Homeಅಂತರಾಷ್ಟ್ರೀಯಸುಡಾನ್‌ನಲ್ಲಿ ಭಾರೀ ಭೂಕುಸಿತ: ಒಂದು ಹಳ್ಳಿಯೇ ಸಂಪೂರ್ಣ ನಾಶ, 1000ಕ್ಕೂ ಹೆಚ್ಚು ಜನರು ಸಾವು

ಸುಡಾನ್‌ನಲ್ಲಿ ಭಾರೀ ಭೂಕುಸಿತ: ಒಂದು ಹಳ್ಳಿಯೇ ಸಂಪೂರ್ಣ ನಾಶ, 1000ಕ್ಕೂ ಹೆಚ್ಚು ಜನರು ಸಾವು

- Advertisement -
- Advertisement -

ಸುಡಾನ್‌ನ ಪಶ್ಚಿಮ ಪ್ರದೇಶದ ಡಾರ್ಫರ್‌ನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಒಂದು ಹಳ್ಳಿ ಸಂಪೂರ್ಣ ನಾಶವಾಗಿದ್ದು, ಸುಮಾರು 1,000 ಜನರು ಸಾವನ್ನಪ್ಪಿದ್ದಾರೆ ಎಂದು ಆ ಪ್ರದೇಶವನ್ನು ನಿಯಂತ್ರಿಸುವ ಬಂಡಾಯ ಗುಂಪು ಸೋಮವಾರ (ಸೆ.1) ತಡರಾತ್ರಿ ಮಾಹಿತಿ ನೀಡಿದೆ.

ಆಗಸ್ಟ್ ಅಂತ್ಯದಲ್ಲಿ ಕೆಲವು ದಿನಗಳ ಕಾಲ ಸುರಿದ ಭಾರೀ ಮಳೆಯ ನಂತರ ಸೆಂಟ್ರಲ್ ಡಾರ್ಫರ್‌ನ ಮರ್ರಾ ಪರ್ವತಗಳಲ್ಲಿರುವ ತಾರಾಸಿನ್ ಗ್ರಾಮದಲ್ಲಿ ಭಾನುವಾರ ಈ ದುರಂತ ಸಂಭವಿಸಿದೆ ಎಂದು ಸುಡಾನ್ ಲಿಬರೇಶನ್ ಮೂವ್‌ಮೆಂಟ್-ಆರ್ಮಿ ಹೇಳಿಕೆಯಲ್ಲಿ ತಿಳಿಸಿದೆ.

ಆರಂಭಿಕ ಮಾಹಿತಿಯ ಪ್ರಕಾರ, ಎಲ್ಲಾ ಹಳ್ಳಿ ನಿವಾಸಿಗಳು ಸಾವನ್ನಪ್ಪಿದ್ದಾರೆ, ಅಂದಾಜು ಒಂದು ಸಾವಿರಕ್ಕೂ ಹೆಚ್ಚು ಜನರು ಜೀವ ಕಳೆದುಕೊಂಡಿದ್ದಾರೆ. ಒಬ್ಬ ವ್ಯಕ್ತಿ ಮಾತ್ರ ಬದುಕುಳಿದಿದ್ದಾರೆ” ಎಂದು ಹೇಳಿಕೆಯಲ್ಲಿ ವಿವರಿಸಲಾಗಿದೆ.

ಗ್ರಾಮವು ‘ಸಂಪೂರ್ಣವಾಗಿ ನೆಲಸಮವಾಗಿದೆ’ ಎಂದು ಗುಂಪು ಹೇಳಿದೆ, ಅವಶೇಗಳ ಅಡಿಯಿಂದ ಶವಗಳನ್ನು ಮೇಲೆತ್ತಲು ಸಹಾಯ ಮಾಡುವಂತೆ ವಿಶ್ವಸಂಸ್ಥೆ ಮತ್ತು ಅಂತಾರಾಷ್ಟ್ರೀಯ ನೆರವು ಗುಂಪುಗಳಿಗೆ ಮನವಿ ಮಾಡಿದೆ.

