Homeಅಂತರಾಷ್ಟ್ರೀಯಸುಡಾನ್‌ನಲ್ಲಿ ಭಾರೀ ಭೂಕುಸಿತ: ಒಂದು ಹಳ್ಳಿಯೇ ಸಂಪೂರ್ಣ ನಾಶ, 1000ಕ್ಕೂ ಹೆಚ್ಚು ಜನರು ಸಾವು

ಸುಡಾನ್‌ನಲ್ಲಿ ಭಾರೀ ಭೂಕುಸಿತ: ಒಂದು ಹಳ್ಳಿಯೇ ಸಂಪೂರ್ಣ ನಾಶ, 1000ಕ್ಕೂ ಹೆಚ್ಚು ಜನರು ಸಾವು

- Advertisement -
- Advertisement -

ಸುಡಾನ್‌ನ ಪಶ್ಚಿಮ ಪ್ರದೇಶದ ಡಾರ್ಫರ್‌ನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಒಂದು ಹಳ್ಳಿ ಸಂಪೂರ್ಣ ನಾಶವಾಗಿದ್ದು, ಸುಮಾರು 1,000 ಜನರು ಸಾವನ್ನಪ್ಪಿದ್ದಾರೆ ಎಂದು ಆ ಪ್ರದೇಶವನ್ನು ನಿಯಂತ್ರಿಸುವ ಬಂಡಾಯ ಗುಂಪು ಸೋಮವಾರ (ಸೆ.1) ತಡರಾತ್ರಿ ಮಾಹಿತಿ ನೀಡಿದೆ.

ಆಗಸ್ಟ್ ಅಂತ್ಯದಲ್ಲಿ ಕೆಲವು ದಿನಗಳ ಕಾಲ ಸುರಿದ ಭಾರೀ ಮಳೆಯ ನಂತರ ಸೆಂಟ್ರಲ್ ಡಾರ್ಫರ್‌ನ ಮರ್ರಾ ಪರ್ವತಗಳಲ್ಲಿರುವ ತಾರಾಸಿನ್ ಗ್ರಾಮದಲ್ಲಿ ಭಾನುವಾರ ಈ ದುರಂತ ಸಂಭವಿಸಿದೆ ಎಂದು ಸುಡಾನ್ ಲಿಬರೇಶನ್ ಮೂವ್‌ಮೆಂಟ್-ಆರ್ಮಿ ಹೇಳಿಕೆಯಲ್ಲಿ ತಿಳಿಸಿದೆ.

ಆರಂಭಿಕ ಮಾಹಿತಿಯ ಪ್ರಕಾರ, ಎಲ್ಲಾ ಹಳ್ಳಿ ನಿವಾಸಿಗಳು ಸಾವನ್ನಪ್ಪಿದ್ದಾರೆ, ಅಂದಾಜು ಒಂದು ಸಾವಿರಕ್ಕೂ ಹೆಚ್ಚು ಜನರು ಜೀವ ಕಳೆದುಕೊಂಡಿದ್ದಾರೆ. ಒಬ್ಬ ವ್ಯಕ್ತಿ ಮಾತ್ರ ಬದುಕುಳಿದಿದ್ದಾರೆ” ಎಂದು ಹೇಳಿಕೆಯಲ್ಲಿ ವಿವರಿಸಲಾಗಿದೆ.

ಗ್ರಾಮವು ‘ಸಂಪೂರ್ಣವಾಗಿ ನೆಲಸಮವಾಗಿದೆ’ ಎಂದು ಗುಂಪು ಹೇಳಿದೆ, ಅವಶೇಗಳ ಅಡಿಯಿಂದ ಶವಗಳನ್ನು ಮೇಲೆತ್ತಲು ಸಹಾಯ ಮಾಡುವಂತೆ ವಿಶ್ವಸಂಸ್ಥೆ ಮತ್ತು ಅಂತಾರಾಷ್ಟ್ರೀಯ ನೆರವು ಗುಂಪುಗಳಿಗೆ ಮನವಿ ಮಾಡಿದೆ.

