Homeಕರ್ನಾಟಕಈ ದುರಿತ ಕಾಲದಲ್ಲಿ ನೆಟ್ಟಿಗರಿಗೊಂದು ಸಿಟ್ಟಿನ ಪತ್ರ

ಈ ದುರಿತ ಕಾಲದಲ್ಲಿ ನೆಟ್ಟಿಗರಿಗೊಂದು ಸಿಟ್ಟಿನ ಪತ್ರ

2009ರ ಚುನಾವಣೆಯಲ್ಲಿ ಕರ್ನಾಟಕದ ಮತದಾರರಲ್ಲಿ 41.6% ಜನ ಬಿಜೆಪಿಗೆ ಮತ ಹಾಕಿದರೆ, 2014 ರಲ್ಲಿ 43% ಮತದಾರರು ಬಿಜೆಪಿಗೆ ತಮ್ಮ ಮತ ನೀಡಿದರು. 2019ರಲ್ಲಿ ಬಿಜೆಪಿಯ ಮತದಾರರ ಪ್ರಮಾಣ 52%. ನಾವು, ನೆಟ್ಟಿಗರೂ, ಈ ಹೆಚ್ಚಳಕ್ಕೆ ಕಾರಣರಾಗಿದ್ದೇವೆಯೇ?

- Advertisement -
- Advertisement -

ಪ್ರಿಯ ನೆಟ್ಟಿಗರೆ,
ಕರ್ನಾಟಕದಲ್ಲಿ ಮೈತ್ರಿ ಸರಕಾರ ಸಂಕಷ್ಟದಲ್ಲಿದೆ. ಹಲವಾರು ಶಾಸಕರು ರಾಜೀನಾಮೆ ನೀಡಿದ್ದಾರೆ. ಕುದುರೆ ವ್ಯಾಪಾರ ನಡೆಯುತ್ತಿದೆ ಎನ್ನುವ ಸುದ್ದಿಗಳು ಪ್ರಚಲಿತವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಎಲ್ಲಿ ನೋಡಿದರೂ ಇದರ ಬಗ್ಗೆಯೇ ಬರಹಗಳನ್ನು ಬರೆಯುತ್ತಿದ್ದೀರಿ. ಸದ್ಯದ ಸ್ಥಿತಿಯನ್ನು ವಿವರಿಸಲು ಇಷ್ಟು ಮಟ್ಟದ ಹಾಸ್ಯದ ವ್ಯಂಗ್ಯದ ಬಳಕೆಗೆ ಒಂದು ರೀತಿಯ ಪೈಪೋಟಿಯೇ ನಡೆಸಿದ್ದಂತಿದೆ.

ಈ ರೀತಿಯಲ್ಲಿ ಗೇಲಿ ಮಾಡಲು ನಮಗೆ ಸಂಪೂರ್ಣ ಅಧಿಕಾರವಿದೆ. ಎಲ್ಲಾ ರಾಜಕೀಯ ಹಿತಾಸಕ್ತಿಗಳಿಗೂ ಸಾಮಾಜಿಕ ಜಾಲತಾಣಗಳಲ್ಲಿ ಅವರ ಗೇಲಿಯಾಗುತ್ತಿದೆ ಎನ್ನುವ ಅರಿವಿದೆ. ಆದರೂ ಅವರೇನೂ ಮಾಡುವುದಿಲ್ಲ. ನಮಗೆ ಸಾಂವಿಧಾನಿಕವಾಗಿ ಸಿಕ್ಕ ಹಕ್ಕಿನ ಕಾರಣದಿಂದ, ಅವರೇನೂ ಮಾಡಲಾಗದೇ ನಿಷ್ಕ್ರಿಯರಾಗಿದ್ದಾರೆಂದು ನಾವೆಂದುಕೊಳ್ಳುತ್ತೇವೆ. ಆದರೆ ವಾಸ್ತವ ಅದಲ್ಲ. ಯಾವ ರಾಜಕೀಯ ಶಕ್ತಿಯೂ ನೇರವಾಗಿ ಯಾವ ಕ್ರಮಗಳನ್ನೂ ತೆಗೆದುಕೊಳ್ಳಲೇ ಇರುವುದಕ್ಕೆ ಕಾರಣವೆಂದರೆ ಈ ಬರಹಗಳು ಅವರಿಗೆ ಯಾವುದೇ ರೀತಿಯ ಅಪಾಯವನ್ನು ಒಡ್ಡುವುದಿಲ್ಲ. ಅಪಾಯ ಒಡ್ಡಿದಾಗ ಏನಾಗಬಹುದು ಎನ್ನುವುದನ್ನು ಈಗೀಗ ಕಾಣುತ್ತಿದ್ದೇವೆ.

