Homeಮುಖಪುಟಲಾಕ್‌ಡೌನ್‌ ಕುರಿತು ಹತ್ತು ವರ್ಷದ ಬಾಲಕ ಬರೆದ ಗಮನಸೆಳೆದ ಪತ್ರ

ಲಾಕ್‌ಡೌನ್‌ ಕುರಿತು ಹತ್ತು ವರ್ಷದ ಬಾಲಕ ಬರೆದ ಗಮನಸೆಳೆದ ಪತ್ರ

- Advertisement -
- Advertisement -

ಕೊರೊನಾ ವೈರಸ್ ಹಾವಳಿ ಮುಂದುವರೆದಿದ್ದು, ಇಲ್ಲಿಯವರೆಗೆ ಹತ್ತು ಲಕ್ಷಕ್ಕೂ ಹೆಚ್ಚು ಜನರು ಕೊರೊನಾ ಸೋಂಕಿನಿಂದ ಬಳಲುತ್ತಿದ್ದಾರೆ. ಈ ಸಂದರ್ಭದಲ್ಲಿ ಲಾಕ್‌ಡೌನ್‌ ಅನಿವಾರ್ಯವಾದರೂ ಅದನ್ನು ಹೇರಿದ ರೀತಿಗೆ ತೀವ್ರ ಟೀಕೆ ವ್ಯಕ್ತವಾಗಿದೆ. ಮೋದಿಯವರು ಚಪ್ಪಾಳೆ ತಟ್ಟಲು, ದೀಪ ಹಚ್ಚಲು ಮೂರು ದಿನ ಸಮಯ ಕೊಟುತ್ತಾರೆ, ಆದರೆ ಲಾಕ್‌ಡೌನ್‌ಗೆ ಕೊಟ್ಟಿದ್ದು ಕೇವಲ 4 ಗಂಟೆ ಎಂಬ ಅಸಮಾಧಾನ ಭುಗಿಲೆದ್ದಿದೆ.

ಈ ಹಿನ್ನೆಲೆಯಲ್ಲಿ ಮೋದಿಯವರ ಲಾಕ್‌ಡೌನ್‌ ಕುರಿತು 10 ವರ್ಷದ ಶಾಲಾ ಬಾಲಕ ಕಬೀರ್‌ ಬರೆದ ಪತ್ರವೊಂದು ಗಮನಸೆಳೆಯುವಂತಿದೆ. ಪತ್ರ ಓದಿ

ನಮಸ್ಕಾರ,
ನಾನು ಕಬೀರ್ ಎಸ್ ಸಿರಸಂಗಿ.

ನಾನು ಇಂದು ಮೋದಿಯವರು ಕೊರೊನಾ ವಿರುದ್ಧ ಕೈಗೊಂಡಿರುವ ಕಾರ್ಯಾಚರಣೆಯ ಬಗ್ಗೆ ಮಾತನಾಡುತ್ತಿದ್ದೇನೆ.

ಮೋದಿಯವರು ಯಾವುದೇ ಆಲೋಚನೆಯೂ ಇಲ್ಲದೆ 21 ದಿನಗಳ ಕಾಲ ಲಾಕ್‌ಡೌನ್ ಘೋಷಿಸಿದ್ದಾರೆ. ಅವರು ಇದೂವರೆಗೂ ಮುಂದಾಲೋಚನೆ ಇಲ್ಲದೆ ಮಾಡಿರುವ ನೋಟು ಅಮಾನ್ಯೀಕರಣ, ಸಿಎಎ, ಎನ್ಆರ್‌ಸಿ, ಎನ್‌ಪಿಆರ್ ನಂತಹ ನಿರ್ಧಾರಗಳಲ್ಲಿ ಇದೂ ಒಂದು. ನಾವು ಅವರ ನಿರ್ಧಾರಗಳನ್ನು ನೋಡಿದರೆ ತಿಳಿಯುತ್ತದೆ ಅದರಲ್ಲಿ ಯಾವುದೇ ಆಲೋಚನೆ ಇಲ್ಲವೆಂದು. ಆದರೆ ಅವೆಲ್ಲವೂ ಭಾರತೀಯ ಜನರಿಗೆ ತೊಂದರೆಯನ್ನು ಉಂಟುಮಾಡುತ್ತಿವೆ.

21 ದಿನಗಳ ಲಾಕ್‌ಡೌನ್‌ ಮಾಡಿರುವುದು ತಪ್ಪಾದುದಲ್ಲ. ಹಾಗಂತ ಇದು ಸರಿಯಾದದ್ದೂ ಅಲ್ಲ. ಇದರ ಒಳ್ಳೆಯ ಭಾಗವೆಂದರೆ ಕೊರೊನಾ ಸೋಂಕು ಹರಡುವುದನ್ನು ನಿಯಂತ್ರಿಸುವುದು. ಆದರೆ ಇದರಲ್ಲಿ ತಪ್ಪಾಗಿದ್ದು, ದೇಶದ ಹಲವಾರು ಜನರು ಬಡವರಿದ್ದಾರೆ. ಈಗ ಮಾರುಕಟ್ಟೆ ಮುಚ್ಚಿದ್ದು, ಜನರು ಅಗತ್ಯ ವಸ್ತುಗಳನ್ನು ಕೊಳ್ಳಲು ಸಾಧ್ಯವಾಗಿಲ್ಲ. ಇನ್ನೂ ಹಲವರು ಮನೆಯಿಲ್ಲದೆ, ಹಣವಿಲ್ಲದೆ ಪರದಾಡುತ್ತಿದ್ದಾರೆ. ಅವರಿಗೆ ಉಳಿಯಲು ಜಾಗವೂ ಇಲ್ಲ – ತಿನ್ನಲು ಆಹಾರವೂ ಇಲ್ಲದಂತಾಗಿದೆ. ಮೋದಿಯವರು ಇಂತಹ ಜನರು ಅವರವರ ಹಳ್ಳಿಗಳನ್ನು ಸೇರಲು ಅಥವಾ ಅಗತ್ಯತೆಗಳನ್ನು ಪೂರೈಸಿಕೊಳ್ಳಲು ಕಾಲಾವಕಾಶವನ್ನು ನೀಡಬೇಕಾಗಿತ್ತು. ಹಾಗಾಗದೇ ಅವರೆಲ್ಲರೂ ಪರಿತಪಿಸುತ್ತಿದ್ದಾರೆ.

ಕಬೀರ್ ಎಸ್ ಸಿರಸಂಗಿ

ಮೋದಿಯವರ ತಪ್ಪು ನಿರ್ಧಾರದಿಂದಾಗಿ ನಾನು ನಮ್ಮ ಪೋಷಕರನ್ನು ಸೇರಲು ಸಾಧ್ಯವಾಗಿಲ್ಲ. 21 ದಿನಗಳ ಕಾಲ ನಾನು ಅವರಿಂದ ದೂರ ಉಳಿಯಬೇಕಾದ ಪರಿಸ್ಥಿತಿ ಉಂಟಾಗಿದೆ. ಇದು ನನ್ನೊಬ್ಬನ ಸಮಸ್ಯೆಯಷ್ಟೇ ಅಲ್ಲ. ನನ್ನಂತಹ ಹಲವು ಮಕ್ಕಳ ಸ್ಥಿತಿಯೂ ಹೀಗೆ ಆಗಿದೆ. ನಾವೆಲ್ಲರೂ ಇದನ್ನು ನಿಲ್ಲಿಸಬೇಕು ಮತ್ತು ಬದಲಾಯಿಸಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...