Homeಕರ್ನಾಟಕಈ ದುರಿತ ಕಾಲದಲ್ಲಿ ನೆಟ್ಟಿಗರಿಗೊಂದು ಸಿಟ್ಟಿನ ಪತ್ರ

ಈ ದುರಿತ ಕಾಲದಲ್ಲಿ ನೆಟ್ಟಿಗರಿಗೊಂದು ಸಿಟ್ಟಿನ ಪತ್ರ

2009ರ ಚುನಾವಣೆಯಲ್ಲಿ ಕರ್ನಾಟಕದ ಮತದಾರರಲ್ಲಿ 41.6% ಜನ ಬಿಜೆಪಿಗೆ ಮತ ಹಾಕಿದರೆ, 2014 ರಲ್ಲಿ 43% ಮತದಾರರು ಬಿಜೆಪಿಗೆ ತಮ್ಮ ಮತ ನೀಡಿದರು. 2019ರಲ್ಲಿ ಬಿಜೆಪಿಯ ಮತದಾರರ ಪ್ರಮಾಣ 52%. ನಾವು, ನೆಟ್ಟಿಗರೂ, ಈ ಹೆಚ್ಚಳಕ್ಕೆ ಕಾರಣರಾಗಿದ್ದೇವೆಯೇ?

- Advertisement -
- Advertisement -

ಪ್ರಿಯ ನೆಟ್ಟಿಗರೆ,
ಕರ್ನಾಟಕದಲ್ಲಿ ಮೈತ್ರಿ ಸರಕಾರ ಸಂಕಷ್ಟದಲ್ಲಿದೆ. ಹಲವಾರು ಶಾಸಕರು ರಾಜೀನಾಮೆ ನೀಡಿದ್ದಾರೆ. ಕುದುರೆ ವ್ಯಾಪಾರ ನಡೆಯುತ್ತಿದೆ ಎನ್ನುವ ಸುದ್ದಿಗಳು ಪ್ರಚಲಿತವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಎಲ್ಲಿ ನೋಡಿದರೂ ಇದರ ಬಗ್ಗೆಯೇ ಬರಹಗಳನ್ನು ಬರೆಯುತ್ತಿದ್ದೀರಿ. ಸದ್ಯದ ಸ್ಥಿತಿಯನ್ನು ವಿವರಿಸಲು ಇಷ್ಟು ಮಟ್ಟದ ಹಾಸ್ಯದ ವ್ಯಂಗ್ಯದ ಬಳಕೆಗೆ ಒಂದು ರೀತಿಯ ಪೈಪೋಟಿಯೇ ನಡೆಸಿದ್ದಂತಿದೆ.

ಈ ರೀತಿಯಲ್ಲಿ ಗೇಲಿ ಮಾಡಲು ನಮಗೆ ಸಂಪೂರ್ಣ ಅಧಿಕಾರವಿದೆ. ಎಲ್ಲಾ ರಾಜಕೀಯ ಹಿತಾಸಕ್ತಿಗಳಿಗೂ ಸಾಮಾಜಿಕ ಜಾಲತಾಣಗಳಲ್ಲಿ ಅವರ ಗೇಲಿಯಾಗುತ್ತಿದೆ ಎನ್ನುವ ಅರಿವಿದೆ. ಆದರೂ ಅವರೇನೂ ಮಾಡುವುದಿಲ್ಲ. ನಮಗೆ ಸಾಂವಿಧಾನಿಕವಾಗಿ ಸಿಕ್ಕ ಹಕ್ಕಿನ ಕಾರಣದಿಂದ, ಅವರೇನೂ ಮಾಡಲಾಗದೇ ನಿಷ್ಕ್ರಿಯರಾಗಿದ್ದಾರೆಂದು ನಾವೆಂದುಕೊಳ್ಳುತ್ತೇವೆ. ಆದರೆ ವಾಸ್ತವ ಅದಲ್ಲ. ಯಾವ ರಾಜಕೀಯ ಶಕ್ತಿಯೂ ನೇರವಾಗಿ ಯಾವ ಕ್ರಮಗಳನ್ನೂ ತೆಗೆದುಕೊಳ್ಳಲೇ ಇರುವುದಕ್ಕೆ ಕಾರಣವೆಂದರೆ ಈ ಬರಹಗಳು ಅವರಿಗೆ ಯಾವುದೇ ರೀತಿಯ ಅಪಾಯವನ್ನು ಒಡ್ಡುವುದಿಲ್ಲ. ಅಪಾಯ ಒಡ್ಡಿದಾಗ ಏನಾಗಬಹುದು ಎನ್ನುವುದನ್ನು ಈಗೀಗ ಕಾಣುತ್ತಿದ್ದೇವೆ.