ಮರ್ರಾ ಪರ್ವತಗಳ ಸುದ್ದಿವಾಹಿನಿ ಹಂಚಿಕೊಂಡ ದೃಶ್ಯಗಳಲ್ಲಿ ಪರ್ವತ ಶ್ರೇಣಿಗಳ ನಡುವಿನ ಸಮತಟ್ಟಾದ ಪ್ರದೇಶವೊಂದು ಕಂಡುಬಂದಿದ್ದು, ಆ ಪ್ರದೇಶದಲ್ಲಿ ಜನರ ಗುಂಪೊಂದು ಹುಡುಕಾಟ ನಡೆಸುತ್ತಿರುವುದನ್ನು ನೋಡಬಹುದು.

ಏಪ್ರಿಲ್ 2023ರಲ್ಲಿ ರಾಜಧಾನಿ ಖಾರ್ಟೌಮ್ ಮತ್ತು ದೇಶದ ಇತರೆಡೆಗಳಲ್ಲಿ ದೇಶದ ಮಿಲಿಟರಿ ಮತ್ತು ಅರೆಸೈನಿಕ ಕ್ಷಿಪ್ರ ಬೆಂಬಲ ಪಡೆಗಳ (ಆರ್‌ಎಸ್‌ಎಫ್‌) ನಡುವಿನ ಉದ್ವಿಗ್ನತೆ ಬಹಿರಂಗ ಹೋರಾಟವಾಗಿ ಬದಲಾಗಿದೆ. ಇದರಿಂದ ಸುಡಾನ್ ಅನ್ನು ವಿನಾಶಕಾರಿ ಅಂತರ್ಯುದ್ಧ ಆವರಿಸಿದೆ. ಈ ನಡುವೆಯೇ ಈ ದುರಂತ ಸಂಭವಿಸಿದೆ.

ಸುಡಾನ್ ಸೇನೆ ಮತ್ತು ಆರ್‌ಎಸ್‌ಎಫ್ ನಡುವಿನ ಹೋರಾಟ ಮತ್ತು ಕಠಿಣ ನಿರ್ಬಂಧಗಳಿಂದಾಗಿ, ಮರ್ರಾ ಪರ್ವತಗಳು ಸೇರಿದಂತೆ ಡಾರ್ಫರ್ ಪ್ರದೇಶದ ಹೆಚ್ಚಿನ ಭಾಗಳಿಗೆ ವಿಶ್ವಸಂಸ್ಥೆ ಮತ್ತು ನೆರವು ಗುಂಪುಗಳಿಗೆ ಪ್ರವೇಶಿಸಲು ಅಸಾಧ್ಯವಾಗಿದೆ.

ಮರ್ರಾ ಪರ್ವತ ಪ್ರದೇಶದಲ್ಲಿ ಕೇಂದ್ರೀಕೃತವಾಗಿರುವ ಸುಡಾನ್ ಲಿಬರೇಶನ್ ಮೂವ್‌ಮೆಂಟ್-ಆರ್ಮಿ, ಡಾರ್ಫರ್ ಮತ್ತು ಕೊರ್ಡೊಫಾನ್ ಪ್ರದೇಶಗಳಲ್ಲಿ ಸಕ್ರಿಯವಾಗಿರುವ ಬಹು ಬಂಡಾಯ ಗುಂಪುಗಳಲ್ಲಿ ಒಂದಾಗಿದೆ.

ಮರ್ರಾ ಪರ್ವತಗಳು ಎಲ್-ಫಶರ್‌ನ ನೈಋತ್ಯಕ್ಕೆ 160 ಕಿಲೋಮೀಟರ್ (100 ಮೈಲುಗಳು) ವಿಸ್ತರಿಸಿರುವ ಒರಟಾದ ಜ್ವಾಲಾಮುಖಿ ಸರಪಳಿಯಾಗಿದ್ದು, ಇದು ಮಿಲಿಟರಿ ಮತ್ತು ಆರ್‌ಎಸ್‌ಎಫ್ ನಡುವಿನ ಹೋರಾಟದ ಕೇಂದ್ರಬಿಂದುವಾಗಿದೆ. ಈ ಪ್ರದೇಶವು ಎಲ್-ಫಶರ್ ಮತ್ತು ಸುತ್ತಮುತ್ತಲಿನ ಹೋರಾಟದಿಂದ ಪಲಾಯನ ಮಾಡುವ ಸ್ಥಳಾಂತರಗೊಂಡ ಕುಟುಂಬಗಳಿಗೆ ಕೇಂದ್ರವಾಗಿ ಮಾರ್ಪಟ್ಟಿದೆ.

