Homeಅಂತರಾಷ್ಟ್ರೀಯಸುಡಾನ್‌ನಲ್ಲಿ ಭಾರೀ ಭೂಕುಸಿತ: ಒಂದು ಹಳ್ಳಿಯೇ ಸಂಪೂರ್ಣ ನಾಶ, 1000ಕ್ಕೂ ಹೆಚ್ಚು ಜನರು ಸಾವು

ಸುಡಾನ್‌ನಲ್ಲಿ ಭಾರೀ ಭೂಕುಸಿತ: ಒಂದು ಹಳ್ಳಿಯೇ ಸಂಪೂರ್ಣ ನಾಶ, 1000ಕ್ಕೂ ಹೆಚ್ಚು ಜನರು ಸಾವು

- Advertisement -
- Advertisement -

ಸುಡಾನ್‌ನ ಪಶ್ಚಿಮ ಪ್ರದೇಶದ ಡಾರ್ಫರ್‌ನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಒಂದು ಹಳ್ಳಿ ಸಂಪೂರ್ಣ ನಾಶವಾಗಿದ್ದು, ಸುಮಾರು 1,000 ಜನರು ಸಾವನ್ನಪ್ಪಿದ್ದಾರೆ ಎಂದು ಆ ಪ್ರದೇಶವನ್ನು ನಿಯಂತ್ರಿಸುವ ಬಂಡಾಯ ಗುಂಪು ಸೋಮವಾರ (ಸೆ.1) ತಡರಾತ್ರಿ ಮಾಹಿತಿ ನೀಡಿದೆ.

ಆಗಸ್ಟ್ ಅಂತ್ಯದಲ್ಲಿ ಕೆಲವು ದಿನಗಳ ಕಾಲ ಸುರಿದ ಭಾರೀ ಮಳೆಯ ನಂತರ ಸೆಂಟ್ರಲ್ ಡಾರ್ಫರ್‌ನ ಮರ್ರಾ ಪರ್ವತಗಳಲ್ಲಿರುವ ತಾರಾಸಿನ್ ಗ್ರಾಮದಲ್ಲಿ ಭಾನುವಾರ ಈ ದುರಂತ ಸಂಭವಿಸಿದೆ ಎಂದು ಸುಡಾನ್ ಲಿಬರೇಶನ್ ಮೂವ್‌ಮೆಂಟ್-ಆರ್ಮಿ ಹೇಳಿಕೆಯಲ್ಲಿ ತಿಳಿಸಿದೆ.

ಆರಂಭಿಕ ಮಾಹಿತಿಯ ಪ್ರಕಾರ, ಎಲ್ಲಾ ಹಳ್ಳಿ ನಿವಾಸಿಗಳು ಸಾವನ್ನಪ್ಪಿದ್ದಾರೆ, ಅಂದಾಜು ಒಂದು ಸಾವಿರಕ್ಕೂ ಹೆಚ್ಚು ಜನರು ಜೀವ ಕಳೆದುಕೊಂಡಿದ್ದಾರೆ. ಒಬ್ಬ ವ್ಯಕ್ತಿ ಮಾತ್ರ ಬದುಕುಳಿದಿದ್ದಾರೆ” ಎಂದು ಹೇಳಿಕೆಯಲ್ಲಿ ವಿವರಿಸಲಾಗಿದೆ.

ಗ್ರಾಮವು ‘ಸಂಪೂರ್ಣವಾಗಿ ನೆಲಸಮವಾಗಿದೆ’ ಎಂದು ಗುಂಪು ಹೇಳಿದೆ, ಅವಶೇಗಳ ಅಡಿಯಿಂದ ಶವಗಳನ್ನು ಮೇಲೆತ್ತಲು ಸಹಾಯ ಮಾಡುವಂತೆ ವಿಶ್ವಸಂಸ್ಥೆ ಮತ್ತು ಅಂತಾರಾಷ್ಟ್ರೀಯ ನೆರವು ಗುಂಪುಗಳಿಗೆ ಮನವಿ ಮಾಡಿದೆ.