ಮರ್ರಾ ಪರ್ವತಗಳ ಸುದ್ದಿವಾಹಿನಿ ಹಂಚಿಕೊಂಡ ದೃಶ್ಯಗಳಲ್ಲಿ ಪರ್ವತ ಶ್ರೇಣಿಗಳ ನಡುವಿನ ಸಮತಟ್ಟಾದ ಪ್ರದೇಶವೊಂದು ಕಂಡುಬಂದಿದ್ದು, ಆ ಪ್ರದೇಶದಲ್ಲಿ ಜನರ ಗುಂಪೊಂದು ಹುಡುಕಾಟ ನಡೆಸುತ್ತಿರುವುದನ್ನು ನೋಡಬಹುದು.

ಏಪ್ರಿಲ್ 2023ರಲ್ಲಿ ರಾಜಧಾನಿ ಖಾರ್ಟೌಮ್ ಮತ್ತು ದೇಶದ ಇತರೆಡೆಗಳಲ್ಲಿ ದೇಶದ ಮಿಲಿಟರಿ ಮತ್ತು ಅರೆಸೈನಿಕ ಕ್ಷಿಪ್ರ ಬೆಂಬಲ ಪಡೆಗಳ (ಆರ್‌ಎಸ್‌ಎಫ್‌) ನಡುವಿನ ಉದ್ವಿಗ್ನತೆ ಬಹಿರಂಗ ಹೋರಾಟವಾಗಿ ಬದಲಾಗಿದೆ. ಇದರಿಂದ ಸುಡಾನ್ ಅನ್ನು ವಿನಾಶಕಾರಿ ಅಂತರ್ಯುದ್ಧ ಆವರಿಸಿದೆ. ಈ ನಡುವೆಯೇ ಈ ದುರಂತ ಸಂಭವಿಸಿದೆ.

ಸುಡಾನ್ ಸೇನೆ ಮತ್ತು ಆರ್‌ಎಸ್‌ಎಫ್ ನಡುವಿನ ಹೋರಾಟ ಮತ್ತು ಕಠಿಣ ನಿರ್ಬಂಧಗಳಿಂದಾಗಿ, ಮರ್ರಾ ಪರ್ವತಗಳು ಸೇರಿದಂತೆ ಡಾರ್ಫರ್ ಪ್ರದೇಶದ ಹೆಚ್ಚಿನ ಭಾಗಳಿಗೆ ವಿಶ್ವಸಂಸ್ಥೆ ಮತ್ತು ನೆರವು ಗುಂಪುಗಳಿಗೆ ಪ್ರವೇಶಿಸಲು ಅಸಾಧ್ಯವಾಗಿದೆ.

ಮರ್ರಾ ಪರ್ವತ ಪ್ರದೇಶದಲ್ಲಿ ಕೇಂದ್ರೀಕೃತವಾಗಿರುವ ಸುಡಾನ್ ಲಿಬರೇಶನ್ ಮೂವ್‌ಮೆಂಟ್-ಆರ್ಮಿ, ಡಾರ್ಫರ್ ಮತ್ತು ಕೊರ್ಡೊಫಾನ್ ಪ್ರದೇಶಗಳಲ್ಲಿ ಸಕ್ರಿಯವಾಗಿರುವ ಬಹು ಬಂಡಾಯ ಗುಂಪುಗಳಲ್ಲಿ ಒಂದಾಗಿದೆ.

ಮರ್ರಾ ಪರ್ವತಗಳು ಎಲ್-ಫಶರ್‌ನ ನೈಋತ್ಯಕ್ಕೆ 160 ಕಿಲೋಮೀಟರ್ (100 ಮೈಲುಗಳು) ವಿಸ್ತರಿಸಿರುವ ಒರಟಾದ ಜ್ವಾಲಾಮುಖಿ ಸರಪಳಿಯಾಗಿದ್ದು, ಇದು ಮಿಲಿಟರಿ ಮತ್ತು ಆರ್‌ಎಸ್‌ಎಫ್ ನಡುವಿನ ಹೋರಾಟದ ಕೇಂದ್ರಬಿಂದುವಾಗಿದೆ. ಈ ಪ್ರದೇಶವು ಎಲ್-ಫಶರ್ ಮತ್ತು ಸುತ್ತಮುತ್ತಲಿನ ಹೋರಾಟದಿಂದ ಪಲಾಯನ ಮಾಡುವ ಸ್ಥಳಾಂತರಗೊಂಡ ಕುಟುಂಬಗಳಿಗೆ ಕೇಂದ್ರವಾಗಿ ಮಾರ್ಪಟ್ಟಿದೆ.

