Homeಮುಖಪುಟಈ ಮಧುರ ದಾಂಪತ್ಯಕ್ಕೆ ‘ಎನ್‌ಆರ್‌ಸಿ’ ಏಕೆ?

ಈ ಮಧುರ ದಾಂಪತ್ಯಕ್ಕೆ ‘ಎನ್‌ಆರ್‌ಸಿ’ ಏಕೆ?

ಭಾರತ- ಬಾಂಗ್ಲಾ ನಡುವಿನ ಗಡಿಗಳನ್ನು ಮೀರಿದ ಅಫ್ಸಾನಾ ಬೀಬಿ-ಶೇಖ್ ರಫೀಕುಲ್‌ ಪ್ರೇಮಕಥನವಿದು... 26 ವರ್ಷಗಳ ದಾಂಪತ್ಯಕ್ಕೆ ಯಾವ ಪುರಾವೆ ಬೇಕು?

- Advertisement -
- Advertisement -

ನಾನು ಅವನನ್ನು ಮಾತ್ರ ಮದುವೆಯಾಗುತ್ತೇನೆ ಎಂದು ಹೇಳಿದ್ದ ಅಫ್ಸಾನಾ ಬೀಬಿ ಅವರಿಗೆ ಆಗ ಆಕೆಗೆ ಕೇವಲ 14 ವರ್ಷ. ಇಂದು, ಅವರು ಶೇಖ್ ರಫೀಕುಲ್ ಜೊತೆ 26 ವರ್ಷಗಳ ವೈವಾಹಿಕ ಜೀವನವನ್ನು ಪೂರ್ಣಗೊಳಿಸಿದ್ದಾರೆ. ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ಲಾಲ್ಗೋಲಾ ಎಂಬ ಗಡಿ ಗ್ರಾಮದಲ್ಲಿ ವಾಸಿಸುತ್ತಿದ್ದಾರೆ. “ನಾವು ಎರಡು ವಿಭಿನ್ನ ದೇಶಗಳಿಗೆ ಸೇರಿದವರಾಗಿರುವುದರಿಂದ ನಮ್ಮಿಬ್ಬರ ಪೋಷಕರು ನಮ್ಮ ಮದುವೆಯನ್ನು ವಿರೋಧಿಸಿದ್ದರು” ಎಂದು ಅವರು ನೆನಪಿಸಿಕೊಳ್ಳುತ್ತಾರೆ.

ಅವರ ಒಂದು ಅಂತಸ್ತಿನ ಮನೆಯ ಮೇಲೆ ಕುಳಿತು ಮೆಲುಕು ಹಾಕುತ್ತಿದ್ದ ಅವರಿಗೆ, ದೂರದ ಬಿಸಿಲಿನಲ್ಲಿ ಕಾಣುವ ತಾಜಾ, ಹಳದಿ ಸಾಸಿವೆ ಹೊಲಗಳು. ಅದರ ಮಧ್ಯೆ ಕಾಡುವ ವಿರೋಧ ಮತ್ತು ಅಸಮ್ಮತಿಯ ಮಂದ ನೆನಪುಗಳು.

50 ವರ್ಷದ ರಫೀಕುಲ್ ಅವರು ಸುಮಾರು 31 ವರ್ಷಗಳ ಹಿಂದೆ ಅಫ್ಸಾನಾ ಅವರೊಂದಿಗೆ ಭಾರತದಲ್ಲಿ ಬದುಕಲೆಂದು ತಮ್ಮ ಕುಟುಂಬ ಮತ್ತು ದೇಶವನ್ನು (ಬಾಂಗ್ಲಾದೇಶ) ತೊರೆದಿದ್ದರು. “ಮೊದಲ ನೋಟದ ಪ್ರೀತಿಯದು. ಅವಳನ್ನು ಮದುವೆಯಾಗುವುದು ನನ್ನ ಜೀವನದ ಪ್ರಮುಖ ನಿರ್ಧಾರವಾಗಿತ್ತು. ನಾನು ದೇಶತೊರೆದಿದ್ದಕ್ಕಾಗಿ ಒಂದು ದಿನವೂ ವಿಷಾದಿಸುವುದಿಲ್ಲ” ಎಂದು ರಫೀಕುಲ್ ಹೇಳುತ್ತಾರೆ.

