Homeಮುಖಪುಟಮೈಸೂರು ಬೆಂಗಳೂರು ದಶಪಥ ರಸ್ತೆ ಕಾಮಗಾರಿಯಲ್ಲಿ ಲೋಪದೋಷ ಕಂಡುಬಂದಿದೆ: ಬಸವರಾಜ ಬೊಮ್ಮಾಯಿ

ಮೈಸೂರು ಬೆಂಗಳೂರು ದಶಪಥ ರಸ್ತೆ ಕಾಮಗಾರಿಯಲ್ಲಿ ಲೋಪದೋಷ ಕಂಡುಬಂದಿದೆ: ಬಸವರಾಜ ಬೊಮ್ಮಾಯಿ

- Advertisement -
- Advertisement -

ಮೈಸೂರು ಬೆಂಗಳೂರು ದಶಪಥ ರಸ್ತೆ ಕಾಮಗಾರಿಯಲ್ಲಿ ಲೋಪದೋಷ ಕಂಡುಬಂದಿದೆ ಎಂದು ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಒಪ್ಪಿಕೊಂಡಿದ್ದಾರೆ.

ಬಹು ನಿರೀಕ್ಷೆಯ ಈ ದಶಪಥ ರಸ್ತೆಯ ಕಾಮಗಾರಿಗಳು ಇನ್ನೂ ಮುಗಿದಿಲ್ಲ. ಕಳೆದ ವರ್ಷ ಸುರಿದ ಮಹಾಮಳೆಗೆ ಹಲವು ಕಡೆ ರಸ್ತೆಗಳು ಮುಳುಗಿ ಜನರು ಪರದಾಡುವಂತಾಗಿತ್ತು. ಇಂತಹ ಸಂದರ್ಭದಲ್ಲಿ ಈ ರಸ್ತೆಗಳು ಮುಕ್ತ ಸಾರ್ವಜನಿಕ ಬಳಕೆಗೆ ಬರಲು ಇನ್ನಷ್ಟು ಕಾಲಾವಕಾಶ ಬೇಕು ಎನ್ನಲಾಗಿದೆ.

ಇಂದು ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಬೊಮ್ಮಾಯಿಯವರು, “ದಶಪಥ ರಸ್ತೆಯ ವೈಮಾನಿಕ ಸಮೀಕ್ಷೆಯಲ್ಲಿ ಲೋಪದೋಷಗಳು ಕಂಡುಬಂದಿರುವುದು ನಿಜ. ಅದನ್ನೆಲ್ಲ ಪರಿಶೀಲಿಸಿ ಕೆಲಸ ಸಂಪೂರ್ಣವಾದ ನಂತರವೇ ಲೋಕಾರ್ಪಣೆ ಮಾಡಲಾಗುವುದು” ಎಂದಿದ್ದಾರೆ.

“ಈ ಬಗ್ಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿ ಸಚಿವ ನೀತಿನ್ ಗಡ್ಕರಿ ಅವರೊಂದಿಗೆ ಇಂದು ಸಂಜೆ ಸಭೆ ಇದೆ. ಅಲ್ಲಿ ಚರ್ಚಿಸಿ, ಪರಿಸ್ಥಿತಿ ಪರಿಶೀಲಿಸಿ ‌ಮುಂದಿನ ತೀರ್ಮಾನಕ್ಕೆ ಬರಲಾಗುವುದು” ಎಂದು ತಿಳಿಸಿದ್ದಾರೆ.

ಈ ನಡುವೆ ಮೈಸೂರು ಬೆಂಗಳೂರು ದಶಪಥ ರಸ್ತೆ ಕಾಮಗಾರಿಯಲ್ಲಿ ಹಗರಣ ನಡೆದಿದ್ದು, ಕಳಪೆ ಗುಣಮಟ್ಟದಲ್ಲಿ ರಸ್ತೆ ನಿರ್ಮಾಣ ಮಾಡಲಾಗಿದೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ.

ಮೈಸೂರು-ಬೆಂಗಳೂರು ಹೆದ್ದಾರಿ ಕಾಮಗಾರಿಯಲ್ಲಿ ಭೂಸ್ವಾಧೀನ ಮಾಡಿಕೊಳ್ಳುವ ವೇಳೆ ಯೋಜನಾ ನಿರ್ದೇಶಕರು 800 ಕೋಟಿ ರೂ ಹಗರಣ ನಡೆಸಿದ್ದು, ಈ ಕುರಿತು ಸಿಬಿಐ ತನಿಖೆ ಮಾಡಬೇಕೆಂದು ಮಾಗಡಿ ಜೆಡಿಎಸ್ ಶಾಸಕ ಎ.ಮಂಜುನಾಥ್ ಒತ್ತಾಯಿಸಿದ್ದರು.

