Homeಅಂತರಾಷ್ಟ್ರೀಯಸುಡಾನ್‌ನಲ್ಲಿ ಭಾರೀ ಭೂಕುಸಿತ: ಒಂದು ಹಳ್ಳಿಯೇ ಸಂಪೂರ್ಣ ನಾಶ, 1000ಕ್ಕೂ ಹೆಚ್ಚು ಜನರು ಸಾವು

ಸುಡಾನ್‌ನಲ್ಲಿ ಭಾರೀ ಭೂಕುಸಿತ: ಒಂದು ಹಳ್ಳಿಯೇ ಸಂಪೂರ್ಣ ನಾಶ, 1000ಕ್ಕೂ ಹೆಚ್ಚು ಜನರು ಸಾವು

- Advertisement -
- Advertisement -

ಸುಡಾನ್‌ನ ಪಶ್ಚಿಮ ಪ್ರದೇಶದ ಡಾರ್ಫರ್‌ನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಒಂದು ಹಳ್ಳಿ ಸಂಪೂರ್ಣ ನಾಶವಾಗಿದ್ದು, ಸುಮಾರು 1,000 ಜನರು ಸಾವನ್ನಪ್ಪಿದ್ದಾರೆ ಎಂದು ಆ ಪ್ರದೇಶವನ್ನು ನಿಯಂತ್ರಿಸುವ ಬಂಡಾಯ ಗುಂಪು ಸೋಮವಾರ (ಸೆ.1) ತಡರಾತ್ರಿ ಮಾಹಿತಿ ನೀಡಿದೆ.

ಆಗಸ್ಟ್ ಅಂತ್ಯದಲ್ಲಿ ಕೆಲವು ದಿನಗಳ ಕಾಲ ಸುರಿದ ಭಾರೀ ಮಳೆಯ ನಂತರ ಸೆಂಟ್ರಲ್ ಡಾರ್ಫರ್‌ನ ಮರ್ರಾ ಪರ್ವತಗಳಲ್ಲಿರುವ ತಾರಾಸಿನ್ ಗ್ರಾಮದಲ್ಲಿ ಭಾನುವಾರ ಈ ದುರಂತ ಸಂಭವಿಸಿದೆ ಎಂದು ಸುಡಾನ್ ಲಿಬರೇಶನ್ ಮೂವ್‌ಮೆಂಟ್-ಆರ್ಮಿ ಹೇಳಿಕೆಯಲ್ಲಿ ತಿಳಿಸಿದೆ.

ಆರಂಭಿಕ ಮಾಹಿತಿಯ ಪ್ರಕಾರ, ಎಲ್ಲಾ ಹಳ್ಳಿ ನಿವಾಸಿಗಳು ಸಾವನ್ನಪ್ಪಿದ್ದಾರೆ, ಅಂದಾಜು ಒಂದು ಸಾವಿರಕ್ಕೂ ಹೆಚ್ಚು ಜನರು ಜೀವ ಕಳೆದುಕೊಂಡಿದ್ದಾರೆ. ಒಬ್ಬ ವ್ಯಕ್ತಿ ಮಾತ್ರ ಬದುಕುಳಿದಿದ್ದಾರೆ” ಎಂದು ಹೇಳಿಕೆಯಲ್ಲಿ ವಿವರಿಸಲಾಗಿದೆ.

ಗ್ರಾಮವು ‘ಸಂಪೂರ್ಣವಾಗಿ ನೆಲಸಮವಾಗಿದೆ’ ಎಂದು ಗುಂಪು ಹೇಳಿದೆ, ಅವಶೇಗಳ ಅಡಿಯಿಂದ ಶವಗಳನ್ನು ಮೇಲೆತ್ತಲು ಸಹಾಯ ಮಾಡುವಂತೆ ವಿಶ್ವಸಂಸ್ಥೆ ಮತ್ತು ಅಂತಾರಾಷ್ಟ್ರೀಯ ನೆರವು ಗುಂಪುಗಳಿಗೆ ಮನವಿ ಮಾಡಿದೆ.