ಸಾಮಾಜಿಕ ಜಾಲತಾಣಗಳಲ್ಲಿ ಬರೆಯುವುದರಿಂದ ನಮಗೆಲ್ಲ ಒಂದು ರೀತಿಯ ಸೆನ್ಸ್ ಆಫ್ ಪಾವರ್ ಸಿಗುತ್ತೆ; ನಾವು ಇತರರಿಗಿಂತ ಉತ್ತಮರು ಎನ್ನುವ ಮೇಲರಿಮೆಯ ಭಾವನೆಯನ್ನೂ ನೀಡುತ್ತದೆ. ಈ ಮೇಲರಿಮೆ ನಮ್ಮ ಮುಂದೆ ಇರುವ ಸವಾಲುಗಳನ್ನು ಸರಿಯಾದ ರೀತಿಯಲ್ಲಿ ಎದುರಿಸದೇ ಇರುವುದಕ್ಕೆ ಕಾರಣವಾಗಬಲ್ಲದು.

ಆದರೆ ಪ್ರಸಕ್ತ ಬೆಳವಣಿಗೆಗಳಿಂದ ನಮಗಾರಿಗೂ ಆಘಾತವಾದಂತೆ ತೋರುತ್ತಿಲ್ಲ. ಆಘಾತವಾಗುವಂತಹ ಸಂದರ್ಭಗಳೇ ನಮಗಿಲ್ಲವೇನೋ? ನಮ್ಮಲ್ಲಿ ಕೆಲವರು ಈ ಬೆಳವಣಿಗೆಗೆ ಸಿಟ್ಟನ್ನು ತೋರಿಸುತ್ತಿದ್ದಾರೆ. ಈ ಸಿಟ್ಟನ್ನು ನಮ್ಮ ಫೇಸ್‍ಬುಕ್‍ನ ಜಾಣ್ಮೆಯ ಬರಹಗಳಿಂದ ಮಾತ್ರ ತಣಿಸಬೇಕೆ? ಅಪಾಯವಿರುವುದು ಇಲ್ಲಿಯೇ ಗೆಳೆಯರೆ, ನಮ್ಮ ಸಿಟ್ಟು ತಣಿದುಬಿಡುತ್ತೆ ಕೆಲಮಟ್ಟಿಗೆ. ಸಿಟ್ಟು ತಣಿಯದಂತೆ ಉಳಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ. ಇನ್ನೂ ಒಂದು ವಾದವಿದೆ. ಆ ಸಿಟ್ಟು ಯಾವ ಕಾರಣಕ್ಕೆ? ಇವರನ್ನು ಆಯ್ಕೆ ಮಾಡಿದಾಗ ಇವರು ಎಂಥವರು ಎನ್ನುವುದು ನಮಗೆಲ್ಲರಿಗೂ ಚೆನ್ನಾಗಿ ಗೊತ್ತಿತ್ತು. ಇನ್ಯಾಕೆ ಸಿಟ್ಟು? ಎಂಬುದು. ಅದೂ ಸಹಾ ಅರ್ಧಸತ್ಯದ ಮಾತು. ನಾವು ಎಂದೂ ಇದರ ಬದಲಾವಣೆಗೆ ಕೈ ಹಾಕದಂತೆ ಮಾಡುವ ವಾದ ಅದು.

ಇನ್ನೊಂದು ವಿಷಯ, ಸುಮಾರು 2010ರಿಂದ ನಾವು ಬಿಜೆಪಿಯ, ನರೇಂದ್ರ ಮೋದಿಯ ಬೆಂಬಲಿಗರನ್ನು ಭಕ್ತರೆಂದು ಕರೆದು ಗೇಲಿ ಮಾಡುತ್ತಲೇ ಬಂದಿದ್ದೇವೆ. ಅವರನ್ನು ಅನ್‍ಫ್ರೆಂಡ್ ಮಾಡುವ ಬೆದರಿಕೆ ಹಾಕುತ್ತಲೇ ಬಂದಿದ್ದೇವೆ. ಅದರಿಂದ ಆದ ಪರಿಣಾಮ ಏನು ಎನ್ನುವ ಉತ್ತರವನ್ನು ಹುಡುಕುವ ಸಮಯ ಬಂದಿದೆ. 2009ರ ಚುನಾವಣೆಯಲ್ಲಿ ಕರ್ನಾಟಕದ ಮತದಾರರಲ್ಲಿ 41.6% ಜನ ಬಿಜೆಪಿಗೆ ಮತ ಹಾಕಿದರೆ, 2014 ರಲ್ಲಿ 43% ಮತದಾರರು ಬಿಜೆಪಿಗೆ ತಮ್ಮ ಮತ ನೀಡಿದರು. 2019ರಲ್ಲಿ ಬಿಜೆಪಿಯ ಮತದಾರರ ಪ್ರಮಾಣ 52%. ನಾವು, ನೆಟ್ಟಿಗರೂ, ಈ ಹೆಚ್ಚಳಕ್ಕೆ ಕಾರಣರಾಗಿದ್ದೇವೆಯೇ?

