Homeಮುಖಪುಟಮೈಸೂರು ಬೆಂಗಳೂರು ದಶಪಥ ರಸ್ತೆ ಕಾಮಗಾರಿಯಲ್ಲಿ ಲೋಪದೋಷ ಕಂಡುಬಂದಿದೆ: ಬಸವರಾಜ ಬೊಮ್ಮಾಯಿ

ಮೈಸೂರು ಬೆಂಗಳೂರು ದಶಪಥ ರಸ್ತೆ ಕಾಮಗಾರಿಯಲ್ಲಿ ಲೋಪದೋಷ ಕಂಡುಬಂದಿದೆ: ಬಸವರಾಜ ಬೊಮ್ಮಾಯಿ

- Advertisement -
- Advertisement -

ಮೈಸೂರು ಬೆಂಗಳೂರು ದಶಪಥ ರಸ್ತೆ ಕಾಮಗಾರಿಯಲ್ಲಿ ಲೋಪದೋಷ ಕಂಡುಬಂದಿದೆ ಎಂದು ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಒಪ್ಪಿಕೊಂಡಿದ್ದಾರೆ.

ಬಹು ನಿರೀಕ್ಷೆಯ ಈ ದಶಪಥ ರಸ್ತೆಯ ಕಾಮಗಾರಿಗಳು ಇನ್ನೂ ಮುಗಿದಿಲ್ಲ. ಕಳೆದ ವರ್ಷ ಸುರಿದ ಮಹಾಮಳೆಗೆ ಹಲವು ಕಡೆ ರಸ್ತೆಗಳು ಮುಳುಗಿ ಜನರು ಪರದಾಡುವಂತಾಗಿತ್ತು. ಇಂತಹ ಸಂದರ್ಭದಲ್ಲಿ ಈ ರಸ್ತೆಗಳು ಮುಕ್ತ ಸಾರ್ವಜನಿಕ ಬಳಕೆಗೆ ಬರಲು ಇನ್ನಷ್ಟು ಕಾಲಾವಕಾಶ ಬೇಕು ಎನ್ನಲಾಗಿದೆ.

ಇಂದು ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಬೊಮ್ಮಾಯಿಯವರು, “ದಶಪಥ ರಸ್ತೆಯ ವೈಮಾನಿಕ ಸಮೀಕ್ಷೆಯಲ್ಲಿ ಲೋಪದೋಷಗಳು ಕಂಡುಬಂದಿರುವುದು ನಿಜ. ಅದನ್ನೆಲ್ಲ ಪರಿಶೀಲಿಸಿ ಕೆಲಸ ಸಂಪೂರ್ಣವಾದ ನಂತರವೇ ಲೋಕಾರ್ಪಣೆ ಮಾಡಲಾಗುವುದು” ಎಂದಿದ್ದಾರೆ.

“ಈ ಬಗ್ಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿ ಸಚಿವ ನೀತಿನ್ ಗಡ್ಕರಿ ಅವರೊಂದಿಗೆ ಇಂದು ಸಂಜೆ ಸಭೆ ಇದೆ. ಅಲ್ಲಿ ಚರ್ಚಿಸಿ, ಪರಿಸ್ಥಿತಿ ಪರಿಶೀಲಿಸಿ ‌ಮುಂದಿನ ತೀರ್ಮಾನಕ್ಕೆ ಬರಲಾಗುವುದು” ಎಂದು ತಿಳಿಸಿದ್ದಾರೆ.

ಈ ನಡುವೆ ಮೈಸೂರು ಬೆಂಗಳೂರು ದಶಪಥ ರಸ್ತೆ ಕಾಮಗಾರಿಯಲ್ಲಿ ಹಗರಣ ನಡೆದಿದ್ದು, ಕಳಪೆ ಗುಣಮಟ್ಟದಲ್ಲಿ ರಸ್ತೆ ನಿರ್ಮಾಣ ಮಾಡಲಾಗಿದೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ.

ಮೈಸೂರು-ಬೆಂಗಳೂರು ಹೆದ್ದಾರಿ ಕಾಮಗಾರಿಯಲ್ಲಿ ಭೂಸ್ವಾಧೀನ ಮಾಡಿಕೊಳ್ಳುವ ವೇಳೆ ಯೋಜನಾ ನಿರ್ದೇಶಕರು 800 ಕೋಟಿ ರೂ ಹಗರಣ ನಡೆಸಿದ್ದು, ಈ ಕುರಿತು ಸಿಬಿಐ ತನಿಖೆ ಮಾಡಬೇಕೆಂದು ಮಾಗಡಿ ಜೆಡಿಎಸ್ ಶಾಸಕ ಎ.ಮಂಜುನಾಥ್ ಒತ್ತಾಯಿಸಿದ್ದರು.

