Homeಮುಖಪುಟಈ ಮಧುರ ದಾಂಪತ್ಯಕ್ಕೆ ‘ಎನ್‌ಆರ್‌ಸಿ’ ಏಕೆ?

ಈ ಮಧುರ ದಾಂಪತ್ಯಕ್ಕೆ ‘ಎನ್‌ಆರ್‌ಸಿ’ ಏಕೆ?

ಭಾರತ- ಬಾಂಗ್ಲಾ ನಡುವಿನ ಗಡಿಗಳನ್ನು ಮೀರಿದ ಅಫ್ಸಾನಾ ಬೀಬಿ-ಶೇಖ್ ರಫೀಕುಲ್‌ ಪ್ರೇಮಕಥನವಿದು... 26 ವರ್ಷಗಳ ದಾಂಪತ್ಯಕ್ಕೆ ಯಾವ ಪುರಾವೆ ಬೇಕು?

- Advertisement -
- Advertisement -

ನಾನು ಅವನನ್ನು ಮಾತ್ರ ಮದುವೆಯಾಗುತ್ತೇನೆ ಎಂದು ಹೇಳಿದ್ದ ಅಫ್ಸಾನಾ ಬೀಬಿ ಅವರಿಗೆ ಆಗ ಆಕೆಗೆ ಕೇವಲ 14 ವರ್ಷ. ಇಂದು, ಅವರು ಶೇಖ್ ರಫೀಕುಲ್ ಜೊತೆ 26 ವರ್ಷಗಳ ವೈವಾಹಿಕ ಜೀವನವನ್ನು ಪೂರ್ಣಗೊಳಿಸಿದ್ದಾರೆ. ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ಲಾಲ್ಗೋಲಾ ಎಂಬ ಗಡಿ ಗ್ರಾಮದಲ್ಲಿ ವಾಸಿಸುತ್ತಿದ್ದಾರೆ. “ನಾವು ಎರಡು ವಿಭಿನ್ನ ದೇಶಗಳಿಗೆ ಸೇರಿದವರಾಗಿರುವುದರಿಂದ ನಮ್ಮಿಬ್ಬರ ಪೋಷಕರು ನಮ್ಮ ಮದುವೆಯನ್ನು ವಿರೋಧಿಸಿದ್ದರು” ಎಂದು ಅವರು ನೆನಪಿಸಿಕೊಳ್ಳುತ್ತಾರೆ.

ಅವರ ಒಂದು ಅಂತಸ್ತಿನ ಮನೆಯ ಮೇಲೆ ಕುಳಿತು ಮೆಲುಕು ಹಾಕುತ್ತಿದ್ದ ಅವರಿಗೆ, ದೂರದ ಬಿಸಿಲಿನಲ್ಲಿ ಕಾಣುವ ತಾಜಾ, ಹಳದಿ ಸಾಸಿವೆ ಹೊಲಗಳು. ಅದರ ಮಧ್ಯೆ ಕಾಡುವ ವಿರೋಧ ಮತ್ತು ಅಸಮ್ಮತಿಯ ಮಂದ ನೆನಪುಗಳು.

50 ವರ್ಷದ ರಫೀಕುಲ್ ಅವರು ಸುಮಾರು 31 ವರ್ಷಗಳ ಹಿಂದೆ ಅಫ್ಸಾನಾ ಅವರೊಂದಿಗೆ ಭಾರತದಲ್ಲಿ ಬದುಕಲೆಂದು ತಮ್ಮ ಕುಟುಂಬ ಮತ್ತು ದೇಶವನ್ನು (ಬಾಂಗ್ಲಾದೇಶ) ತೊರೆದಿದ್ದರು. “ಮೊದಲ ನೋಟದ ಪ್ರೀತಿಯದು. ಅವಳನ್ನು ಮದುವೆಯಾಗುವುದು ನನ್ನ ಜೀವನದ ಪ್ರಮುಖ ನಿರ್ಧಾರವಾಗಿತ್ತು. ನಾನು ದೇಶತೊರೆದಿದ್ದಕ್ಕಾಗಿ ಒಂದು ದಿನವೂ ವಿಷಾದಿಸುವುದಿಲ್ಲ” ಎಂದು ರಫೀಕುಲ್ ಹೇಳುತ್ತಾರೆ.