ಭಾರತ-ಬಾಂಗ್ಲಾದೇಶ ಗಡಿಯಿಂದ ಕೇವಲ ಎರಡು ಕಿಲೋಮೀಟರ್ ದೂರದಲ್ಲಿರುವ ಲಾಲ್ಗೋಲಾ ಹಳ್ಳಿಯಲ್ಲಿ ಈ ದಂಪತಿಗಳು ಮತ್ತು ಅವರ ನಾಲ್ಕು ಮಕ್ಕಳು ವಾಸಿಸುತ್ತಿದ್ದಾರೆ. ಗಡಿಯಲ್ಲಿರುವ ಮುಳ್ಳುತಂತಿಯ ಬೇಲಿಗಳ ಆಚೆಯೇ ರಫೀಕುಲ್ ಬೆಳೆದದ್ದು, ಗಡಿಯಲ್ಲೇ ಹರಿಯುವ ಪದ್ಮಾ ನದಿಯು ಎರಡು ದೇಶಗಳ ನಡುವಿನ ನೈಸರ್ಗಿಕ ಗಡಿಯಾಗಿದೆ.

“ಆಗ, 90ರ ದಶಕದಲ್ಲಿ, ಇದು ಅಂದಾಜಿನ ಗಡಿಯಾಗಿತ್ತು. ಯಾವುದೇ ಬೇಲಿ ಇರಲಿಲ್ಲ. ಎರಡೂ ಕಡೆ ಜನರ ಸಂಚಾರ ಸಾಮಾನ್ಯವಾಗಿತ್ತು” ಎಂದು ರಫೀಕುಲ್ ನೆನಪಿಸಿಕೊಳ್ಳುತ್ತಾರೆ. ಕೆಲಸ ಸಿಗುವ ನಿರೀಕ್ಷೆಯಲ್ಲಿ ಲಾಲ್ಗೊಲಾಗೆ ತೆರಳಲು ಅವರು ಉದ್ದೇಶಿಸಿದ್ದರು. ಆದರೆ ಅವರು ಕೋಲ್ಕತ್ತಾಗೆ ಬಂದರು. ಅವರು ತಮ್ಮ ಮನೆಗೆ ಮರಳಲು ಹಣ ಸಂಪಾದಿಸಲು ಸೀಲ್ದಾ ರೈಲು ನಿಲ್ದಾಣದಲ್ಲಿ ಕಾರ್ಮಿಕನಾಗಿ ಕೆಲಸ ಮಾಡಬೇಕಾಗಿತ್ತು.

ಆದರೆ, ಅವರಿಚ್ಚಿಸಿದ್ದ ಉದ್ಯೋಗ ಅಲ್ಲಿ ದೊರೆಯಲಿಲ್ಲ. ಹೀಗಾಗಿ ಅವರು ಮುರ್ಷಿದಾಬಾದ್‌ಗೆ ಮರಳಿದರು. ಐದು ವರ್ಷಗಳ ಕಾಲ ಅಲ್ಲಿ ಕೆಲಸ ಮಾಡಿದರು. ಆಗ ಅವರು ಅಫ್ಸಾನಾ ಅವರ ಸಹೋದರರ ಗೆಳೆಯನಾಗಿದ್ದರು. ನಂತರ, ರಫೀಕುಲ್ ಅವರು ಅಫ್ಸಾನಾರನ್ನು ಮೊದಲ ಬಾರಿಗೆ ಭೇಟಿ ಮಾಡಿದರು. ಅದೂ, ಅವರ ಮನೆಯಲ್ಲೇ. ಆದರೆ, ಅವರ ಪ್ರೀತಿಯಿಂದ ಮದುವೆಯವರೆಗಿನ ಪ್ರಯಾಣವು ಸುಲಭವಾಗಿರಲಿಲ್ಲ.