ಸಾಮಾಜಿಕ ಜಾಲತಾಣಗಳಲ್ಲಿ ಬರೆಯುವುದರಿಂದ ನಮಗೆಲ್ಲ ಒಂದು ರೀತಿಯ ಸೆನ್ಸ್ ಆಫ್ ಪಾವರ್ ಸಿಗುತ್ತೆ; ನಾವು ಇತರರಿಗಿಂತ ಉತ್ತಮರು ಎನ್ನುವ ಮೇಲರಿಮೆಯ ಭಾವನೆಯನ್ನೂ ನೀಡುತ್ತದೆ. ಈ ಮೇಲರಿಮೆ ನಮ್ಮ ಮುಂದೆ ಇರುವ ಸವಾಲುಗಳನ್ನು ಸರಿಯಾದ ರೀತಿಯಲ್ಲಿ ಎದುರಿಸದೇ ಇರುವುದಕ್ಕೆ ಕಾರಣವಾಗಬಲ್ಲದು.

ಆದರೆ ಪ್ರಸಕ್ತ ಬೆಳವಣಿಗೆಗಳಿಂದ ನಮಗಾರಿಗೂ ಆಘಾತವಾದಂತೆ ತೋರುತ್ತಿಲ್ಲ. ಆಘಾತವಾಗುವಂತಹ ಸಂದರ್ಭಗಳೇ ನಮಗಿಲ್ಲವೇನೋ? ನಮ್ಮಲ್ಲಿ ಕೆಲವರು ಈ ಬೆಳವಣಿಗೆಗೆ ಸಿಟ್ಟನ್ನು ತೋರಿಸುತ್ತಿದ್ದಾರೆ. ಈ ಸಿಟ್ಟನ್ನು ನಮ್ಮ ಫೇಸ್‍ಬುಕ್‍ನ ಜಾಣ್ಮೆಯ ಬರಹಗಳಿಂದ ಮಾತ್ರ ತಣಿಸಬೇಕೆ? ಅಪಾಯವಿರುವುದು ಇಲ್ಲಿಯೇ ಗೆಳೆಯರೆ, ನಮ್ಮ ಸಿಟ್ಟು ತಣಿದುಬಿಡುತ್ತೆ ಕೆಲಮಟ್ಟಿಗೆ. ಸಿಟ್ಟು ತಣಿಯದಂತೆ ಉಳಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ. ಇನ್ನೂ ಒಂದು ವಾದವಿದೆ. ಆ ಸಿಟ್ಟು ಯಾವ ಕಾರಣಕ್ಕೆ? ಇವರನ್ನು ಆಯ್ಕೆ ಮಾಡಿದಾಗ ಇವರು ಎಂಥವರು ಎನ್ನುವುದು ನಮಗೆಲ್ಲರಿಗೂ ಚೆನ್ನಾಗಿ ಗೊತ್ತಿತ್ತು. ಇನ್ಯಾಕೆ ಸಿಟ್ಟು? ಎಂಬುದು. ಅದೂ ಸಹಾ ಅರ್ಧಸತ್ಯದ ಮಾತು. ನಾವು ಎಂದೂ ಇದರ ಬದಲಾವಣೆಗೆ ಕೈ ಹಾಕದಂತೆ ಮಾಡುವ ವಾದ ಅದು.

