Homeಅಂತರಾಷ್ಟ್ರೀಯಸುಡಾನ್‌ನಲ್ಲಿ ಭಾರೀ ಭೂಕುಸಿತ: ಒಂದು ಹಳ್ಳಿಯೇ ಸಂಪೂರ್ಣ ನಾಶ, 1000ಕ್ಕೂ ಹೆಚ್ಚು ಜನರು ಸಾವು

ಸುಡಾನ್‌ನಲ್ಲಿ ಭಾರೀ ಭೂಕುಸಿತ: ಒಂದು ಹಳ್ಳಿಯೇ ಸಂಪೂರ್ಣ ನಾಶ, 1000ಕ್ಕೂ ಹೆಚ್ಚು ಜನರು ಸಾವು

- Advertisement -
- Advertisement -

ಸುಡಾನ್‌ನ ಪಶ್ಚಿಮ ಪ್ರದೇಶದ ಡಾರ್ಫರ್‌ನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಒಂದು ಹಳ್ಳಿ ಸಂಪೂರ್ಣ ನಾಶವಾಗಿದ್ದು, ಸುಮಾರು 1,000 ಜನರು ಸಾವನ್ನಪ್ಪಿದ್ದಾರೆ ಎಂದು ಆ ಪ್ರದೇಶವನ್ನು ನಿಯಂತ್ರಿಸುವ ಬಂಡಾಯ ಗುಂಪು ಸೋಮವಾರ (ಸೆ.1) ತಡರಾತ್ರಿ ಮಾಹಿತಿ ನೀಡಿದೆ.

ಆಗಸ್ಟ್ ಅಂತ್ಯದಲ್ಲಿ ಕೆಲವು ದಿನಗಳ ಕಾಲ ಸುರಿದ ಭಾರೀ ಮಳೆಯ ನಂತರ ಸೆಂಟ್ರಲ್ ಡಾರ್ಫರ್‌ನ ಮರ್ರಾ ಪರ್ವತಗಳಲ್ಲಿರುವ ತಾರಾಸಿನ್ ಗ್ರಾಮದಲ್ಲಿ ಭಾನುವಾರ ಈ ದುರಂತ ಸಂಭವಿಸಿದೆ ಎಂದು ಸುಡಾನ್ ಲಿಬರೇಶನ್ ಮೂವ್‌ಮೆಂಟ್-ಆರ್ಮಿ ಹೇಳಿಕೆಯಲ್ಲಿ ತಿಳಿಸಿದೆ.

ಆರಂಭಿಕ ಮಾಹಿತಿಯ ಪ್ರಕಾರ, ಎಲ್ಲಾ ಹಳ್ಳಿ ನಿವಾಸಿಗಳು ಸಾವನ್ನಪ್ಪಿದ್ದಾರೆ, ಅಂದಾಜು ಒಂದು ಸಾವಿರಕ್ಕೂ ಹೆಚ್ಚು ಜನರು ಜೀವ ಕಳೆದುಕೊಂಡಿದ್ದಾರೆ. ಒಬ್ಬ ವ್ಯಕ್ತಿ ಮಾತ್ರ ಬದುಕುಳಿದಿದ್ದಾರೆ” ಎಂದು ಹೇಳಿಕೆಯಲ್ಲಿ ವಿವರಿಸಲಾಗಿದೆ.

ಗ್ರಾಮವು ‘ಸಂಪೂರ್ಣವಾಗಿ ನೆಲಸಮವಾಗಿದೆ’ ಎಂದು ಗುಂಪು ಹೇಳಿದೆ, ಅವಶೇಗಳ ಅಡಿಯಿಂದ ಶವಗಳನ್ನು ಮೇಲೆತ್ತಲು ಸಹಾಯ ಮಾಡುವಂತೆ ವಿಶ್ವಸಂಸ್ಥೆ ಮತ್ತು ಅಂತಾರಾಷ್ಟ್ರೀಯ ನೆರವು ಗುಂಪುಗಳಿಗೆ ಮನವಿ ಮಾಡಿದೆ.

