Homeಮುಖಪುಟಮೈಸೂರು ಬೆಂಗಳೂರು ದಶಪಥ ರಸ್ತೆ ಕಾಮಗಾರಿಯಲ್ಲಿ ಲೋಪದೋಷ ಕಂಡುಬಂದಿದೆ: ಬಸವರಾಜ ಬೊಮ್ಮಾಯಿ

ಮೈಸೂರು ಬೆಂಗಳೂರು ದಶಪಥ ರಸ್ತೆ ಕಾಮಗಾರಿಯಲ್ಲಿ ಲೋಪದೋಷ ಕಂಡುಬಂದಿದೆ: ಬಸವರಾಜ ಬೊಮ್ಮಾಯಿ

- Advertisement -
- Advertisement -

ಮೈಸೂರು ಬೆಂಗಳೂರು ದಶಪಥ ರಸ್ತೆ ಕಾಮಗಾರಿಯಲ್ಲಿ ಲೋಪದೋಷ ಕಂಡುಬಂದಿದೆ ಎಂದು ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಒಪ್ಪಿಕೊಂಡಿದ್ದಾರೆ.

ಬಹು ನಿರೀಕ್ಷೆಯ ಈ ದಶಪಥ ರಸ್ತೆಯ ಕಾಮಗಾರಿಗಳು ಇನ್ನೂ ಮುಗಿದಿಲ್ಲ. ಕಳೆದ ವರ್ಷ ಸುರಿದ ಮಹಾಮಳೆಗೆ ಹಲವು ಕಡೆ ರಸ್ತೆಗಳು ಮುಳುಗಿ ಜನರು ಪರದಾಡುವಂತಾಗಿತ್ತು. ಇಂತಹ ಸಂದರ್ಭದಲ್ಲಿ ಈ ರಸ್ತೆಗಳು ಮುಕ್ತ ಸಾರ್ವಜನಿಕ ಬಳಕೆಗೆ ಬರಲು ಇನ್ನಷ್ಟು ಕಾಲಾವಕಾಶ ಬೇಕು ಎನ್ನಲಾಗಿದೆ.

ಇಂದು ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಬೊಮ್ಮಾಯಿಯವರು, “ದಶಪಥ ರಸ್ತೆಯ ವೈಮಾನಿಕ ಸಮೀಕ್ಷೆಯಲ್ಲಿ ಲೋಪದೋಷಗಳು ಕಂಡುಬಂದಿರುವುದು ನಿಜ. ಅದನ್ನೆಲ್ಲ ಪರಿಶೀಲಿಸಿ ಕೆಲಸ ಸಂಪೂರ್ಣವಾದ ನಂತರವೇ ಲೋಕಾರ್ಪಣೆ ಮಾಡಲಾಗುವುದು” ಎಂದಿದ್ದಾರೆ.

“ಈ ಬಗ್ಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿ ಸಚಿವ ನೀತಿನ್ ಗಡ್ಕರಿ ಅವರೊಂದಿಗೆ ಇಂದು ಸಂಜೆ ಸಭೆ ಇದೆ. ಅಲ್ಲಿ ಚರ್ಚಿಸಿ, ಪರಿಸ್ಥಿತಿ ಪರಿಶೀಲಿಸಿ ‌ಮುಂದಿನ ತೀರ್ಮಾನಕ್ಕೆ ಬರಲಾಗುವುದು” ಎಂದು ತಿಳಿಸಿದ್ದಾರೆ.

ಈ ನಡುವೆ ಮೈಸೂರು ಬೆಂಗಳೂರು ದಶಪಥ ರಸ್ತೆ ಕಾಮಗಾರಿಯಲ್ಲಿ ಹಗರಣ ನಡೆದಿದ್ದು, ಕಳಪೆ ಗುಣಮಟ್ಟದಲ್ಲಿ ರಸ್ತೆ ನಿರ್ಮಾಣ ಮಾಡಲಾಗಿದೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ.

ಮೈಸೂರು-ಬೆಂಗಳೂರು ಹೆದ್ದಾರಿ ಕಾಮಗಾರಿಯಲ್ಲಿ ಭೂಸ್ವಾಧೀನ ಮಾಡಿಕೊಳ್ಳುವ ವೇಳೆ ಯೋಜನಾ ನಿರ್ದೇಶಕರು 800 ಕೋಟಿ ರೂ ಹಗರಣ ನಡೆಸಿದ್ದು, ಈ ಕುರಿತು ಸಿಬಿಐ ತನಿಖೆ ಮಾಡಬೇಕೆಂದು ಮಾಗಡಿ ಜೆಡಿಎಸ್ ಶಾಸಕ ಎ.ಮಂಜುನಾಥ್ ಒತ್ತಾಯಿಸಿದ್ದರು.

