಿಲ್ಲ ಎಂದು ಕಿಡಿಕಾರಲಾಗಿದೆ.


ಇದನ್ನೂ ಓದಿ: ಒಳಗೆ ಜನರಿದ್ದರೂ ಮನೆ ಬಾಗಿಲುಗಳನ್ನೇ ಸೀಲ್‌ಡೌನ್ ಮಾಡಿದ ಬಿಬಿಎಂಪಿ: ಜನಾಕ್ರೋಶಕ್ಕೆ ಮಣಿದು ಕ್ಷಮೆ ಕೇಳಿದ ಆಯುಕ್ತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...