Homeಮುಖಪುಟಈ ಮಧುರ ದಾಂಪತ್ಯಕ್ಕೆ ‘ಎನ್‌ಆರ್‌ಸಿ’ ಏಕೆ?

ಈ ಮಧುರ ದಾಂಪತ್ಯಕ್ಕೆ ‘ಎನ್‌ಆರ್‌ಸಿ’ ಏಕೆ?

ಭಾರತ- ಬಾಂಗ್ಲಾ ನಡುವಿನ ಗಡಿಗಳನ್ನು ಮೀರಿದ ಅಫ್ಸಾನಾ ಬೀಬಿ-ಶೇಖ್ ರಫೀಕುಲ್‌ ಪ್ರೇಮಕಥನವಿದು... 26 ವರ್ಷಗಳ ದಾಂಪತ್ಯಕ್ಕೆ ಯಾವ ಪುರಾವೆ ಬೇಕು?

- Advertisement -
- Advertisement -

ನಾನು ಅವನನ್ನು ಮಾತ್ರ ಮದುವೆಯಾಗುತ್ತೇನೆ ಎಂದು ಹೇಳಿದ್ದ ಅಫ್ಸಾನಾ ಬೀಬಿ ಅವರಿಗೆ ಆಗ ಆಕೆಗೆ ಕೇವಲ 14 ವರ್ಷ. ಇಂದು, ಅವರು ಶೇಖ್ ರಫೀಕುಲ್ ಜೊತೆ 26 ವರ್ಷಗಳ ವೈವಾಹಿಕ ಜೀವನವನ್ನು ಪೂರ್ಣಗೊಳಿಸಿದ್ದಾರೆ. ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ಲಾಲ್ಗೋಲಾ ಎಂಬ ಗಡಿ ಗ್ರಾಮದಲ್ಲಿ ವಾಸಿಸುತ್ತಿದ್ದಾರೆ. “ನಾವು ಎರಡು ವಿಭಿನ್ನ ದೇಶಗಳಿಗೆ ಸೇರಿದವರಾಗಿರುವುದರಿಂದ ನಮ್ಮಿಬ್ಬರ ಪೋಷಕರು ನಮ್ಮ ಮದುವೆಯನ್ನು ವಿರೋಧಿಸಿದ್ದರು” ಎಂದು ಅವರು ನೆನಪಿಸಿಕೊಳ್ಳುತ್ತಾರೆ.

ಅವರ ಒಂದು ಅಂತಸ್ತಿನ ಮನೆಯ ಮೇಲೆ ಕುಳಿತು ಮೆಲುಕು ಹಾಕುತ್ತಿದ್ದ ಅವರಿಗೆ, ದೂರದ ಬಿಸಿಲಿನಲ್ಲಿ ಕಾಣುವ ತಾಜಾ, ಹಳದಿ ಸಾಸಿವೆ ಹೊಲಗಳು. ಅದರ ಮಧ್ಯೆ ಕಾಡುವ ವಿರೋಧ ಮತ್ತು ಅಸಮ್ಮತಿಯ ಮಂದ ನೆನಪುಗಳು.

50 ವರ್ಷದ ರಫೀಕುಲ್ ಅವರು ಸುಮಾರು 31 ವರ್ಷಗಳ ಹಿಂದೆ ಅಫ್ಸಾನಾ ಅವರೊಂದಿಗೆ ಭಾರತದಲ್ಲಿ ಬದುಕಲೆಂದು ತಮ್ಮ ಕುಟುಂಬ ಮತ್ತು ದೇಶವನ್ನು (ಬಾಂಗ್ಲಾದೇಶ) ತೊರೆದಿದ್ದರು. “ಮೊದಲ ನೋಟದ ಪ್ರೀತಿಯದು. ಅವಳನ್ನು ಮದುವೆಯಾಗುವುದು ನನ್ನ ಜೀವನದ ಪ್ರಮುಖ ನಿರ್ಧಾರವಾಗಿತ್ತು. ನಾನು ದೇಶತೊರೆದಿದ್ದಕ್ಕಾಗಿ ಒಂದು ದಿನವೂ ವಿಷಾದಿಸುವುದಿಲ್ಲ” ಎಂದು ರಫೀಕುಲ್ ಹೇಳುತ್ತಾರೆ.