ಈ ಸಮಸ್ಯೆಗಳಿಗೆಲ್ಲ ಪ್ರಾಜೆಕ್ಟ್ ಡೈರೆಕ್ಟರ್ ಡಿ.ಬಿ ಶ್ರೀಧರ್ ನೇರ ಹೊಣೆಯಾಗಿದ್ದಾರೆ. ಅವರಿಗೆ ಬಿಜೆಪಿ ಸಂಸದ ಪ್ರತಾಪ್ ಸಿಂಹರವರ ಬೆಂಬಲವಿದೆ. ಹಾಗಾಗಿ ಈ ಹಗರಣದ ಕುರಿತು ಸಿಬಿಐ ತನಿಖೆ ನಡೆಯಬೇಕು ಎಂದು ಮನವಿ ಸಲ್ಲಿಸಲು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿಯವರನ್ನು ಭೇಟಿಯಾಗುತ್ತೇವೆ ಮತ್ತು ಪ್ರಧಾನಿಯವರ ಗಮನಕ್ಕೆ ತರುತ್ತೇವೆ ಎಂದಿದ್ದರು.

ಮುಗಿಯದ 6 ನಗರಗಳಿಗೆ ಪ್ರವೇಶ-ನಿರ್ಗಮನ ದ್ವಾರದ ಗೊಂದಲ

ಬೆಂಗಳೂರಿನ ನೈಸ್ ರಸ್ತೆಯ ನಂತರದಿಂದ ಆರಂಭವಾಗುವ ದಶಪಥ ರಸ್ತೆಯು ಮೈಸೂರಿನ ಮಣಿಪಾಲ್ ಆಸ್ಪತ್ರೆ ವೃತ್ತದವರೆಗೂ ಒಟ್ಟು 118 ಕಿ.ಮೀ ಸಾಗುತ್ತದೆ. ಆರು ಪಥ ಹೈವೇ ಇದ್ದರೆ ನಾಲ್ಕು ಪಥಗಳನ್ನು ಸರ್ವೀಸ್ ರಸ್ತೆಗೆ ಮೀಸಲಿಡಲಾಗಿದೆ. ಆದರೆ ಬೆಂಗಳೂರಿನಿಂದ ಮೈಸೂರಿನವರೆಗೆ ಹೈವೇಯಲ್ಲಿ ಸಿಗುವ 6 ನಗರಗಳಿಗೆ ಪ್ರವೇಶ-ನಿರ್ಗಮನ ದಾರಿಯ ಕಾಮಗಾರಿ ಗೊಂದಲದ ಗೂಡಾಗಿದೆ.

ಮೊದಲು ಹೆದ್ದಾರಿ ಪ್ರಾಧಿಕಾರವು 118 ಕಿ.ಮೀ ವ್ಯಾಪ್ತಿಯಲ್ಲಿ ಕೇವಲ 1 ಪ್ರವೇಶ ನಿರ್ಗಮನದ ದಾರಿಗೆ ಮಾತ್ರ ಅವಕಾಶ ನೀಡಿತ್ತು. ಆದರೆ ಜನರ ಒತ್ತಾಯದ ನಂತರ ಬಿಡದಿ, ರಾಮನಗರ, ಚನ್ನಪಟ್ಟಣ, ಮದ್ದೂರು, ಮಂಡ್ಯ ಮತ್ತು ಶ್ರೀರಂಗಪಟ್ಟಣಗಳಿಗೆ ಪ್ರವೇಶ-ನಿರ್ಗಮನದ ದಾರಿ ಮಾಡಲು ಒಪ್ಪಿತ್ತು. ಅದಕ್ಕಾಗಿ ಹಣಕಾಸಿನ ಅಂದಾಜು ಸಹ ಮಾಡಿದೆ. ಆದರೆ ಕಾಮಗಾರಿ ಮಾತ್ರ ಆರಂಭವಾಗಿಲ್ಲ.

ಇದನ್ನೂ ಓದಿ: ಮೈಸೂರು-ಬೆಂಗಳೂರು ಹೆದ್ದಾರಿ ಕಾಮಗಾರಿಯಲ್ಲಿ 800 ಕೋಟಿ ಹಗರಣ: ಮಾಗಡಿ ಶಾಸಕ ಎ.ಮಂಜುನಾಥ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...