Homeಕರ್ನಾಟಕಈ ದುರಿತ ಕಾಲದಲ್ಲಿ ನೆಟ್ಟಿಗರಿಗೊಂದು ಸಿಟ್ಟಿನ ಪತ್ರ

ಈ ದುರಿತ ಕಾಲದಲ್ಲಿ ನೆಟ್ಟಿಗರಿಗೊಂದು ಸಿಟ್ಟಿನ ಪತ್ರ

2009ರ ಚುನಾವಣೆಯಲ್ಲಿ ಕರ್ನಾಟಕದ ಮತದಾರರಲ್ಲಿ 41.6% ಜನ ಬಿಜೆಪಿಗೆ ಮತ ಹಾಕಿದರೆ, 2014 ರಲ್ಲಿ 43% ಮತದಾರರು ಬಿಜೆಪಿಗೆ ತಮ್ಮ ಮತ ನೀಡಿದರು. 2019ರಲ್ಲಿ ಬಿಜೆಪಿಯ ಮತದಾರರ ಪ್ರಮಾಣ 52%. ನಾವು, ನೆಟ್ಟಿಗರೂ, ಈ ಹೆಚ್ಚಳಕ್ಕೆ ಕಾರಣರಾಗಿದ್ದೇವೆಯೇ?

- Advertisement -
- Advertisement -

ಪ್ರಿಯ ನೆಟ್ಟಿಗರೆ,
ಕರ್ನಾಟಕದಲ್ಲಿ ಮೈತ್ರಿ ಸರಕಾರ ಸಂಕಷ್ಟದಲ್ಲಿದೆ. ಹಲವಾರು ಶಾಸಕರು ರಾಜೀನಾಮೆ ನೀಡಿದ್ದಾರೆ. ಕುದುರೆ ವ್ಯಾಪಾರ ನಡೆಯುತ್ತಿದೆ ಎನ್ನುವ ಸುದ್ದಿಗಳು ಪ್ರಚಲಿತವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಎಲ್ಲಿ ನೋಡಿದರೂ ಇದರ ಬಗ್ಗೆಯೇ ಬರಹಗಳನ್ನು ಬರೆಯುತ್ತಿದ್ದೀರಿ. ಸದ್ಯದ ಸ್ಥಿತಿಯನ್ನು ವಿವರಿಸಲು ಇಷ್ಟು ಮಟ್ಟದ ಹಾಸ್ಯದ ವ್ಯಂಗ್ಯದ ಬಳಕೆಗೆ ಒಂದು ರೀತಿಯ ಪೈಪೋಟಿಯೇ ನಡೆಸಿದ್ದಂತಿದೆ.

ಈ ರೀತಿಯಲ್ಲಿ ಗೇಲಿ ಮಾಡಲು ನಮಗೆ ಸಂಪೂರ್ಣ ಅಧಿಕಾರವಿದೆ. ಎಲ್ಲಾ ರಾಜಕೀಯ ಹಿತಾಸಕ್ತಿಗಳಿಗೂ ಸಾಮಾಜಿಕ ಜಾಲತಾಣಗಳಲ್ಲಿ ಅವರ ಗೇಲಿಯಾಗುತ್ತಿದೆ ಎನ್ನುವ ಅರಿವಿದೆ. ಆದರೂ ಅವರೇನೂ ಮಾಡುವುದಿಲ್ಲ. ನಮಗೆ ಸಾಂವಿಧಾನಿಕವಾಗಿ ಸಿಕ್ಕ ಹಕ್ಕಿನ ಕಾರಣದಿಂದ, ಅವರೇನೂ ಮಾಡಲಾಗದೇ ನಿಷ್ಕ್ರಿಯರಾಗಿದ್ದಾರೆಂದು ನಾವೆಂದುಕೊಳ್ಳುತ್ತೇವೆ. ಆದರೆ ವಾಸ್ತವ ಅದಲ್ಲ. ಯಾವ ರಾಜಕೀಯ ಶಕ್ತಿಯೂ ನೇರವಾಗಿ ಯಾವ ಕ್ರಮಗಳನ್ನೂ ತೆಗೆದುಕೊಳ್ಳಲೇ ಇರುವುದಕ್ಕೆ ಕಾರಣವೆಂದರೆ ಈ ಬರಹಗಳು ಅವರಿಗೆ ಯಾವುದೇ ರೀತಿಯ ಅಪಾಯವನ್ನು ಒಡ್ಡುವುದಿಲ್ಲ. ಅಪಾಯ ಒಡ್ಡಿದಾಗ ಏನಾಗಬಹುದು ಎನ್ನುವುದನ್ನು ಈಗೀಗ ಕಾಣುತ್ತಿದ್ದೇವೆ.