ಭಾರತ-ಬಾಂಗ್ಲಾದೇಶ ಗಡಿಯಿಂದ ಕೇವಲ ಎರಡು ಕಿಲೋಮೀಟರ್ ದೂರದಲ್ಲಿರುವ ಲಾಲ್ಗೋಲಾ ಹಳ್ಳಿಯಲ್ಲಿ ಈ ದಂಪತಿಗಳು ಮತ್ತು ಅವರ ನಾಲ್ಕು ಮಕ್ಕಳು ವಾಸಿಸುತ್ತಿದ್ದಾರೆ. ಗಡಿಯಲ್ಲಿರುವ ಮುಳ್ಳುತಂತಿಯ ಬೇಲಿಗಳ ಆಚೆಯೇ ರಫೀಕುಲ್ ಬೆಳೆದದ್ದು, ಗಡಿಯಲ್ಲೇ ಹರಿಯುವ ಪದ್ಮಾ ನದಿಯು ಎರಡು ದೇಶಗಳ ನಡುವಿನ ನೈಸರ್ಗಿಕ ಗಡಿಯಾಗಿದೆ.

“ಆಗ, 90ರ ದಶಕದಲ್ಲಿ, ಇದು ಅಂದಾಜಿನ ಗಡಿಯಾಗಿತ್ತು. ಯಾವುದೇ ಬೇಲಿ ಇರಲಿಲ್ಲ. ಎರಡೂ ಕಡೆ ಜನರ ಸಂಚಾರ ಸಾಮಾನ್ಯವಾಗಿತ್ತು” ಎಂದು ರಫೀಕುಲ್ ನೆನಪಿಸಿಕೊಳ್ಳುತ್ತಾರೆ. ಕೆಲಸ ಸಿಗುವ ನಿರೀಕ್ಷೆಯಲ್ಲಿ ಲಾಲ್ಗೊಲಾಗೆ ತೆರಳಲು ಅವರು ಉದ್ದೇಶಿಸಿದ್ದರು. ಆದರೆ ಅವರು ಕೋಲ್ಕತ್ತಾಗೆ ಬಂದರು. ಅವರು ತಮ್ಮ ಮನೆಗೆ ಮರಳಲು ಹಣ ಸಂಪಾದಿಸಲು ಸೀಲ್ದಾ ರೈಲು ನಿಲ್ದಾಣದಲ್ಲಿ ಕಾರ್ಮಿಕನಾಗಿ ಕೆಲಸ ಮಾಡಬೇಕಾಗಿತ್ತು.

ಆದರೆ, ಅವರಿಚ್ಚಿಸಿದ್ದ ಉದ್ಯೋಗ ಅಲ್ಲಿ ದೊರೆಯಲಿಲ್ಲ. ಹೀಗಾಗಿ ಅವರು ಮುರ್ಷಿದಾಬಾದ್‌ಗೆ ಮರಳಿದರು. ಐದು ವರ್ಷಗಳ ಕಾಲ ಅಲ್ಲಿ ಕೆಲಸ ಮಾಡಿದರು. ಆಗ ಅವರು ಅಫ್ಸಾನಾ ಅವರ ಸಹೋದರರ ಗೆಳೆಯನಾಗಿದ್ದರು. ನಂತರ, ರಫೀಕುಲ್ ಅವರು ಅಫ್ಸಾನಾರನ್ನು ಮೊದಲ ಬಾರಿಗೆ ಭೇಟಿ ಮಾಡಿದರು. ಅದೂ, ಅವರ ಮನೆಯಲ್ಲೇ. ಆದರೆ, ಅವರ ಪ್ರೀತಿಯಿಂದ ಮದುವೆಯವರೆಗಿನ ಪ್ರಯಾಣವು ಸುಲಭವಾಗಿರಲಿಲ್ಲ.

