Homeಮುಖಪುಟಈ ಮಧುರ ದಾಂಪತ್ಯಕ್ಕೆ ‘ಎನ್‌ಆರ್‌ಸಿ’ ಏಕೆ?

ಈ ಮಧುರ ದಾಂಪತ್ಯಕ್ಕೆ ‘ಎನ್‌ಆರ್‌ಸಿ’ ಏಕೆ?

ಭಾರತ- ಬಾಂಗ್ಲಾ ನಡುವಿನ ಗಡಿಗಳನ್ನು ಮೀರಿದ ಅಫ್ಸಾನಾ ಬೀಬಿ-ಶೇಖ್ ರಫೀಕುಲ್‌ ಪ್ರೇಮಕಥನವಿದು... 26 ವರ್ಷಗಳ ದಾಂಪತ್ಯಕ್ಕೆ ಯಾವ ಪುರಾವೆ ಬೇಕು?

- Advertisement -
- Advertisement -

ನಾನು ಅವನನ್ನು ಮಾತ್ರ ಮದುವೆಯಾಗುತ್ತೇನೆ ಎಂದು ಹೇಳಿದ್ದ ಅಫ್ಸಾನಾ ಬೀಬಿ ಅವರಿಗೆ ಆಗ ಆಕೆಗೆ ಕೇವಲ 14 ವರ್ಷ. ಇಂದು, ಅವರು ಶೇಖ್ ರಫೀಕುಲ್ ಜೊತೆ 26 ವರ್ಷಗಳ ವೈವಾಹಿಕ ಜೀವನವನ್ನು ಪೂರ್ಣಗೊಳಿಸಿದ್ದಾರೆ. ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ಲಾಲ್ಗೋಲಾ ಎಂಬ ಗಡಿ ಗ್ರಾಮದಲ್ಲಿ ವಾಸಿಸುತ್ತಿದ್ದಾರೆ. “ನಾವು ಎರಡು ವಿಭಿನ್ನ ದೇಶಗಳಿಗೆ ಸೇರಿದವರಾಗಿರುವುದರಿಂದ ನಮ್ಮಿಬ್ಬರ ಪೋಷಕರು ನಮ್ಮ ಮದುವೆಯನ್ನು ವಿರೋಧಿಸಿದ್ದರು” ಎಂದು ಅವರು ನೆನಪಿಸಿಕೊಳ್ಳುತ್ತಾರೆ.

ಅವರ ಒಂದು ಅಂತಸ್ತಿನ ಮನೆಯ ಮೇಲೆ ಕುಳಿತು ಮೆಲುಕು ಹಾಕುತ್ತಿದ್ದ ಅವರಿಗೆ, ದೂರದ ಬಿಸಿಲಿನಲ್ಲಿ ಕಾಣುವ ತಾಜಾ, ಹಳದಿ ಸಾಸಿವೆ ಹೊಲಗಳು. ಅದರ ಮಧ್ಯೆ ಕಾಡುವ ವಿರೋಧ ಮತ್ತು ಅಸಮ್ಮತಿಯ ಮಂದ ನೆನಪುಗಳು.

50 ವರ್ಷದ ರಫೀಕುಲ್ ಅವರು ಸುಮಾರು 31 ವರ್ಷಗಳ ಹಿಂದೆ ಅಫ್ಸಾನಾ ಅವರೊಂದಿಗೆ ಭಾರತದಲ್ಲಿ ಬದುಕಲೆಂದು ತಮ್ಮ ಕುಟುಂಬ ಮತ್ತು ದೇಶವನ್ನು (ಬಾಂಗ್ಲಾದೇಶ) ತೊರೆದಿದ್ದರು. “ಮೊದಲ ನೋಟದ ಪ್ರೀತಿಯದು. ಅವಳನ್ನು ಮದುವೆಯಾಗುವುದು ನನ್ನ ಜೀವನದ ಪ್ರಮುಖ ನಿರ್ಧಾರವಾಗಿತ್ತು. ನಾನು ದೇಶತೊರೆದಿದ್ದಕ್ಕಾಗಿ ಒಂದು ದಿನವೂ ವಿಷಾದಿಸುವುದಿಲ್ಲ” ಎಂದು ರಫೀಕುಲ್ ಹೇಳುತ್ತಾರೆ.

