Homeಮುಖಪುಟಈ ಮಧುರ ದಾಂಪತ್ಯಕ್ಕೆ ‘ಎನ್‌ಆರ್‌ಸಿ’ ಏಕೆ?

ಈ ಮಧುರ ದಾಂಪತ್ಯಕ್ಕೆ ‘ಎನ್‌ಆರ್‌ಸಿ’ ಏಕೆ?

ಭಾರತ- ಬಾಂಗ್ಲಾ ನಡುವಿನ ಗಡಿಗಳನ್ನು ಮೀರಿದ ಅಫ್ಸಾನಾ ಬೀಬಿ-ಶೇಖ್ ರಫೀಕುಲ್‌ ಪ್ರೇಮಕಥನವಿದು... 26 ವರ್ಷಗಳ ದಾಂಪತ್ಯಕ್ಕೆ ಯಾವ ಪುರಾವೆ ಬೇಕು?

- Advertisement -
- Advertisement -

ನಾನು ಅವನನ್ನು ಮಾತ್ರ ಮದುವೆಯಾಗುತ್ತೇನೆ ಎಂದು ಹೇಳಿದ್ದ ಅಫ್ಸಾನಾ ಬೀಬಿ ಅವರಿಗೆ ಆಗ ಆಕೆಗೆ ಕೇವಲ 14 ವರ್ಷ. ಇಂದು, ಅವರು ಶೇಖ್ ರಫೀಕುಲ್ ಜೊತೆ 26 ವರ್ಷಗಳ ವೈವಾಹಿಕ ಜೀವನವನ್ನು ಪೂರ್ಣಗೊಳಿಸಿದ್ದಾರೆ. ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ಲಾಲ್ಗೋಲಾ ಎಂಬ ಗಡಿ ಗ್ರಾಮದಲ್ಲಿ ವಾಸಿಸುತ್ತಿದ್ದಾರೆ. “ನಾವು ಎರಡು ವಿಭಿನ್ನ ದೇಶಗಳಿಗೆ ಸೇರಿದವರಾಗಿರುವುದರಿಂದ ನಮ್ಮಿಬ್ಬರ ಪೋಷಕರು ನಮ್ಮ ಮದುವೆಯನ್ನು ವಿರೋಧಿಸಿದ್ದರು” ಎಂದು ಅವರು ನೆನಪಿಸಿಕೊಳ್ಳುತ್ತಾರೆ.

ಅವರ ಒಂದು ಅಂತಸ್ತಿನ ಮನೆಯ ಮೇಲೆ ಕುಳಿತು ಮೆಲುಕು ಹಾಕುತ್ತಿದ್ದ ಅವರಿಗೆ, ದೂರದ ಬಿಸಿಲಿನಲ್ಲಿ ಕಾಣುವ ತಾಜಾ, ಹಳದಿ ಸಾಸಿವೆ ಹೊಲಗಳು. ಅದರ ಮಧ್ಯೆ ಕಾಡುವ ವಿರೋಧ ಮತ್ತು ಅಸಮ್ಮತಿಯ ಮಂದ ನೆನಪುಗಳು.

50 ವರ್ಷದ ರಫೀಕುಲ್ ಅವರು ಸುಮಾರು 31 ವರ್ಷಗಳ ಹಿಂದೆ ಅಫ್ಸಾನಾ ಅವರೊಂದಿಗೆ ಭಾರತದಲ್ಲಿ ಬದುಕಲೆಂದು ತಮ್ಮ ಕುಟುಂಬ ಮತ್ತು ದೇಶವನ್ನು (ಬಾಂಗ್ಲಾದೇಶ) ತೊರೆದಿದ್ದರು. “ಮೊದಲ ನೋಟದ ಪ್ರೀತಿಯದು. ಅವಳನ್ನು ಮದುವೆಯಾಗುವುದು ನನ್ನ ಜೀವನದ ಪ್ರಮುಖ ನಿರ್ಧಾರವಾಗಿತ್ತು. ನಾನು ದೇಶತೊರೆದಿದ್ದಕ್ಕಾಗಿ ಒಂದು ದಿನವೂ ವಿಷಾದಿಸುವುದಿಲ್ಲ” ಎಂದು ರಫೀಕುಲ್ ಹೇಳುತ್ತಾರೆ.