ಮರ್ರಾ ಪರ್ವತಗಳ ಸುದ್ದಿವಾಹಿನಿ ಹಂಚಿಕೊಂಡ ದೃಶ್ಯಗಳಲ್ಲಿ ಪರ್ವತ ಶ್ರೇಣಿಗಳ ನಡುವಿನ ಸಮತಟ್ಟಾದ ಪ್ರದೇಶವೊಂದು ಕಂಡುಬಂದಿದ್ದು, ಆ ಪ್ರದೇಶದಲ್ಲಿ ಜನರ ಗುಂಪೊಂದು ಹುಡುಕಾಟ ನಡೆಸುತ್ತಿರುವುದನ್ನು ನೋಡಬಹುದು.

ಏಪ್ರಿಲ್ 2023ರಲ್ಲಿ ರಾಜಧಾನಿ ಖಾರ್ಟೌಮ್ ಮತ್ತು ದೇಶದ ಇತರೆಡೆಗಳಲ್ಲಿ ದೇಶದ ಮಿಲಿಟರಿ ಮತ್ತು ಅರೆಸೈನಿಕ ಕ್ಷಿಪ್ರ ಬೆಂಬಲ ಪಡೆಗಳ (ಆರ್‌ಎಸ್‌ಎಫ್‌) ನಡುವಿನ ಉದ್ವಿಗ್ನತೆ ಬಹಿರಂಗ ಹೋರಾಟವಾಗಿ ಬದಲಾಗಿದೆ. ಇದರಿಂದ ಸುಡಾನ್ ಅನ್ನು ವಿನಾಶಕಾರಿ ಅಂತರ್ಯುದ್ಧ ಆವರಿಸಿದೆ. ಈ ನಡುವೆಯೇ ಈ ದುರಂತ ಸಂಭವಿಸಿದೆ.

ಸುಡಾನ್ ಸೇನೆ ಮತ್ತು ಆರ್‌ಎಸ್‌ಎಫ್ ನಡುವಿನ ಹೋರಾಟ ಮತ್ತು ಕಠಿಣ ನಿರ್ಬಂಧಗಳಿಂದಾಗಿ, ಮರ್ರಾ ಪರ್ವತಗಳು ಸೇರಿದಂತೆ ಡಾರ್ಫರ್ ಪ್ರದೇಶದ ಹೆಚ್ಚಿನ ಭಾಗಳಿಗೆ ವಿಶ್ವಸಂಸ್ಥೆ ಮತ್ತು ನೆರವು ಗುಂಪುಗಳಿಗೆ ಪ್ರವೇಶಿಸಲು ಅಸಾಧ್ಯವಾಗಿದೆ.

ಮರ್ರಾ ಪರ್ವತ ಪ್ರದೇಶದಲ್ಲಿ ಕೇಂದ್ರೀಕೃತವಾಗಿರುವ ಸುಡಾನ್ ಲಿಬರೇಶನ್ ಮೂವ್‌ಮೆಂಟ್-ಆರ್ಮಿ, ಡಾರ್ಫರ್ ಮತ್ತು ಕೊರ್ಡೊಫಾನ್ ಪ್ರದೇಶಗಳಲ್ಲಿ ಸಕ್ರಿಯವಾಗಿರುವ ಬಹು ಬಂಡಾಯ ಗುಂಪುಗಳಲ್ಲಿ ಒಂದಾಗಿದೆ.

ಮರ್ರಾ ಪರ್ವತಗಳು ಎಲ್-ಫಶರ್‌ನ ನೈಋತ್ಯಕ್ಕೆ 160 ಕಿಲೋಮೀಟರ್ (100 ಮೈಲುಗಳು) ವಿಸ್ತರಿಸಿರುವ ಒರಟಾದ ಜ್ವಾಲಾಮುಖಿ ಸರಪಳಿಯಾಗಿದ್ದು, ಇದು ಮಿಲಿಟರಿ ಮತ್ತು ಆರ್‌ಎಸ್‌ಎಫ್ ನಡುವಿನ ಹೋರಾಟದ ಕೇಂದ್ರಬಿಂದುವಾಗಿದೆ. ಈ ಪ್ರದೇಶವು ಎಲ್-ಫಶರ್ ಮತ್ತು ಸುತ್ತಮುತ್ತಲಿನ ಹೋರಾಟದಿಂದ ಪಲಾಯನ ಮಾಡುವ ಸ್ಥಳಾಂತರಗೊಂಡ ಕುಟುಂಬಗಳಿಗೆ ಕೇಂದ್ರವಾಗಿ ಮಾರ್ಪಟ್ಟಿದೆ.

