Homeಅಂತರಾಷ್ಟ್ರೀಯಸುಡಾನ್‌ನಲ್ಲಿ ಭಾರೀ ಭೂಕುಸಿತ: ಒಂದು ಹಳ್ಳಿಯೇ ಸಂಪೂರ್ಣ ನಾಶ, 1000ಕ್ಕೂ ಹೆಚ್ಚು ಜನರು ಸಾವು

ಸುಡಾನ್‌ನಲ್ಲಿ ಭಾರೀ ಭೂಕುಸಿತ: ಒಂದು ಹಳ್ಳಿಯೇ ಸಂಪೂರ್ಣ ನಾಶ, 1000ಕ್ಕೂ ಹೆಚ್ಚು ಜನರು ಸಾವು

- Advertisement -
- Advertisement -

ಸುಡಾನ್‌ನ ಪಶ್ಚಿಮ ಪ್ರದೇಶದ ಡಾರ್ಫರ್‌ನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಒಂದು ಹಳ್ಳಿ ಸಂಪೂರ್ಣ ನಾಶವಾಗಿದ್ದು, ಸುಮಾರು 1,000 ಜನರು ಸಾವನ್ನಪ್ಪಿದ್ದಾರೆ ಎಂದು ಆ ಪ್ರದೇಶವನ್ನು ನಿಯಂತ್ರಿಸುವ ಬಂಡಾಯ ಗುಂಪು ಸೋಮವಾರ (ಸೆ.1) ತಡರಾತ್ರಿ ಮಾಹಿತಿ ನೀಡಿದೆ.

ಆಗಸ್ಟ್ ಅಂತ್ಯದಲ್ಲಿ ಕೆಲವು ದಿನಗಳ ಕಾಲ ಸುರಿದ ಭಾರೀ ಮಳೆಯ ನಂತರ ಸೆಂಟ್ರಲ್ ಡಾರ್ಫರ್‌ನ ಮರ್ರಾ ಪರ್ವತಗಳಲ್ಲಿರುವ ತಾರಾಸಿನ್ ಗ್ರಾಮದಲ್ಲಿ ಭಾನುವಾರ ಈ ದುರಂತ ಸಂಭವಿಸಿದೆ ಎಂದು ಸುಡಾನ್ ಲಿಬರೇಶನ್ ಮೂವ್‌ಮೆಂಟ್-ಆರ್ಮಿ ಹೇಳಿಕೆಯಲ್ಲಿ ತಿಳಿಸಿದೆ.

ಆರಂಭಿಕ ಮಾಹಿತಿಯ ಪ್ರಕಾರ, ಎಲ್ಲಾ ಹಳ್ಳಿ ನಿವಾಸಿಗಳು ಸಾವನ್ನಪ್ಪಿದ್ದಾರೆ, ಅಂದಾಜು ಒಂದು ಸಾವಿರಕ್ಕೂ ಹೆಚ್ಚು ಜನರು ಜೀವ ಕಳೆದುಕೊಂಡಿದ್ದಾರೆ. ಒಬ್ಬ ವ್ಯಕ್ತಿ ಮಾತ್ರ ಬದುಕುಳಿದಿದ್ದಾರೆ” ಎಂದು ಹೇಳಿಕೆಯಲ್ಲಿ ವಿವರಿಸಲಾಗಿದೆ.

ಗ್ರಾಮವು ‘ಸಂಪೂರ್ಣವಾಗಿ ನೆಲಸಮವಾಗಿದೆ’ ಎಂದು ಗುಂಪು ಹೇಳಿದೆ, ಅವಶೇಗಳ ಅಡಿಯಿಂದ ಶವಗಳನ್ನು ಮೇಲೆತ್ತಲು ಸಹಾಯ ಮಾಡುವಂತೆ ವಿಶ್ವಸಂಸ್ಥೆ ಮತ್ತು ಅಂತಾರಾಷ್ಟ್ರೀಯ ನೆರವು ಗುಂಪುಗಳಿಗೆ ಮನವಿ ಮಾಡಿದೆ.