ಭಾರತ-ಬಾಂಗ್ಲಾದೇಶ ಗಡಿಯಿಂದ ಕೇವಲ ಎರಡು ಕಿಲೋಮೀಟರ್ ದೂರದಲ್ಲಿರುವ ಲಾಲ್ಗೋಲಾ ಹಳ್ಳಿಯಲ್ಲಿ ಈ ದಂಪತಿಗಳು ಮತ್ತು ಅವರ ನಾಲ್ಕು ಮಕ್ಕಳು ವಾಸಿಸುತ್ತಿದ್ದಾರೆ. ಗಡಿಯಲ್ಲಿರುವ ಮುಳ್ಳುತಂತಿಯ ಬೇಲಿಗಳ ಆಚೆಯೇ ರಫೀಕುಲ್ ಬೆಳೆದದ್ದು, ಗಡಿಯಲ್ಲೇ ಹರಿಯುವ ಪದ್ಮಾ ನದಿಯು ಎರಡು ದೇಶಗಳ ನಡುವಿನ ನೈಸರ್ಗಿಕ ಗಡಿಯಾಗಿದೆ.

“ಆಗ, 90ರ ದಶಕದಲ್ಲಿ, ಇದು ಅಂದಾಜಿನ ಗಡಿಯಾಗಿತ್ತು. ಯಾವುದೇ ಬೇಲಿ ಇರಲಿಲ್ಲ. ಎರಡೂ ಕಡೆ ಜನರ ಸಂಚಾರ ಸಾಮಾನ್ಯವಾಗಿತ್ತು” ಎಂದು ರಫೀಕುಲ್ ನೆನಪಿಸಿಕೊಳ್ಳುತ್ತಾರೆ. ಕೆಲಸ ಸಿಗುವ ನಿರೀಕ್ಷೆಯಲ್ಲಿ ಲಾಲ್ಗೊಲಾಗೆ ತೆರಳಲು ಅವರು ಉದ್ದೇಶಿಸಿದ್ದರು. ಆದರೆ ಅವರು ಕೋಲ್ಕತ್ತಾಗೆ ಬಂದರು. ಅವರು ತಮ್ಮ ಮನೆಗೆ ಮರಳಲು ಹಣ ಸಂಪಾದಿಸಲು ಸೀಲ್ದಾ ರೈಲು ನಿಲ್ದಾಣದಲ್ಲಿ ಕಾರ್ಮಿಕನಾಗಿ ಕೆಲಸ ಮಾಡಬೇಕಾಗಿತ್ತು.

ಆದರೆ, ಅವರಿಚ್ಚಿಸಿದ್ದ ಉದ್ಯೋಗ ಅಲ್ಲಿ ದೊರೆಯಲಿಲ್ಲ. ಹೀಗಾಗಿ ಅವರು ಮುರ್ಷಿದಾಬಾದ್‌ಗೆ ಮರಳಿದರು. ಐದು ವರ್ಷಗಳ ಕಾಲ ಅಲ್ಲಿ ಕೆಲಸ ಮಾಡಿದರು. ಆಗ ಅವರು ಅಫ್ಸಾನಾ ಅವರ ಸಹೋದರರ ಗೆಳೆಯನಾಗಿದ್ದರು. ನಂತರ, ರಫೀಕುಲ್ ಅವರು ಅಫ್ಸಾನಾರನ್ನು ಮೊದಲ ಬಾರಿಗೆ ಭೇಟಿ ಮಾಡಿದರು. ಅದೂ, ಅವರ ಮನೆಯಲ್ಲೇ. ಆದರೆ, ಅವರ ಪ್ರೀತಿಯಿಂದ ಮದುವೆಯವರೆಗಿನ ಪ್ರಯಾಣವು ಸುಲಭವಾಗಿರಲಿಲ್ಲ.