ಇನ್ನೊಂದು ವಿಷಯ, ಸುಮಾರು 2010ರಿಂದ ನಾವು ಬಿಜೆಪಿಯ, ನರೇಂದ್ರ ಮೋದಿಯ ಬೆಂಬಲಿಗರನ್ನು ಭಕ್ತರೆಂದು ಕರೆದು ಗೇಲಿ ಮಾಡುತ್ತಲೇ ಬಂದಿದ್ದೇವೆ. ಅವರನ್ನು ಅನ್‍ಫ್ರೆಂಡ್ ಮಾಡುವ ಬೆದರಿಕೆ ಹಾಕುತ್ತಲೇ ಬಂದಿದ್ದೇವೆ. ಅದರಿಂದ ಆದ ಪರಿಣಾಮ ಏನು ಎನ್ನುವ ಉತ್ತರವನ್ನು ಹುಡುಕುವ ಸಮಯ ಬಂದಿದೆ. 2009ರ ಚುನಾವಣೆಯಲ್ಲಿ ಕರ್ನಾಟಕದ ಮತದಾರರಲ್ಲಿ 41.6% ಜನ ಬಿಜೆಪಿಗೆ ಮತ ಹಾಕಿದರೆ, 2014 ರಲ್ಲಿ 43% ಮತದಾರರು ಬಿಜೆಪಿಗೆ ತಮ್ಮ ಮತ ನೀಡಿದರು. 2019ರಲ್ಲಿ ಬಿಜೆಪಿಯ ಮತದಾರರ ಪ್ರಮಾಣ 52%. ನಾವು, ನೆಟ್ಟಿಗರೂ, ಈ ಹೆಚ್ಚಳಕ್ಕೆ ಕಾರಣರಾಗಿದ್ದೇವೆಯೇ?

ಆಯ್ತು, ನಾವು ಕಾರಣರಲ್ಲ ಎಂದಿಟ್ಟುಕೊಳ್ಳೋಣ. ಸದ್ಯದ ಈ ಅಸಹ್ಯಕರ, ಅವಮಾನಕರ ವಿದ್ಯಮಾನಗಳು ಮುಂದೆ ಮರುಕಳಿಸದಂತೆ ಮಾಡಲು ನಮ್ಮ ವ್ಯಂಗ್ಯ, ಸಿಟ್ಟು ಏನಾದರೂ ಮಾಡಬಲ್ಲವೇ? ಇಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ನಾವು ಮಾಡುವ ಪ್ರತಿರೋಧ, ವ್ಯಂಗ್ಯಕ್ಕೆ ನೀಡಿರುವ ಸ್ವಾತಂತ್ರ್ಯವು ಒಂದು ಲೆಕ್ಕಾಚಾರದೊಂದಿಗೆ ನೀಡಲಾಗಿದ್ದು ಎನ್ನುವ ವಿಷಯವನ್ನು ಮನದಟ್ಟಾಗಿಸಬೇಕಿದೆ.

ಈ ವಿದ್ಯಮಾನಗಳು ನಮ್ಮನ್ನು, ನಮ್ಮ ರಾಜ್ಯವನ್ನು ಅವಮಾನಕ್ಕೆ ದೂಡಿವೆ ಎಂದರೆ ಇವು ಮರುಕಳಿಸದಂತೆ ಆಗದಂತೆ ಏನು ಮಾಡಬೇಕು ಎನ್ನುವ ಚಿಂತನೆಯೂ ಸಾಮಾಜಿಕ ಜಾಲತಾಣಗಳಲ್ಲಿ ಶುರು ಮಾಡಬೇಕಿದೆ. ಭವಿಷ್ಯವನ್ನು ರೂಪಿಸುವ ಚಿಂತನೆಗಳು ಶುರುವಾದರೆ ಅಲ್ಲಿ ವ್ಯಂಗ್ಯಕ್ಕೆ ಸ್ಥಾನವಿರುವುದಿಲ್ಲ; ಒಂದು ವೇಳೆ ಇದ್ದರೂ ಅದು Constructive ಆಗಿರುತ್ತೆ. ನಮ್ಮ ಪ್ರತಿ ಫೇಸ್‍ಬುಕ್ ಗೋಡೆಬರಹ ಸಕಾರಾತ್ಮಕ ಬದಲಾವಣೆಗೆ ಪೂರಕವಾಗಿದೆಯೇ ಎನ್ನುವ ಪ್ರಶ್ನೆ ಉದ್ಭವಿಸುತ್ತದೆ.