ಭಾರತ-ಬಾಂಗ್ಲಾದೇಶ ಗಡಿಯಿಂದ ಕೇವಲ ಎರಡು ಕಿಲೋಮೀಟರ್ ದೂರದಲ್ಲಿರುವ ಲಾಲ್ಗೋಲಾ ಹಳ್ಳಿಯಲ್ಲಿ ಈ ದಂಪತಿಗಳು ಮತ್ತು ಅವರ ನಾಲ್ಕು ಮಕ್ಕಳು ವಾಸಿಸುತ್ತಿದ್ದಾರೆ. ಗಡಿಯಲ್ಲಿರುವ ಮುಳ್ಳುತಂತಿಯ ಬೇಲಿಗಳ ಆಚೆಯೇ ರಫೀಕುಲ್ ಬೆಳೆದದ್ದು, ಗಡಿಯಲ್ಲೇ ಹರಿಯುವ ಪದ್ಮಾ ನದಿಯು ಎರಡು ದೇಶಗಳ ನಡುವಿನ ನೈಸರ್ಗಿಕ ಗಡಿಯಾಗಿದೆ.

“ಆಗ, 90ರ ದಶಕದಲ್ಲಿ, ಇದು ಅಂದಾಜಿನ ಗಡಿಯಾಗಿತ್ತು. ಯಾವುದೇ ಬೇಲಿ ಇರಲಿಲ್ಲ. ಎರಡೂ ಕಡೆ ಜನರ ಸಂಚಾರ ಸಾಮಾನ್ಯವಾಗಿತ್ತು” ಎಂದು ರಫೀಕುಲ್ ನೆನಪಿಸಿಕೊಳ್ಳುತ್ತಾರೆ. ಕೆಲಸ ಸಿಗುವ ನಿರೀಕ್ಷೆಯಲ್ಲಿ ಲಾಲ್ಗೊಲಾಗೆ ತೆರಳಲು ಅವರು ಉದ್ದೇಶಿಸಿದ್ದರು. ಆದರೆ ಅವರು ಕೋಲ್ಕತ್ತಾಗೆ ಬಂದರು. ಅವರು ತಮ್ಮ ಮನೆಗೆ ಮರಳಲು ಹಣ ಸಂಪಾದಿಸಲು ಸೀಲ್ದಾ ರೈಲು ನಿಲ್ದಾಣದಲ್ಲಿ ಕಾರ್ಮಿಕನಾಗಿ ಕೆಲಸ ಮಾಡಬೇಕಾಗಿತ್ತು.

ಆದರೆ, ಅವರಿಚ್ಚಿಸಿದ್ದ ಉದ್ಯೋಗ ಅಲ್ಲಿ ದೊರೆಯಲಿಲ್ಲ. ಹೀಗಾಗಿ ಅವರು ಮುರ್ಷಿದಾಬಾದ್‌ಗೆ ಮರಳಿದರು. ಐದು ವರ್ಷಗಳ ಕಾಲ ಅಲ್ಲಿ ಕೆಲಸ ಮಾಡಿದರು. ಆಗ ಅವರು ಅಫ್ಸಾನಾ ಅವರ ಸಹೋದರರ ಗೆಳೆಯನಾಗಿದ್ದರು. ನಂತರ, ರಫೀಕುಲ್ ಅವರು ಅಫ್ಸಾನಾರನ್ನು ಮೊದಲ ಬಾರಿಗೆ ಭೇಟಿ ಮಾಡಿದರು. ಅದೂ, ಅವರ ಮನೆಯಲ್ಲೇ. ಆದರೆ, ಅವರ ಪ್ರೀತಿಯಿಂದ ಮದುವೆಯವರೆಗಿನ ಪ್ರಯಾಣವು ಸುಲಭವಾಗಿರಲಿಲ್ಲ.