ಮಿಲಿಟರಿ ಮತ್ತು ಆರ್‌ಎಸ್‌ಎಫ್ ನಡುವಿನ ಸಂಘರ್ಷವು 40,000ಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡಿದೆ, 14 ಮಿಲಿಯನ್‌ಗಿಂತಲೂ ಹೆಚ್ಚು ಜನರು ತಮ್ಮ ಮನೆಗಳನ್ನು ಬಿಟ್ಟು ಪಲಾಯನ ಮಾಡಿದ್ದಾರೆ. ದೇಶದ ಕೆಲವು ಭಾಗಗಳಲ್ಲಿ ಬರಗಾಲ ಆವರಿಸಿ ಜನರು ಜೀವ ಉಳಿಸಿಕೊಳ್ಳಲು ಹುಲ್ಲು ತಿನ್ನುವ ಪರಿಸ್ಥಿತಿ ನಿರ್ಮಿಸಿದೆ.

ವಿಶ್ವಸಂಸ್ಥೆ ಮತ್ತು ಮಾನವ ಹಕ್ಕುಗಳ ಗುಂಪುಗಳ ಪ್ರಕಾರ, ಜನಾಂಗೀಯ ಪ್ರೇರಿತ ಹತ್ಯೆ ಮತ್ತು ಅತ್ಯಾಚಾರ ಸೇರಿದಂತೆ ಘೋರ ದೌರ್ಜನ್ಯಗಳಿಂದ ಈ ಸಂಘರ್ಷ ಗುರುತಿಸಲ್ಪಟ್ಟಿದೆ. ಅಂತಾರಾಷ್ಟ್ರೀಯ ಅಪರಾಧ ನ್ಯಾಯಾಲಯವು ಆಪಾದಿತ ಯುದ್ಧ ಅಪರಾಧಗಳು ಮತ್ತು ಮಾನವೀಯತೆಯ ವಿರುದ್ಧದ ಅಪರಾಧಗಳ ತನಿಖೆ ನಡೆಸುತ್ತಿದೆ.

ತಾರಾಸಿನ್ ಗ್ರಾಮವು ಮಧ್ಯ ಮರ್ರಾ ಪರ್ವತಗಳಲ್ಲಿದೆ. ಇದು ಜ್ವಾಲಾಮುಖಿ ಪ್ರದೇಶವಾಗಿದ್ದು, ಅದರ ಶಿಖರ 3,000 ಮೀಟರ್‌ಗಳಿಗಿಂತ ಹೆಚ್ಚು ಎತ್ತರವಿದೆ. ವಿಶ್ವ ಪರಂಪರೆಯ ತಾಣವಾಗಿರುವ ಈ ಪರ್ವತ ಸರಪಳಿಯು ಸುತ್ತಮುತ್ತಲಿನ ಪ್ರದೇಶಗಳಿಗಿಂತ ಕಡಿಮೆ ತಾಪಮಾನ ಮತ್ತು ಹೆಚ್ಚಿನ ಮಳೆಗೆ ಹೆಸರುವಾಸಿಯಾಗಿದೆ. ಇದು ರಾಜಧಾನಿ ಖಾರ್ಟೌಮ್‌ನಿಂದ ಪಶ್ಚಿಮಕ್ಕೆ 900 ಕಿಲೋಮೀಟರ್‌ಗಳಿಗಿಂತ (560 ಮೈಲುಗಳು) ಹೆಚ್ಚು ದೂರದಲ್ಲಿದೆ.

ಭಾನುವಾರದ ಭೂಕುಸಿತವು ಸುಡಾನ್‌ನ ಇತ್ತೀಚಿನ ಇತಿಹಾಸದಲ್ಲಿ ಅತ್ಯಂತ ಮಾರಕ ನೈಸರ್ಗಿಕ ವಿಕೋಪಗಳಲ್ಲಿ ಒಂದಾಗಿದೆ. ಜುಲೈನಿಂದ ಅಕ್ಟೋಬರ್‌ವರೆಗೆ ಮಳೆಯಾಗುವುದರಿಂದ ಪ್ರತಿ ವರ್ಷ ನೂರಾರು ಜನರು ಇಲ್ಲಿ ಸಾಯುತ್ತಾರೆ.

ಪೂರ್ವ ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ: 800 ಮಂದಿ ಸಾವು, 2500 ಜನರಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...