Homeಕರ್ನಾಟಕಈ ದುರಿತ ಕಾಲದಲ್ಲಿ ನೆಟ್ಟಿಗರಿಗೊಂದು ಸಿಟ್ಟಿನ ಪತ್ರ

ಈ ದುರಿತ ಕಾಲದಲ್ಲಿ ನೆಟ್ಟಿಗರಿಗೊಂದು ಸಿಟ್ಟಿನ ಪತ್ರ

2009ರ ಚುನಾವಣೆಯಲ್ಲಿ ಕರ್ನಾಟಕದ ಮತದಾರರಲ್ಲಿ 41.6% ಜನ ಬಿಜೆಪಿಗೆ ಮತ ಹಾಕಿದರೆ, 2014 ರಲ್ಲಿ 43% ಮತದಾರರು ಬಿಜೆಪಿಗೆ ತಮ್ಮ ಮತ ನೀಡಿದರು. 2019ರಲ್ಲಿ ಬಿಜೆಪಿಯ ಮತದಾರರ ಪ್ರಮಾಣ 52%. ನಾವು, ನೆಟ್ಟಿಗರೂ, ಈ ಹೆಚ್ಚಳಕ್ಕೆ ಕಾರಣರಾಗಿದ್ದೇವೆಯೇ?

- Advertisement -
- Advertisement -

ಪ್ರಿಯ ನೆಟ್ಟಿಗರೆ,
ಕರ್ನಾಟಕದಲ್ಲಿ ಮೈತ್ರಿ ಸರಕಾರ ಸಂಕಷ್ಟದಲ್ಲಿದೆ. ಹಲವಾರು ಶಾಸಕರು ರಾಜೀನಾಮೆ ನೀಡಿದ್ದಾರೆ. ಕುದುರೆ ವ್ಯಾಪಾರ ನಡೆಯುತ್ತಿದೆ ಎನ್ನುವ ಸುದ್ದಿಗಳು ಪ್ರಚಲಿತವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಎಲ್ಲಿ ನೋಡಿದರೂ ಇದರ ಬಗ್ಗೆಯೇ ಬರಹಗಳನ್ನು ಬರೆಯುತ್ತಿದ್ದೀರಿ. ಸದ್ಯದ ಸ್ಥಿತಿಯನ್ನು ವಿವರಿಸಲು ಇಷ್ಟು ಮಟ್ಟದ ಹಾಸ್ಯದ ವ್ಯಂಗ್ಯದ ಬಳಕೆಗೆ ಒಂದು ರೀತಿಯ ಪೈಪೋಟಿಯೇ ನಡೆಸಿದ್ದಂತಿದೆ.

ಈ ರೀತಿಯಲ್ಲಿ ಗೇಲಿ ಮಾಡಲು ನಮಗೆ ಸಂಪೂರ್ಣ ಅಧಿಕಾರವಿದೆ. ಎಲ್ಲಾ ರಾಜಕೀಯ ಹಿತಾಸಕ್ತಿಗಳಿಗೂ ಸಾಮಾಜಿಕ ಜಾಲತಾಣಗಳಲ್ಲಿ ಅವರ ಗೇಲಿಯಾಗುತ್ತಿದೆ ಎನ್ನುವ ಅರಿವಿದೆ. ಆದರೂ ಅವರೇನೂ ಮಾಡುವುದಿಲ್ಲ. ನಮಗೆ ಸಾಂವಿಧಾನಿಕವಾಗಿ ಸಿಕ್ಕ ಹಕ್ಕಿನ ಕಾರಣದಿಂದ, ಅವರೇನೂ ಮಾಡಲಾಗದೇ ನಿಷ್ಕ್ರಿಯರಾಗಿದ್ದಾರೆಂದು ನಾವೆಂದುಕೊಳ್ಳುತ್ತೇವೆ. ಆದರೆ ವಾಸ್ತವ ಅದಲ್ಲ. ಯಾವ ರಾಜಕೀಯ ಶಕ್ತಿಯೂ ನೇರವಾಗಿ ಯಾವ ಕ್ರಮಗಳನ್ನೂ ತೆಗೆದುಕೊಳ್ಳಲೇ ಇರುವುದಕ್ಕೆ ಕಾರಣವೆಂದರೆ ಈ ಬರಹಗಳು ಅವರಿಗೆ ಯಾವುದೇ ರೀತಿಯ ಅಪಾಯವನ್ನು ಒಡ್ಡುವುದಿಲ್ಲ. ಅಪಾಯ ಒಡ್ಡಿದಾಗ ಏನಾಗಬಹುದು ಎನ್ನುವುದನ್ನು ಈಗೀಗ ಕಾಣುತ್ತಿದ್ದೇವೆ.