ಭಾರತ-ಬಾಂಗ್ಲಾದೇಶ ಗಡಿಯಿಂದ ಕೇವಲ ಎರಡು ಕಿಲೋಮೀಟರ್ ದೂರದಲ್ಲಿರುವ ಲಾಲ್ಗೋಲಾ ಹಳ್ಳಿಯಲ್ಲಿ ಈ ದಂಪತಿಗಳು ಮತ್ತು ಅವರ ನಾಲ್ಕು ಮಕ್ಕಳು ವಾಸಿಸುತ್ತಿದ್ದಾರೆ. ಗಡಿಯಲ್ಲಿರುವ ಮುಳ್ಳುತಂತಿಯ ಬೇಲಿಗಳ ಆಚೆಯೇ ರಫೀಕುಲ್ ಬೆಳೆದದ್ದು, ಗಡಿಯಲ್ಲೇ ಹರಿಯುವ ಪದ್ಮಾ ನದಿಯು ಎರಡು ದೇಶಗಳ ನಡುವಿನ ನೈಸರ್ಗಿಕ ಗಡಿಯಾಗಿದೆ.

“ಆಗ, 90ರ ದಶಕದಲ್ಲಿ, ಇದು ಅಂದಾಜಿನ ಗಡಿಯಾಗಿತ್ತು. ಯಾವುದೇ ಬೇಲಿ ಇರಲಿಲ್ಲ. ಎರಡೂ ಕಡೆ ಜನರ ಸಂಚಾರ ಸಾಮಾನ್ಯವಾಗಿತ್ತು” ಎಂದು ರಫೀಕುಲ್ ನೆನಪಿಸಿಕೊಳ್ಳುತ್ತಾರೆ. ಕೆಲಸ ಸಿಗುವ ನಿರೀಕ್ಷೆಯಲ್ಲಿ ಲಾಲ್ಗೊಲಾಗೆ ತೆರಳಲು ಅವರು ಉದ್ದೇಶಿಸಿದ್ದರು. ಆದರೆ ಅವರು ಕೋಲ್ಕತ್ತಾಗೆ ಬಂದರು. ಅವರು ತಮ್ಮ ಮನೆಗೆ ಮರಳಲು ಹಣ ಸಂಪಾದಿಸಲು ಸೀಲ್ದಾ ರೈಲು ನಿಲ್ದಾಣದಲ್ಲಿ ಕಾರ್ಮಿಕನಾಗಿ ಕೆಲಸ ಮಾಡಬೇಕಾಗಿತ್ತು.

ಆದರೆ, ಅವರಿಚ್ಚಿಸಿದ್ದ ಉದ್ಯೋಗ ಅಲ್ಲಿ ದೊರೆಯಲಿಲ್ಲ. ಹೀಗಾಗಿ ಅವರು ಮುರ್ಷಿದಾಬಾದ್‌ಗೆ ಮರಳಿದರು. ಐದು ವರ್ಷಗಳ ಕಾಲ ಅಲ್ಲಿ ಕೆಲಸ ಮಾಡಿದರು. ಆಗ ಅವರು ಅಫ್ಸಾನಾ ಅವರ ಸಹೋದರರ ಗೆಳೆಯನಾಗಿದ್ದರು. ನಂತರ, ರಫೀಕುಲ್ ಅವರು ಅಫ್ಸಾನಾರನ್ನು ಮೊದಲ ಬಾರಿಗೆ ಭೇಟಿ ಮಾಡಿದರು. ಅದೂ, ಅವರ ಮನೆಯಲ್ಲೇ. ಆದರೆ, ಅವರ ಪ್ರೀತಿಯಿಂದ ಮದುವೆಯವರೆಗಿನ ಪ್ರಯಾಣವು ಸುಲಭವಾಗಿರಲಿಲ್ಲ.

