Homeಕರ್ನಾಟಕಈ ದುರಿತ ಕಾಲದಲ್ಲಿ ನೆಟ್ಟಿಗರಿಗೊಂದು ಸಿಟ್ಟಿನ ಪತ್ರ

ಈ ದುರಿತ ಕಾಲದಲ್ಲಿ ನೆಟ್ಟಿಗರಿಗೊಂದು ಸಿಟ್ಟಿನ ಪತ್ರ

2009ರ ಚುನಾವಣೆಯಲ್ಲಿ ಕರ್ನಾಟಕದ ಮತದಾರರಲ್ಲಿ 41.6% ಜನ ಬಿಜೆಪಿಗೆ ಮತ ಹಾಕಿದರೆ, 2014 ರಲ್ಲಿ 43% ಮತದಾರರು ಬಿಜೆಪಿಗೆ ತಮ್ಮ ಮತ ನೀಡಿದರು. 2019ರಲ್ಲಿ ಬಿಜೆಪಿಯ ಮತದಾರರ ಪ್ರಮಾಣ 52%. ನಾವು, ನೆಟ್ಟಿಗರೂ, ಈ ಹೆಚ್ಚಳಕ್ಕೆ ಕಾರಣರಾಗಿದ್ದೇವೆಯೇ?

- Advertisement -
- Advertisement -

ಪ್ರಿಯ ನೆಟ್ಟಿಗರೆ,
ಕರ್ನಾಟಕದಲ್ಲಿ ಮೈತ್ರಿ ಸರಕಾರ ಸಂಕಷ್ಟದಲ್ಲಿದೆ. ಹಲವಾರು ಶಾಸಕರು ರಾಜೀನಾಮೆ ನೀಡಿದ್ದಾರೆ. ಕುದುರೆ ವ್ಯಾಪಾರ ನಡೆಯುತ್ತಿದೆ ಎನ್ನುವ ಸುದ್ದಿಗಳು ಪ್ರಚಲಿತವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಎಲ್ಲಿ ನೋಡಿದರೂ ಇದರ ಬಗ್ಗೆಯೇ ಬರಹಗಳನ್ನು ಬರೆಯುತ್ತಿದ್ದೀರಿ. ಸದ್ಯದ ಸ್ಥಿತಿಯನ್ನು ವಿವರಿಸಲು ಇಷ್ಟು ಮಟ್ಟದ ಹಾಸ್ಯದ ವ್ಯಂಗ್ಯದ ಬಳಕೆಗೆ ಒಂದು ರೀತಿಯ ಪೈಪೋಟಿಯೇ ನಡೆಸಿದ್ದಂತಿದೆ.

ಈ ರೀತಿಯಲ್ಲಿ ಗೇಲಿ ಮಾಡಲು ನಮಗೆ ಸಂಪೂರ್ಣ ಅಧಿಕಾರವಿದೆ. ಎಲ್ಲಾ ರಾಜಕೀಯ ಹಿತಾಸಕ್ತಿಗಳಿಗೂ ಸಾಮಾಜಿಕ ಜಾಲತಾಣಗಳಲ್ಲಿ ಅವರ ಗೇಲಿಯಾಗುತ್ತಿದೆ ಎನ್ನುವ ಅರಿವಿದೆ. ಆದರೂ ಅವರೇನೂ ಮಾಡುವುದಿಲ್ಲ. ನಮಗೆ ಸಾಂವಿಧಾನಿಕವಾಗಿ ಸಿಕ್ಕ ಹಕ್ಕಿನ ಕಾರಣದಿಂದ, ಅವರೇನೂ ಮಾಡಲಾಗದೇ ನಿಷ್ಕ್ರಿಯರಾಗಿದ್ದಾರೆಂದು ನಾವೆಂದುಕೊಳ್ಳುತ್ತೇವೆ. ಆದರೆ ವಾಸ್ತವ ಅದಲ್ಲ. ಯಾವ ರಾಜಕೀಯ ಶಕ್ತಿಯೂ ನೇರವಾಗಿ ಯಾವ ಕ್ರಮಗಳನ್ನೂ ತೆಗೆದುಕೊಳ್ಳಲೇ ಇರುವುದಕ್ಕೆ ಕಾರಣವೆಂದರೆ ಈ ಬರಹಗಳು ಅವರಿಗೆ ಯಾವುದೇ ರೀತಿಯ ಅಪಾಯವನ್ನು ಒಡ್ಡುವುದಿಲ್ಲ. ಅಪಾಯ ಒಡ್ಡಿದಾಗ ಏನಾಗಬಹುದು ಎನ್ನುವುದನ್ನು ಈಗೀಗ ಕಾಣುತ್ತಿದ್ದೇವೆ.

