Homeಕರ್ನಾಟಕಈ ದುರಿತ ಕಾಲದಲ್ಲಿ ನೆಟ್ಟಿಗರಿಗೊಂದು ಸಿಟ್ಟಿನ ಪತ್ರ

ಈ ದುರಿತ ಕಾಲದಲ್ಲಿ ನೆಟ್ಟಿಗರಿಗೊಂದು ಸಿಟ್ಟಿನ ಪತ್ರ

2009ರ ಚುನಾವಣೆಯಲ್ಲಿ ಕರ್ನಾಟಕದ ಮತದಾರರಲ್ಲಿ 41.6% ಜನ ಬಿಜೆಪಿಗೆ ಮತ ಹಾಕಿದರೆ, 2014 ರಲ್ಲಿ 43% ಮತದಾರರು ಬಿಜೆಪಿಗೆ ತಮ್ಮ ಮತ ನೀಡಿದರು. 2019ರಲ್ಲಿ ಬಿಜೆಪಿಯ ಮತದಾರರ ಪ್ರಮಾಣ 52%. ನಾವು, ನೆಟ್ಟಿಗರೂ, ಈ ಹೆಚ್ಚಳಕ್ಕೆ ಕಾರಣರಾಗಿದ್ದೇವೆಯೇ?

- Advertisement -
- Advertisement -

ಪ್ರಿಯ ನೆಟ್ಟಿಗರೆ,
ಕರ್ನಾಟಕದಲ್ಲಿ ಮೈತ್ರಿ ಸರಕಾರ ಸಂಕಷ್ಟದಲ್ಲಿದೆ. ಹಲವಾರು ಶಾಸಕರು ರಾಜೀನಾಮೆ ನೀಡಿದ್ದಾರೆ. ಕುದುರೆ ವ್ಯಾಪಾರ ನಡೆಯುತ್ತಿದೆ ಎನ್ನುವ ಸುದ್ದಿಗಳು ಪ್ರಚಲಿತವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಎಲ್ಲಿ ನೋಡಿದರೂ ಇದರ ಬಗ್ಗೆಯೇ ಬರಹಗಳನ್ನು ಬರೆಯುತ್ತಿದ್ದೀರಿ. ಸದ್ಯದ ಸ್ಥಿತಿಯನ್ನು ವಿವರಿಸಲು ಇಷ್ಟು ಮಟ್ಟದ ಹಾಸ್ಯದ ವ್ಯಂಗ್ಯದ ಬಳಕೆಗೆ ಒಂದು ರೀತಿಯ ಪೈಪೋಟಿಯೇ ನಡೆಸಿದ್ದಂತಿದೆ.

ಈ ರೀತಿಯಲ್ಲಿ ಗೇಲಿ ಮಾಡಲು ನಮಗೆ ಸಂಪೂರ್ಣ ಅಧಿಕಾರವಿದೆ. ಎಲ್ಲಾ ರಾಜಕೀಯ ಹಿತಾಸಕ್ತಿಗಳಿಗೂ ಸಾಮಾಜಿಕ ಜಾಲತಾಣಗಳಲ್ಲಿ ಅವರ ಗೇಲಿಯಾಗುತ್ತಿದೆ ಎನ್ನುವ ಅರಿವಿದೆ. ಆದರೂ ಅವರೇನೂ ಮಾಡುವುದಿಲ್ಲ. ನಮಗೆ ಸಾಂವಿಧಾನಿಕವಾಗಿ ಸಿಕ್ಕ ಹಕ್ಕಿನ ಕಾರಣದಿಂದ, ಅವರೇನೂ ಮಾಡಲಾಗದೇ ನಿಷ್ಕ್ರಿಯರಾಗಿದ್ದಾರೆಂದು ನಾವೆಂದುಕೊಳ್ಳುತ್ತೇವೆ. ಆದರೆ ವಾಸ್ತವ ಅದಲ್ಲ. ಯಾವ ರಾಜಕೀಯ ಶಕ್ತಿಯೂ ನೇರವಾಗಿ ಯಾವ ಕ್ರಮಗಳನ್ನೂ ತೆಗೆದುಕೊಳ್ಳಲೇ ಇರುವುದಕ್ಕೆ ಕಾರಣವೆಂದರೆ ಈ ಬರಹಗಳು ಅವರಿಗೆ ಯಾವುದೇ ರೀತಿಯ ಅಪಾಯವನ್ನು ಒಡ್ಡುವುದಿಲ್ಲ. ಅಪಾಯ ಒಡ್ಡಿದಾಗ ಏನಾಗಬಹುದು ಎನ್ನುವುದನ್ನು ಈಗೀಗ ಕಾಣುತ್ತಿದ್ದೇವೆ.

