Homeಮುಖಪುಟಮೈಸೂರು ಬೆಂಗಳೂರು ದಶಪಥ ರಸ್ತೆ ಕಾಮಗಾರಿಯಲ್ಲಿ ಲೋಪದೋಷ ಕಂಡುಬಂದಿದೆ: ಬಸವರಾಜ ಬೊಮ್ಮಾಯಿ

ಮೈಸೂರು ಬೆಂಗಳೂರು ದಶಪಥ ರಸ್ತೆ ಕಾಮಗಾರಿಯಲ್ಲಿ ಲೋಪದೋಷ ಕಂಡುಬಂದಿದೆ: ಬಸವರಾಜ ಬೊಮ್ಮಾಯಿ

- Advertisement -
- Advertisement -

ಮೈಸೂರು ಬೆಂಗಳೂರು ದಶಪಥ ರಸ್ತೆ ಕಾಮಗಾರಿಯಲ್ಲಿ ಲೋಪದೋಷ ಕಂಡುಬಂದಿದೆ ಎಂದು ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಒಪ್ಪಿಕೊಂಡಿದ್ದಾರೆ.

ಬಹು ನಿರೀಕ್ಷೆಯ ಈ ದಶಪಥ ರಸ್ತೆಯ ಕಾಮಗಾರಿಗಳು ಇನ್ನೂ ಮುಗಿದಿಲ್ಲ. ಕಳೆದ ವರ್ಷ ಸುರಿದ ಮಹಾಮಳೆಗೆ ಹಲವು ಕಡೆ ರಸ್ತೆಗಳು ಮುಳುಗಿ ಜನರು ಪರದಾಡುವಂತಾಗಿತ್ತು. ಇಂತಹ ಸಂದರ್ಭದಲ್ಲಿ ಈ ರಸ್ತೆಗಳು ಮುಕ್ತ ಸಾರ್ವಜನಿಕ ಬಳಕೆಗೆ ಬರಲು ಇನ್ನಷ್ಟು ಕಾಲಾವಕಾಶ ಬೇಕು ಎನ್ನಲಾಗಿದೆ.

ಇಂದು ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಬೊಮ್ಮಾಯಿಯವರು, “ದಶಪಥ ರಸ್ತೆಯ ವೈಮಾನಿಕ ಸಮೀಕ್ಷೆಯಲ್ಲಿ ಲೋಪದೋಷಗಳು ಕಂಡುಬಂದಿರುವುದು ನಿಜ. ಅದನ್ನೆಲ್ಲ ಪರಿಶೀಲಿಸಿ ಕೆಲಸ ಸಂಪೂರ್ಣವಾದ ನಂತರವೇ ಲೋಕಾರ್ಪಣೆ ಮಾಡಲಾಗುವುದು” ಎಂದಿದ್ದಾರೆ.

“ಈ ಬಗ್ಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿ ಸಚಿವ ನೀತಿನ್ ಗಡ್ಕರಿ ಅವರೊಂದಿಗೆ ಇಂದು ಸಂಜೆ ಸಭೆ ಇದೆ. ಅಲ್ಲಿ ಚರ್ಚಿಸಿ, ಪರಿಸ್ಥಿತಿ ಪರಿಶೀಲಿಸಿ ‌ಮುಂದಿನ ತೀರ್ಮಾನಕ್ಕೆ ಬರಲಾಗುವುದು” ಎಂದು ತಿಳಿಸಿದ್ದಾರೆ.

ಈ ನಡುವೆ ಮೈಸೂರು ಬೆಂಗಳೂರು ದಶಪಥ ರಸ್ತೆ ಕಾಮಗಾರಿಯಲ್ಲಿ ಹಗರಣ ನಡೆದಿದ್ದು, ಕಳಪೆ ಗುಣಮಟ್ಟದಲ್ಲಿ ರಸ್ತೆ ನಿರ್ಮಾಣ ಮಾಡಲಾಗಿದೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ.

ಮೈಸೂರು-ಬೆಂಗಳೂರು ಹೆದ್ದಾರಿ ಕಾಮಗಾರಿಯಲ್ಲಿ ಭೂಸ್ವಾಧೀನ ಮಾಡಿಕೊಳ್ಳುವ ವೇಳೆ ಯೋಜನಾ ನಿರ್ದೇಶಕರು 800 ಕೋಟಿ ರೂ ಹಗರಣ ನಡೆಸಿದ್ದು, ಈ ಕುರಿತು ಸಿಬಿಐ ತನಿಖೆ ಮಾಡಬೇಕೆಂದು ಮಾಗಡಿ ಜೆಡಿಎಸ್ ಶಾಸಕ ಎ.ಮಂಜುನಾಥ್ ಒತ್ತಾಯಿಸಿದ್ದರು.