“ರಫೀಕುಲ್ ಅವರ ತಂದೆ ನಮ್ಮ ಮದುವೆಯನ್ನು ಒಪ್ಪಲಿಲ್ಲ. ನನ್ನ ಪೋಷಕರು ಮತ್ತು ಸಹೋದರರೂ ಕೂಡ ಇದಕ್ಕೆ ವಿರುದ್ಧವಾಗಿದ್ದರು. ಏಕೆಂದರೆ, ಎರಡೂ ದೇಶಗಳ ಗಡಿಯಲ್ಲಿ ಬೇಲಿಗಳು ಬಂದರೆ ಏನಾಗುತ್ತದೆ ಎಂದು ಅವರು ಭಯಪಟ್ಟಿದ್ದರು” ಎಂದು 40 ವರ್ಷದ ಅಫ್ಸಾನಾ ಹೇಳುತ್ತಾರೆ.

ಆದರೂ ಅವರು ಹೇಗೂ ಮದುವೆಯಾದರು. ರಫೀಕುಲ್ ಅವರು ಕುಟುಂಬವನ್ನು, ಬಾಂಗ್ಲಾವನ್ನು ತೊರೆದು ಭಾರತದಲ್ಲಿ ಅಫ್ಸಾನಾ ಜೊತೆ ನೆಲೆಸಲು ಅತ್ಯಂತ ಧೈರ್ಯಶಾಲಿ ನಿರ್ಧಾರವನ್ನು ತೆಗೆದುಕೊಂಡರು. “ನನ್ನ ಮಾವನ ಮನೆಯವರು ನಮಗೆ ಅವರ ಮನೆಯಲ್ಲಿ ಇರಲು ಅವಕಾಶ ಕಲ್ಪಿಸಿಕೊಟ್ಟರು. ಅಲ್ಲದೆ, ಸಣ್ಣ ಜಮೀನನ್ನು ಖರೀದಿಸಲು ನಮಗೆ ಸಹಾಯ ಮಾಡಿದರು. ನಾವು ನೆಲೆ ನಿಲ್ಲಲು ಅವರು ಸಹಕರಿಸಿದರು” ಎಂದು ರಫೀಕುಲ್ ಹೇಳುತ್ತಾರೆ.

ರಫೀಕುಲ್ ಅವರು ಬಾಂಗ್ಲಾದೇಶದಲ್ಲಿ ಅವರ ಹೆತ್ತವರು ಮತ್ತು ನಾಲ್ಕು ಸಹೋದರಿಯರೊಂದಿಗೆ ವಾಸವಾಗಿದ್ದರು. ಅವರು ಬಾಂಗ್ಲಾ ತೊರೆದು ಬಂದ ನಂತರ, ಕಳೆದ ಎರಡು ದಶಕಗಳಲ್ಲಿ ಒಮ್ಮೆ ಮಾತ್ರ ಮನೆಗೆ ಹೋಗಿಬಂದಿದ್ದಾರೆ. ಅದು ಕೇವಲ ಒಂದು ದಿನಕ್ಕಾಗಿ ಮಾತ್ರ. “ಸುಮಾರು 10 ವರ್ಷಗಳ ಹಿಂದೆ, ನನ್ನ ತಾಯಿ ಇನ್ನಿಲ್ಲ ಎಂಬ ಸುದ್ದಿ ಬಂದಿತ್ತು. ಆಗ ಗಡಿ ಪ್ರವೇಶಕ್ಕೆ ಸಂಬಂಧಿತ ದಾಖಲೆಗಳನ್ನು ಸಲ್ಲಿಸಿದ ನಂತರ ಭಾರತೀಯರಿಗೆ ಬಾಂಗ್ಲಾದೇಶಕ್ಕೆ ಒಂದು ದಿನ ಭೇಟಿ ನೀಡಲು ಅವಕಾಶವನ್ನು ಗಡಿ ಭದ್ರತಾ ಪಡೆ ನೀಡುತ್ತಿತ್ತು” ಎಂದು ಅವರು ಹೇಳುತ್ತಾರೆ.

