Homeಮುಖಪುಟಮೈಸೂರು ಬೆಂಗಳೂರು ದಶಪಥ ರಸ್ತೆ ಕಾಮಗಾರಿಯಲ್ಲಿ ಲೋಪದೋಷ ಕಂಡುಬಂದಿದೆ: ಬಸವರಾಜ ಬೊಮ್ಮಾಯಿ

ಮೈಸೂರು ಬೆಂಗಳೂರು ದಶಪಥ ರಸ್ತೆ ಕಾಮಗಾರಿಯಲ್ಲಿ ಲೋಪದೋಷ ಕಂಡುಬಂದಿದೆ: ಬಸವರಾಜ ಬೊಮ್ಮಾಯಿ

- Advertisement -
- Advertisement -

ಮೈಸೂರು ಬೆಂಗಳೂರು ದಶಪಥ ರಸ್ತೆ ಕಾಮಗಾರಿಯಲ್ಲಿ ಲೋಪದೋಷ ಕಂಡುಬಂದಿದೆ ಎಂದು ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಒಪ್ಪಿಕೊಂಡಿದ್ದಾರೆ.

ಬಹು ನಿರೀಕ್ಷೆಯ ಈ ದಶಪಥ ರಸ್ತೆಯ ಕಾಮಗಾರಿಗಳು ಇನ್ನೂ ಮುಗಿದಿಲ್ಲ. ಕಳೆದ ವರ್ಷ ಸುರಿದ ಮಹಾಮಳೆಗೆ ಹಲವು ಕಡೆ ರಸ್ತೆಗಳು ಮುಳುಗಿ ಜನರು ಪರದಾಡುವಂತಾಗಿತ್ತು. ಇಂತಹ ಸಂದರ್ಭದಲ್ಲಿ ಈ ರಸ್ತೆಗಳು ಮುಕ್ತ ಸಾರ್ವಜನಿಕ ಬಳಕೆಗೆ ಬರಲು ಇನ್ನಷ್ಟು ಕಾಲಾವಕಾಶ ಬೇಕು ಎನ್ನಲಾಗಿದೆ.

ಇಂದು ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಬೊಮ್ಮಾಯಿಯವರು, “ದಶಪಥ ರಸ್ತೆಯ ವೈಮಾನಿಕ ಸಮೀಕ್ಷೆಯಲ್ಲಿ ಲೋಪದೋಷಗಳು ಕಂಡುಬಂದಿರುವುದು ನಿಜ. ಅದನ್ನೆಲ್ಲ ಪರಿಶೀಲಿಸಿ ಕೆಲಸ ಸಂಪೂರ್ಣವಾದ ನಂತರವೇ ಲೋಕಾರ್ಪಣೆ ಮಾಡಲಾಗುವುದು” ಎಂದಿದ್ದಾರೆ.

“ಈ ಬಗ್ಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿ ಸಚಿವ ನೀತಿನ್ ಗಡ್ಕರಿ ಅವರೊಂದಿಗೆ ಇಂದು ಸಂಜೆ ಸಭೆ ಇದೆ. ಅಲ್ಲಿ ಚರ್ಚಿಸಿ, ಪರಿಸ್ಥಿತಿ ಪರಿಶೀಲಿಸಿ ‌ಮುಂದಿನ ತೀರ್ಮಾನಕ್ಕೆ ಬರಲಾಗುವುದು” ಎಂದು ತಿಳಿಸಿದ್ದಾರೆ.

ಈ ನಡುವೆ ಮೈಸೂರು ಬೆಂಗಳೂರು ದಶಪಥ ರಸ್ತೆ ಕಾಮಗಾರಿಯಲ್ಲಿ ಹಗರಣ ನಡೆದಿದ್ದು, ಕಳಪೆ ಗುಣಮಟ್ಟದಲ್ಲಿ ರಸ್ತೆ ನಿರ್ಮಾಣ ಮಾಡಲಾಗಿದೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ.

ಮೈಸೂರು-ಬೆಂಗಳೂರು ಹೆದ್ದಾರಿ ಕಾಮಗಾರಿಯಲ್ಲಿ ಭೂಸ್ವಾಧೀನ ಮಾಡಿಕೊಳ್ಳುವ ವೇಳೆ ಯೋಜನಾ ನಿರ್ದೇಶಕರು 800 ಕೋಟಿ ರೂ ಹಗರಣ ನಡೆಸಿದ್ದು, ಈ ಕುರಿತು ಸಿಬಿಐ ತನಿಖೆ ಮಾಡಬೇಕೆಂದು ಮಾಗಡಿ ಜೆಡಿಎಸ್ ಶಾಸಕ ಎ.ಮಂಜುನಾಥ್ ಒತ್ತಾಯಿಸಿದ್ದರು.