ಸಾಮಾಜಿಕ ಜಾಲತಾಣಗಳಲ್ಲಿ ಬರೆಯುವುದರಿಂದ ನಮಗೆಲ್ಲ ಒಂದು ರೀತಿಯ ಸೆನ್ಸ್ ಆಫ್ ಪಾವರ್ ಸಿಗುತ್ತೆ; ನಾವು ಇತರರಿಗಿಂತ ಉತ್ತಮರು ಎನ್ನುವ ಮೇಲರಿಮೆಯ ಭಾವನೆಯನ್ನೂ ನೀಡುತ್ತದೆ. ಈ ಮೇಲರಿಮೆ ನಮ್ಮ ಮುಂದೆ ಇರುವ ಸವಾಲುಗಳನ್ನು ಸರಿಯಾದ ರೀತಿಯಲ್ಲಿ ಎದುರಿಸದೇ ಇರುವುದಕ್ಕೆ ಕಾರಣವಾಗಬಲ್ಲದು.

ಆದರೆ ಪ್ರಸಕ್ತ ಬೆಳವಣಿಗೆಗಳಿಂದ ನಮಗಾರಿಗೂ ಆಘಾತವಾದಂತೆ ತೋರುತ್ತಿಲ್ಲ. ಆಘಾತವಾಗುವಂತಹ ಸಂದರ್ಭಗಳೇ ನಮಗಿಲ್ಲವೇನೋ? ನಮ್ಮಲ್ಲಿ ಕೆಲವರು ಈ ಬೆಳವಣಿಗೆಗೆ ಸಿಟ್ಟನ್ನು ತೋರಿಸುತ್ತಿದ್ದಾರೆ. ಈ ಸಿಟ್ಟನ್ನು ನಮ್ಮ ಫೇಸ್‍ಬುಕ್‍ನ ಜಾಣ್ಮೆಯ ಬರಹಗಳಿಂದ ಮಾತ್ರ ತಣಿಸಬೇಕೆ? ಅಪಾಯವಿರುವುದು ಇಲ್ಲಿಯೇ ಗೆಳೆಯರೆ, ನಮ್ಮ ಸಿಟ್ಟು ತಣಿದುಬಿಡುತ್ತೆ ಕೆಲಮಟ್ಟಿಗೆ. ಸಿಟ್ಟು ತಣಿಯದಂತೆ ಉಳಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ. ಇನ್ನೂ ಒಂದು ವಾದವಿದೆ. ಆ ಸಿಟ್ಟು ಯಾವ ಕಾರಣಕ್ಕೆ? ಇವರನ್ನು ಆಯ್ಕೆ ಮಾಡಿದಾಗ ಇವರು ಎಂಥವರು ಎನ್ನುವುದು ನಮಗೆಲ್ಲರಿಗೂ ಚೆನ್ನಾಗಿ ಗೊತ್ತಿತ್ತು. ಇನ್ಯಾಕೆ ಸಿಟ್ಟು? ಎಂಬುದು. ಅದೂ ಸಹಾ ಅರ್ಧಸತ್ಯದ ಮಾತು. ನಾವು ಎಂದೂ ಇದರ ಬದಲಾವಣೆಗೆ ಕೈ ಹಾಕದಂತೆ ಮಾಡುವ ವಾದ ಅದು.

ಇನ್ನೊಂದು ವಿಷಯ, ಸುಮಾರು 2010ರಿಂದ ನಾವು ಬಿಜೆಪಿಯ, ನರೇಂದ್ರ ಮೋದಿಯ ಬೆಂಬಲಿಗರನ್ನು ಭಕ್ತರೆಂದು ಕರೆದು ಗೇಲಿ ಮಾಡುತ್ತಲೇ ಬಂದಿದ್ದೇವೆ. ಅವರನ್ನು ಅನ್‍ಫ್ರೆಂಡ್ ಮಾಡುವ ಬೆದರಿಕೆ ಹಾಕುತ್ತಲೇ ಬಂದಿದ್ದೇವೆ. ಅದರಿಂದ ಆದ ಪರಿಣಾಮ ಏನು ಎನ್ನುವ ಉತ್ತರವನ್ನು ಹುಡುಕುವ ಸಮಯ ಬಂದಿದೆ. 2009ರ ಚುನಾವಣೆಯಲ್ಲಿ ಕರ್ನಾಟಕದ ಮತದಾರರಲ್ಲಿ 41.6% ಜನ ಬಿಜೆಪಿಗೆ ಮತ ಹಾಕಿದರೆ, 2014 ರಲ್ಲಿ 43% ಮತದಾರರು ಬಿಜೆಪಿಗೆ ತಮ್ಮ ಮತ ನೀಡಿದರು. 2019ರಲ್ಲಿ ಬಿಜೆಪಿಯ ಮತದಾರರ ಪ್ರಮಾಣ 52%. ನಾವು, ನೆಟ್ಟಿಗರೂ, ಈ ಹೆಚ್ಚಳಕ್ಕೆ ಕಾರಣರಾಗಿದ್ದೇವೆಯೇ?