ಮರ್ರಾ ಪರ್ವತಗಳ ಸುದ್ದಿವಾಹಿನಿ ಹಂಚಿಕೊಂಡ ದೃಶ್ಯಗಳಲ್ಲಿ ಪರ್ವತ ಶ್ರೇಣಿಗಳ ನಡುವಿನ ಸಮತಟ್ಟಾದ ಪ್ರದೇಶವೊಂದು ಕಂಡುಬಂದಿದ್ದು, ಆ ಪ್ರದೇಶದಲ್ಲಿ ಜನರ ಗುಂಪೊಂದು ಹುಡುಕಾಟ ನಡೆಸುತ್ತಿರುವುದನ್ನು ನೋಡಬಹುದು.

ಏಪ್ರಿಲ್ 2023ರಲ್ಲಿ ರಾಜಧಾನಿ ಖಾರ್ಟೌಮ್ ಮತ್ತು ದೇಶದ ಇತರೆಡೆಗಳಲ್ಲಿ ದೇಶದ ಮಿಲಿಟರಿ ಮತ್ತು ಅರೆಸೈನಿಕ ಕ್ಷಿಪ್ರ ಬೆಂಬಲ ಪಡೆಗಳ (ಆರ್‌ಎಸ್‌ಎಫ್‌) ನಡುವಿನ ಉದ್ವಿಗ್ನತೆ ಬಹಿರಂಗ ಹೋರಾಟವಾಗಿ ಬದಲಾಗಿದೆ. ಇದರಿಂದ ಸುಡಾನ್ ಅನ್ನು ವಿನಾಶಕಾರಿ ಅಂತರ್ಯುದ್ಧ ಆವರಿಸಿದೆ. ಈ ನಡುವೆಯೇ ಈ ದುರಂತ ಸಂಭವಿಸಿದೆ.

ಸುಡಾನ್ ಸೇನೆ ಮತ್ತು ಆರ್‌ಎಸ್‌ಎಫ್ ನಡುವಿನ ಹೋರಾಟ ಮತ್ತು ಕಠಿಣ ನಿರ್ಬಂಧಗಳಿಂದಾಗಿ, ಮರ್ರಾ ಪರ್ವತಗಳು ಸೇರಿದಂತೆ ಡಾರ್ಫರ್ ಪ್ರದೇಶದ ಹೆಚ್ಚಿನ ಭಾಗಳಿಗೆ ವಿಶ್ವಸಂಸ್ಥೆ ಮತ್ತು ನೆರವು ಗುಂಪುಗಳಿಗೆ ಪ್ರವೇಶಿಸಲು ಅಸಾಧ್ಯವಾಗಿದೆ.

ಮರ್ರಾ ಪರ್ವತ ಪ್ರದೇಶದಲ್ಲಿ ಕೇಂದ್ರೀಕೃತವಾಗಿರುವ ಸುಡಾನ್ ಲಿಬರೇಶನ್ ಮೂವ್‌ಮೆಂಟ್-ಆರ್ಮಿ, ಡಾರ್ಫರ್ ಮತ್ತು ಕೊರ್ಡೊಫಾನ್ ಪ್ರದೇಶಗಳಲ್ಲಿ ಸಕ್ರಿಯವಾಗಿರುವ ಬಹು ಬಂಡಾಯ ಗುಂಪುಗಳಲ್ಲಿ ಒಂದಾಗಿದೆ.

ಮರ್ರಾ ಪರ್ವತಗಳು ಎಲ್-ಫಶರ್‌ನ ನೈಋತ್ಯಕ್ಕೆ 160 ಕಿಲೋಮೀಟರ್ (100 ಮೈಲುಗಳು) ವಿಸ್ತರಿಸಿರುವ ಒರಟಾದ ಜ್ವಾಲಾಮುಖಿ ಸರಪಳಿಯಾಗಿದ್ದು, ಇದು ಮಿಲಿಟರಿ ಮತ್ತು ಆರ್‌ಎಸ್‌ಎಫ್ ನಡುವಿನ ಹೋರಾಟದ ಕೇಂದ್ರಬಿಂದುವಾಗಿದೆ. ಈ ಪ್ರದೇಶವು ಎಲ್-ಫಶರ್ ಮತ್ತು ಸುತ್ತಮುತ್ತಲಿನ ಹೋರಾಟದಿಂದ ಪಲಾಯನ ಮಾಡುವ ಸ್ಥಳಾಂತರಗೊಂಡ ಕುಟುಂಬಗಳಿಗೆ ಕೇಂದ್ರವಾಗಿ ಮಾರ್ಪಟ್ಟಿದೆ.