ಆಯ್ತು, ನಾವು ಕಾರಣರಲ್ಲ ಎಂದಿಟ್ಟುಕೊಳ್ಳೋಣ. ಸದ್ಯದ ಈ ಅಸಹ್ಯಕರ, ಅವಮಾನಕರ ವಿದ್ಯಮಾನಗಳು ಮುಂದೆ ಮರುಕಳಿಸದಂತೆ ಮಾಡಲು ನಮ್ಮ ವ್ಯಂಗ್ಯ, ಸಿಟ್ಟು ಏನಾದರೂ ಮಾಡಬಲ್ಲವೇ? ಇಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ನಾವು ಮಾಡುವ ಪ್ರತಿರೋಧ, ವ್ಯಂಗ್ಯಕ್ಕೆ ನೀಡಿರುವ ಸ್ವಾತಂತ್ರ್ಯವು ಒಂದು ಲೆಕ್ಕಾಚಾರದೊಂದಿಗೆ ನೀಡಲಾಗಿದ್ದು ಎನ್ನುವ ವಿಷಯವನ್ನು ಮನದಟ್ಟಾಗಿಸಬೇಕಿದೆ.

ಈ ವಿದ್ಯಮಾನಗಳು ನಮ್ಮನ್ನು, ನಮ್ಮ ರಾಜ್ಯವನ್ನು ಅವಮಾನಕ್ಕೆ ದೂಡಿವೆ ಎಂದರೆ ಇವು ಮರುಕಳಿಸದಂತೆ ಆಗದಂತೆ ಏನು ಮಾಡಬೇಕು ಎನ್ನುವ ಚಿಂತನೆಯೂ ಸಾಮಾಜಿಕ ಜಾಲತಾಣಗಳಲ್ಲಿ ಶುರು ಮಾಡಬೇಕಿದೆ. ಭವಿಷ್ಯವನ್ನು ರೂಪಿಸುವ ಚಿಂತನೆಗಳು ಶುರುವಾದರೆ ಅಲ್ಲಿ ವ್ಯಂಗ್ಯಕ್ಕೆ ಸ್ಥಾನವಿರುವುದಿಲ್ಲ; ಒಂದು ವೇಳೆ ಇದ್ದರೂ ಅದು Constructive ಆಗಿರುತ್ತೆ. ನಮ್ಮ ಪ್ರತಿ ಫೇಸ್‍ಬುಕ್ ಗೋಡೆಬರಹ ಸಕಾರಾತ್ಮಕ ಬದಲಾವಣೆಗೆ ಪೂರಕವಾಗಿದೆಯೇ ಎನ್ನುವ ಪ್ರಶ್ನೆ ಉದ್ಭವಿಸುತ್ತದೆ.

ರಾಜಕೀಯ ಸ್ಥಿತಿಯನ್ನು ಉತ್ತಮವಾಗಿ ವಿಶ್ಲೇಷಿಸಿದ್ದೇವೆ ಎಂದ ಮಾತ್ರಕ್ಕೆ ಹೆಮ್ಮೆ ಪಡುವುದನ್ನು ನಿಲ್ಲಿಸುತ್ತೇವೆ. ಖಾರವಾಗಿ ಬರೆಯುವುದರಿಂದ ಏನಾದರೂ ಲಾಭವಿದೆಯೇ ಎನ್ನುವುದನ್ನು ಕೇಳಿಕೊಳ್ಳುತ್ತೇವೆ. ಸತ್ಯವನ್ನು ನುಡಿದ ಮಾತ್ರಕ್ಕೆ ನಮ್ಮ ಕರ್ತವ್ಯ ಮುಗಿಯುವುದಿಲ್ಲ ಎಂದುದು ತಿಳಿಯುವುದೂ ಭವಿಷ್ಯಕ್ಕೆ ನಾವು ನಿಜವಾಗಿಯೂ ಜವಾಬ್ದಾರರಾದಾಗ ಮಾತ್ರ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....