ಆಯ್ತು, ನಾವು ಕಾರಣರಲ್ಲ ಎಂದಿಟ್ಟುಕೊಳ್ಳೋಣ. ಸದ್ಯದ ಈ ಅಸಹ್ಯಕರ, ಅವಮಾನಕರ ವಿದ್ಯಮಾನಗಳು ಮುಂದೆ ಮರುಕಳಿಸದಂತೆ ಮಾಡಲು ನಮ್ಮ ವ್ಯಂಗ್ಯ, ಸಿಟ್ಟು ಏನಾದರೂ ಮಾಡಬಲ್ಲವೇ? ಇಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ನಾವು ಮಾಡುವ ಪ್ರತಿರೋಧ, ವ್ಯಂಗ್ಯಕ್ಕೆ ನೀಡಿರುವ ಸ್ವಾತಂತ್ರ್ಯವು ಒಂದು ಲೆಕ್ಕಾಚಾರದೊಂದಿಗೆ ನೀಡಲಾಗಿದ್ದು ಎನ್ನುವ ವಿಷಯವನ್ನು ಮನದಟ್ಟಾಗಿಸಬೇಕಿದೆ.

ಈ ವಿದ್ಯಮಾನಗಳು ನಮ್ಮನ್ನು, ನಮ್ಮ ರಾಜ್ಯವನ್ನು ಅವಮಾನಕ್ಕೆ ದೂಡಿವೆ ಎಂದರೆ ಇವು ಮರುಕಳಿಸದಂತೆ ಆಗದಂತೆ ಏನು ಮಾಡಬೇಕು ಎನ್ನುವ ಚಿಂತನೆಯೂ ಸಾಮಾಜಿಕ ಜಾಲತಾಣಗಳಲ್ಲಿ ಶುರು ಮಾಡಬೇಕಿದೆ. ಭವಿಷ್ಯವನ್ನು ರೂಪಿಸುವ ಚಿಂತನೆಗಳು ಶುರುವಾದರೆ ಅಲ್ಲಿ ವ್ಯಂಗ್ಯಕ್ಕೆ ಸ್ಥಾನವಿರುವುದಿಲ್ಲ; ಒಂದು ವೇಳೆ ಇದ್ದರೂ ಅದು Constructive ಆಗಿರುತ್ತೆ. ನಮ್ಮ ಪ್ರತಿ ಫೇಸ್‍ಬುಕ್ ಗೋಡೆಬರಹ ಸಕಾರಾತ್ಮಕ ಬದಲಾವಣೆಗೆ ಪೂರಕವಾಗಿದೆಯೇ ಎನ್ನುವ ಪ್ರಶ್ನೆ ಉದ್ಭವಿಸುತ್ತದೆ.

ರಾಜಕೀಯ ಸ್ಥಿತಿಯನ್ನು ಉತ್ತಮವಾಗಿ ವಿಶ್ಲೇಷಿಸಿದ್ದೇವೆ ಎಂದ ಮಾತ್ರಕ್ಕೆ ಹೆಮ್ಮೆ ಪಡುವುದನ್ನು ನಿಲ್ಲಿಸುತ್ತೇವೆ. ಖಾರವಾಗಿ ಬರೆಯುವುದರಿಂದ ಏನಾದರೂ ಲಾಭವಿದೆಯೇ ಎನ್ನುವುದನ್ನು ಕೇಳಿಕೊಳ್ಳುತ್ತೇವೆ. ಸತ್ಯವನ್ನು ನುಡಿದ ಮಾತ್ರಕ್ಕೆ ನಮ್ಮ ಕರ್ತವ್ಯ ಮುಗಿಯುವುದಿಲ್ಲ ಎಂದುದು ತಿಳಿಯುವುದೂ ಭವಿಷ್ಯಕ್ಕೆ ನಾವು ನಿಜವಾಗಿಯೂ ಜವಾಬ್ದಾರರಾದಾಗ ಮಾತ್ರ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...