ಸಾಮಾಜಿಕ ಜಾಲತಾಣಗಳಲ್ಲಿ ಬರೆಯುವುದರಿಂದ ನಮಗೆಲ್ಲ ಒಂದು ರೀತಿಯ ಸೆನ್ಸ್ ಆಫ್ ಪಾವರ್ ಸಿಗುತ್ತೆ; ನಾವು ಇತರರಿಗಿಂತ ಉತ್ತಮರು ಎನ್ನುವ ಮೇಲರಿಮೆಯ ಭಾವನೆಯನ್ನೂ ನೀಡುತ್ತದೆ. ಈ ಮೇಲರಿಮೆ ನಮ್ಮ ಮುಂದೆ ಇರುವ ಸವಾಲುಗಳನ್ನು ಸರಿಯಾದ ರೀತಿಯಲ್ಲಿ ಎದುರಿಸದೇ ಇರುವುದಕ್ಕೆ ಕಾರಣವಾಗಬಲ್ಲದು.

ಆದರೆ ಪ್ರಸಕ್ತ ಬೆಳವಣಿಗೆಗಳಿಂದ ನಮಗಾರಿಗೂ ಆಘಾತವಾದಂತೆ ತೋರುತ್ತಿಲ್ಲ. ಆಘಾತವಾಗುವಂತಹ ಸಂದರ್ಭಗಳೇ ನಮಗಿಲ್ಲವೇನೋ? ನಮ್ಮಲ್ಲಿ ಕೆಲವರು ಈ ಬೆಳವಣಿಗೆಗೆ ಸಿಟ್ಟನ್ನು ತೋರಿಸುತ್ತಿದ್ದಾರೆ. ಈ ಸಿಟ್ಟನ್ನು ನಮ್ಮ ಫೇಸ್‍ಬುಕ್‍ನ ಜಾಣ್ಮೆಯ ಬರಹಗಳಿಂದ ಮಾತ್ರ ತಣಿಸಬೇಕೆ? ಅಪಾಯವಿರುವುದು ಇಲ್ಲಿಯೇ ಗೆಳೆಯರೆ, ನಮ್ಮ ಸಿಟ್ಟು ತಣಿದುಬಿಡುತ್ತೆ ಕೆಲಮಟ್ಟಿಗೆ. ಸಿಟ್ಟು ತಣಿಯದಂತೆ ಉಳಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ. ಇನ್ನೂ ಒಂದು ವಾದವಿದೆ. ಆ ಸಿಟ್ಟು ಯಾವ ಕಾರಣಕ್ಕೆ? ಇವರನ್ನು ಆಯ್ಕೆ ಮಾಡಿದಾಗ ಇವರು ಎಂಥವರು ಎನ್ನುವುದು ನಮಗೆಲ್ಲರಿಗೂ ಚೆನ್ನಾಗಿ ಗೊತ್ತಿತ್ತು. ಇನ್ಯಾಕೆ ಸಿಟ್ಟು? ಎಂಬುದು. ಅದೂ ಸಹಾ ಅರ್ಧಸತ್ಯದ ಮಾತು. ನಾವು ಎಂದೂ ಇದರ ಬದಲಾವಣೆಗೆ ಕೈ ಹಾಕದಂತೆ ಮಾಡುವ ವಾದ ಅದು.

ಇನ್ನೊಂದು ವಿಷಯ, ಸುಮಾರು 2010ರಿಂದ ನಾವು ಬಿಜೆಪಿಯ, ನರೇಂದ್ರ ಮೋದಿಯ ಬೆಂಬಲಿಗರನ್ನು ಭಕ್ತರೆಂದು ಕರೆದು ಗೇಲಿ ಮಾಡುತ್ತಲೇ ಬಂದಿದ್ದೇವೆ. ಅವರನ್ನು ಅನ್‍ಫ್ರೆಂಡ್ ಮಾಡುವ ಬೆದರಿಕೆ ಹಾಕುತ್ತಲೇ ಬಂದಿದ್ದೇವೆ. ಅದರಿಂದ ಆದ ಪರಿಣಾಮ ಏನು ಎನ್ನುವ ಉತ್ತರವನ್ನು ಹುಡುಕುವ ಸಮಯ ಬಂದಿದೆ. 2009ರ ಚುನಾವಣೆಯಲ್ಲಿ ಕರ್ನಾಟಕದ ಮತದಾರರಲ್ಲಿ 41.6% ಜನ ಬಿಜೆಪಿಗೆ ಮತ ಹಾಕಿದರೆ, 2014 ರಲ್ಲಿ 43% ಮತದಾರರು ಬಿಜೆಪಿಗೆ ತಮ್ಮ ಮತ ನೀಡಿದರು. 2019ರಲ್ಲಿ ಬಿಜೆಪಿಯ ಮತದಾರರ ಪ್ರಮಾಣ 52%. ನಾವು, ನೆಟ್ಟಿಗರೂ, ಈ ಹೆಚ್ಚಳಕ್ಕೆ ಕಾರಣರಾಗಿದ್ದೇವೆಯೇ?

