Homeಮುಖಪುಟಲಾಕ್‌ಡೌನ್‌ ಕುರಿತು ಹತ್ತು ವರ್ಷದ ಬಾಲಕ ಬರೆದ ಗಮನಸೆಳೆದ ಪತ್ರ

ಲಾಕ್‌ಡೌನ್‌ ಕುರಿತು ಹತ್ತು ವರ್ಷದ ಬಾಲಕ ಬರೆದ ಗಮನಸೆಳೆದ ಪತ್ರ

- Advertisement -
- Advertisement -

ಕೊರೊನಾ ವೈರಸ್ ಹಾವಳಿ ಮುಂದುವರೆದಿದ್ದು, ಇಲ್ಲಿಯವರೆಗೆ ಹತ್ತು ಲಕ್ಷಕ್ಕೂ ಹೆಚ್ಚು ಜನರು ಕೊರೊನಾ ಸೋಂಕಿನಿಂದ ಬಳಲುತ್ತಿದ್ದಾರೆ. ಈ ಸಂದರ್ಭದಲ್ಲಿ ಲಾಕ್‌ಡೌನ್‌ ಅನಿವಾರ್ಯವಾದರೂ ಅದನ್ನು ಹೇರಿದ ರೀತಿಗೆ ತೀವ್ರ ಟೀಕೆ ವ್ಯಕ್ತವಾಗಿದೆ. ಮೋದಿಯವರು ಚಪ್ಪಾಳೆ ತಟ್ಟಲು, ದೀಪ ಹಚ್ಚಲು ಮೂರು ದಿನ ಸಮಯ ಕೊಟುತ್ತಾರೆ, ಆದರೆ ಲಾಕ್‌ಡೌನ್‌ಗೆ ಕೊಟ್ಟಿದ್ದು ಕೇವಲ 4 ಗಂಟೆ ಎಂಬ ಅಸಮಾಧಾನ ಭುಗಿಲೆದ್ದಿದೆ.

ಈ ಹಿನ್ನೆಲೆಯಲ್ಲಿ ಮೋದಿಯವರ ಲಾಕ್‌ಡೌನ್‌ ಕುರಿತು 10 ವರ್ಷದ ಶಾಲಾ ಬಾಲಕ ಕಬೀರ್‌ ಬರೆದ ಪತ್ರವೊಂದು ಗಮನಸೆಳೆಯುವಂತಿದೆ. ಪತ್ರ ಓದಿ

ನಮಸ್ಕಾರ,
ನಾನು ಕಬೀರ್ ಎಸ್ ಸಿರಸಂಗಿ.

ನಾನು ಇಂದು ಮೋದಿಯವರು ಕೊರೊನಾ ವಿರುದ್ಧ ಕೈಗೊಂಡಿರುವ ಕಾರ್ಯಾಚರಣೆಯ ಬಗ್ಗೆ ಮಾತನಾಡುತ್ತಿದ್ದೇನೆ.

ಮೋದಿಯವರು ಯಾವುದೇ ಆಲೋಚನೆಯೂ ಇಲ್ಲದೆ 21 ದಿನಗಳ ಕಾಲ ಲಾಕ್‌ಡೌನ್ ಘೋಷಿಸಿದ್ದಾರೆ. ಅವರು ಇದೂವರೆಗೂ ಮುಂದಾಲೋಚನೆ ಇಲ್ಲದೆ ಮಾಡಿರುವ ನೋಟು ಅಮಾನ್ಯೀಕರಣ, ಸಿಎಎ, ಎನ್ಆರ್‌ಸಿ, ಎನ್‌ಪಿಆರ್ ನಂತಹ ನಿರ್ಧಾರಗಳಲ್ಲಿ ಇದೂ ಒಂದು. ನಾವು ಅವರ ನಿರ್ಧಾರಗಳನ್ನು ನೋಡಿದರೆ ತಿಳಿಯುತ್ತದೆ ಅದರಲ್ಲಿ ಯಾವುದೇ ಆಲೋಚನೆ ಇಲ್ಲವೆಂದು. ಆದರೆ ಅವೆಲ್ಲವೂ ಭಾರತೀಯ ಜನರಿಗೆ ತೊಂದರೆಯನ್ನು ಉಂಟುಮಾಡುತ್ತಿವೆ.

21 ದಿನಗಳ ಲಾಕ್‌ಡೌನ್‌ ಮಾಡಿರುವುದು ತಪ್ಪಾದುದಲ್ಲ. ಹಾಗಂತ ಇದು ಸರಿಯಾದದ್ದೂ ಅಲ್ಲ. ಇದರ ಒಳ್ಳೆಯ ಭಾಗವೆಂದರೆ ಕೊರೊನಾ ಸೋಂಕು ಹರಡುವುದನ್ನು ನಿಯಂತ್ರಿಸುವುದು. ಆದರೆ ಇದರಲ್ಲಿ ತಪ್ಪಾಗಿದ್ದು, ದೇಶದ ಹಲವಾರು ಜನರು ಬಡವರಿದ್ದಾರೆ. ಈಗ ಮಾರುಕಟ್ಟೆ ಮುಚ್ಚಿದ್ದು, ಜನರು ಅಗತ್ಯ ವಸ್ತುಗಳನ್ನು ಕೊಳ್ಳಲು ಸಾಧ್ಯವಾಗಿಲ್ಲ. ಇನ್ನೂ ಹಲವರು ಮನೆಯಿಲ್ಲದೆ, ಹಣವಿಲ್ಲದೆ ಪರದಾಡುತ್ತಿದ್ದಾರೆ. ಅವರಿಗೆ ಉಳಿಯಲು ಜಾಗವೂ ಇಲ್ಲ – ತಿನ್ನಲು ಆಹಾರವೂ ಇಲ್ಲದಂತಾಗಿದೆ. ಮೋದಿಯವರು ಇಂತಹ ಜನರು ಅವರವರ ಹಳ್ಳಿಗಳನ್ನು ಸೇರಲು ಅಥವಾ ಅಗತ್ಯತೆಗಳನ್ನು ಪೂರೈಸಿಕೊಳ್ಳಲು ಕಾಲಾವಕಾಶವನ್ನು ನೀಡಬೇಕಾಗಿತ್ತು. ಹಾಗಾಗದೇ ಅವರೆಲ್ಲರೂ ಪರಿತಪಿಸುತ್ತಿದ್ದಾರೆ.

ಕಬೀರ್ ಎಸ್ ಸಿರಸಂಗಿ

ಮೋದಿಯವರ ತಪ್ಪು ನಿರ್ಧಾರದಿಂದಾಗಿ ನಾನು ನಮ್ಮ ಪೋಷಕರನ್ನು ಸೇರಲು ಸಾಧ್ಯವಾಗಿಲ್ಲ. 21 ದಿನಗಳ ಕಾಲ ನಾನು ಅವರಿಂದ ದೂರ ಉಳಿಯಬೇಕಾದ ಪರಿಸ್ಥಿತಿ ಉಂಟಾಗಿದೆ. ಇದು ನನ್ನೊಬ್ಬನ ಸಮಸ್ಯೆಯಷ್ಟೇ ಅಲ್ಲ. ನನ್ನಂತಹ ಹಲವು ಮಕ್ಕಳ ಸ್ಥಿತಿಯೂ ಹೀಗೆ ಆಗಿದೆ. ನಾವೆಲ್ಲರೂ ಇದನ್ನು ನಿಲ್ಲಿಸಬೇಕು ಮತ್ತು ಬದಲಾಯಿಸಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...