ಮಿಲಿಟರಿ ಮತ್ತು ಆರ್‌ಎಸ್‌ಎಫ್ ನಡುವಿನ ಸಂಘರ್ಷವು 40,000ಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡಿದೆ, 14 ಮಿಲಿಯನ್‌ಗಿಂತಲೂ ಹೆಚ್ಚು ಜನರು ತಮ್ಮ ಮನೆಗಳನ್ನು ಬಿಟ್ಟು ಪಲಾಯನ ಮಾಡಿದ್ದಾರೆ. ದೇಶದ ಕೆಲವು ಭಾಗಗಳಲ್ಲಿ ಬರಗಾಲ ಆವರಿಸಿ ಜನರು ಜೀವ ಉಳಿಸಿಕೊಳ್ಳಲು ಹುಲ್ಲು ತಿನ್ನುವ ಪರಿಸ್ಥಿತಿ ನಿರ್ಮಿಸಿದೆ.

ವಿಶ್ವಸಂಸ್ಥೆ ಮತ್ತು ಮಾನವ ಹಕ್ಕುಗಳ ಗುಂಪುಗಳ ಪ್ರಕಾರ, ಜನಾಂಗೀಯ ಪ್ರೇರಿತ ಹತ್ಯೆ ಮತ್ತು ಅತ್ಯಾಚಾರ ಸೇರಿದಂತೆ ಘೋರ ದೌರ್ಜನ್ಯಗಳಿಂದ ಈ ಸಂಘರ್ಷ ಗುರುತಿಸಲ್ಪಟ್ಟಿದೆ. ಅಂತಾರಾಷ್ಟ್ರೀಯ ಅಪರಾಧ ನ್ಯಾಯಾಲಯವು ಆಪಾದಿತ ಯುದ್ಧ ಅಪರಾಧಗಳು ಮತ್ತು ಮಾನವೀಯತೆಯ ವಿರುದ್ಧದ ಅಪರಾಧಗಳ ತನಿಖೆ ನಡೆಸುತ್ತಿದೆ.

ತಾರಾಸಿನ್ ಗ್ರಾಮವು ಮಧ್ಯ ಮರ್ರಾ ಪರ್ವತಗಳಲ್ಲಿದೆ. ಇದು ಜ್ವಾಲಾಮುಖಿ ಪ್ರದೇಶವಾಗಿದ್ದು, ಅದರ ಶಿಖರ 3,000 ಮೀಟರ್‌ಗಳಿಗಿಂತ ಹೆಚ್ಚು ಎತ್ತರವಿದೆ. ವಿಶ್ವ ಪರಂಪರೆಯ ತಾಣವಾಗಿರುವ ಈ ಪರ್ವತ ಸರಪಳಿಯು ಸುತ್ತಮುತ್ತಲಿನ ಪ್ರದೇಶಗಳಿಗಿಂತ ಕಡಿಮೆ ತಾಪಮಾನ ಮತ್ತು ಹೆಚ್ಚಿನ ಮಳೆಗೆ ಹೆಸರುವಾಸಿಯಾಗಿದೆ. ಇದು ರಾಜಧಾನಿ ಖಾರ್ಟೌಮ್‌ನಿಂದ ಪಶ್ಚಿಮಕ್ಕೆ 900 ಕಿಲೋಮೀಟರ್‌ಗಳಿಗಿಂತ (560 ಮೈಲುಗಳು) ಹೆಚ್ಚು ದೂರದಲ್ಲಿದೆ.

ಭಾನುವಾರದ ಭೂಕುಸಿತವು ಸುಡಾನ್‌ನ ಇತ್ತೀಚಿನ ಇತಿಹಾಸದಲ್ಲಿ ಅತ್ಯಂತ ಮಾರಕ ನೈಸರ್ಗಿಕ ವಿಕೋಪಗಳಲ್ಲಿ ಒಂದಾಗಿದೆ. ಜುಲೈನಿಂದ ಅಕ್ಟೋಬರ್‌ವರೆಗೆ ಮಳೆಯಾಗುವುದರಿಂದ ಪ್ರತಿ ವರ್ಷ ನೂರಾರು ಜನರು ಇಲ್ಲಿ ಸಾಯುತ್ತಾರೆ.

ಪೂರ್ವ ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ: 800 ಮಂದಿ ಸಾವು, 2500 ಜನರಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...