ಸಾಮಾಜಿಕ ಜಾಲತಾಣಗಳಲ್ಲಿ ಬರೆಯುವುದರಿಂದ ನಮಗೆಲ್ಲ ಒಂದು ರೀತಿಯ ಸೆನ್ಸ್ ಆಫ್ ಪಾವರ್ ಸಿಗುತ್ತೆ; ನಾವು ಇತರರಿಗಿಂತ ಉತ್ತಮರು ಎನ್ನುವ ಮೇಲರಿಮೆಯ ಭಾವನೆಯನ್ನೂ ನೀಡುತ್ತದೆ. ಈ ಮೇಲರಿಮೆ ನಮ್ಮ ಮುಂದೆ ಇರುವ ಸವಾಲುಗಳನ್ನು ಸರಿಯಾದ ರೀತಿಯಲ್ಲಿ ಎದುರಿಸದೇ ಇರುವುದಕ್ಕೆ ಕಾರಣವಾಗಬಲ್ಲದು.

ಆದರೆ ಪ್ರಸಕ್ತ ಬೆಳವಣಿಗೆಗಳಿಂದ ನಮಗಾರಿಗೂ ಆಘಾತವಾದಂತೆ ತೋರುತ್ತಿಲ್ಲ. ಆಘಾತವಾಗುವಂತಹ ಸಂದರ್ಭಗಳೇ ನಮಗಿಲ್ಲವೇನೋ? ನಮ್ಮಲ್ಲಿ ಕೆಲವರು ಈ ಬೆಳವಣಿಗೆಗೆ ಸಿಟ್ಟನ್ನು ತೋರಿಸುತ್ತಿದ್ದಾರೆ. ಈ ಸಿಟ್ಟನ್ನು ನಮ್ಮ ಫೇಸ್‍ಬುಕ್‍ನ ಜಾಣ್ಮೆಯ ಬರಹಗಳಿಂದ ಮಾತ್ರ ತಣಿಸಬೇಕೆ? ಅಪಾಯವಿರುವುದು ಇಲ್ಲಿಯೇ ಗೆಳೆಯರೆ, ನಮ್ಮ ಸಿಟ್ಟು ತಣಿದುಬಿಡುತ್ತೆ ಕೆಲಮಟ್ಟಿಗೆ. ಸಿಟ್ಟು ತಣಿಯದಂತೆ ಉಳಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ. ಇನ್ನೂ ಒಂದು ವಾದವಿದೆ. ಆ ಸಿಟ್ಟು ಯಾವ ಕಾರಣಕ್ಕೆ? ಇವರನ್ನು ಆಯ್ಕೆ ಮಾಡಿದಾಗ ಇವರು ಎಂಥವರು ಎನ್ನುವುದು ನಮಗೆಲ್ಲರಿಗೂ ಚೆನ್ನಾಗಿ ಗೊತ್ತಿತ್ತು. ಇನ್ಯಾಕೆ ಸಿಟ್ಟು? ಎಂಬುದು. ಅದೂ ಸಹಾ ಅರ್ಧಸತ್ಯದ ಮಾತು. ನಾವು ಎಂದೂ ಇದರ ಬದಲಾವಣೆಗೆ ಕೈ ಹಾಕದಂತೆ ಮಾಡುವ ವಾದ ಅದು.

ಇನ್ನೊಂದು ವಿಷಯ, ಸುಮಾರು 2010ರಿಂದ ನಾವು ಬಿಜೆಪಿಯ, ನರೇಂದ್ರ ಮೋದಿಯ ಬೆಂಬಲಿಗರನ್ನು ಭಕ್ತರೆಂದು ಕರೆದು ಗೇಲಿ ಮಾಡುತ್ತಲೇ ಬಂದಿದ್ದೇವೆ. ಅವರನ್ನು ಅನ್‍ಫ್ರೆಂಡ್ ಮಾಡುವ ಬೆದರಿಕೆ ಹಾಕುತ್ತಲೇ ಬಂದಿದ್ದೇವೆ. ಅದರಿಂದ ಆದ ಪರಿಣಾಮ ಏನು ಎನ್ನುವ ಉತ್ತರವನ್ನು ಹುಡುಕುವ ಸಮಯ ಬಂದಿದೆ. 2009ರ ಚುನಾವಣೆಯಲ್ಲಿ ಕರ್ನಾಟಕದ ಮತದಾರರಲ್ಲಿ 41.6% ಜನ ಬಿಜೆಪಿಗೆ ಮತ ಹಾಕಿದರೆ, 2014 ರಲ್ಲಿ 43% ಮತದಾರರು ಬಿಜೆಪಿಗೆ ತಮ್ಮ ಮತ ನೀಡಿದರು. 2019ರಲ್ಲಿ ಬಿಜೆಪಿಯ ಮತದಾರರ ಪ್ರಮಾಣ 52%. ನಾವು, ನೆಟ್ಟಿಗರೂ, ಈ ಹೆಚ್ಚಳಕ್ಕೆ ಕಾರಣರಾಗಿದ್ದೇವೆಯೇ?