ಮರ್ರಾ ಪರ್ವತಗಳ ಸುದ್ದಿವಾಹಿನಿ ಹಂಚಿಕೊಂಡ ದೃಶ್ಯಗಳಲ್ಲಿ ಪರ್ವತ ಶ್ರೇಣಿಗಳ ನಡುವಿನ ಸಮತಟ್ಟಾದ ಪ್ರದೇಶವೊಂದು ಕಂಡುಬಂದಿದ್ದು, ಆ ಪ್ರದೇಶದಲ್ಲಿ ಜನರ ಗುಂಪೊಂದು ಹುಡುಕಾಟ ನಡೆಸುತ್ತಿರುವುದನ್ನು ನೋಡಬಹುದು.

ಏಪ್ರಿಲ್ 2023ರಲ್ಲಿ ರಾಜಧಾನಿ ಖಾರ್ಟೌಮ್ ಮತ್ತು ದೇಶದ ಇತರೆಡೆಗಳಲ್ಲಿ ದೇಶದ ಮಿಲಿಟರಿ ಮತ್ತು ಅರೆಸೈನಿಕ ಕ್ಷಿಪ್ರ ಬೆಂಬಲ ಪಡೆಗಳ (ಆರ್‌ಎಸ್‌ಎಫ್‌) ನಡುವಿನ ಉದ್ವಿಗ್ನತೆ ಬಹಿರಂಗ ಹೋರಾಟವಾಗಿ ಬದಲಾಗಿದೆ. ಇದರಿಂದ ಸುಡಾನ್ ಅನ್ನು ವಿನಾಶಕಾರಿ ಅಂತರ್ಯುದ್ಧ ಆವರಿಸಿದೆ. ಈ ನಡುವೆಯೇ ಈ ದುರಂತ ಸಂಭವಿಸಿದೆ.

ಸುಡಾನ್ ಸೇನೆ ಮತ್ತು ಆರ್‌ಎಸ್‌ಎಫ್ ನಡುವಿನ ಹೋರಾಟ ಮತ್ತು ಕಠಿಣ ನಿರ್ಬಂಧಗಳಿಂದಾಗಿ, ಮರ್ರಾ ಪರ್ವತಗಳು ಸೇರಿದಂತೆ ಡಾರ್ಫರ್ ಪ್ರದೇಶದ ಹೆಚ್ಚಿನ ಭಾಗಳಿಗೆ ವಿಶ್ವಸಂಸ್ಥೆ ಮತ್ತು ನೆರವು ಗುಂಪುಗಳಿಗೆ ಪ್ರವೇಶಿಸಲು ಅಸಾಧ್ಯವಾಗಿದೆ.

ಮರ್ರಾ ಪರ್ವತ ಪ್ರದೇಶದಲ್ಲಿ ಕೇಂದ್ರೀಕೃತವಾಗಿರುವ ಸುಡಾನ್ ಲಿಬರೇಶನ್ ಮೂವ್‌ಮೆಂಟ್-ಆರ್ಮಿ, ಡಾರ್ಫರ್ ಮತ್ತು ಕೊರ್ಡೊಫಾನ್ ಪ್ರದೇಶಗಳಲ್ಲಿ ಸಕ್ರಿಯವಾಗಿರುವ ಬಹು ಬಂಡಾಯ ಗುಂಪುಗಳಲ್ಲಿ ಒಂದಾಗಿದೆ.

ಮರ್ರಾ ಪರ್ವತಗಳು ಎಲ್-ಫಶರ್‌ನ ನೈಋತ್ಯಕ್ಕೆ 160 ಕಿಲೋಮೀಟರ್ (100 ಮೈಲುಗಳು) ವಿಸ್ತರಿಸಿರುವ ಒರಟಾದ ಜ್ವಾಲಾಮುಖಿ ಸರಪಳಿಯಾಗಿದ್ದು, ಇದು ಮಿಲಿಟರಿ ಮತ್ತು ಆರ್‌ಎಸ್‌ಎಫ್ ನಡುವಿನ ಹೋರಾಟದ ಕೇಂದ್ರಬಿಂದುವಾಗಿದೆ. ಈ ಪ್ರದೇಶವು ಎಲ್-ಫಶರ್ ಮತ್ತು ಸುತ್ತಮುತ್ತಲಿನ ಹೋರಾಟದಿಂದ ಪಲಾಯನ ಮಾಡುವ ಸ್ಥಳಾಂತರಗೊಂಡ ಕುಟುಂಬಗಳಿಗೆ ಕೇಂದ್ರವಾಗಿ ಮಾರ್ಪಟ್ಟಿದೆ.