ಈ ಸಮಸ್ಯೆಗಳಿಗೆಲ್ಲ ಪ್ರಾಜೆಕ್ಟ್ ಡೈರೆಕ್ಟರ್ ಡಿ.ಬಿ ಶ್ರೀಧರ್ ನೇರ ಹೊಣೆಯಾಗಿದ್ದಾರೆ. ಅವರಿಗೆ ಬಿಜೆಪಿ ಸಂಸದ ಪ್ರತಾಪ್ ಸಿಂಹರವರ ಬೆಂಬಲವಿದೆ. ಹಾಗಾಗಿ ಈ ಹಗರಣದ ಕುರಿತು ಸಿಬಿಐ ತನಿಖೆ ನಡೆಯಬೇಕು ಎಂದು ಮನವಿ ಸಲ್ಲಿಸಲು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿಯವರನ್ನು ಭೇಟಿಯಾಗುತ್ತೇವೆ ಮತ್ತು ಪ್ರಧಾನಿಯವರ ಗಮನಕ್ಕೆ ತರುತ್ತೇವೆ ಎಂದಿದ್ದರು.

ಮುಗಿಯದ 6 ನಗರಗಳಿಗೆ ಪ್ರವೇಶ-ನಿರ್ಗಮನ ದ್ವಾರದ ಗೊಂದಲ

ಬೆಂಗಳೂರಿನ ನೈಸ್ ರಸ್ತೆಯ ನಂತರದಿಂದ ಆರಂಭವಾಗುವ ದಶಪಥ ರಸ್ತೆಯು ಮೈಸೂರಿನ ಮಣಿಪಾಲ್ ಆಸ್ಪತ್ರೆ ವೃತ್ತದವರೆಗೂ ಒಟ್ಟು 118 ಕಿ.ಮೀ ಸಾಗುತ್ತದೆ. ಆರು ಪಥ ಹೈವೇ ಇದ್ದರೆ ನಾಲ್ಕು ಪಥಗಳನ್ನು ಸರ್ವೀಸ್ ರಸ್ತೆಗೆ ಮೀಸಲಿಡಲಾಗಿದೆ. ಆದರೆ ಬೆಂಗಳೂರಿನಿಂದ ಮೈಸೂರಿನವರೆಗೆ ಹೈವೇಯಲ್ಲಿ ಸಿಗುವ 6 ನಗರಗಳಿಗೆ ಪ್ರವೇಶ-ನಿರ್ಗಮನ ದಾರಿಯ ಕಾಮಗಾರಿ ಗೊಂದಲದ ಗೂಡಾಗಿದೆ.

ಮೊದಲು ಹೆದ್ದಾರಿ ಪ್ರಾಧಿಕಾರವು 118 ಕಿ.ಮೀ ವ್ಯಾಪ್ತಿಯಲ್ಲಿ ಕೇವಲ 1 ಪ್ರವೇಶ ನಿರ್ಗಮನದ ದಾರಿಗೆ ಮಾತ್ರ ಅವಕಾಶ ನೀಡಿತ್ತು. ಆದರೆ ಜನರ ಒತ್ತಾಯದ ನಂತರ ಬಿಡದಿ, ರಾಮನಗರ, ಚನ್ನಪಟ್ಟಣ, ಮದ್ದೂರು, ಮಂಡ್ಯ ಮತ್ತು ಶ್ರೀರಂಗಪಟ್ಟಣಗಳಿಗೆ ಪ್ರವೇಶ-ನಿರ್ಗಮನದ ದಾರಿ ಮಾಡಲು ಒಪ್ಪಿತ್ತು. ಅದಕ್ಕಾಗಿ ಹಣಕಾಸಿನ ಅಂದಾಜು ಸಹ ಮಾಡಿದೆ. ಆದರೆ ಕಾಮಗಾರಿ ಮಾತ್ರ ಆರಂಭವಾಗಿಲ್ಲ.

ಇದನ್ನೂ ಓದಿ: ಮೈಸೂರು-ಬೆಂಗಳೂರು ಹೆದ್ದಾರಿ ಕಾಮಗಾರಿಯಲ್ಲಿ 800 ಕೋಟಿ ಹಗರಣ: ಮಾಗಡಿ ಶಾಸಕ ಎ.ಮಂಜುನಾಥ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...