“ರಫೀಕುಲ್ ಅವರ ತಂದೆ ನಮ್ಮ ಮದುವೆಯನ್ನು ಒಪ್ಪಲಿಲ್ಲ. ನನ್ನ ಪೋಷಕರು ಮತ್ತು ಸಹೋದರರೂ ಕೂಡ ಇದಕ್ಕೆ ವಿರುದ್ಧವಾಗಿದ್ದರು. ಏಕೆಂದರೆ, ಎರಡೂ ದೇಶಗಳ ಗಡಿಯಲ್ಲಿ ಬೇಲಿಗಳು ಬಂದರೆ ಏನಾಗುತ್ತದೆ ಎಂದು ಅವರು ಭಯಪಟ್ಟಿದ್ದರು” ಎಂದು 40 ವರ್ಷದ ಅಫ್ಸಾನಾ ಹೇಳುತ್ತಾರೆ.

ಆದರೂ ಅವರು ಹೇಗೂ ಮದುವೆಯಾದರು. ರಫೀಕುಲ್ ಅವರು ಕುಟುಂಬವನ್ನು, ಬಾಂಗ್ಲಾವನ್ನು ತೊರೆದು ಭಾರತದಲ್ಲಿ ಅಫ್ಸಾನಾ ಜೊತೆ ನೆಲೆಸಲು ಅತ್ಯಂತ ಧೈರ್ಯಶಾಲಿ ನಿರ್ಧಾರವನ್ನು ತೆಗೆದುಕೊಂಡರು. “ನನ್ನ ಮಾವನ ಮನೆಯವರು ನಮಗೆ ಅವರ ಮನೆಯಲ್ಲಿ ಇರಲು ಅವಕಾಶ ಕಲ್ಪಿಸಿಕೊಟ್ಟರು. ಅಲ್ಲದೆ, ಸಣ್ಣ ಜಮೀನನ್ನು ಖರೀದಿಸಲು ನಮಗೆ ಸಹಾಯ ಮಾಡಿದರು. ನಾವು ನೆಲೆ ನಿಲ್ಲಲು ಅವರು ಸಹಕರಿಸಿದರು” ಎಂದು ರಫೀಕುಲ್ ಹೇಳುತ್ತಾರೆ.

ರಫೀಕುಲ್ ಅವರು ಬಾಂಗ್ಲಾದೇಶದಲ್ಲಿ ಅವರ ಹೆತ್ತವರು ಮತ್ತು ನಾಲ್ಕು ಸಹೋದರಿಯರೊಂದಿಗೆ ವಾಸವಾಗಿದ್ದರು. ಅವರು ಬಾಂಗ್ಲಾ ತೊರೆದು ಬಂದ ನಂತರ, ಕಳೆದ ಎರಡು ದಶಕಗಳಲ್ಲಿ ಒಮ್ಮೆ ಮಾತ್ರ ಮನೆಗೆ ಹೋಗಿಬಂದಿದ್ದಾರೆ. ಅದು ಕೇವಲ ಒಂದು ದಿನಕ್ಕಾಗಿ ಮಾತ್ರ. “ಸುಮಾರು 10 ವರ್ಷಗಳ ಹಿಂದೆ, ನನ್ನ ತಾಯಿ ಇನ್ನಿಲ್ಲ ಎಂಬ ಸುದ್ದಿ ಬಂದಿತ್ತು. ಆಗ ಗಡಿ ಪ್ರವೇಶಕ್ಕೆ ಸಂಬಂಧಿತ ದಾಖಲೆಗಳನ್ನು ಸಲ್ಲಿಸಿದ ನಂತರ ಭಾರತೀಯರಿಗೆ ಬಾಂಗ್ಲಾದೇಶಕ್ಕೆ ಒಂದು ದಿನ ಭೇಟಿ ನೀಡಲು ಅವಕಾಶವನ್ನು ಗಡಿ ಭದ್ರತಾ ಪಡೆ ನೀಡುತ್ತಿತ್ತು” ಎಂದು ಅವರು ಹೇಳುತ್ತಾರೆ.