ಮರ್ರಾ ಪರ್ವತಗಳ ಸುದ್ದಿವಾಹಿನಿ ಹಂಚಿಕೊಂಡ ದೃಶ್ಯಗಳಲ್ಲಿ ಪರ್ವತ ಶ್ರೇಣಿಗಳ ನಡುವಿನ ಸಮತಟ್ಟಾದ ಪ್ರದೇಶವೊಂದು ಕಂಡುಬಂದಿದ್ದು, ಆ ಪ್ರದೇಶದಲ್ಲಿ ಜನರ ಗುಂಪೊಂದು ಹುಡುಕಾಟ ನಡೆಸುತ್ತಿರುವುದನ್ನು ನೋಡಬಹುದು.

ಏಪ್ರಿಲ್ 2023ರಲ್ಲಿ ರಾಜಧಾನಿ ಖಾರ್ಟೌಮ್ ಮತ್ತು ದೇಶದ ಇತರೆಡೆಗಳಲ್ಲಿ ದೇಶದ ಮಿಲಿಟರಿ ಮತ್ತು ಅರೆಸೈನಿಕ ಕ್ಷಿಪ್ರ ಬೆಂಬಲ ಪಡೆಗಳ (ಆರ್‌ಎಸ್‌ಎಫ್‌) ನಡುವಿನ ಉದ್ವಿಗ್ನತೆ ಬಹಿರಂಗ ಹೋರಾಟವಾಗಿ ಬದಲಾಗಿದೆ. ಇದರಿಂದ ಸುಡಾನ್ ಅನ್ನು ವಿನಾಶಕಾರಿ ಅಂತರ್ಯುದ್ಧ ಆವರಿಸಿದೆ. ಈ ನಡುವೆಯೇ ಈ ದುರಂತ ಸಂಭವಿಸಿದೆ.

ಸುಡಾನ್ ಸೇನೆ ಮತ್ತು ಆರ್‌ಎಸ್‌ಎಫ್ ನಡುವಿನ ಹೋರಾಟ ಮತ್ತು ಕಠಿಣ ನಿರ್ಬಂಧಗಳಿಂದಾಗಿ, ಮರ್ರಾ ಪರ್ವತಗಳು ಸೇರಿದಂತೆ ಡಾರ್ಫರ್ ಪ್ರದೇಶದ ಹೆಚ್ಚಿನ ಭಾಗಳಿಗೆ ವಿಶ್ವಸಂಸ್ಥೆ ಮತ್ತು ನೆರವು ಗುಂಪುಗಳಿಗೆ ಪ್ರವೇಶಿಸಲು ಅಸಾಧ್ಯವಾಗಿದೆ.

ಮರ್ರಾ ಪರ್ವತ ಪ್ರದೇಶದಲ್ಲಿ ಕೇಂದ್ರೀಕೃತವಾಗಿರುವ ಸುಡಾನ್ ಲಿಬರೇಶನ್ ಮೂವ್‌ಮೆಂಟ್-ಆರ್ಮಿ, ಡಾರ್ಫರ್ ಮತ್ತು ಕೊರ್ಡೊಫಾನ್ ಪ್ರದೇಶಗಳಲ್ಲಿ ಸಕ್ರಿಯವಾಗಿರುವ ಬಹು ಬಂಡಾಯ ಗುಂಪುಗಳಲ್ಲಿ ಒಂದಾಗಿದೆ.

ಮರ್ರಾ ಪರ್ವತಗಳು ಎಲ್-ಫಶರ್‌ನ ನೈಋತ್ಯಕ್ಕೆ 160 ಕಿಲೋಮೀಟರ್ (100 ಮೈಲುಗಳು) ವಿಸ್ತರಿಸಿರುವ ಒರಟಾದ ಜ್ವಾಲಾಮುಖಿ ಸರಪಳಿಯಾಗಿದ್ದು, ಇದು ಮಿಲಿಟರಿ ಮತ್ತು ಆರ್‌ಎಸ್‌ಎಫ್ ನಡುವಿನ ಹೋರಾಟದ ಕೇಂದ್ರಬಿಂದುವಾಗಿದೆ. ಈ ಪ್ರದೇಶವು ಎಲ್-ಫಶರ್ ಮತ್ತು ಸುತ್ತಮುತ್ತಲಿನ ಹೋರಾಟದಿಂದ ಪಲಾಯನ ಮಾಡುವ ಸ್ಥಳಾಂತರಗೊಂಡ ಕುಟುಂಬಗಳಿಗೆ ಕೇಂದ್ರವಾಗಿ ಮಾರ್ಪಟ್ಟಿದೆ.