ಈ ಸಮಸ್ಯೆಗಳಿಗೆಲ್ಲ ಪ್ರಾಜೆಕ್ಟ್ ಡೈರೆಕ್ಟರ್ ಡಿ.ಬಿ ಶ್ರೀಧರ್ ನೇರ ಹೊಣೆಯಾಗಿದ್ದಾರೆ. ಅವರಿಗೆ ಬಿಜೆಪಿ ಸಂಸದ ಪ್ರತಾಪ್ ಸಿಂಹರವರ ಬೆಂಬಲವಿದೆ. ಹಾಗಾಗಿ ಈ ಹಗರಣದ ಕುರಿತು ಸಿಬಿಐ ತನಿಖೆ ನಡೆಯಬೇಕು ಎಂದು ಮನವಿ ಸಲ್ಲಿಸಲು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿಯವರನ್ನು ಭೇಟಿಯಾಗುತ್ತೇವೆ ಮತ್ತು ಪ್ರಧಾನಿಯವರ ಗಮನಕ್ಕೆ ತರುತ್ತೇವೆ ಎಂದಿದ್ದರು.

ಮುಗಿಯದ 6 ನಗರಗಳಿಗೆ ಪ್ರವೇಶ-ನಿರ್ಗಮನ ದ್ವಾರದ ಗೊಂದಲ

ಬೆಂಗಳೂರಿನ ನೈಸ್ ರಸ್ತೆಯ ನಂತರದಿಂದ ಆರಂಭವಾಗುವ ದಶಪಥ ರಸ್ತೆಯು ಮೈಸೂರಿನ ಮಣಿಪಾಲ್ ಆಸ್ಪತ್ರೆ ವೃತ್ತದವರೆಗೂ ಒಟ್ಟು 118 ಕಿ.ಮೀ ಸಾಗುತ್ತದೆ. ಆರು ಪಥ ಹೈವೇ ಇದ್ದರೆ ನಾಲ್ಕು ಪಥಗಳನ್ನು ಸರ್ವೀಸ್ ರಸ್ತೆಗೆ ಮೀಸಲಿಡಲಾಗಿದೆ. ಆದರೆ ಬೆಂಗಳೂರಿನಿಂದ ಮೈಸೂರಿನವರೆಗೆ ಹೈವೇಯಲ್ಲಿ ಸಿಗುವ 6 ನಗರಗಳಿಗೆ ಪ್ರವೇಶ-ನಿರ್ಗಮನ ದಾರಿಯ ಕಾಮಗಾರಿ ಗೊಂದಲದ ಗೂಡಾಗಿದೆ.

ಮೊದಲು ಹೆದ್ದಾರಿ ಪ್ರಾಧಿಕಾರವು 118 ಕಿ.ಮೀ ವ್ಯಾಪ್ತಿಯಲ್ಲಿ ಕೇವಲ 1 ಪ್ರವೇಶ ನಿರ್ಗಮನದ ದಾರಿಗೆ ಮಾತ್ರ ಅವಕಾಶ ನೀಡಿತ್ತು. ಆದರೆ ಜನರ ಒತ್ತಾಯದ ನಂತರ ಬಿಡದಿ, ರಾಮನಗರ, ಚನ್ನಪಟ್ಟಣ, ಮದ್ದೂರು, ಮಂಡ್ಯ ಮತ್ತು ಶ್ರೀರಂಗಪಟ್ಟಣಗಳಿಗೆ ಪ್ರವೇಶ-ನಿರ್ಗಮನದ ದಾರಿ ಮಾಡಲು ಒಪ್ಪಿತ್ತು. ಅದಕ್ಕಾಗಿ ಹಣಕಾಸಿನ ಅಂದಾಜು ಸಹ ಮಾಡಿದೆ. ಆದರೆ ಕಾಮಗಾರಿ ಮಾತ್ರ ಆರಂಭವಾಗಿಲ್ಲ.

ಇದನ್ನೂ ಓದಿ: ಮೈಸೂರು-ಬೆಂಗಳೂರು ಹೆದ್ದಾರಿ ಕಾಮಗಾರಿಯಲ್ಲಿ 800 ಕೋಟಿ ಹಗರಣ: ಮಾಗಡಿ ಶಾಸಕ ಎ.ಮಂಜುನಾಥ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...