ದಂಪತಿಗಳ ಜೀವನವು ಸರಾಗವಾಗಿ ಸಾಗುತ್ತಿದೆ. ಅವರ ಹಿರಿಯ ಮಗ ಚೆನ್ನೈನಲ್ಲಿ ಕೆಲಸ ಮಾಡುತ್ತಿದ್ದಾರೆ. ಒಬ್ಬ ಮಗಳ ಮದುವೆಯಾಗಿದೆ. ಅವರ ಇನ್ನಿಬ್ಬರು ಹೆಣ್ಣು ಮಕ್ಕಳು ಶಾಲೆಯಲ್ಲಿ ಓದುತ್ತಿದ್ದಾರೆ.

ಆದರೆ, ಅಸ್ಸಾಂನಲ್ಲಿ ರಾಷ್ಟ್ರೀಯ ನಾಗರಿಕರ ನೋಂದಣಿ (NRC) ಜಾರಿಗೊಳಿಸಲು ಮುಂದಾದಾಗ ರಫೀಕುಲ್‌ಗೆ ಅನಿಶ್ಚಿತತೆ ಎದುರಾಗಿದೆ. ರಫೀಕುಲ್ ಈಗ ತನ್ನ ಭವಿಷ್ಯದ ಬಗ್ಗೆ ಚಿಂತಿಸುತ್ತಿದ್ದಾರೆ. “ಏನಾಗುತ್ತದೆ ಎಂದು ನನಗೆ ಗೊತ್ತಿಲ್ಲ. ನನ್ನ ಬಳಿ ಎಲ್ಲಾ ಭಾರತೀಯ ದಾಖಲೆಗಳು ಮತ್ತು ಕಾಗದಗಳಿವೆ. ನನ್ನ ಹೆಂಡತಿ ಮಕ್ಕಳಿಗಿಂತ ನನ್ನನ್ನು ಈ ದೇಶದವನಾಗಿಸುವ ದಾಖಲೆ ಬೇರೊಂದಿಲ್ಲ. ಅವು ನನ್ನ ಪ್ರಮುಖ ದಾಖಲೆಗಳಾಗಿವೆ” ಎನ್ನುತ್ತಾರೆ ರಫೀಕುಲ್.

“ನಾನು ಅವನನ್ನು ತೊರೆಯಲು ಎಂದಿಗೂ ಅನುಮತಿಸುವುದಿಲ್ಲ. ನನ್ನ ಮತ್ತು ನನ್ನ ಮಕ್ಕಳ ಬಗ್ಗೆ ಅವರಿಗೆ ಜವಾಬ್ದಾರಿ ಇದೆ. ನಾನು ಭಾರತದಲ್ಲಿ ಅವರೊಂದಿಗೆ ನನ್ನ ಜೀವನವನ್ನು ಕಟ್ಟಿಕೊಂಡಿದ್ದೇನೆ. ಯಾರೂ ಅವರನ್ನು ನಮ್ಮಿಂದ ದೂರ ಮಾಡಲು ಸಾಧ್ಯವಿಲ್ಲ” ಎಂದು ಅಫ್ಸಾನಾ ಹೇಳುತ್ತಾರೆ.

ಮೂಲ: ಇಂಡಿಯನ್ ಎಕ್ಸ್‌ಪ್ರೆಸ್‌

ಕನ್ನಡಕ್ಕೆ: ಸೋಮಶೇಖರ್ ಚಲ್ಯ


ಇದನ್ನೂ ಓದಿ: ಮತಾಂತರ ನಿಷೇಧ ಕಾಯ್ದೆ ಬಗ್ಗೆ ಆತಂಕ ಬೇಡ: ಸಿಎಂ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...