ಮಿಲಿಟರಿ ಮತ್ತು ಆರ್‌ಎಸ್‌ಎಫ್ ನಡುವಿನ ಸಂಘರ್ಷವು 40,000ಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡಿದೆ, 14 ಮಿಲಿಯನ್‌ಗಿಂತಲೂ ಹೆಚ್ಚು ಜನರು ತಮ್ಮ ಮನೆಗಳನ್ನು ಬಿಟ್ಟು ಪಲಾಯನ ಮಾಡಿದ್ದಾರೆ. ದೇಶದ ಕೆಲವು ಭಾಗಗಳಲ್ಲಿ ಬರಗಾಲ ಆವರಿಸಿ ಜನರು ಜೀವ ಉಳಿಸಿಕೊಳ್ಳಲು ಹುಲ್ಲು ತಿನ್ನುವ ಪರಿಸ್ಥಿತಿ ನಿರ್ಮಿಸಿದೆ.

ವಿಶ್ವಸಂಸ್ಥೆ ಮತ್ತು ಮಾನವ ಹಕ್ಕುಗಳ ಗುಂಪುಗಳ ಪ್ರಕಾರ, ಜನಾಂಗೀಯ ಪ್ರೇರಿತ ಹತ್ಯೆ ಮತ್ತು ಅತ್ಯಾಚಾರ ಸೇರಿದಂತೆ ಘೋರ ದೌರ್ಜನ್ಯಗಳಿಂದ ಈ ಸಂಘರ್ಷ ಗುರುತಿಸಲ್ಪಟ್ಟಿದೆ. ಅಂತಾರಾಷ್ಟ್ರೀಯ ಅಪರಾಧ ನ್ಯಾಯಾಲಯವು ಆಪಾದಿತ ಯುದ್ಧ ಅಪರಾಧಗಳು ಮತ್ತು ಮಾನವೀಯತೆಯ ವಿರುದ್ಧದ ಅಪರಾಧಗಳ ತನಿಖೆ ನಡೆಸುತ್ತಿದೆ.

ತಾರಾಸಿನ್ ಗ್ರಾಮವು ಮಧ್ಯ ಮರ್ರಾ ಪರ್ವತಗಳಲ್ಲಿದೆ. ಇದು ಜ್ವಾಲಾಮುಖಿ ಪ್ರದೇಶವಾಗಿದ್ದು, ಅದರ ಶಿಖರ 3,000 ಮೀಟರ್‌ಗಳಿಗಿಂತ ಹೆಚ್ಚು ಎತ್ತರವಿದೆ. ವಿಶ್ವ ಪರಂಪರೆಯ ತಾಣವಾಗಿರುವ ಈ ಪರ್ವತ ಸರಪಳಿಯು ಸುತ್ತಮುತ್ತಲಿನ ಪ್ರದೇಶಗಳಿಗಿಂತ ಕಡಿಮೆ ತಾಪಮಾನ ಮತ್ತು ಹೆಚ್ಚಿನ ಮಳೆಗೆ ಹೆಸರುವಾಸಿಯಾಗಿದೆ. ಇದು ರಾಜಧಾನಿ ಖಾರ್ಟೌಮ್‌ನಿಂದ ಪಶ್ಚಿಮಕ್ಕೆ 900 ಕಿಲೋಮೀಟರ್‌ಗಳಿಗಿಂತ (560 ಮೈಲುಗಳು) ಹೆಚ್ಚು ದೂರದಲ್ಲಿದೆ.

ಭಾನುವಾರದ ಭೂಕುಸಿತವು ಸುಡಾನ್‌ನ ಇತ್ತೀಚಿನ ಇತಿಹಾಸದಲ್ಲಿ ಅತ್ಯಂತ ಮಾರಕ ನೈಸರ್ಗಿಕ ವಿಕೋಪಗಳಲ್ಲಿ ಒಂದಾಗಿದೆ. ಜುಲೈನಿಂದ ಅಕ್ಟೋಬರ್‌ವರೆಗೆ ಮಳೆಯಾಗುವುದರಿಂದ ಪ್ರತಿ ವರ್ಷ ನೂರಾರು ಜನರು ಇಲ್ಲಿ ಸಾಯುತ್ತಾರೆ.

ಪೂರ್ವ ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ: 800 ಮಂದಿ ಸಾವು, 2500 ಜನರಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...