ಮಿಲಿಟರಿ ಮತ್ತು ಆರ್‌ಎಸ್‌ಎಫ್ ನಡುವಿನ ಸಂಘರ್ಷವು 40,000ಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡಿದೆ, 14 ಮಿಲಿಯನ್‌ಗಿಂತಲೂ ಹೆಚ್ಚು ಜನರು ತಮ್ಮ ಮನೆಗಳನ್ನು ಬಿಟ್ಟು ಪಲಾಯನ ಮಾಡಿದ್ದಾರೆ. ದೇಶದ ಕೆಲವು ಭಾಗಗಳಲ್ಲಿ ಬರಗಾಲ ಆವರಿಸಿ ಜನರು ಜೀವ ಉಳಿಸಿಕೊಳ್ಳಲು ಹುಲ್ಲು ತಿನ್ನುವ ಪರಿಸ್ಥಿತಿ ನಿರ್ಮಿಸಿದೆ.

ವಿಶ್ವಸಂಸ್ಥೆ ಮತ್ತು ಮಾನವ ಹಕ್ಕುಗಳ ಗುಂಪುಗಳ ಪ್ರಕಾರ, ಜನಾಂಗೀಯ ಪ್ರೇರಿತ ಹತ್ಯೆ ಮತ್ತು ಅತ್ಯಾಚಾರ ಸೇರಿದಂತೆ ಘೋರ ದೌರ್ಜನ್ಯಗಳಿಂದ ಈ ಸಂಘರ್ಷ ಗುರುತಿಸಲ್ಪಟ್ಟಿದೆ. ಅಂತಾರಾಷ್ಟ್ರೀಯ ಅಪರಾಧ ನ್ಯಾಯಾಲಯವು ಆಪಾದಿತ ಯುದ್ಧ ಅಪರಾಧಗಳು ಮತ್ತು ಮಾನವೀಯತೆಯ ವಿರುದ್ಧದ ಅಪರಾಧಗಳ ತನಿಖೆ ನಡೆಸುತ್ತಿದೆ.

ತಾರಾಸಿನ್ ಗ್ರಾಮವು ಮಧ್ಯ ಮರ್ರಾ ಪರ್ವತಗಳಲ್ಲಿದೆ. ಇದು ಜ್ವಾಲಾಮುಖಿ ಪ್ರದೇಶವಾಗಿದ್ದು, ಅದರ ಶಿಖರ 3,000 ಮೀಟರ್‌ಗಳಿಗಿಂತ ಹೆಚ್ಚು ಎತ್ತರವಿದೆ. ವಿಶ್ವ ಪರಂಪರೆಯ ತಾಣವಾಗಿರುವ ಈ ಪರ್ವತ ಸರಪಳಿಯು ಸುತ್ತಮುತ್ತಲಿನ ಪ್ರದೇಶಗಳಿಗಿಂತ ಕಡಿಮೆ ತಾಪಮಾನ ಮತ್ತು ಹೆಚ್ಚಿನ ಮಳೆಗೆ ಹೆಸರುವಾಸಿಯಾಗಿದೆ. ಇದು ರಾಜಧಾನಿ ಖಾರ್ಟೌಮ್‌ನಿಂದ ಪಶ್ಚಿಮಕ್ಕೆ 900 ಕಿಲೋಮೀಟರ್‌ಗಳಿಗಿಂತ (560 ಮೈಲುಗಳು) ಹೆಚ್ಚು ದೂರದಲ್ಲಿದೆ.

ಭಾನುವಾರದ ಭೂಕುಸಿತವು ಸುಡಾನ್‌ನ ಇತ್ತೀಚಿನ ಇತಿಹಾಸದಲ್ಲಿ ಅತ್ಯಂತ ಮಾರಕ ನೈಸರ್ಗಿಕ ವಿಕೋಪಗಳಲ್ಲಿ ಒಂದಾಗಿದೆ. ಜುಲೈನಿಂದ ಅಕ್ಟೋಬರ್‌ವರೆಗೆ ಮಳೆಯಾಗುವುದರಿಂದ ಪ್ರತಿ ವರ್ಷ ನೂರಾರು ಜನರು ಇಲ್ಲಿ ಸಾಯುತ್ತಾರೆ.

ಪೂರ್ವ ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ: 800 ಮಂದಿ ಸಾವು, 2500 ಜನರಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...