“ರಫೀಕುಲ್ ಅವರ ತಂದೆ ನಮ್ಮ ಮದುವೆಯನ್ನು ಒಪ್ಪಲಿಲ್ಲ. ನನ್ನ ಪೋಷಕರು ಮತ್ತು ಸಹೋದರರೂ ಕೂಡ ಇದಕ್ಕೆ ವಿರುದ್ಧವಾಗಿದ್ದರು. ಏಕೆಂದರೆ, ಎರಡೂ ದೇಶಗಳ ಗಡಿಯಲ್ಲಿ ಬೇಲಿಗಳು ಬಂದರೆ ಏನಾಗುತ್ತದೆ ಎಂದು ಅವರು ಭಯಪಟ್ಟಿದ್ದರು” ಎಂದು 40 ವರ್ಷದ ಅಫ್ಸಾನಾ ಹೇಳುತ್ತಾರೆ.

ಆದರೂ ಅವರು ಹೇಗೂ ಮದುವೆಯಾದರು. ರಫೀಕುಲ್ ಅವರು ಕುಟುಂಬವನ್ನು, ಬಾಂಗ್ಲಾವನ್ನು ತೊರೆದು ಭಾರತದಲ್ಲಿ ಅಫ್ಸಾನಾ ಜೊತೆ ನೆಲೆಸಲು ಅತ್ಯಂತ ಧೈರ್ಯಶಾಲಿ ನಿರ್ಧಾರವನ್ನು ತೆಗೆದುಕೊಂಡರು. “ನನ್ನ ಮಾವನ ಮನೆಯವರು ನಮಗೆ ಅವರ ಮನೆಯಲ್ಲಿ ಇರಲು ಅವಕಾಶ ಕಲ್ಪಿಸಿಕೊಟ್ಟರು. ಅಲ್ಲದೆ, ಸಣ್ಣ ಜಮೀನನ್ನು ಖರೀದಿಸಲು ನಮಗೆ ಸಹಾಯ ಮಾಡಿದರು. ನಾವು ನೆಲೆ ನಿಲ್ಲಲು ಅವರು ಸಹಕರಿಸಿದರು” ಎಂದು ರಫೀಕುಲ್ ಹೇಳುತ್ತಾರೆ.

ರಫೀಕುಲ್ ಅವರು ಬಾಂಗ್ಲಾದೇಶದಲ್ಲಿ ಅವರ ಹೆತ್ತವರು ಮತ್ತು ನಾಲ್ಕು ಸಹೋದರಿಯರೊಂದಿಗೆ ವಾಸವಾಗಿದ್ದರು. ಅವರು ಬಾಂಗ್ಲಾ ತೊರೆದು ಬಂದ ನಂತರ, ಕಳೆದ ಎರಡು ದಶಕಗಳಲ್ಲಿ ಒಮ್ಮೆ ಮಾತ್ರ ಮನೆಗೆ ಹೋಗಿಬಂದಿದ್ದಾರೆ. ಅದು ಕೇವಲ ಒಂದು ದಿನಕ್ಕಾಗಿ ಮಾತ್ರ. “ಸುಮಾರು 10 ವರ್ಷಗಳ ಹಿಂದೆ, ನನ್ನ ತಾಯಿ ಇನ್ನಿಲ್ಲ ಎಂಬ ಸುದ್ದಿ ಬಂದಿತ್ತು. ಆಗ ಗಡಿ ಪ್ರವೇಶಕ್ಕೆ ಸಂಬಂಧಿತ ದಾಖಲೆಗಳನ್ನು ಸಲ್ಲಿಸಿದ ನಂತರ ಭಾರತೀಯರಿಗೆ ಬಾಂಗ್ಲಾದೇಶಕ್ಕೆ ಒಂದು ದಿನ ಭೇಟಿ ನೀಡಲು ಅವಕಾಶವನ್ನು ಗಡಿ ಭದ್ರತಾ ಪಡೆ ನೀಡುತ್ತಿತ್ತು” ಎಂದು ಅವರು ಹೇಳುತ್ತಾರೆ.