ಆಯ್ತು, ನಾವು ಕಾರಣರಲ್ಲ ಎಂದಿಟ್ಟುಕೊಳ್ಳೋಣ. ಸದ್ಯದ ಈ ಅಸಹ್ಯಕರ, ಅವಮಾನಕರ ವಿದ್ಯಮಾನಗಳು ಮುಂದೆ ಮರುಕಳಿಸದಂತೆ ಮಾಡಲು ನಮ್ಮ ವ್ಯಂಗ್ಯ, ಸಿಟ್ಟು ಏನಾದರೂ ಮಾಡಬಲ್ಲವೇ? ಇಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ನಾವು ಮಾಡುವ ಪ್ರತಿರೋಧ, ವ್ಯಂಗ್ಯಕ್ಕೆ ನೀಡಿರುವ ಸ್ವಾತಂತ್ರ್ಯವು ಒಂದು ಲೆಕ್ಕಾಚಾರದೊಂದಿಗೆ ನೀಡಲಾಗಿದ್ದು ಎನ್ನುವ ವಿಷಯವನ್ನು ಮನದಟ್ಟಾಗಿಸಬೇಕಿದೆ.

ಈ ವಿದ್ಯಮಾನಗಳು ನಮ್ಮನ್ನು, ನಮ್ಮ ರಾಜ್ಯವನ್ನು ಅವಮಾನಕ್ಕೆ ದೂಡಿವೆ ಎಂದರೆ ಇವು ಮರುಕಳಿಸದಂತೆ ಆಗದಂತೆ ಏನು ಮಾಡಬೇಕು ಎನ್ನುವ ಚಿಂತನೆಯೂ ಸಾಮಾಜಿಕ ಜಾಲತಾಣಗಳಲ್ಲಿ ಶುರು ಮಾಡಬೇಕಿದೆ. ಭವಿಷ್ಯವನ್ನು ರೂಪಿಸುವ ಚಿಂತನೆಗಳು ಶುರುವಾದರೆ ಅಲ್ಲಿ ವ್ಯಂಗ್ಯಕ್ಕೆ ಸ್ಥಾನವಿರುವುದಿಲ್ಲ; ಒಂದು ವೇಳೆ ಇದ್ದರೂ ಅದು Constructive ಆಗಿರುತ್ತೆ. ನಮ್ಮ ಪ್ರತಿ ಫೇಸ್‍ಬುಕ್ ಗೋಡೆಬರಹ ಸಕಾರಾತ್ಮಕ ಬದಲಾವಣೆಗೆ ಪೂರಕವಾಗಿದೆಯೇ ಎನ್ನುವ ಪ್ರಶ್ನೆ ಉದ್ಭವಿಸುತ್ತದೆ.

ರಾಜಕೀಯ ಸ್ಥಿತಿಯನ್ನು ಉತ್ತಮವಾಗಿ ವಿಶ್ಲೇಷಿಸಿದ್ದೇವೆ ಎಂದ ಮಾತ್ರಕ್ಕೆ ಹೆಮ್ಮೆ ಪಡುವುದನ್ನು ನಿಲ್ಲಿಸುತ್ತೇವೆ. ಖಾರವಾಗಿ ಬರೆಯುವುದರಿಂದ ಏನಾದರೂ ಲಾಭವಿದೆಯೇ ಎನ್ನುವುದನ್ನು ಕೇಳಿಕೊಳ್ಳುತ್ತೇವೆ. ಸತ್ಯವನ್ನು ನುಡಿದ ಮಾತ್ರಕ್ಕೆ ನಮ್ಮ ಕರ್ತವ್ಯ ಮುಗಿಯುವುದಿಲ್ಲ ಎಂದುದು ತಿಳಿಯುವುದೂ ಭವಿಷ್ಯಕ್ಕೆ ನಾವು ನಿಜವಾಗಿಯೂ ಜವಾಬ್ದಾರರಾದಾಗ ಮಾತ್ರ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...