ರಾಜಕೀಯ ಸ್ಥಿತಿಯನ್ನು ಉತ್ತಮವಾಗಿ ವಿಶ್ಲೇಷಿಸಿದ್ದೇವೆ ಎಂದ ಮಾತ್ರಕ್ಕೆ ಹೆಮ್ಮೆ ಪಡುವುದನ್ನು ನಿಲ್ಲಿಸುತ್ತೇವೆ. ಖಾರವಾಗಿ ಬರೆಯುವುದರಿಂದ ಏನಾದರೂ ಲಾಭವಿದೆಯೇ ಎನ್ನುವುದನ್ನು ಕೇಳಿಕೊಳ್ಳುತ್ತೇವೆ. ಸತ್ಯವನ್ನು ನುಡಿದ ಮಾತ್ರಕ್ಕೆ ನಮ್ಮ ಕರ್ತವ್ಯ ಮುಗಿಯುವುದಿಲ್ಲ ಎಂದುದು ತಿಳಿಯುವುದೂ ಭವಿಷ್ಯಕ್ಕೆ ನಾವು ನಿಜವಾಗಿಯೂ ಜವಾಬ್ದಾರರಾದಾಗ ಮಾತ್ರ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿಎಂಸಿ ಬಂಡಾಯ : 20 ಸಂಸದರು ಪಕ್ಷ ತೊರೆದರೂ ಅನರ್ಹತೆ ತಪ್ಪಿದ್ದಲ್ಲ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸುಮಾರು 20 ಲೋಕಸಭಾ ಸಂಸದರು ಪಕ್ಷದಿಂದ ಬೇರ್ಪಟ್ಟು ಪ್ರತ್ಯೇಕ ಗುಂಪು ರಚಿಸಲು ಸಜ್ಜಾಗಿದ್ದಾರೆ ಎಂಬ ವರದಿಗಳ ನಡುವೆ, ಕೇವಲ ಮೂರನೇ ಎರಡರಷ್ಟು ಸಂಸದರ ಬೆಂಬಲ ಹೊಂದಿರುವುದರಿಂದ ಮಾತ್ರ...

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....

ವೈಜಾಗ್ ಸ್ಟೀಲ್ ಅಪಘಾತಕ್ಕೆ 8 ಮಂದಿ ಬಲಿ: ಸಿಬ್ಬಂದಿ ಕೊರತೆಯ ಬಗ್ಗೆ ಕಾರ್ಮಿಕ ಸಂಘಗಳ ಆರೋಪ: ಸಾವಿನ ಅಂಚಿನಲ್ಲೂ ಕುಟುಂಬಕ್ಕಾಗಿ ಮಿಡಿದ ಕಾರ್ಮಿಕ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಪ್ರಸಿದ್ಧ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಸೋಮವಾರ (ಜೂನ್ 8, 2026) ಸಂಜೆ ಭೀಕರ ಕೈಗಾರಿಕಾ ದುರಂತವೊಂದು ಸಂಭವಿಸಿದೆ. ಸ್ಥಾವರದ ಸ್ಟೀಲ್ ಮೆಲ್ಟ್ ಶಾಪ್-1 (SMS-1)...

ಅಂದು ಪಿಣರಾಯಿ ಮನೆ ಮೇಲೆ ದಾಳಿ; ಈಗ ವೀಣಾ ವಿಜಯನ್‌ಗೆ ಸಮನ್ಸ್‌: ಹಿರಿಯ ಕಮ್ಯುನಿಸ್ಟ್‌ ನಾಯಕನ ಕುಟುಂಬದ ಮೇಲೆ ಇಡಿ ಕಣ್ಣು

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮನೆ ಮೇಲೆ ಕಳೆದ ತಿಂಗಳು ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಕೊನೆಗೆ ಅಲ್ಲಿ ಏನೂ ಸಿಗದೆ ಬರಿಗೈನಲ್ಲಿ ಅಧಿಕಾರಿಗಳು...

ಮೋದಿ ಸರ್ಕಾರಕ್ಕೆ 12 ವರ್ಷ : 12 ರಿಂದ 4ಕ್ಕೆ ಇಳಿದ ಉಜ್ವಲ ಯೋಜನೆ ಸಿಲಿಂಡರ್

ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರ 12 ವರ್ಷಗಳ ಆಡಳಿತಾವಧಿಯನ್ನು ಪೂರ್ಣಗೊಳಿಸಿದೆ ಅಥವಾ ಮೋದಿ ಅವರು ಮೂರನೇ ಅವಧಿಗೆ ಪ್ರಧಾನಿಯಾಗಿ 2026ರ ಜೂನ್ 9ಕ್ಕೆ ಎರಡು ವರ್ಷಗಳು ಪೂರ್ಣಗೊಂಡಿವೆ....