ಮಿಲಿಟರಿ ಮತ್ತು ಆರ್‌ಎಸ್‌ಎಫ್ ನಡುವಿನ ಸಂಘರ್ಷವು 40,000ಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡಿದೆ, 14 ಮಿಲಿಯನ್‌ಗಿಂತಲೂ ಹೆಚ್ಚು ಜನರು ತಮ್ಮ ಮನೆಗಳನ್ನು ಬಿಟ್ಟು ಪಲಾಯನ ಮಾಡಿದ್ದಾರೆ. ದೇಶದ ಕೆಲವು ಭಾಗಗಳಲ್ಲಿ ಬರಗಾಲ ಆವರಿಸಿ ಜನರು ಜೀವ ಉಳಿಸಿಕೊಳ್ಳಲು ಹುಲ್ಲು ತಿನ್ನುವ ಪರಿಸ್ಥಿತಿ ನಿರ್ಮಿಸಿದೆ.

ವಿಶ್ವಸಂಸ್ಥೆ ಮತ್ತು ಮಾನವ ಹಕ್ಕುಗಳ ಗುಂಪುಗಳ ಪ್ರಕಾರ, ಜನಾಂಗೀಯ ಪ್ರೇರಿತ ಹತ್ಯೆ ಮತ್ತು ಅತ್ಯಾಚಾರ ಸೇರಿದಂತೆ ಘೋರ ದೌರ್ಜನ್ಯಗಳಿಂದ ಈ ಸಂಘರ್ಷ ಗುರುತಿಸಲ್ಪಟ್ಟಿದೆ. ಅಂತಾರಾಷ್ಟ್ರೀಯ ಅಪರಾಧ ನ್ಯಾಯಾಲಯವು ಆಪಾದಿತ ಯುದ್ಧ ಅಪರಾಧಗಳು ಮತ್ತು ಮಾನವೀಯತೆಯ ವಿರುದ್ಧದ ಅಪರಾಧಗಳ ತನಿಖೆ ನಡೆಸುತ್ತಿದೆ.

ತಾರಾಸಿನ್ ಗ್ರಾಮವು ಮಧ್ಯ ಮರ್ರಾ ಪರ್ವತಗಳಲ್ಲಿದೆ. ಇದು ಜ್ವಾಲಾಮುಖಿ ಪ್ರದೇಶವಾಗಿದ್ದು, ಅದರ ಶಿಖರ 3,000 ಮೀಟರ್‌ಗಳಿಗಿಂತ ಹೆಚ್ಚು ಎತ್ತರವಿದೆ. ವಿಶ್ವ ಪರಂಪರೆಯ ತಾಣವಾಗಿರುವ ಈ ಪರ್ವತ ಸರಪಳಿಯು ಸುತ್ತಮುತ್ತಲಿನ ಪ್ರದೇಶಗಳಿಗಿಂತ ಕಡಿಮೆ ತಾಪಮಾನ ಮತ್ತು ಹೆಚ್ಚಿನ ಮಳೆಗೆ ಹೆಸರುವಾಸಿಯಾಗಿದೆ. ಇದು ರಾಜಧಾನಿ ಖಾರ್ಟೌಮ್‌ನಿಂದ ಪಶ್ಚಿಮಕ್ಕೆ 900 ಕಿಲೋಮೀಟರ್‌ಗಳಿಗಿಂತ (560 ಮೈಲುಗಳು) ಹೆಚ್ಚು ದೂರದಲ್ಲಿದೆ.

ಭಾನುವಾರದ ಭೂಕುಸಿತವು ಸುಡಾನ್‌ನ ಇತ್ತೀಚಿನ ಇತಿಹಾಸದಲ್ಲಿ ಅತ್ಯಂತ ಮಾರಕ ನೈಸರ್ಗಿಕ ವಿಕೋಪಗಳಲ್ಲಿ ಒಂದಾಗಿದೆ. ಜುಲೈನಿಂದ ಅಕ್ಟೋಬರ್‌ವರೆಗೆ ಮಳೆಯಾಗುವುದರಿಂದ ಪ್ರತಿ ವರ್ಷ ನೂರಾರು ಜನರು ಇಲ್ಲಿ ಸಾಯುತ್ತಾರೆ.

ಪೂರ್ವ ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ: 800 ಮಂದಿ ಸಾವು, 2500 ಜನರಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...