ಆಯ್ತು, ನಾವು ಕಾರಣರಲ್ಲ ಎಂದಿಟ್ಟುಕೊಳ್ಳೋಣ. ಸದ್ಯದ ಈ ಅಸಹ್ಯಕರ, ಅವಮಾನಕರ ವಿದ್ಯಮಾನಗಳು ಮುಂದೆ ಮರುಕಳಿಸದಂತೆ ಮಾಡಲು ನಮ್ಮ ವ್ಯಂಗ್ಯ, ಸಿಟ್ಟು ಏನಾದರೂ ಮಾಡಬಲ್ಲವೇ? ಇಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ನಾವು ಮಾಡುವ ಪ್ರತಿರೋಧ, ವ್ಯಂಗ್ಯಕ್ಕೆ ನೀಡಿರುವ ಸ್ವಾತಂತ್ರ್ಯವು ಒಂದು ಲೆಕ್ಕಾಚಾರದೊಂದಿಗೆ ನೀಡಲಾಗಿದ್ದು ಎನ್ನುವ ವಿಷಯವನ್ನು ಮನದಟ್ಟಾಗಿಸಬೇಕಿದೆ.

ಈ ವಿದ್ಯಮಾನಗಳು ನಮ್ಮನ್ನು, ನಮ್ಮ ರಾಜ್ಯವನ್ನು ಅವಮಾನಕ್ಕೆ ದೂಡಿವೆ ಎಂದರೆ ಇವು ಮರುಕಳಿಸದಂತೆ ಆಗದಂತೆ ಏನು ಮಾಡಬೇಕು ಎನ್ನುವ ಚಿಂತನೆಯೂ ಸಾಮಾಜಿಕ ಜಾಲತಾಣಗಳಲ್ಲಿ ಶುರು ಮಾಡಬೇಕಿದೆ. ಭವಿಷ್ಯವನ್ನು ರೂಪಿಸುವ ಚಿಂತನೆಗಳು ಶುರುವಾದರೆ ಅಲ್ಲಿ ವ್ಯಂಗ್ಯಕ್ಕೆ ಸ್ಥಾನವಿರುವುದಿಲ್ಲ; ಒಂದು ವೇಳೆ ಇದ್ದರೂ ಅದು Constructive ಆಗಿರುತ್ತೆ. ನಮ್ಮ ಪ್ರತಿ ಫೇಸ್‍ಬುಕ್ ಗೋಡೆಬರಹ ಸಕಾರಾತ್ಮಕ ಬದಲಾವಣೆಗೆ ಪೂರಕವಾಗಿದೆಯೇ ಎನ್ನುವ ಪ್ರಶ್ನೆ ಉದ್ಭವಿಸುತ್ತದೆ.

ರಾಜಕೀಯ ಸ್ಥಿತಿಯನ್ನು ಉತ್ತಮವಾಗಿ ವಿಶ್ಲೇಷಿಸಿದ್ದೇವೆ ಎಂದ ಮಾತ್ರಕ್ಕೆ ಹೆಮ್ಮೆ ಪಡುವುದನ್ನು ನಿಲ್ಲಿಸುತ್ತೇವೆ. ಖಾರವಾಗಿ ಬರೆಯುವುದರಿಂದ ಏನಾದರೂ ಲಾಭವಿದೆಯೇ ಎನ್ನುವುದನ್ನು ಕೇಳಿಕೊಳ್ಳುತ್ತೇವೆ. ಸತ್ಯವನ್ನು ನುಡಿದ ಮಾತ್ರಕ್ಕೆ ನಮ್ಮ ಕರ್ತವ್ಯ ಮುಗಿಯುವುದಿಲ್ಲ ಎಂದುದು ತಿಳಿಯುವುದೂ ಭವಿಷ್ಯಕ್ಕೆ ನಾವು ನಿಜವಾಗಿಯೂ ಜವಾಬ್ದಾರರಾದಾಗ ಮಾತ್ರ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...