“ರಫೀಕುಲ್ ಅವರ ತಂದೆ ನಮ್ಮ ಮದುವೆಯನ್ನು ಒಪ್ಪಲಿಲ್ಲ. ನನ್ನ ಪೋಷಕರು ಮತ್ತು ಸಹೋದರರೂ ಕೂಡ ಇದಕ್ಕೆ ವಿರುದ್ಧವಾಗಿದ್ದರು. ಏಕೆಂದರೆ, ಎರಡೂ ದೇಶಗಳ ಗಡಿಯಲ್ಲಿ ಬೇಲಿಗಳು ಬಂದರೆ ಏನಾಗುತ್ತದೆ ಎಂದು ಅವರು ಭಯಪಟ್ಟಿದ್ದರು” ಎಂದು 40 ವರ್ಷದ ಅಫ್ಸಾನಾ ಹೇಳುತ್ತಾರೆ.

ಆದರೂ ಅವರು ಹೇಗೂ ಮದುವೆಯಾದರು. ರಫೀಕುಲ್ ಅವರು ಕುಟುಂಬವನ್ನು, ಬಾಂಗ್ಲಾವನ್ನು ತೊರೆದು ಭಾರತದಲ್ಲಿ ಅಫ್ಸಾನಾ ಜೊತೆ ನೆಲೆಸಲು ಅತ್ಯಂತ ಧೈರ್ಯಶಾಲಿ ನಿರ್ಧಾರವನ್ನು ತೆಗೆದುಕೊಂಡರು. “ನನ್ನ ಮಾವನ ಮನೆಯವರು ನಮಗೆ ಅವರ ಮನೆಯಲ್ಲಿ ಇರಲು ಅವಕಾಶ ಕಲ್ಪಿಸಿಕೊಟ್ಟರು. ಅಲ್ಲದೆ, ಸಣ್ಣ ಜಮೀನನ್ನು ಖರೀದಿಸಲು ನಮಗೆ ಸಹಾಯ ಮಾಡಿದರು. ನಾವು ನೆಲೆ ನಿಲ್ಲಲು ಅವರು ಸಹಕರಿಸಿದರು” ಎಂದು ರಫೀಕುಲ್ ಹೇಳುತ್ತಾರೆ.

ರಫೀಕುಲ್ ಅವರು ಬಾಂಗ್ಲಾದೇಶದಲ್ಲಿ ಅವರ ಹೆತ್ತವರು ಮತ್ತು ನಾಲ್ಕು ಸಹೋದರಿಯರೊಂದಿಗೆ ವಾಸವಾಗಿದ್ದರು. ಅವರು ಬಾಂಗ್ಲಾ ತೊರೆದು ಬಂದ ನಂತರ, ಕಳೆದ ಎರಡು ದಶಕಗಳಲ್ಲಿ ಒಮ್ಮೆ ಮಾತ್ರ ಮನೆಗೆ ಹೋಗಿಬಂದಿದ್ದಾರೆ. ಅದು ಕೇವಲ ಒಂದು ದಿನಕ್ಕಾಗಿ ಮಾತ್ರ. “ಸುಮಾರು 10 ವರ್ಷಗಳ ಹಿಂದೆ, ನನ್ನ ತಾಯಿ ಇನ್ನಿಲ್ಲ ಎಂಬ ಸುದ್ದಿ ಬಂದಿತ್ತು. ಆಗ ಗಡಿ ಪ್ರವೇಶಕ್ಕೆ ಸಂಬಂಧಿತ ದಾಖಲೆಗಳನ್ನು ಸಲ್ಲಿಸಿದ ನಂತರ ಭಾರತೀಯರಿಗೆ ಬಾಂಗ್ಲಾದೇಶಕ್ಕೆ ಒಂದು ದಿನ ಭೇಟಿ ನೀಡಲು ಅವಕಾಶವನ್ನು ಗಡಿ ಭದ್ರತಾ ಪಡೆ ನೀಡುತ್ತಿತ್ತು” ಎಂದು ಅವರು ಹೇಳುತ್ತಾರೆ.