“ರಫೀಕುಲ್ ಅವರ ತಂದೆ ನಮ್ಮ ಮದುವೆಯನ್ನು ಒಪ್ಪಲಿಲ್ಲ. ನನ್ನ ಪೋಷಕರು ಮತ್ತು ಸಹೋದರರೂ ಕೂಡ ಇದಕ್ಕೆ ವಿರುದ್ಧವಾಗಿದ್ದರು. ಏಕೆಂದರೆ, ಎರಡೂ ದೇಶಗಳ ಗಡಿಯಲ್ಲಿ ಬೇಲಿಗಳು ಬಂದರೆ ಏನಾಗುತ್ತದೆ ಎಂದು ಅವರು ಭಯಪಟ್ಟಿದ್ದರು” ಎಂದು 40 ವರ್ಷದ ಅಫ್ಸಾನಾ ಹೇಳುತ್ತಾರೆ.

ಆದರೂ ಅವರು ಹೇಗೂ ಮದುವೆಯಾದರು. ರಫೀಕುಲ್ ಅವರು ಕುಟುಂಬವನ್ನು, ಬಾಂಗ್ಲಾವನ್ನು ತೊರೆದು ಭಾರತದಲ್ಲಿ ಅಫ್ಸಾನಾ ಜೊತೆ ನೆಲೆಸಲು ಅತ್ಯಂತ ಧೈರ್ಯಶಾಲಿ ನಿರ್ಧಾರವನ್ನು ತೆಗೆದುಕೊಂಡರು. “ನನ್ನ ಮಾವನ ಮನೆಯವರು ನಮಗೆ ಅವರ ಮನೆಯಲ್ಲಿ ಇರಲು ಅವಕಾಶ ಕಲ್ಪಿಸಿಕೊಟ್ಟರು. ಅಲ್ಲದೆ, ಸಣ್ಣ ಜಮೀನನ್ನು ಖರೀದಿಸಲು ನಮಗೆ ಸಹಾಯ ಮಾಡಿದರು. ನಾವು ನೆಲೆ ನಿಲ್ಲಲು ಅವರು ಸಹಕರಿಸಿದರು” ಎಂದು ರಫೀಕುಲ್ ಹೇಳುತ್ತಾರೆ.

ರಫೀಕುಲ್ ಅವರು ಬಾಂಗ್ಲಾದೇಶದಲ್ಲಿ ಅವರ ಹೆತ್ತವರು ಮತ್ತು ನಾಲ್ಕು ಸಹೋದರಿಯರೊಂದಿಗೆ ವಾಸವಾಗಿದ್ದರು. ಅವರು ಬಾಂಗ್ಲಾ ತೊರೆದು ಬಂದ ನಂತರ, ಕಳೆದ ಎರಡು ದಶಕಗಳಲ್ಲಿ ಒಮ್ಮೆ ಮಾತ್ರ ಮನೆಗೆ ಹೋಗಿಬಂದಿದ್ದಾರೆ. ಅದು ಕೇವಲ ಒಂದು ದಿನಕ್ಕಾಗಿ ಮಾತ್ರ. “ಸುಮಾರು 10 ವರ್ಷಗಳ ಹಿಂದೆ, ನನ್ನ ತಾಯಿ ಇನ್ನಿಲ್ಲ ಎಂಬ ಸುದ್ದಿ ಬಂದಿತ್ತು. ಆಗ ಗಡಿ ಪ್ರವೇಶಕ್ಕೆ ಸಂಬಂಧಿತ ದಾಖಲೆಗಳನ್ನು ಸಲ್ಲಿಸಿದ ನಂತರ ಭಾರತೀಯರಿಗೆ ಬಾಂಗ್ಲಾದೇಶಕ್ಕೆ ಒಂದು ದಿನ ಭೇಟಿ ನೀಡಲು ಅವಕಾಶವನ್ನು ಗಡಿ ಭದ್ರತಾ ಪಡೆ ನೀಡುತ್ತಿತ್ತು” ಎಂದು ಅವರು ಹೇಳುತ್ತಾರೆ.