ಈ ಸಮಸ್ಯೆಗಳಿಗೆಲ್ಲ ಪ್ರಾಜೆಕ್ಟ್ ಡೈರೆಕ್ಟರ್ ಡಿ.ಬಿ ಶ್ರೀಧರ್ ನೇರ ಹೊಣೆಯಾಗಿದ್ದಾರೆ. ಅವರಿಗೆ ಬಿಜೆಪಿ ಸಂಸದ ಪ್ರತಾಪ್ ಸಿಂಹರವರ ಬೆಂಬಲವಿದೆ. ಹಾಗಾಗಿ ಈ ಹಗರಣದ ಕುರಿತು ಸಿಬಿಐ ತನಿಖೆ ನಡೆಯಬೇಕು ಎಂದು ಮನವಿ ಸಲ್ಲಿಸಲು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿಯವರನ್ನು ಭೇಟಿಯಾಗುತ್ತೇವೆ ಮತ್ತು ಪ್ರಧಾನಿಯವರ ಗಮನಕ್ಕೆ ತರುತ್ತೇವೆ ಎಂದಿದ್ದರು.

ಮುಗಿಯದ 6 ನಗರಗಳಿಗೆ ಪ್ರವೇಶ-ನಿರ್ಗಮನ ದ್ವಾರದ ಗೊಂದಲ

ಬೆಂಗಳೂರಿನ ನೈಸ್ ರಸ್ತೆಯ ನಂತರದಿಂದ ಆರಂಭವಾಗುವ ದಶಪಥ ರಸ್ತೆಯು ಮೈಸೂರಿನ ಮಣಿಪಾಲ್ ಆಸ್ಪತ್ರೆ ವೃತ್ತದವರೆಗೂ ಒಟ್ಟು 118 ಕಿ.ಮೀ ಸಾಗುತ್ತದೆ. ಆರು ಪಥ ಹೈವೇ ಇದ್ದರೆ ನಾಲ್ಕು ಪಥಗಳನ್ನು ಸರ್ವೀಸ್ ರಸ್ತೆಗೆ ಮೀಸಲಿಡಲಾಗಿದೆ. ಆದರೆ ಬೆಂಗಳೂರಿನಿಂದ ಮೈಸೂರಿನವರೆಗೆ ಹೈವೇಯಲ್ಲಿ ಸಿಗುವ 6 ನಗರಗಳಿಗೆ ಪ್ರವೇಶ-ನಿರ್ಗಮನ ದಾರಿಯ ಕಾಮಗಾರಿ ಗೊಂದಲದ ಗೂಡಾಗಿದೆ.

ಮೊದಲು ಹೆದ್ದಾರಿ ಪ್ರಾಧಿಕಾರವು 118 ಕಿ.ಮೀ ವ್ಯಾಪ್ತಿಯಲ್ಲಿ ಕೇವಲ 1 ಪ್ರವೇಶ ನಿರ್ಗಮನದ ದಾರಿಗೆ ಮಾತ್ರ ಅವಕಾಶ ನೀಡಿತ್ತು. ಆದರೆ ಜನರ ಒತ್ತಾಯದ ನಂತರ ಬಿಡದಿ, ರಾಮನಗರ, ಚನ್ನಪಟ್ಟಣ, ಮದ್ದೂರು, ಮಂಡ್ಯ ಮತ್ತು ಶ್ರೀರಂಗಪಟ್ಟಣಗಳಿಗೆ ಪ್ರವೇಶ-ನಿರ್ಗಮನದ ದಾರಿ ಮಾಡಲು ಒಪ್ಪಿತ್ತು. ಅದಕ್ಕಾಗಿ ಹಣಕಾಸಿನ ಅಂದಾಜು ಸಹ ಮಾಡಿದೆ. ಆದರೆ ಕಾಮಗಾರಿ ಮಾತ್ರ ಆರಂಭವಾಗಿಲ್ಲ.

ಇದನ್ನೂ ಓದಿ: ಮೈಸೂರು-ಬೆಂಗಳೂರು ಹೆದ್ದಾರಿ ಕಾಮಗಾರಿಯಲ್ಲಿ 800 ಕೋಟಿ ಹಗರಣ: ಮಾಗಡಿ ಶಾಸಕ ಎ.ಮಂಜುನಾಥ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...