ದಂಪತಿಗಳ ಜೀವನವು ಸರಾಗವಾಗಿ ಸಾಗುತ್ತಿದೆ. ಅವರ ಹಿರಿಯ ಮಗ ಚೆನ್ನೈನಲ್ಲಿ ಕೆಲಸ ಮಾಡುತ್ತಿದ್ದಾರೆ. ಒಬ್ಬ ಮಗಳ ಮದುವೆಯಾಗಿದೆ. ಅವರ ಇನ್ನಿಬ್ಬರು ಹೆಣ್ಣು ಮಕ್ಕಳು ಶಾಲೆಯಲ್ಲಿ ಓದುತ್ತಿದ್ದಾರೆ.

ಆದರೆ, ಅಸ್ಸಾಂನಲ್ಲಿ ರಾಷ್ಟ್ರೀಯ ನಾಗರಿಕರ ನೋಂದಣಿ (NRC) ಜಾರಿಗೊಳಿಸಲು ಮುಂದಾದಾಗ ರಫೀಕುಲ್‌ಗೆ ಅನಿಶ್ಚಿತತೆ ಎದುರಾಗಿದೆ. ರಫೀಕುಲ್ ಈಗ ತನ್ನ ಭವಿಷ್ಯದ ಬಗ್ಗೆ ಚಿಂತಿಸುತ್ತಿದ್ದಾರೆ. “ಏನಾಗುತ್ತದೆ ಎಂದು ನನಗೆ ಗೊತ್ತಿಲ್ಲ. ನನ್ನ ಬಳಿ ಎಲ್ಲಾ ಭಾರತೀಯ ದಾಖಲೆಗಳು ಮತ್ತು ಕಾಗದಗಳಿವೆ. ನನ್ನ ಹೆಂಡತಿ ಮಕ್ಕಳಿಗಿಂತ ನನ್ನನ್ನು ಈ ದೇಶದವನಾಗಿಸುವ ದಾಖಲೆ ಬೇರೊಂದಿಲ್ಲ. ಅವು ನನ್ನ ಪ್ರಮುಖ ದಾಖಲೆಗಳಾಗಿವೆ” ಎನ್ನುತ್ತಾರೆ ರಫೀಕುಲ್.

“ನಾನು ಅವನನ್ನು ತೊರೆಯಲು ಎಂದಿಗೂ ಅನುಮತಿಸುವುದಿಲ್ಲ. ನನ್ನ ಮತ್ತು ನನ್ನ ಮಕ್ಕಳ ಬಗ್ಗೆ ಅವರಿಗೆ ಜವಾಬ್ದಾರಿ ಇದೆ. ನಾನು ಭಾರತದಲ್ಲಿ ಅವರೊಂದಿಗೆ ನನ್ನ ಜೀವನವನ್ನು ಕಟ್ಟಿಕೊಂಡಿದ್ದೇನೆ. ಯಾರೂ ಅವರನ್ನು ನಮ್ಮಿಂದ ದೂರ ಮಾಡಲು ಸಾಧ್ಯವಿಲ್ಲ” ಎಂದು ಅಫ್ಸಾನಾ ಹೇಳುತ್ತಾರೆ.

ಮೂಲ: ಇಂಡಿಯನ್ ಎಕ್ಸ್‌ಪ್ರೆಸ್‌

ಕನ್ನಡಕ್ಕೆ: ಸೋಮಶೇಖರ್ ಚಲ್ಯ


ಇದನ್ನೂ ಓದಿ: ಮತಾಂತರ ನಿಷೇಧ ಕಾಯ್ದೆ ಬಗ್ಗೆ ಆತಂಕ ಬೇಡ: ಸಿಎಂ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...