Homeಮುಖಪುಟಲಾಕ್‌ಡೌನ್‌ ಕುರಿತು ಹತ್ತು ವರ್ಷದ ಬಾಲಕ ಬರೆದ ಗಮನಸೆಳೆದ ಪತ್ರ

ಲಾಕ್‌ಡೌನ್‌ ಕುರಿತು ಹತ್ತು ವರ್ಷದ ಬಾಲಕ ಬರೆದ ಗಮನಸೆಳೆದ ಪತ್ರ

- Advertisement -
- Advertisement -

ಕೊರೊನಾ ವೈರಸ್ ಹಾವಳಿ ಮುಂದುವರೆದಿದ್ದು, ಇಲ್ಲಿಯವರೆಗೆ ಹತ್ತು ಲಕ್ಷಕ್ಕೂ ಹೆಚ್ಚು ಜನರು ಕೊರೊನಾ ಸೋಂಕಿನಿಂದ ಬಳಲುತ್ತಿದ್ದಾರೆ. ಈ ಸಂದರ್ಭದಲ್ಲಿ ಲಾಕ್‌ಡೌನ್‌ ಅನಿವಾರ್ಯವಾದರೂ ಅದನ್ನು ಹೇರಿದ ರೀತಿಗೆ ತೀವ್ರ ಟೀಕೆ ವ್ಯಕ್ತವಾಗಿದೆ. ಮೋದಿಯವರು ಚಪ್ಪಾಳೆ ತಟ್ಟಲು, ದೀಪ ಹಚ್ಚಲು ಮೂರು ದಿನ ಸಮಯ ಕೊಟುತ್ತಾರೆ, ಆದರೆ ಲಾಕ್‌ಡೌನ್‌ಗೆ ಕೊಟ್ಟಿದ್ದು ಕೇವಲ 4 ಗಂಟೆ ಎಂಬ ಅಸಮಾಧಾನ ಭುಗಿಲೆದ್ದಿದೆ.

ಈ ಹಿನ್ನೆಲೆಯಲ್ಲಿ ಮೋದಿಯವರ ಲಾಕ್‌ಡೌನ್‌ ಕುರಿತು 10 ವರ್ಷದ ಶಾಲಾ ಬಾಲಕ ಕಬೀರ್‌ ಬರೆದ ಪತ್ರವೊಂದು ಗಮನಸೆಳೆಯುವಂತಿದೆ. ಪತ್ರ ಓದಿ

ನಮಸ್ಕಾರ,
ನಾನು ಕಬೀರ್ ಎಸ್ ಸಿರಸಂಗಿ.

ನಾನು ಇಂದು ಮೋದಿಯವರು ಕೊರೊನಾ ವಿರುದ್ಧ ಕೈಗೊಂಡಿರುವ ಕಾರ್ಯಾಚರಣೆಯ ಬಗ್ಗೆ ಮಾತನಾಡುತ್ತಿದ್ದೇನೆ.

ಮೋದಿಯವರು ಯಾವುದೇ ಆಲೋಚನೆಯೂ ಇಲ್ಲದೆ 21 ದಿನಗಳ ಕಾಲ ಲಾಕ್‌ಡೌನ್ ಘೋಷಿಸಿದ್ದಾರೆ. ಅವರು ಇದೂವರೆಗೂ ಮುಂದಾಲೋಚನೆ ಇಲ್ಲದೆ ಮಾಡಿರುವ ನೋಟು ಅಮಾನ್ಯೀಕರಣ, ಸಿಎಎ, ಎನ್ಆರ್‌ಸಿ, ಎನ್‌ಪಿಆರ್ ನಂತಹ ನಿರ್ಧಾರಗಳಲ್ಲಿ ಇದೂ ಒಂದು. ನಾವು ಅವರ ನಿರ್ಧಾರಗಳನ್ನು ನೋಡಿದರೆ ತಿಳಿಯುತ್ತದೆ ಅದರಲ್ಲಿ ಯಾವುದೇ ಆಲೋಚನೆ ಇಲ್ಲವೆಂದು. ಆದರೆ ಅವೆಲ್ಲವೂ ಭಾರತೀಯ ಜನರಿಗೆ ತೊಂದರೆಯನ್ನು ಉಂಟುಮಾಡುತ್ತಿವೆ.

21 ದಿನಗಳ ಲಾಕ್‌ಡೌನ್‌ ಮಾಡಿರುವುದು ತಪ್ಪಾದುದಲ್ಲ. ಹಾಗಂತ ಇದು ಸರಿಯಾದದ್ದೂ ಅಲ್ಲ. ಇದರ ಒಳ್ಳೆಯ ಭಾಗವೆಂದರೆ ಕೊರೊನಾ ಸೋಂಕು ಹರಡುವುದನ್ನು ನಿಯಂತ್ರಿಸುವುದು. ಆದರೆ ಇದರಲ್ಲಿ ತಪ್ಪಾಗಿದ್ದು, ದೇಶದ ಹಲವಾರು ಜನರು ಬಡವರಿದ್ದಾರೆ. ಈಗ ಮಾರುಕಟ್ಟೆ ಮುಚ್ಚಿದ್ದು, ಜನರು ಅಗತ್ಯ ವಸ್ತುಗಳನ್ನು ಕೊಳ್ಳಲು ಸಾಧ್ಯವಾಗಿಲ್ಲ. ಇನ್ನೂ ಹಲವರು ಮನೆಯಿಲ್ಲದೆ, ಹಣವಿಲ್ಲದೆ ಪರದಾಡುತ್ತಿದ್ದಾರೆ. ಅವರಿಗೆ ಉಳಿಯಲು ಜಾಗವೂ ಇಲ್ಲ – ತಿನ್ನಲು ಆಹಾರವೂ ಇಲ್ಲದಂತಾಗಿದೆ. ಮೋದಿಯವರು ಇಂತಹ ಜನರು ಅವರವರ ಹಳ್ಳಿಗಳನ್ನು ಸೇರಲು ಅಥವಾ ಅಗತ್ಯತೆಗಳನ್ನು ಪೂರೈಸಿಕೊಳ್ಳಲು ಕಾಲಾವಕಾಶವನ್ನು ನೀಡಬೇಕಾಗಿತ್ತು. ಹಾಗಾಗದೇ ಅವರೆಲ್ಲರೂ ಪರಿತಪಿಸುತ್ತಿದ್ದಾರೆ.

ಕಬೀರ್ ಎಸ್ ಸಿರಸಂಗಿ

ಮೋದಿಯವರ ತಪ್ಪು ನಿರ್ಧಾರದಿಂದಾಗಿ ನಾನು ನಮ್ಮ ಪೋಷಕರನ್ನು ಸೇರಲು ಸಾಧ್ಯವಾಗಿಲ್ಲ. 21 ದಿನಗಳ ಕಾಲ ನಾನು ಅವರಿಂದ ದೂರ ಉಳಿಯಬೇಕಾದ ಪರಿಸ್ಥಿತಿ ಉಂಟಾಗಿದೆ. ಇದು ನನ್ನೊಬ್ಬನ ಸಮಸ್ಯೆಯಷ್ಟೇ ಅಲ್ಲ. ನನ್ನಂತಹ ಹಲವು ಮಕ್ಕಳ ಸ್ಥಿತಿಯೂ ಹೀಗೆ ಆಗಿದೆ. ನಾವೆಲ್ಲರೂ ಇದನ್ನು ನಿಲ್ಲಿಸಬೇಕು ಮತ್ತು ಬದಲಾಯಿಸಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...