ಸಾಮಾಜಿಕ ಜಾಲತಾಣಗಳಲ್ಲಿ ಬರೆಯುವುದರಿಂದ ನಮಗೆಲ್ಲ ಒಂದು ರೀತಿಯ ಸೆನ್ಸ್ ಆಫ್ ಪಾವರ್ ಸಿಗುತ್ತೆ; ನಾವು ಇತರರಿಗಿಂತ ಉತ್ತಮರು ಎನ್ನುವ ಮೇಲರಿಮೆಯ ಭಾವನೆಯನ್ನೂ ನೀಡುತ್ತದೆ. ಈ ಮೇಲರಿಮೆ ನಮ್ಮ ಮುಂದೆ ಇರುವ ಸವಾಲುಗಳನ್ನು ಸರಿಯಾದ ರೀತಿಯಲ್ಲಿ ಎದುರಿಸದೇ ಇರುವುದಕ್ಕೆ ಕಾರಣವಾಗಬಲ್ಲದು.

ಆದರೆ ಪ್ರಸಕ್ತ ಬೆಳವಣಿಗೆಗಳಿಂದ ನಮಗಾರಿಗೂ ಆಘಾತವಾದಂತೆ ತೋರುತ್ತಿಲ್ಲ. ಆಘಾತವಾಗುವಂತಹ ಸಂದರ್ಭಗಳೇ ನಮಗಿಲ್ಲವೇನೋ? ನಮ್ಮಲ್ಲಿ ಕೆಲವರು ಈ ಬೆಳವಣಿಗೆಗೆ ಸಿಟ್ಟನ್ನು ತೋರಿಸುತ್ತಿದ್ದಾರೆ. ಈ ಸಿಟ್ಟನ್ನು ನಮ್ಮ ಫೇಸ್‍ಬುಕ್‍ನ ಜಾಣ್ಮೆಯ ಬರಹಗಳಿಂದ ಮಾತ್ರ ತಣಿಸಬೇಕೆ? ಅಪಾಯವಿರುವುದು ಇಲ್ಲಿಯೇ ಗೆಳೆಯರೆ, ನಮ್ಮ ಸಿಟ್ಟು ತಣಿದುಬಿಡುತ್ತೆ ಕೆಲಮಟ್ಟಿಗೆ. ಸಿಟ್ಟು ತಣಿಯದಂತೆ ಉಳಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ. ಇನ್ನೂ ಒಂದು ವಾದವಿದೆ. ಆ ಸಿಟ್ಟು ಯಾವ ಕಾರಣಕ್ಕೆ? ಇವರನ್ನು ಆಯ್ಕೆ ಮಾಡಿದಾಗ ಇವರು ಎಂಥವರು ಎನ್ನುವುದು ನಮಗೆಲ್ಲರಿಗೂ ಚೆನ್ನಾಗಿ ಗೊತ್ತಿತ್ತು. ಇನ್ಯಾಕೆ ಸಿಟ್ಟು? ಎಂಬುದು. ಅದೂ ಸಹಾ ಅರ್ಧಸತ್ಯದ ಮಾತು. ನಾವು ಎಂದೂ ಇದರ ಬದಲಾವಣೆಗೆ ಕೈ ಹಾಕದಂತೆ ಮಾಡುವ ವಾದ ಅದು.

ಇನ್ನೊಂದು ವಿಷಯ, ಸುಮಾರು 2010ರಿಂದ ನಾವು ಬಿಜೆಪಿಯ, ನರೇಂದ್ರ ಮೋದಿಯ ಬೆಂಬಲಿಗರನ್ನು ಭಕ್ತರೆಂದು ಕರೆದು ಗೇಲಿ ಮಾಡುತ್ತಲೇ ಬಂದಿದ್ದೇವೆ. ಅವರನ್ನು ಅನ್‍ಫ್ರೆಂಡ್ ಮಾಡುವ ಬೆದರಿಕೆ ಹಾಕುತ್ತಲೇ ಬಂದಿದ್ದೇವೆ. ಅದರಿಂದ ಆದ ಪರಿಣಾಮ ಏನು ಎನ್ನುವ ಉತ್ತರವನ್ನು ಹುಡುಕುವ ಸಮಯ ಬಂದಿದೆ. 2009ರ ಚುನಾವಣೆಯಲ್ಲಿ ಕರ್ನಾಟಕದ ಮತದಾರರಲ್ಲಿ 41.6% ಜನ ಬಿಜೆಪಿಗೆ ಮತ ಹಾಕಿದರೆ, 2014 ರಲ್ಲಿ 43% ಮತದಾರರು ಬಿಜೆಪಿಗೆ ತಮ್ಮ ಮತ ನೀಡಿದರು. 2019ರಲ್ಲಿ ಬಿಜೆಪಿಯ ಮತದಾರರ ಪ್ರಮಾಣ 52%. ನಾವು, ನೆಟ್ಟಿಗರೂ, ಈ ಹೆಚ್ಚಳಕ್ಕೆ ಕಾರಣರಾಗಿದ್ದೇವೆಯೇ?