ದಂಪತಿಗಳ ಜೀವನವು ಸರಾಗವಾಗಿ ಸಾಗುತ್ತಿದೆ. ಅವರ ಹಿರಿಯ ಮಗ ಚೆನ್ನೈನಲ್ಲಿ ಕೆಲಸ ಮಾಡುತ್ತಿದ್ದಾರೆ. ಒಬ್ಬ ಮಗಳ ಮದುವೆಯಾಗಿದೆ. ಅವರ ಇನ್ನಿಬ್ಬರು ಹೆಣ್ಣು ಮಕ್ಕಳು ಶಾಲೆಯಲ್ಲಿ ಓದುತ್ತಿದ್ದಾರೆ.

ಆದರೆ, ಅಸ್ಸಾಂನಲ್ಲಿ ರಾಷ್ಟ್ರೀಯ ನಾಗರಿಕರ ನೋಂದಣಿ (NRC) ಜಾರಿಗೊಳಿಸಲು ಮುಂದಾದಾಗ ರಫೀಕುಲ್‌ಗೆ ಅನಿಶ್ಚಿತತೆ ಎದುರಾಗಿದೆ. ರಫೀಕುಲ್ ಈಗ ತನ್ನ ಭವಿಷ್ಯದ ಬಗ್ಗೆ ಚಿಂತಿಸುತ್ತಿದ್ದಾರೆ. “ಏನಾಗುತ್ತದೆ ಎಂದು ನನಗೆ ಗೊತ್ತಿಲ್ಲ. ನನ್ನ ಬಳಿ ಎಲ್ಲಾ ಭಾರತೀಯ ದಾಖಲೆಗಳು ಮತ್ತು ಕಾಗದಗಳಿವೆ. ನನ್ನ ಹೆಂಡತಿ ಮಕ್ಕಳಿಗಿಂತ ನನ್ನನ್ನು ಈ ದೇಶದವನಾಗಿಸುವ ದಾಖಲೆ ಬೇರೊಂದಿಲ್ಲ. ಅವು ನನ್ನ ಪ್ರಮುಖ ದಾಖಲೆಗಳಾಗಿವೆ” ಎನ್ನುತ್ತಾರೆ ರಫೀಕುಲ್.

“ನಾನು ಅವನನ್ನು ತೊರೆಯಲು ಎಂದಿಗೂ ಅನುಮತಿಸುವುದಿಲ್ಲ. ನನ್ನ ಮತ್ತು ನನ್ನ ಮಕ್ಕಳ ಬಗ್ಗೆ ಅವರಿಗೆ ಜವಾಬ್ದಾರಿ ಇದೆ. ನಾನು ಭಾರತದಲ್ಲಿ ಅವರೊಂದಿಗೆ ನನ್ನ ಜೀವನವನ್ನು ಕಟ್ಟಿಕೊಂಡಿದ್ದೇನೆ. ಯಾರೂ ಅವರನ್ನು ನಮ್ಮಿಂದ ದೂರ ಮಾಡಲು ಸಾಧ್ಯವಿಲ್ಲ” ಎಂದು ಅಫ್ಸಾನಾ ಹೇಳುತ್ತಾರೆ.

ಮೂಲ: ಇಂಡಿಯನ್ ಎಕ್ಸ್‌ಪ್ರೆಸ್‌

ಕನ್ನಡಕ್ಕೆ: ಸೋಮಶೇಖರ್ ಚಲ್ಯ


ಇದನ್ನೂ ಓದಿ: ಮತಾಂತರ ನಿಷೇಧ ಕಾಯ್ದೆ ಬಗ್ಗೆ ಆತಂಕ ಬೇಡ: ಸಿಎಂ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...