ದಂಪತಿಗಳ ಜೀವನವು ಸರಾಗವಾಗಿ ಸಾಗುತ್ತಿದೆ. ಅವರ ಹಿರಿಯ ಮಗ ಚೆನ್ನೈನಲ್ಲಿ ಕೆಲಸ ಮಾಡುತ್ತಿದ್ದಾರೆ. ಒಬ್ಬ ಮಗಳ ಮದುವೆಯಾಗಿದೆ. ಅವರ ಇನ್ನಿಬ್ಬರು ಹೆಣ್ಣು ಮಕ್ಕಳು ಶಾಲೆಯಲ್ಲಿ ಓದುತ್ತಿದ್ದಾರೆ.

ಆದರೆ, ಅಸ್ಸಾಂನಲ್ಲಿ ರಾಷ್ಟ್ರೀಯ ನಾಗರಿಕರ ನೋಂದಣಿ (NRC) ಜಾರಿಗೊಳಿಸಲು ಮುಂದಾದಾಗ ರಫೀಕುಲ್‌ಗೆ ಅನಿಶ್ಚಿತತೆ ಎದುರಾಗಿದೆ. ರಫೀಕುಲ್ ಈಗ ತನ್ನ ಭವಿಷ್ಯದ ಬಗ್ಗೆ ಚಿಂತಿಸುತ್ತಿದ್ದಾರೆ. “ಏನಾಗುತ್ತದೆ ಎಂದು ನನಗೆ ಗೊತ್ತಿಲ್ಲ. ನನ್ನ ಬಳಿ ಎಲ್ಲಾ ಭಾರತೀಯ ದಾಖಲೆಗಳು ಮತ್ತು ಕಾಗದಗಳಿವೆ. ನನ್ನ ಹೆಂಡತಿ ಮಕ್ಕಳಿಗಿಂತ ನನ್ನನ್ನು ಈ ದೇಶದವನಾಗಿಸುವ ದಾಖಲೆ ಬೇರೊಂದಿಲ್ಲ. ಅವು ನನ್ನ ಪ್ರಮುಖ ದಾಖಲೆಗಳಾಗಿವೆ” ಎನ್ನುತ್ತಾರೆ ರಫೀಕುಲ್.

“ನಾನು ಅವನನ್ನು ತೊರೆಯಲು ಎಂದಿಗೂ ಅನುಮತಿಸುವುದಿಲ್ಲ. ನನ್ನ ಮತ್ತು ನನ್ನ ಮಕ್ಕಳ ಬಗ್ಗೆ ಅವರಿಗೆ ಜವಾಬ್ದಾರಿ ಇದೆ. ನಾನು ಭಾರತದಲ್ಲಿ ಅವರೊಂದಿಗೆ ನನ್ನ ಜೀವನವನ್ನು ಕಟ್ಟಿಕೊಂಡಿದ್ದೇನೆ. ಯಾರೂ ಅವರನ್ನು ನಮ್ಮಿಂದ ದೂರ ಮಾಡಲು ಸಾಧ್ಯವಿಲ್ಲ” ಎಂದು ಅಫ್ಸಾನಾ ಹೇಳುತ್ತಾರೆ.

ಮೂಲ: ಇಂಡಿಯನ್ ಎಕ್ಸ್‌ಪ್ರೆಸ್‌

ಕನ್ನಡಕ್ಕೆ: ಸೋಮಶೇಖರ್ ಚಲ್ಯ


ಇದನ್ನೂ ಓದಿ: ಮತಾಂತರ ನಿಷೇಧ ಕಾಯ್ದೆ ಬಗ್ಗೆ ಆತಂಕ ಬೇಡ: ಸಿಎಂ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...