ಮಿಲಿಟರಿ ಮತ್ತು ಆರ್‌ಎಸ್‌ಎಫ್ ನಡುವಿನ ಸಂಘರ್ಷವು 40,000ಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡಿದೆ, 14 ಮಿಲಿಯನ್‌ಗಿಂತಲೂ ಹೆಚ್ಚು ಜನರು ತಮ್ಮ ಮನೆಗಳನ್ನು ಬಿಟ್ಟು ಪಲಾಯನ ಮಾಡಿದ್ದಾರೆ. ದೇಶದ ಕೆಲವು ಭಾಗಗಳಲ್ಲಿ ಬರಗಾಲ ಆವರಿಸಿ ಜನರು ಜೀವ ಉಳಿಸಿಕೊಳ್ಳಲು ಹುಲ್ಲು ತಿನ್ನುವ ಪರಿಸ್ಥಿತಿ ನಿರ್ಮಿಸಿದೆ.

ವಿಶ್ವಸಂಸ್ಥೆ ಮತ್ತು ಮಾನವ ಹಕ್ಕುಗಳ ಗುಂಪುಗಳ ಪ್ರಕಾರ, ಜನಾಂಗೀಯ ಪ್ರೇರಿತ ಹತ್ಯೆ ಮತ್ತು ಅತ್ಯಾಚಾರ ಸೇರಿದಂತೆ ಘೋರ ದೌರ್ಜನ್ಯಗಳಿಂದ ಈ ಸಂಘರ್ಷ ಗುರುತಿಸಲ್ಪಟ್ಟಿದೆ. ಅಂತಾರಾಷ್ಟ್ರೀಯ ಅಪರಾಧ ನ್ಯಾಯಾಲಯವು ಆಪಾದಿತ ಯುದ್ಧ ಅಪರಾಧಗಳು ಮತ್ತು ಮಾನವೀಯತೆಯ ವಿರುದ್ಧದ ಅಪರಾಧಗಳ ತನಿಖೆ ನಡೆಸುತ್ತಿದೆ.

ತಾರಾಸಿನ್ ಗ್ರಾಮವು ಮಧ್ಯ ಮರ್ರಾ ಪರ್ವತಗಳಲ್ಲಿದೆ. ಇದು ಜ್ವಾಲಾಮುಖಿ ಪ್ರದೇಶವಾಗಿದ್ದು, ಅದರ ಶಿಖರ 3,000 ಮೀಟರ್‌ಗಳಿಗಿಂತ ಹೆಚ್ಚು ಎತ್ತರವಿದೆ. ವಿಶ್ವ ಪರಂಪರೆಯ ತಾಣವಾಗಿರುವ ಈ ಪರ್ವತ ಸರಪಳಿಯು ಸುತ್ತಮುತ್ತಲಿನ ಪ್ರದೇಶಗಳಿಗಿಂತ ಕಡಿಮೆ ತಾಪಮಾನ ಮತ್ತು ಹೆಚ್ಚಿನ ಮಳೆಗೆ ಹೆಸರುವಾಸಿಯಾಗಿದೆ. ಇದು ರಾಜಧಾನಿ ಖಾರ್ಟೌಮ್‌ನಿಂದ ಪಶ್ಚಿಮಕ್ಕೆ 900 ಕಿಲೋಮೀಟರ್‌ಗಳಿಗಿಂತ (560 ಮೈಲುಗಳು) ಹೆಚ್ಚು ದೂರದಲ್ಲಿದೆ.

ಭಾನುವಾರದ ಭೂಕುಸಿತವು ಸುಡಾನ್‌ನ ಇತ್ತೀಚಿನ ಇತಿಹಾಸದಲ್ಲಿ ಅತ್ಯಂತ ಮಾರಕ ನೈಸರ್ಗಿಕ ವಿಕೋಪಗಳಲ್ಲಿ ಒಂದಾಗಿದೆ. ಜುಲೈನಿಂದ ಅಕ್ಟೋಬರ್‌ವರೆಗೆ ಮಳೆಯಾಗುವುದರಿಂದ ಪ್ರತಿ ವರ್ಷ ನೂರಾರು ಜನರು ಇಲ್ಲಿ ಸಾಯುತ್ತಾರೆ.

ಪೂರ್ವ ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ: 800 ಮಂದಿ ಸಾವು, 2500 ಜನರಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...