ಈ ಸಮಸ್ಯೆಗಳಿಗೆಲ್ಲ ಪ್ರಾಜೆಕ್ಟ್ ಡೈರೆಕ್ಟರ್ ಡಿ.ಬಿ ಶ್ರೀಧರ್ ನೇರ ಹೊಣೆಯಾಗಿದ್ದಾರೆ. ಅವರಿಗೆ ಬಿಜೆಪಿ ಸಂಸದ ಪ್ರತಾಪ್ ಸಿಂಹರವರ ಬೆಂಬಲವಿದೆ. ಹಾಗಾಗಿ ಈ ಹಗರಣದ ಕುರಿತು ಸಿಬಿಐ ತನಿಖೆ ನಡೆಯಬೇಕು ಎಂದು ಮನವಿ ಸಲ್ಲಿಸಲು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿಯವರನ್ನು ಭೇಟಿಯಾಗುತ್ತೇವೆ ಮತ್ತು ಪ್ರಧಾನಿಯವರ ಗಮನಕ್ಕೆ ತರುತ್ತೇವೆ ಎಂದಿದ್ದರು.

ಮುಗಿಯದ 6 ನಗರಗಳಿಗೆ ಪ್ರವೇಶ-ನಿರ್ಗಮನ ದ್ವಾರದ ಗೊಂದಲ

ಬೆಂಗಳೂರಿನ ನೈಸ್ ರಸ್ತೆಯ ನಂತರದಿಂದ ಆರಂಭವಾಗುವ ದಶಪಥ ರಸ್ತೆಯು ಮೈಸೂರಿನ ಮಣಿಪಾಲ್ ಆಸ್ಪತ್ರೆ ವೃತ್ತದವರೆಗೂ ಒಟ್ಟು 118 ಕಿ.ಮೀ ಸಾಗುತ್ತದೆ. ಆರು ಪಥ ಹೈವೇ ಇದ್ದರೆ ನಾಲ್ಕು ಪಥಗಳನ್ನು ಸರ್ವೀಸ್ ರಸ್ತೆಗೆ ಮೀಸಲಿಡಲಾಗಿದೆ. ಆದರೆ ಬೆಂಗಳೂರಿನಿಂದ ಮೈಸೂರಿನವರೆಗೆ ಹೈವೇಯಲ್ಲಿ ಸಿಗುವ 6 ನಗರಗಳಿಗೆ ಪ್ರವೇಶ-ನಿರ್ಗಮನ ದಾರಿಯ ಕಾಮಗಾರಿ ಗೊಂದಲದ ಗೂಡಾಗಿದೆ.

ಮೊದಲು ಹೆದ್ದಾರಿ ಪ್ರಾಧಿಕಾರವು 118 ಕಿ.ಮೀ ವ್ಯಾಪ್ತಿಯಲ್ಲಿ ಕೇವಲ 1 ಪ್ರವೇಶ ನಿರ್ಗಮನದ ದಾರಿಗೆ ಮಾತ್ರ ಅವಕಾಶ ನೀಡಿತ್ತು. ಆದರೆ ಜನರ ಒತ್ತಾಯದ ನಂತರ ಬಿಡದಿ, ರಾಮನಗರ, ಚನ್ನಪಟ್ಟಣ, ಮದ್ದೂರು, ಮಂಡ್ಯ ಮತ್ತು ಶ್ರೀರಂಗಪಟ್ಟಣಗಳಿಗೆ ಪ್ರವೇಶ-ನಿರ್ಗಮನದ ದಾರಿ ಮಾಡಲು ಒಪ್ಪಿತ್ತು. ಅದಕ್ಕಾಗಿ ಹಣಕಾಸಿನ ಅಂದಾಜು ಸಹ ಮಾಡಿದೆ. ಆದರೆ ಕಾಮಗಾರಿ ಮಾತ್ರ ಆರಂಭವಾಗಿಲ್ಲ.

ಇದನ್ನೂ ಓದಿ: ಮೈಸೂರು-ಬೆಂಗಳೂರು ಹೆದ್ದಾರಿ ಕಾಮಗಾರಿಯಲ್ಲಿ 800 ಕೋಟಿ ಹಗರಣ: ಮಾಗಡಿ ಶಾಸಕ ಎ.ಮಂಜುನಾಥ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...