ಬಿರ್ಸಾ ಮುಂಡಾ 150ನೇ ಜಯಂತಿ ಹೆಸರಿನಲ್ಲಿ ಆದಿವಾಸಿ ಹಕ್ಕುಗಳ ಮೇಲೆ ಸಂಘ ಪರಿವಾರದ ಕಣ್ಣು?

ಮೇ 24 ರಂದು ನವದೆಹಲಿಯ ಕೆಂಪುಕೋಟೆಯಲ್ಲಿ (Red Fort) ಭಾರತದಾದ್ಯಂತದ ಲಕ್ಷಾಂತರ ಪರಿಶಿಷ್ಟ ಪಂಗಡದ (ST) ಸಮುದಾಯಗಳ ಜನರು ಒಟ್ಟಿಗೆ ಸೇರಿದ್ದರು. ‘ಜಂಜಾತಿ ಸುರಕ್ಷಾ ಮಂಚ್’ (ಬುಡಕಟ್ಟು ರಕ್ಷಣಾ ವೇದಿಕೆ) ಆಯೋಜಿಸಿದ್ದ ಈ...

ಆಪರೇಷನ್ ಕಮಲ ಭೀತಿ: ರಾಜ್ಯಸಭಾ ಚುನಾವಣೆಗೂ ಮುನ್ನ ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರು ಕರ್ನಾಟಕಕ್ಕೆ ಶಿಫ್ಟ್‌?

ಜೂನ್ 18 ರ ರಾಜ್ಯಸಭಾ ಚುನಾವಣೆಗೆ ಮುನ್ನ ಬಿಜೆಪಿಯಿಂದ ಅಕ್ರಮವಾಗಿ ಹಣ ವರ್ಗಾವಣೆ ಪ್ರಯತ್ನಗಳು ನಡೆಯುತ್ತಿವೆ ಎಂದು ಮಧ್ಯಪ್ರದೇಶ ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಅಡ್ಡ ಮತದಾನ ತಡೆಗಟ್ಟುವ ಜೊತೆಗೆ ತನ್ನ ಶಿಬಿರದ ಒಗ್ಗಟ್ಟು...

ವೀರಪ್ಪನ್ ಹೇಳಿದ ಕಥೆಗೆ 30 ವರ್ಷಗಳ ಬಳಿಕ ಕ್ಲೈಮ್ಯಾಕ್ಸ್ : ಸನ್ ಟಿವಿ ವಿರುದ್ಧ ಕಾನೂನು ಸಮರದಲ್ಲಿ ಗೆದ್ದ ನಟಿ ಸುಕನ್ಯಾ​

ತೊಂಬತ್ತರ ದಶಕದಲ್ಲಿ ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಪ್ರಮುಖ ನಟರೊಂದಿಗೆ ನಟಿಸಿ, ಅಪಾರ ಜನಪ್ರಿಯತೆ ಗಳಿಸಿದ್ದ ನಟಿ ಸುಕನ್ಯಾ ರಮೇಶ್, ಪ್ರಸ್ತುತ ಕೆಲವು ಅಪರೂಪದ ಪಾತ್ರಗಳನ್ನು ಹೊರತುಪಡಿಸಿದರೆ ಚಿತ್ರರಂಗದಲ್ಲಿ ಅಷ್ಟಾಗಿ ಸಕ್ರಿಯರಾಗಿಲ್ಲ. ಈ ನಡುವೆ 2024ರಲ್ಲಿ...

“ರಾಜೀನಾಮೆ ನೀಡಿ, ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ”: ಟಿಎಂಸಿ ಬಂಡುಕೋರರಿಗೆ ಮಹುವಾ ಮೊಯಿತ್ರಾ ನೇರ ಸವಾಲು

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗೆ ತೀವ್ರ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟಕ್ಕೆ ಬೆಂಬಲ ನೀಡಲು ಮುಂದಾಗಿರುವ ಸ್ವಪಕ್ಷದ ಬಂಡಾಯ ಸಂಸದರ ವಿರುದ್ಧ ಟಿಎಂಸಿ ಸಂಸದೆ...

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...