ದಂಪತಿಗಳ ಜೀವನವು ಸರಾಗವಾಗಿ ಸಾಗುತ್ತಿದೆ. ಅವರ ಹಿರಿಯ ಮಗ ಚೆನ್ನೈನಲ್ಲಿ ಕೆಲಸ ಮಾಡುತ್ತಿದ್ದಾರೆ. ಒಬ್ಬ ಮಗಳ ಮದುವೆಯಾಗಿದೆ. ಅವರ ಇನ್ನಿಬ್ಬರು ಹೆಣ್ಣು ಮಕ್ಕಳು ಶಾಲೆಯಲ್ಲಿ ಓದುತ್ತಿದ್ದಾರೆ.

ಆದರೆ, ಅಸ್ಸಾಂನಲ್ಲಿ ರಾಷ್ಟ್ರೀಯ ನಾಗರಿಕರ ನೋಂದಣಿ (NRC) ಜಾರಿಗೊಳಿಸಲು ಮುಂದಾದಾಗ ರಫೀಕುಲ್‌ಗೆ ಅನಿಶ್ಚಿತತೆ ಎದುರಾಗಿದೆ. ರಫೀಕುಲ್ ಈಗ ತನ್ನ ಭವಿಷ್ಯದ ಬಗ್ಗೆ ಚಿಂತಿಸುತ್ತಿದ್ದಾರೆ. “ಏನಾಗುತ್ತದೆ ಎಂದು ನನಗೆ ಗೊತ್ತಿಲ್ಲ. ನನ್ನ ಬಳಿ ಎಲ್ಲಾ ಭಾರತೀಯ ದಾಖಲೆಗಳು ಮತ್ತು ಕಾಗದಗಳಿವೆ. ನನ್ನ ಹೆಂಡತಿ ಮಕ್ಕಳಿಗಿಂತ ನನ್ನನ್ನು ಈ ದೇಶದವನಾಗಿಸುವ ದಾಖಲೆ ಬೇರೊಂದಿಲ್ಲ. ಅವು ನನ್ನ ಪ್ರಮುಖ ದಾಖಲೆಗಳಾಗಿವೆ” ಎನ್ನುತ್ತಾರೆ ರಫೀಕುಲ್.

“ನಾನು ಅವನನ್ನು ತೊರೆಯಲು ಎಂದಿಗೂ ಅನುಮತಿಸುವುದಿಲ್ಲ. ನನ್ನ ಮತ್ತು ನನ್ನ ಮಕ್ಕಳ ಬಗ್ಗೆ ಅವರಿಗೆ ಜವಾಬ್ದಾರಿ ಇದೆ. ನಾನು ಭಾರತದಲ್ಲಿ ಅವರೊಂದಿಗೆ ನನ್ನ ಜೀವನವನ್ನು ಕಟ್ಟಿಕೊಂಡಿದ್ದೇನೆ. ಯಾರೂ ಅವರನ್ನು ನಮ್ಮಿಂದ ದೂರ ಮಾಡಲು ಸಾಧ್ಯವಿಲ್ಲ” ಎಂದು ಅಫ್ಸಾನಾ ಹೇಳುತ್ತಾರೆ.

ಮೂಲ: ಇಂಡಿಯನ್ ಎಕ್ಸ್‌ಪ್ರೆಸ್‌

ಕನ್ನಡಕ್ಕೆ: ಸೋಮಶೇಖರ್ ಚಲ್ಯ


ಇದನ್ನೂ ಓದಿ: ಮತಾಂತರ ನಿಷೇಧ ಕಾಯ್ದೆ ಬಗ್ಗೆ ಆತಂಕ ಬೇಡ: ಸಿಎಂ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...