ಆಯ್ತು, ನಾವು ಕಾರಣರಲ್ಲ ಎಂದಿಟ್ಟುಕೊಳ್ಳೋಣ. ಸದ್ಯದ ಈ ಅಸಹ್ಯಕರ, ಅವಮಾನಕರ ವಿದ್ಯಮಾನಗಳು ಮುಂದೆ ಮರುಕಳಿಸದಂತೆ ಮಾಡಲು ನಮ್ಮ ವ್ಯಂಗ್ಯ, ಸಿಟ್ಟು ಏನಾದರೂ ಮಾಡಬಲ್ಲವೇ? ಇಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ನಾವು ಮಾಡುವ ಪ್ರತಿರೋಧ, ವ್ಯಂಗ್ಯಕ್ಕೆ ನೀಡಿರುವ ಸ್ವಾತಂತ್ರ್ಯವು ಒಂದು ಲೆಕ್ಕಾಚಾರದೊಂದಿಗೆ ನೀಡಲಾಗಿದ್ದು ಎನ್ನುವ ವಿಷಯವನ್ನು ಮನದಟ್ಟಾಗಿಸಬೇಕಿದೆ.

ಈ ವಿದ್ಯಮಾನಗಳು ನಮ್ಮನ್ನು, ನಮ್ಮ ರಾಜ್ಯವನ್ನು ಅವಮಾನಕ್ಕೆ ದೂಡಿವೆ ಎಂದರೆ ಇವು ಮರುಕಳಿಸದಂತೆ ಆಗದಂತೆ ಏನು ಮಾಡಬೇಕು ಎನ್ನುವ ಚಿಂತನೆಯೂ ಸಾಮಾಜಿಕ ಜಾಲತಾಣಗಳಲ್ಲಿ ಶುರು ಮಾಡಬೇಕಿದೆ. ಭವಿಷ್ಯವನ್ನು ರೂಪಿಸುವ ಚಿಂತನೆಗಳು ಶುರುವಾದರೆ ಅಲ್ಲಿ ವ್ಯಂಗ್ಯಕ್ಕೆ ಸ್ಥಾನವಿರುವುದಿಲ್ಲ; ಒಂದು ವೇಳೆ ಇದ್ದರೂ ಅದು Constructive ಆಗಿರುತ್ತೆ. ನಮ್ಮ ಪ್ರತಿ ಫೇಸ್‍ಬುಕ್ ಗೋಡೆಬರಹ ಸಕಾರಾತ್ಮಕ ಬದಲಾವಣೆಗೆ ಪೂರಕವಾಗಿದೆಯೇ ಎನ್ನುವ ಪ್ರಶ್ನೆ ಉದ್ಭವಿಸುತ್ತದೆ.

ರಾಜಕೀಯ ಸ್ಥಿತಿಯನ್ನು ಉತ್ತಮವಾಗಿ ವಿಶ್ಲೇಷಿಸಿದ್ದೇವೆ ಎಂದ ಮಾತ್ರಕ್ಕೆ ಹೆಮ್ಮೆ ಪಡುವುದನ್ನು ನಿಲ್ಲಿಸುತ್ತೇವೆ. ಖಾರವಾಗಿ ಬರೆಯುವುದರಿಂದ ಏನಾದರೂ ಲಾಭವಿದೆಯೇ ಎನ್ನುವುದನ್ನು ಕೇಳಿಕೊಳ್ಳುತ್ತೇವೆ. ಸತ್ಯವನ್ನು ನುಡಿದ ಮಾತ್ರಕ್ಕೆ ನಮ್ಮ ಕರ್ತವ್ಯ ಮುಗಿಯುವುದಿಲ್ಲ ಎಂದುದು ತಿಳಿಯುವುದೂ ಭವಿಷ್ಯಕ್ಕೆ ನಾವು ನಿಜವಾಗಿಯೂ ಜವಾಬ್ದಾರರಾದಾಗ ಮಾತ್ರ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...